Nikhil Kumaraswamy: ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆಗಳು ನಾಲ್ಕು ಗೋಡೆಗಳ ನಡುವೆ ನಡೆಯಬೇಕು, ಹಾದಿಬೀದಿಯಲ್ಲಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಕೆಲವರು ಪ್ರಚಾರಕ್ಕಾಗಿ ಮೈತ್ರಿ ಮುರಿಯುವ ಹೇಳಿಕೆ ನೀಡುತ್ತಿದ್ದು, ಎರಡೂ ಪಕ್ಷಗಳ ನಾಯಕರು ಮೈತ್ರಿ ಧರ್ಮವನ್ನು ಗೌರವದಿಂದ ಪಾಲಿಸಬೇಕು ಎಂದರು.
- Home
- News
- State
- Karnataka News Live: Nikhil Kumaraswamy on BJP - ಮೈತ್ರಿ ಚರ್ಚೆ ನಾಲ್ಕು ಗೋಡೆ ನಡುವೆ ಇರಬೇಕು; ನಿಖಿಲ್ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ?
Karnataka News Live: Nikhil Kumaraswamy on BJP - ಮೈತ್ರಿ ಚರ್ಚೆ ನಾಲ್ಕು ಗೋಡೆ ನಡುವೆ ಇರಬೇಕು; ನಿಖಿಲ್ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ?

ಚಿಕ್ಕಮಗಳೂರು: ಹಿಂದೂ ಮನೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಆರು ಮಂದಿಯನ್ನು ಬಸವನಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜತೆಗೆ, ಹಿಂದೂ ಮತ್ತು ಎಸ್ಡಿಪಿಐ ಸಂಘಟನೆ, ಮುಖಂಡರ ವಿರುದ್ಧ ಪ್ರತ್ಯೇಕ ಎರಡು ಸೊಮೋಟೋ ಕೇಸ್ ದಾಖಲಾಗಿದೆ.
ಬಂಧಿತ ಆರೋಪಿಗಳಾದ ಯಾಸಿನ್, ಮೊಹಮದ್ ಮತೀನ್, ಅಯಾನ್, ಮುನ್ನಾವರ್ ಪಾಷಾ, ಆಕ್ಷದ್, ಹಸೇನ್ ಬಂಧಿಸಲಾಗಿದೆ. ಮಂಗಳವಾರ ತಡರಾತ್ರಿಯೇ 6 ಆರೋಪಿಗಳನ್ನು ಚಿಕ್ಕಮಗಳೂರು ನ್ಯಾಯಾಧೀಶರ ನಿವಾಸಕ್ಕೆ ಹಾಜರು ಪಡಿಸಿದ ಪೊಲೀಸರು, ನಾಲ್ವರು ಅಪ್ರಾಪ್ತ ಆರೋಪಿಗಳನ್ನು ಹಾಸನದ ರಿಮ್ಯಾಂಡ್ ಹೋಮ್ಗೆ ಸ್ಥಳಾಂತರಿಸಿದರು. ಉಳಿದ ಇಬ್ಬರನ್ನು ಚಿಕ್ಕಮಗಳೂರು ಜೈಲಿಗೆ ಕಳುಹಿಸಲಾಗಿದೆ.
Karnataka News Live 19 February 2026Nikhil Kumaraswamy on BJP - ಮೈತ್ರಿ ಚರ್ಚೆ ನಾಲ್ಕು ಗೋಡೆ ನಡುವೆ ಇರಬೇಕು; ನಿಖಿಲ್ ಎಚ್ಚರಿಕೆ ಕೊಟ್ಟಿದ್ದು ಯಾರಿಗೆ?
Karnataka News Live 19 February 2026Apollo Robotic knee replacement for teens - 17ರ ಬಾಲಕನಿಗೆ ಯಶಸ್ವಿಯಾಗಿ ರೋಬೊಟಿಕ್ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಮಾಡಿದ ಅಪೋಲೋ!
ಬೆಂಗಳೂರಿನ ಅಪೋಲೋ ಆಸ್ಪತ್ರೆಯ ವೈದ್ಯರು, 'ಆಸ್ಟಿಯೋನೆಕ್ರೋಸಿಸ್' ಎಂಬ ವಿರಳ ಕಾಯಿಲೆಯಿಂದ ಬಳಲುತ್ತಿದ್ದ 17 ವರ್ಷದ ಬಾಲಕನಿಗೆ ರೋಬೊಟಿಕ್ ತಂತ್ರಜ್ಞಾನ ಬಳಸಿ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಮಾಡಿದ್ದಾರೆ. ಈ ಅತ್ಯಾಧುನಿಕ ಚಿಕಿತ್ಸೆಯು ಬಾಲಕನಿಗೆ ನೋವುರಹಿತವಾಗಿ ಮತ್ತೆ ನಡೆಯುವಂತಾಗಿದೆ.
Karnataka News Live 19 February 2026Karnataka CM change politics - ಡಿಕೆಶಿಯನ್ನು ಸಿಎಂ ಮಾಡ್ತಾರೋ ಇಲ್ವೋ ಹೈಕಮಾಂಡ್ ಹೇಳ್ಲಿ, ಇಲ್ಲದಿದ್ರೆ...
