- Home
- News
- State
- Karnataka News Live: ಮಂಗಳೂರು - 9 ವರ್ಷದ ಬಾಲಕನಿಗೆ ತಿಂಡಿ ಕೊಟ್ಟು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ 33 ವರ್ಷದ ವ್ಯಕ್ತಿ!
Karnataka News Live: ಮಂಗಳೂರು - 9 ವರ್ಷದ ಬಾಲಕನಿಗೆ ತಿಂಡಿ ಕೊಟ್ಟು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ 33 ವರ್ಷದ ವ್ಯಕ್ತಿ!

ಬೆಂಗಳೂರು: ಮುಂದಿನ ನಾಲ್ಕು ದಿನಗಳವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಚದುರಿದಂತೆ ಮಳೆಯಾಗಲಿದೆ. ಕೆಲ ಪ್ರದೇಶಗಳಲ್ಲಿ ಜೋರಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯುಗಾದಿ ಹಬ್ಬದ ಮುನ್ನ ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿದು ಧರೆಯನ್ನು ಸ್ವಲ್ಪ ತಂಪು ಮಾಡಿದೆ. ಧಾರವಾಡದ ಕಲಘಟಗಿ ಸೇರಿ ಕೆಲವೆಡೆ ಆಲಿಕಲ್ಲು ಮಳೆಯಾಗಿದೆ.
ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಹಾಸನ, ರಾಮನಗರ, ಕೊಡಗು, ತುಮಕೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ.
ಮಳೆ ವಿವರ:
ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಾಸನ ಮತ್ತು ಮಾಗಡಿಯಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ 4 ಸೆಂ.ಮೀ, ಧರ್ಮಸ್ಥಳದಲ್ಲಿ 3 ಸೆಂ.ಮೀ, ದಾವಣಗೆರೆ ನಗರದಲ್ಲಿ 3 ಸೆಂ.ಮೀ ಮತ್ತು ಚನ್ನಗಿರಿಯಲ್ಲಿ 2 ಸೆಂ.ಮೀ ಮಳೆಯಾದ ವರದಿಯಾಗಿದೆ.
ಕುಣಿಗಲ್ ಮತ್ತು ಬೆಂಗಳೂರು ನಗರದ ಟಿ.ಜಿ. ಹಳ್ಳಿ ಎಚ್ಎಂಎಸ್ ಕೇಂದ್ರಗಳಲ್ಲಿ ತಲಾ 2 ಸೆಂ.ಮೀ. ಮಳೆ ಸುರಿದಿದೆ. ಚಿತ್ರದುರ್ಗ ನಗರ, ನಾಯಕನಹಟ್ಟಿ, ಕೊಡಗು ಜಿಲ್ಲೆಯ ಪೊನ್ನಂಪೇಟೆ ಹಾಗೂ ಬೀದರ್ ಜಿಲ್ಲೆಯ ಮಂತಾಳದಲ್ಲಿ ತಲಾ 1 ಸೆಂ.ಮೀ. ಮಳೆ ಸುರಿದಿದೆ.
Karnataka News Live 18 March 2026ಮಂಗಳೂರು - 9 ವರ್ಷದ ಬಾಲಕನಿಗೆ ತಿಂಡಿ ಕೊಟ್ಟು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ 33 ವರ್ಷದ ವ್ಯಕ್ತಿ!
Karnataka News Live 18 March 2026ಮುಂಬೈನಿಂದ ಮಂಗಳೂರು ಕೊಂಕಣ ರೈಲು ಮಾರ್ಗದಲ್ಲಿ ಅಧಿಕಾರಿಗಳ ತಪಾಸಣೆ, ಕಾರಣವೇನು?
