07:57 AM (IST) Apr 01

Karnataka News Live 1st April 2026Shivamogga - ಸತ್ತ ಮೇಲೂ ಬಿಡದ ದ್ವೇಷ - ಸಂಕೇತ್ ಸಮಾಧಿ ಧ್ವಂಸಗೊಳಿಸಿದ ದುಷ್ಕರ್ಮಿಗಳು

ಶಿವಮೊಗ್ಗದಲ್ಲಿ ಇತ್ತೀಚೆಗೆ ಕೊಲೆಯಾಗಿದ್ದ ಬಾಲಕ ಸಂಕೇತ್ ಸಮಾಧಿಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಪ್ರತಿ ಬುಧವಾರ ಪೂಜೆ ಸಲ್ಲಿಸುತ್ತಿದ್ದ ಕುಟುಂಬಸ್ಥರು, ಮಗನ ಸಮಾಧಿ ಧ್ವಂಸಗೊಂಡಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Read Full Story
07:51 AM (IST) Apr 01

Karnataka News Live 1st April 2026BWSSB - ಇಂದಿನಿಂದ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ! ಶೇ.3ರಷ್ಟು ಏರಿಸಿದ ಜಲಮಂಡಳಿ!

ಆರ್ಥಿಕ ಸಂಕಷ್ಟವನ್ನು ಸರಿದೂಗಿಸಲು, ಬೆಂಗಳೂರು ಜಲಮಂಡಳಿಯು ಏಪ್ರಿಲ್‌ನಿಂದ ನೀರಿನ ಬಳಕೆ ಶುಲ್ಕವನ್ನು ಶೇ.3ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಈ ದರ ಏರಿಕೆಯಿಂದಾಗಿ ಗೃಹ ಬಳಕೆದಾರರಿಗೆ ಮಾಸಿಕ 20-30 ರೂ. ಮತ್ತು ವಾಣಿಜ್ಯ ಬಳಕೆದಾರರಿಗೆ 50-60 ರೂ. ಹೆಚ್ಚುವರಿ ಹೊರೆಯಾಗಲಿದೆ.
Read Full Story
07:46 AM (IST) Apr 01

Karnataka News Live 1st April 2026ಗ್ರಾಹಕರಿಗೆ ಬಿಗ್ ಶಾಕ್ - ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 218 ರೂಪಾಯಿ ಹೆಚ್ಚಳ

ಏಪ್ರಿಲ್ 1 ರಿಂದ 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ₹218 ರಷ್ಟು ಭಾರೀ ಏರಿಕೆಯಾಗಿದೆ. ಈ ಬೆಲೆ ಏರಿಕೆಯು ಹೋಟೆಲ್‌ ಮತ್ತು ಇತರೆ ವ್ಯಾಪಾರಗಳ ಮೇಲೆ ನೇರ ಪರಿಣಾಮ ಬೀರಲಿದ್ದು, ಗೃಹಬಳಕೆಯ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
Read Full Story
07:27 AM (IST) Apr 01

Karnataka News Live 1st April 2026Bengaluru Karaga 2026 - ಇಂದು ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ

Bengaluru Karaga 2026 ಐತಿಹಾಸಿಕ ಬೆಂಗಳೂರು ಹಸಿ ಕರಗ ಮಹೋತ್ಸವವು ಸಂಪಂಗಿ ಕೆರೆ ಅಂಗಳದಲ್ಲಿ ಭಕ್ತಿ-ಭಾವದಿಂದ ಆರಂಭವಾಗಿದೆ. ಬುಧವಾರ ರಾತ್ರಿ ನಡೆಯಲಿರುವ ಹೂವಿನ ಕರಗವು ನಗರದ ಪ್ರಮುಖ ಭಾಗಗಳಲ್ಲಿ ಸಂಚರಿಸಲಿದ್ದು, ಇದಕ್ಕಾಗಿ ಬಿಗಿ ಬಂದೋಬಸ್ತ್ ಮಾಡಲಾಗಿದೆ.

Read Full Story