ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ ನಡೆದಿದೆ. ಕರ್ತವ್ಯ ಮುಗಿಸಿ ಮರಳುತ್ತಿದ್ದ ಬೀದಿ ಕಾಮಕ ವೈದ್ಯ ಅಡ್ಡಗಟ್ಟಿ ಮುಟ್ಟಲು ಯತ್ನಿಸಿದ್ದಾನೆ. ವೈದ್ಯೆ ಕಿರುಚಾಡಿದ್ದಾರೆ.
- Home
- News
- State
- State News Live: ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
State News Live: ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ

ಬೆಂಗಳೂರು (ಡಿ.19): ರಾಜ್ಯದಲ್ಲಿ ದ್ವೇಷ ಭಾಷಣ ಮತ್ತು ದ್ವೇಷಾಪರಾಧಗಳ ಪ್ರಸರಣ, ಪ್ರಕಟಣೆ ಅಥವಾ ಪ್ರಚಾರ, ದ್ವೇಷ ಹರಡಿಸುವಿಕೆಗೆ ಕಡಿವಾಣ ಹಾಕಲು ಮತ್ತು ಅಂಥ ಅಪರಾಧಗಳನ್ನು ಎಸಗುವ ವ್ಯಕ್ತಿ, ವ್ಯಕ್ತಿಗಳು, ಸಂಘಟನೆಯವರನ್ನು ಶಿಕ್ಷೆಗೆ ಒಳಪಡಿಸುವ ಉದ್ದೇಶದಿಂದ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ-2025’ ಅಂಗೀಕಾರ ಮಾಡಲಾಗಿದೆ. ಗದ್ದಲದ ನಡುವೆ, ಚರ್ಚೆಯೇ ಇಲ್ಲದೆ ದ್ವೇಷ ಭಾಷಣ ತಡೆ ಮಸೂದೆ ಪಾಸ್ ಮಾಡಲಾಗಿದೆ. ಅದರೊಂದಿಗೆ ಇಂದಿನ ರಾಜ್ಯ ರಾಜಕೀಯ ಹಾಗೂ ರಾಜ್ಯದ ಇತರ ಸುದ್ದಿಗಳ ಬಗ್ಗೆ ಇಂದಿನ ನ್ಯೂಸ್ಲೈವ್ ಬ್ಲಾಗ್
Karnataka News Live 19th December: ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
Karnataka News Live 19th December: ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ
ಖರ್ಗೆ ಪ್ರಧಾನಿ ಆಗಲಿಲ್ಲ, ನಾನು ಮಂತ್ರಿ ಆಗಲಿಲ್ಲ, ನೋವು ತೋಡಿಕೊಂಡ ಬಸವರಾಜ ರಾಯರೆಡ್ಡಿ, ಈ ದೇಶದಲ್ಲಿ ಪ್ರಧಾನಿಯಾಗಲು ಅರ್ಹ, ಸೂಕ್ತ ವ್ಯಕ್ತಿ ಎಂದು ಯಾರಾದರು ಇದ್ದರೆ ಅದು ಮಲ್ಲಿಕಾರ್ಜುನ ಖರ್ಗೆ ಎಂದಿದ್ದಾರೆ. ನೋವಿನಲ್ಲಿ ರಾಯರೆಡ್ಡಿ ಹೇಳಿದ್ದೇನು?