Karnataka CM change politics ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕೆಂದು ಮಂಡ್ಯ ಶಾಸಕ ಗಣಿಗ ರವಿಕುಮಾರ್ ಆಗ್ರಹಿಸಿದ್ದಾರೆ. ಈ ಗೊಂದಲದಿಂದ ಪಕ್ಷ ಹಾಗೂ ಸರ್ಕಾರದ ಇಮೇಜ್ಗೆ ಹಾನಿಯಾಗುತ್ತಿದೆ ಎಂದಿದ್ದಾರೆ.
Karnataka News Live 19 February 2026ಬೆಂಗಳೂರಿಗೆ ಮತ್ತೆ ಕಸಬಿಸಿ! ನಗರದಲ್ಲಿ ಪ್ರತಿದಿನ 6,000 ಟನ್ ಕಸ ಉತ್ಪತ್ತಿ!
ಬೆಂಗಳೂರಿನ ಹೊರವಲಯದ ಬೆಳ್ಳಹಳ್ಳಿ ಮತ್ತು ಮಿಟ್ಟಗಾನಹಳ್ಳಿ ಡಂಪಿಂಗ್ ಯಾರ್ಡ್ಗಳಲ್ಲಿ ಗ್ರಾಮಸ್ಥರು 150ಕ್ಕೂ ಹೆಚ್ಚು ಕಸದ ಲಾರಿಗಳನ್ನು ತಡೆದಿದ್ದಾರೆ. ಅಸಮರ್ಪಕ ನಿರ್ವಹಣೆ, ಅಭಿವೃದ್ಧಿ ಶುಲ್ಕ ಪಾವತಿಸದಿರುವುದು ಮತ್ತು ಇತ್ತೀಚಿನ ಅಪಘಾತಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka News Live 19 February 2026ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಕಥೆ ಲೀಕ್; ವಿವರಗಳು ಫಿಲಂಸ್ ವಿತರಕರ ವೆಬ್ಸೈಟ್ನಲ್ಲಿ ಲಭ್ಯ
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾದ ಕಥೆಯು ಯುಎಇ ವಿತರಕರ ವೆಬ್ಸೈಟ್ನಲ್ಲಿ ಸೋರಿಕೆಯಾಗಿದೆ ಎನ್ನಲಾಗಿದೆ. 1940-70ರ ದಶಕದ ಗೋವಾದ ಭೂಗತ ಲೋಕದಲ್ಲಿ, ಯುವಕನೊಬ್ಬ ರಕ್ತ, ಭಯ ಮತ್ತು ದ್ರೋಹದ ಮೂಲಕ ತನ್ನ ಸಾಮ್ರಾಜ್ಯವನ್ನು ಹೇಗೆ ರೂಪಿಸಿದ ಎಂಬುದು ಚಿತ್ರದ ಮುಖ್ಯ ಕಥಾವಸ್ತು ಎಂದು ವರದಿಯಾಗಿದೆ.
Karnataka News Live 19 February 2026ಕಸ ವಿಲೇಗೆ ಅಡ್ಡಿಯಾದ್ರೆ ಎಸ್ಮಾ ಅಡಿ ಕ್ರಮ - ಅಶೋಕ್, ವಿಜಯೇಂದ್ರ ಮನೆ ಮುಂದೆ ಸುರಿಬೇಕಾ? - ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ ಅಡ್ಡಿಪಡಿಸುವ ಶಾಸಕರು ಸೇರಿದಂತೆ ಯಾರೇ ಆದರೂ ಎಸ್ಮಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಸಿದ್ದಾರೆ. ವಿರೋಧ ಮುಂದುವರೆದರೆ ಬಿಜೆಪಿ ಕಚೇರಿ ಅಥವಾ ಶಾಸಕರ ಮನೆ ಮುಂದೆ ಕಸ ಸುರಿಯಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Karnataka News Live 19 February 2026ಮಂತ್ರಾಲಯ ಶ್ರೀಗುರು ವೈಭವೋತ್ಸವಕ್ಕೆ ಚಾಲನೆ । 405ನೇ ಪಟ್ಟಾಭಿಷೇಕ । ಫೆ.24ಕ್ಕೆ 431ನೇ ವರ್ಧಂತೋತ್ಸವ
Guru Vaibhavotsava 2026 ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ, ಶ್ರೀ ಗುರುರಾಯರ 405ನೇ ಪಟ್ಟಾಭಿಷೇಕ ಹಾಗೂ 431ನೇ ವರ್ಧಂತೋತ್ಸವದ ಅಂಗವಾಗಿ 'ಶ್ರೀ ರಾಘವೇಂದ್ರ ಗುರು ವೈಭವೋತ್ಸವ'ಕ್ಕೆ ಚಾಲನೆ ನೀಡಲಾಗಿದೆ.