Karnataka News Live 18 March 2026Mangaluru - ಎಂಆರ್ಪಿಎಲ್ ಹೊಸ ಮೈಲಿಗಲ್ಲು 1000ನೇ ಪೆಟ್ಕೋಕ್ ರೈಲು ಜೆಎಸ್ಡಬ್ಲ್ಯೂ ಸಿಮೆಂಟ್ಗೆ ರವಾನೆ
Karnataka News Live 18 March 2026Karnataka Rains - ರಾಜ್ಯದಲ್ಲಿ ಆಲಿಕಲ್ಲು ಮಳೆ ಅಬ್ಬರ - ಹಲವು ಜಿಲ್ಲೆಗಳಲ್ಲಿ ಜನರಿಗೆ ಅಚ್ಚರಿ
ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಏಕಾಏಕಿ ಸುರಿದ ಆಲಿಕಲ್ಲು ಮಳೆ ಜನರನ್ನು ಬೆಚ್ಚಿಬೀಳುವಂತೆ ಮಾಡಿತು. ಮಧ್ಯಾಹ್ನದಿಂದಲೇ ಆಕಾಶದಲ್ಲಿ ದಟ್ಟ ಮೋಡಗಳು ಕವಿದು ಮಳೆಯ ಸುಳಿವು ನೀಡುತ್ತಿದ್ದವು.
Karnataka News Live 18 March 2026ಬೆಚ್ಚಿಬಿದ್ದ ಬೆಂಗಳೂರು - ಅಪ್ಪನನ್ನೇ ಮೂಟೆಯಲ್ಲಿ ಕಟ್ಟಿ ಕೋರಿಯರ್ ಮಾಡಲು ಬಂದ ಪುತ್ರಿ! ಕಾರಣ ಸರ್ಕಾರವಂತೆ ಕೇಳಿ
Karnataka News Live 18 March 2026ಮಂಗಳೂರು ಜೈಲಿನಲ್ಲಿ ಕೈದಿಗಳ ದಾಂಧಲೆ - ಜೈಲಾಧಿಕಾರಿ ಮೇಲೆ ಹಲ್ಲೆ, ಬೆಂಕಿ ಹಚ್ಚಿ ದುಸ್ಸಾಹಸ, ಸರ್ಕಾರಿ ಆಸ್ತಿಗೆ ಹಾನಿ!
Karnataka News Live 18 March 2026Love ಹೇಗೆಲ್ಲಾ ಶುರುವಾಗತ್ತೆ ಗೊತ್ತಾ? Bigg Boss ರಕ್ಷಿತಾ ಶೆಟ್ಟಿ ಬಾಯಲ್ಲೇ ಕೇಳಿ ವೆರೈಟಿ ವೆರೈಟಿ ವಿಧಾನ
Karnataka News Live 18 March 2026ಬದಲಾಗಲಿದೆ ಕನ್ನಡದ ಮೊಟ್ಟಮೊದಲ ಸ್ಯಾಟಲೈಟ್ ಚಾನೆಲ್ ಉದಯ ಟಿವಿ ಹೆಸರು? ಕನ್ನಡಿಗರಿಗೆ ಇದೆ ಖುಷಿ ಸುದ್ದಿ
ಕನ್ನಡದ ಪ್ರಖ್ಯಾತ ಚಾನೆಲ್ ಉದಯ ಟಿವಿಯು ಸನ್ ನೆಟ್ವರ್ಕ್ನಿಂದ ಮರು ಬ್ರ್ಯಾಂಡಿಂಗ್ಗೆ ಒಳಗಾಗುತ್ತಿದೆ. ಯುಗಾದಿಯ ವೇಳೆಗೆ 'ಸನ್ ಉದಯ ಟಿವಿ' ಎಂದು ಹೊಸ ಹೆಸರು ಮತ್ತು ಲೋಗೋದೊಂದಿಗೆ ಬದಲಾಗುವ ನಿರೀಕ್ಷೆಯಿದೆ.