Karnataka News Live 19th December: ಎಚ್ಎಎಲ್ ವಿಮಾನ ನಿಲ್ದಾಣವನ್ನು ಮತ್ತೆ ಸಾರ್ವಜನಿಕ ಬಳಕೆ ಪ್ರಸ್ತಾಪ ಪರಿಶೀಲನೆ - ಸಚಿವ ಎಂ.ಬಿ.ಪಾಟೀಲ್
ಎಚ್ಎಎಲ್ ವಿಮಾನ ನಿಲ್ದಾಣವನ್ನು ಮತ್ತೆ ನಾಗರಿಕ ಪ್ರಯಾಣಕ್ಕೆ ಬಳಸುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಬೃಹತ್ ಕೈಗಾರಿಕೆ ಮತ್ತು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
Karnataka News Live 19th December: ಶಕ್ತಿಯಡಿ ಸರ್ಕಾರದಿಂದ ಸಾರಿಗೆ ನಿಗಮಕ್ಕೆ ₹4000 ಕೋಟಿ ಬಾಕಿ - ಸಚಿವ ರಾಮಲಿಂಗಾರೆಡ್ಡಿ
ಬಿಜೆಪಿ ಅವರು ಮಹಿಳಾ ವಿರೋಧಿಗಳು. ಹೀಗಾಗಿಯೇ ಶಕ್ತಿ, ಗೃಹಲಕ್ಷ್ಮಿಯಂತಹ ಮಹಿಳೆಯರಿಗೆ ಅನುಕೂಲವಾಗುವ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Karnataka News Live 19th December: ರಾಮನ ಹೆಸರಲ್ಲಿ ರಾಜ್ಯಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿರುವ ಕೇಂದ್ರ ಸರ್ಕಾರ - ಸಚಿವ ಮಹದೇವಪ್ಪ
ಗಾಂಧಿ ಉದ್ಯೋಗ ಖಾತರಿ ಯೋಜನೆಯ ಹೆಸರು ಮತ್ತು ಸ್ವರೂಪ ಬದಲಿಸುವ ಮೂಲಕ ಕೇಂದ್ರ ಸರ್ಕಾರವು ರಾಮನ ಹೆಸರಲ್ಲಿ ರಾಜ್ಯಗಳ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ ಎಂದು ಸಚಿವ ಡಾ.ಎಚ್.ಸಿ.ಮಹದೇವಪ್ಪ ಆರೋಪಿಸಿದ್ದಾರೆ.
Karnataka News Live 19th December: ಕಾಶಿ ವಿಶ್ವನಾಥ ಘಾಟ್ನಲ್ಲಿ 'ಅಖಂಡ 2' ಸಿನಿಮಾ ಪ್ರಚಾರ ಜೋರು - ಭಾವುಕರಾದ ಬಾಲಯ್ಯ
ನಂದಮೂರಿ ಬಾಲಕೃಷ್ಣ ವಾರಣಾಸಿಗೆ ಭೇಟಿ ನೀಡಿ ಕಾಶಿ ವಿಶ್ವನಾಥ ಮತ್ತು ಮಾತಾ ವಿಶಾಲಾಕ್ಷಿ ದರ್ಶನ ಪಡೆದರು. ಈ ಸಮಯದಲ್ಲಿ, ಅವರು ತಮ್ಮ ಅಖಂಡ 2 ಚಿತ್ರದ ಪ್ರಚಾರ ಮಾಡಿದರು. ಈ ಚಿತ್ರವು ಸನಾತನ ಧರ್ಮವನ್ನು ಆಧರಿಸಿದೆ ಮತ್ತು ಇದು ಭಕ್ತಿ ಹಾಗೂ ಸಿನಿಮಾದ ಸಂಗಮ ಎಂದು ಹೇಳಿದರು.
Karnataka News Live 19th December: ಶಬರಿಮಲೆ ದೇಗುಲದ ಬಂಗಾರ ಕಳವು ಪ್ರಕರಣ, ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಕೇರಳದಲ್ಲಿ ಬಂಧನ!
ಶಬರಿಮಲೆ ದೇಗುಲದ ದ್ವಾರಪಾಲಕ ವಿಗ್ರಹಗಳ ಚಿನ್ನಲೇಪಿತ ಕವಚಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ರೊದ್ದಂ ಜ್ಯುವೆಲರ್ಸ್ ಮಾಲೀಕ ಗೋವರ್ಧನ್ ಅವರನ್ನು ಕೇರಳ ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಮರುಲೇಪನದ ಬಳಿಕ ಸುಮಾರು 4 ಕೆಜಿ ಚಿನ್ನ ಕಡಿಮೆಯಾಗಿತ್ತು.
Karnataka News Live 19th December: ಇದ್ದಕ್ಕಿದ್ದಂತೆ ಮದುವೆಯಾದ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ? ತಲೆಕೆಡಿಸಿಕೊಂಡ ಫ್ಯಾನ್ಸ್!
ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ವದಂತಿಗಳು ಮತ್ತೆ ಜೋರಾಗಿವೆ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಅವರ ಮದುವೆಯ ಫೋಟೋಗಳು AI ನಿಂದ ರಚಿಸಲಾಗಿದ್ದು, ಸಂಪೂರ್ಣವಾಗಿ ನಕಲಿಯಾಗಿವೆ.
Karnataka News Live 19th December: ವಾಲ್ಮೀಕಿ ನಿಗಮ ಹಗರಣ - ಮಾಜಿ ಸಚಿವ ಬಿ. ನಾಗೇಂದ್ರನ ₹8 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ!
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ, ಜಾರಿ ನಿರ್ದೇಶನಾಲಯವು (ED) ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಸೇರಿದ 8.07 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿದೆ.
Karnataka News Live 19th December: 'ಧುರಂಧರ್' ಸಿನಿಮಾ ಭಾರತೀಯರ ಗರ್ವ - ಆರ್ಜಿವಿ ಹೊಗಳಿಕೆ ಕೇಳಿ ಕಣ್ಣೀರಾದ ನಿರ್ದೇಶಕ ಆದಿತ್ಯ ಧರ್!
'ಧುರಂಧರ್' ಚಿತ್ರದ ಭರ್ಜರಿ ಯಶಸ್ಸಿನ ನಂತರ ನಿರ್ದೇಶಕ ಆದಿತ್ಯ ಧರ್ ತುಂಬಾ ಖುಷಿಯಾಗಿದ್ದಾರೆ. ಈ ಸ್ಪೈ ಥ್ರಿಲ್ಲರ್ ಡಿಸೆಂಬರ್ 5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್ನಲ್ಲಿ ಹಲವು ದಾಖಲೆಗಳನ್ನು ಮುರಿದಿದೆ.
Karnataka News Live 19th December: ಕಂಟೋನ್ಮೆಂಟ್ ರೈಲು ನಿಲ್ದಾಣದ 371 ಮರ ಕಡಿಯಲು ಹೈಕೋರ್ಟ್ ತಡೆ, ತನ್ನ ಅನುಮತಿ ಇಲ್ಲದೆ ಏನೂ ಮಾಡುವಂತಿಲ್ಲವೆಂದು ಆರ್ಡರ್
ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೇ ನಿಲ್ದಾಣದ ಬಳಿಯ 8.61 ಎಕರೆ ಪ್ರದೇಶದಲ್ಲಿರುವ 371 ಮರಗಳನ್ನು ಕಡಿಯದಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ. ವಾಣಿಜ್ಯ ಬಳಕೆಗಾಗಿ ಈ ಜಾಗವನ್ನು ಗುತ್ತಿಗೆಗೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿ ಮರ ಕಡಿಯಬಾರದು ಎಂದಿದೆ.
Karnataka News Live 19th December: ಸ್ಕೂಲ್ ಬಸ್ಗೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ; 20 ವಿದ್ಯಾರ್ಥಿಗಳಿದ್ದ ಶಾಲಾ ವಾಹನ ಪಲ್ಟಿ!
ಶಾಲಾ ಬಸ್ ಹಾಗೂ ಟಾಟಾ ಏಸ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದ ಬಸ್ ಪಲ್ಟಿಯಾಗಿದೆ. ಬಸ್ನಲ್ಲಿದ್ದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
Karnataka News Live 19th December: ಚಿಕನ್-ಮಟನ್ ಕೂಗಲ್ಲ - ನನ್ ಊಟ ಯಾರಿಗೂ ಇಷ್ಟ ಆಗಲ್ಲ- ಕಿಚ್ಚ ಸುದೀಪ್ ಊಟದ ಗುಟ್ಟು ರಟ್ಟು
ನಟ ಕಿಚ್ಚ ಸುದೀಪ್ ತಮ್ಮ ಬಿಡುವಿಲ್ಲದ ಕೆಲಸದ ನಡುವೆಯೂ ಶಾಂತವಾಗಿರುವುದರ ಹಿಂದಿನ ರಹಸ್ಯವನ್ನು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ. ಖಾರ ಮತ್ತು ಮಸಾಲೆ ಪದಾರ್ಥಗಳಿಂದ ದೂರವಿದ್ದು, ದೇಹ ಮತ್ತು ಹೊಟ್ಟೆಯನ್ನು ತಂಪಾಗಿರಿಸುವ ದಾಲ್ನಂತಹ ಆಹಾರ ಸೇವಿಸುವುದೇ ತಮ್ಮ ಕೂಲ್ ಸ್ವಭಾವಕ್ಕೆ ಕಾರಣ ಎಂದಿದ್ದಾರೆ
Karnataka News Live 19th December: 2028ರವರೆಗೆ ನೀವೇ ಸಿಎಂ ಆಗಿರಿ-ವಿಪಕ್ಷ ನಾಯಕರು; ಸಂಜೆ ಎಲ್ಲರೂ ಬನ್ನಿ, ಒಟ್ಟಿಗೆ ಊಟ ಮಾಡೋಣ- ಸಿದ್ದರಾಮಯ್ಯ!