Karnataka News Live 19 February 2026ರಣಜಿ ಟ್ರೋಫಿ ಸೆಮಿಫೈನಲ್ - ಎರಡು ಇನ್ನಿಂಗ್ಸ್ಗಳಲ್ಲಿ ಕರ್ನಾಟಕ ದಾಖಲೆಯ 1035 ರನ್! ಫೈನಲ್ಗೇರೋದು ಕನ್ಫರ್ಮ್
Karnataka News Live 19 February 2026ಹೆಂಡತಿಯ ಕೊಂ*ದು ಮನೆ ಬಳಿಯೇ ಹೂತು ಕಣ್ಮರೆ ಅಂತ ದೂರು ಕೊಟ್ಟ ಪಾಪಿ ಪತಿ! 16 ದಿವಸ ಹುಡುಕಾಡಿದ ಬಳಿಕ ಪೊಲೀಸರಿಂದ ಸೆರೆ
ದೇವರಹಿಪ್ಪರಗಿಯಲ್ಲಿ, ಸಾಲದ ವಿಚಾರಕ್ಕೆ ಜಗಳವಾಗಿ ಪತಿಯೇ ಪತ್ನಿಯನ್ನು ಕೊಂ*ದು ಮನೆಯ ಆವರಣದಲ್ಲಿ ಹೂತುಹಾಕಿದ್ದಾನೆ. ನಂತರ ಆಕೆ ಕಾಣೆಯಾಗಿದ್ದಾಳೆಂದು ನಾಟಕವಾಡಿದ್ದು, 24 ದಿನಗಳ ಬಳಿಕ ಪೊಲೀಸರ ತನಿಖೆಯಲ್ಲಿ ಸತ್ಯಾಂಶ ಬಯಲಾಗಿದ್ದು, ಆರೋಪಿ ಪತಿಯನ್ನು ಬಂಧಿಸಲಾಗಿದೆ.
Karnataka News Live 19 February 2026Tejasvi Surya metro protest case - ಅನುಮತಿ ಇಲ್ಲದೆ ಪ್ರತಿಭಟನೆ; ಸಂಸದ ತೇಜಸ್ವಿ ಸೂರ್ಯ ಸೇರಿ 9 ಮಂದಿಗೆ ನೋಟಿಸ್!
Namma Metro fare hike protest ಜಯನಗರದ ಆರ್.ವಿ.ಮೆಟ್ರೋ ನಿಲ್ದಾಣದ ಬಳಿ ಅನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಸಂಸದ ತೇಜಸ್ವಿ ಸೂರ್ಯ, ಶಾಸಕ ಸಿ.ಕೆ.ರಾಮಮೂರ್ತಿ ಸೇರಿದಂತೆ 9 ಮಂದಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.
Karnataka News Live 19 February 2026ಕೆಲಸಕ್ಕೆ ಗುಡ್ಬೈ ಹೇಳೋ ಯೋಚನೆ ಇದ್ಯಾ? ತೆಂಗಿನಕಾಯಿ ತ್ಯಾಜ್ಯದಿಂದ ತಿಂಗಳಿಗೆ ಲಕ್ಷ ಗಳಿಸಿ!
Karnataka News Live 19 February 2026Karnataka Congress MLAs foreign tour - 'ನಮ್ಮನ್ನು ಯಾರೂ ಕರೆದಿಲ್ಲ, ಅವರದ್ದೇ ಒಂದು ಟೀಂ, ಮಜಾ ಮಾಡಿಕೊಂಡು ಬರ್ಲಿ ಬಿಡಿ ಎಂದ ಮಾಗಡಿ ಶಾಸಕ!
ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸದ ಕುರಿತು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದ್ದು, ನಮ್ಮನ್ನು ಯಾರೂ ಕರೆದಿಲ್ಲ, ಸ್ನೇಹಿತರು ಮಜಾ ಮಾಡಲು ಹೋಗಿದ್ದಾರೆ ಎಂದಿದ್ದಾರೆ. ಆದರೆ, ಈ ಪ್ರವಾಸದ ಉದ್ದೇಶದ ಬಗ್ಗೆ ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಅನುಮಾನ ವ್ಯಕ್ತಪಡಿಸಿದ್ದಾರೆ.
Karnataka News Live 19 February 2026ಕೈದಿಗಳಿಗೆ ಇನ್ನು ಜೈಲಿನಲ್ಲಿ ಡ್ರಗ್ಸ್ ಪರೀಕ್ಷೆ ಕಡ್ಡಾಯ, ಒಂದು ವಾರದಲ್ಲಿ ಅನುಷ್ಠಾನ - ಡಿಜಿಪಿ ಅಲೋಕ್ ಕುಮಾರ್
ಬೆಂಗಳೂರು ಮತ್ತು ಬೆಳಗಾವಿ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆ ಹೆಚ್ಚಿದ ಹಿನ್ನೆಲೆಯಲ್ಲಿ, ಡಿಜಿಪಿ ಅಲೋಕಕುಮಾರ ಅವರು ಹುಬ್ಬಳ್ಳಿ ಉಪಕಾರಾಗೃಹಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ಸಿಬ್ಬಂದಿಗೆ ಎಚ್ಚರಿಕೆ ನೀಡಿದರು.