Karnataka News Live 18 March 2026Rajamouli - ಈ ಐಡಿಯಾ ನನಗೆ ಯಾಕೆ ಬರಲಿಲ್ಲ? - ಸುಕುಮಾರ್ ಸೀನ್ ನೋಡಿ ರಾಜಮೌಳಿ ಶಾಕ್
ಖ್ಯಾತ ನಿರ್ದೇಶಕ ರಾಜಮೌಳಿ ಸದ್ಯ ಮಹೇಶ್ ಬಾಬು ಜೊತೆ 'ವಾರಣಾಸಿ' ಎಂಬ ಸಿನಿಮಾ ಮಾಡುತ್ತಿದ್ದಾರೆ. ರಾಜಮೌಳಿ ಒಂದು ಸಂದರ್ಶನದಲ್ಲಿ ತಮಗೆ ಇಷ್ಟವಾದ ನಿರ್ದೇಶಕರ ಬಗ್ಗೆ ಮಾತನಾಡಿದ್ದಾರೆ.
Karnataka News Live 18 March 2026ಯುಗಾದಿ ಸಂಭ್ರಮಕ್ಕೆ ಸರ್ಕಾರಿ ನೌಕರರಿಗೆ ಕಹಿ, ಹಬ್ಬದ ದಿನವೂ ಕೆಲಸಕ್ಕೆ ಬರುವಂತೆ ಸರ್ಕಾರ ಆದೇಶ!
Karnataka News Live 18 March 2026ಇ-ಸ್ವತ್ತು ತಂತ್ರಾಂಶ ದೋಷ ಸತ್ಯ - 15 ದಿನಗಳಲ್ಲಿ ಪರಿಹಾರ - ಸಚಿವ ಪ್ರಿಯಾಂಕ್ ಖರ್ಗೆ
ಇ-ಸ್ವತ್ತು ನೀಡುವ ತಂತ್ರಾಂಶದಲ್ಲಿ ನ್ಯೂನ್ಯತೆ ಆಗಿರುವುದು ಸತ್ಯ. ಪ್ರಸ್ತುತ ಸಾಕಷ್ಟು ಸಮಸ್ಯೆ ಬಗೆಹರಿಸಿದ್ದು, 15 ದಿನಗಳಲ್ಲಿ ವ್ಯವಸ್ಥೆ ಸಂಪೂರ್ಣ ಸುಧಾರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
Karnataka News Live 18 March 2026ಮಂಗಳೂರು - ಭೂ ವಿವಾದದ ಸೇಡು, ಅಪ್ಪನಿಗೂ ಶೆಟ್ಟಿಗೂ 2 ಕೋಟಿ ಜಾಗದ ವ್ಯಾಜ್ಯ, ಕಾರು ಹರಿಸಿ ಹತ್ಯೆಗೆ ಯತ್ನಿಸಿದ ಮಗ!
Karnataka News Live 18 March 2026ರಸ್ತೆಯಲ್ಲಿ ಗಲಾಟೆ - ಡ್ರೈವರ್ಗೆ ಹೊಡೆಯುವುದನ್ನು ತಡೆಯಲು ಹೋದ ತಾಯಿಯನ್ನೇ ಕೆಳಗೆ ತಳ್ಳಿದ ಮಗ
Karnataka News Live 18 March 2026ಯುಗಾದಿ ಹೊಸತೊಡಕಿಗೆ ಮಾಂಸ ಪ್ರಿಯರಿಗೆ ಗುಡ್ನ್ಯೂಸ್, ಮಾಂಸ-ಮೀನು ಬೆಲೆಯಲ್ಲಿ ಭಾರೀ ಇಳಿಕೆ!
Karnataka News Live 18 March 2026ಯುಗಾದಿ ಹಬ್ಬ ಹಿನ್ನೆಲೆ ಬೆಂಗಳೂರಿಂದ ಊರಿಗೆ - ತುಂಬಿ ತುಳುಕುತ್ತಿರುವ ಮೆಜೆಸ್ಟಿಕ್, ಟಿಕೆಟ್ ಬೆಲೆ ದುಬಾರಿ!
Karnataka News Live 18 March 2026Rishab Shetty - ತೆಲುಗಿನ ಇಬ್ಬರು ಸ್ಟಾರ್ ಹೀರೋಗಳ ಜೊತೆ ರಿಷಬ್ ಶೆಟ್ಟಿ ಸಿನಿಮಾ? ಯಾರವರು ಗೊತ್ತಾ?