ಸಾರ್ ನಿಮ್ಮ ಕುರ್ಚಿ ಅಲುಗಾಡ್ತಿದೆ ಅಂತಾರೆ. 2028ರವರೆಗೆ ನೀವೇ ಸಿಎಂ ಆಗಿರಿ, ನಮಗೇನೂ ತೊಂದರೆ ಇಲ್ಲ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ. ಆಯ್ತು, ಸಂಜೆ ಬನ್ನಿ ಎಲ್ಲರೂ ಒಟ್ಟಿಗೆ ಊಟ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷ ನಾಯಕರಿಗೆ ಆಹ್ವಾನಿಸಿದರು.
Karnataka News Live 19th December: DRDO ನೇಮಕಾತಿ, ಬರೋಬ್ಬರಿ 764 ತಾಂತ್ರಿಕ ಸಹಾಯಕ, ತಂತ್ರಜ್ಞ ಹುದ್ದೆಗಳಿಗೆ ಅರ್ಹರಿಂದ ಅರ್ಜಿ ಆಹ್ವಾನ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರ (DRDO) 2025ನೇ ಸಾಲಿಗೆ 764 ಹಿರಿಯ ತಾಂತ್ರಿಕ ಸಹಾಯಕ ಮತ್ತು ತಂತ್ರಜ್ಞ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. 10ನೇ ತರಗತಿ, ಐಟಿಐ, ಡಿಪ್ಲೊಮಾ, ಮತ್ತು ಬಿ.ಇ/ಬಿ.ಟೆಕ್ ಪೂರ್ಣಗೊಳಿಸಿದ ಆಸಕ್ತರು ಡಿಸೆಂಬರ್ 31, 2025ರೊಳಗೆ ಅರ್ಜಿ ಸಲ್ಲಿಸಬಹುದು.
Karnataka News Live 19th December: Bigg Boss ಸ್ಪಂದನಾ ಸೋಮಣ್ಣ ಹೊಟ್ಟೆಯಲ್ಲಿ ಮಗು? ದೊಡ್ಮನೆಯಲ್ಲಿ ಇದೇನಿದು ಧನುಷ್ ಗಲಾಟೆ?
ಬಿಗ್ಬಾಸ್ ಮನೆಯಲ್ಲಿ ಧನುಷ್, ಸ್ಪಂದನಾ ಸೋಮಣ್ಣ ಅವರ 'ಕರಿಮಣಿ' ಸೀರಿಯಲ್ ಪಾತ್ರವನ್ನು ತಮಾಷೆ ಮಾಡಿದ್ದಾರೆ. ಸೀರಿಯಲ್ನಲ್ಲಿ ಗರ್ಭಿಣಿಯಾಗಿದ್ದಾಗ ಫೈಟಿಂಗ್ ಮಾಡಿದ ದೃಶ್ಯವನ್ನು ಧನುಷ್ ನಟಿಸಿ ತೋರಿಸಿದ್ದು, ಮನೆಯಲ್ಲಿ ನಗುವಿನ ಅಲೆ ಎಬ್ಬಿಸಿದೆ.
Karnataka News Live 19th December: ಚೈತ್ರಾ ಕುಂದಾಪುರಗೆ ಮತ್ತೊಮ್ಮೆ ಕಾನೂನು ಸಂಕಷ್ಟ; ಅಪ್ಪನ ವಿಚಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ?
ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರಗೆ ತಂದೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಉಡುಪಿ ನ್ಯಾಯಾಲಯದಿಂದ ಆದೇಶ. ಏನಿದು ಪ್ರಕರಣ? ಪೂರ್ತಿ ವಿವರ ತಿಳಿಯಲು ಕ್ಲಿಕ್ ಮಾಡಿ.
Karnataka News Live 19th December: ಚಳಿ ಅಂತ ರಚಿತಾ ರಾಮ್ರನ್ನ ಅಲ್ಲಿಗೆ ಕರೆದುಕೊಂಡು ಹೋದ ದುನಿಯಾ ವಿಜಯ್.. ಏನಿದು ಹೊಸ ವಿಷ್ಯ?
ಮೀಟ್ ಮಾಡೋಣ ಇಲ್ಲ ಡೇಟ್ ಮಾಡೋಣ ಅಂತ ಎಣ್ಣೆ ಹೊಡೆದು ಕಿಕ್ ಕೊಡ್ತಿದ್ದ ಡಿಂಪಲ್ ಕ್ವೀನ್ ರಚಿತಾ ರಾಮ್ ಈಗ ಆ ಸಹವಾಸವೇ ಬೇಡ ನಾನು ಗ್ಲಾಮರ್ ಕಡೆ ಮುಖನು ಹಾಕಲ್ಲ ಅಂತ ಬಣ್ಣ ಬದಲಿಸಿದ್ದಾರೆ.
Karnataka News Live 19th December: ಮಂಗಳೂರಿಗೆ 1200 ಕೋಟಿ ಯುಜಿಡಿ ಪ್ಲ್ಯಾನ್, ನಾಯಿಗಳ ಪುನರ್ವಸತಿಗೆ 10 ಎಕರೆ, ದಶಕಗಳ ಸಮಸ್ಯೆಗೆ ಸಿಗುವುದೇ ಮುಕ್ತಿ?
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಪೂರ್ಣ ಒಳಚರಂಡಿ ಜಾಲಕ್ಕಾಗಿ 1200 ಕೋಟಿ ರೂಪಾಯಿಗಳ ಬೃಹತ್ ಯೋಜನೆ ಸಿದ್ಧವಾಗುತ್ತಿದೆ. ಇದರೊಂದಿಗೆ, ಬೀದಿ ನಾಯಿಗಳ ಪುನರ್ವಸತಿ ಮತ್ತು ನಗರಕ್ಕೆ 100 ಹೊಸ ಎಲೆಕ್ಟ್ರಿಕ್ ಬಸ್ಸುಗಳನ್ನು ತರುವ ಯೋಜನೆಯನ್ನು ಜಿಲ್ಲಾಧಿಕಾರಿ ದರ್ಶನ್ ಬಹಿರಂಗಪಡಿಸಿದ್ದಾರೆ.
Karnataka News Live 19th December: ಕಿಚ್ಚನ ಮಗಳು ಸಂಗೀತ ಲೋಕದ ಹೊಸ ತಾರೆ - ಸಾನ್ವಿ ಸುದೀಪ್ ಫಸ್ಟ್ ಸಾಂಗ್ ಟ್ರೆಂಡಿಂಗ್ನಲ್ಲಿ No 1!
ಅಪ್ಪ ಸೂಪರ್ ಸ್ಟಾರ್.. ಶ್ರೀಮಂತ ನಟ. ಬೇಕಾಗಿದ್ದೆಲ್ಲಾ ಕಣ್ ಮುಂದೆಯೇ ಇರುತ್ತೆ. ಮನೆ ಫ್ರೆಂಡ್ಸ್ ಆಂತ ಓಡಾಡ್ಕೊಂಡು ಎಂಜಾಯ್ ಮಾಡ್ಕೊಂಡು ಇರಬಹುದು.. ಆದ್ರೆ ಬಾದ್ ಷಾ ಕಿಚ್ಚ ಸುದೀಪ್ ಮಗಳು ಸಾನ್ವಿ ಸುದೀಪ್ ಹಾಗಲ್ಲ.