'ಕಾಂತಾರ'ದಿಂದ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿದ ರಿಷಬ್ ಶೆಟ್ಟಿ, ನಟನಿಗಿಂತ ನಿರ್ದೇಶಕನಾಗಿ ಹೆಚ್ಚು ಬೇಡಿಕೆ ಗಳಿಸಿದ್ದಾರೆ. ಹಲವು ಸ್ಟಾರ್ ನಟರು ರಿಷಬ್ ಜೊತೆ ಸಿನಿಮಾ ಮಾಡಲು ಆಸಕ್ತಿ ತೋರಿದ್ದಾರೆ. ಆ ಇಬ್ಬರು ಟಾಲಿವುಡ್ ಸ್ಟಾರ್ಗಳು ಯಾರು ಗೊತ್ತಾ?
Karnataka News Live 18 March 2026ರಾಜ್ಯದಲ್ಲಿ ಔಷಧಿಗಳ ಖರೀದಿಗೆ 868 ಕೋಟಿ ಟೆಂಡರ್ - ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳ ಕೊರತೆ ಇಲ್ಲ. 868 ಕೋಟಿ ರು. ಮೌಲ್ಯದ ಔಷಧಿ ಖರೀದಿಗೆ ಟೆಂಡರ್ ಕರೆಯಲಾಗಿದೆ. ಔಷಧಿಗಳ ಗುಣಮಟ್ಟ ಪರೀಕ್ಷೆಗೆ ಒತ್ತು ನೀಡಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Karnataka News Live 18 March 2026ಮಗನಿಗೆ ಮದ್ವೆ ಮಾಡಿದ್ರೆ ನೀವು ಫಿನಿಶ್ ಅಂತಾ ತಾಯಿಗೆ ಹೇಳಿದ ಆರ್ಯವರ್ಧನ್ ಗುರೂಜಿ, 'This is business' ಎಂದ ನೆಟ್ಟಿಗರು!
ಮಾಜಿ ಬಿಗ್ಬಾಸ್ ಸ್ಪರ್ಧಿ ಆರ್ಯವರ್ಧನ್ ಗುರೂಜಿ ಅವರ ಹಳೆಯ ವಿಡಿಯೋವೊಂದು ವೈರಲ್ ಆಗಿದ್ದು, ಇದರಲ್ಲಿ ಅವರು ಯುವಕನೊಬ್ಬನಿಗೆ ಎರಡು ಮದುವೆ ಹಾಗೂ ಸೊಸೆಯಿಂದ ತಾಯಿಗೆ ಅಪಾಯ ಎಂದು ಭವಿಷ್ಯ ನುಡಿದಿದ್ದಾರೆ.
Karnataka News Live 18 March 2026ಮದುವೆಯಾಗಿ 10 ವರ್ಷ; ಇನ್ನೇನು ಡಿವೋರ್ಸ್ ಘೋಷಣೆ ಮಾಡ್ತಾರೆ ಎನ್ನುವಾಗಲೇ ಅಚ್ಚರಿ ಸುದ್ದಿ ಕೊಟ್ಟ ನಟಿ!
Actress Divyanka Tripathi: ನಟಿ ದಿವ್ಯಾಂಕಾ ತ್ರಿಪಾಠಿ, ವಿವೇಕ್ ದಹಿಯಾ ದಂಪತಿ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಶೀಘ್ರದಲ್ಲೇ ಸೀಮಂತ ಕಾರ್ಯಕ್ರಮ ನಡೆಯಲಿದೆ ಎಂದೂ ವರದಿಗಳು ಹೇಳುತ್ತಿವೆ. ಆದರೆ, ಈ ಜೋಡಿ ಈ ಬಗ್ಗೆ ಇನ್ನೂ ಅಧಿಕೃತವಾಗಿ ಏನನ್ನೂ ಖಚಿತಪಡಿಸಿಲ್ಲ.