08:21 AM (IST) Aug 02

Karnataka News Live 2 August 2026ಬಿಕರ್ನಕಟ್ಟೆ-ಸಾಣೂರು ಹೆದ್ದಾರಿ ಮಣ್ಣು ಕುಸಿತ - ತಡೆಗೋಡೆ ನಡೆಸದೇ ಅವೈಜ್ಞಾನಿಕ ಕಾಮಗಾರಿ?

ಮಂಗಳೂರಿನ ಎಡಪದವು ಬಳಿ ರಾಷ್ಟ್ರೀಯ ಹೆದ್ದಾರಿ 169ರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಣ್ಣು ಕುಸಿದಿದೆ. ತಡೆಗೋಡೆ ನಿರ್ಮಿಸದ ಕಾರಣ, ಮಳೆನೀರು ಕೃಷಿ ಭೂಮಿಗೆ ನುಗ್ಗಿ ಅಪಾರ ಹಾನಿಯಾಗಿದ್ದು, ಭಾರೀ ದುರಂತದ ಭೀತಿ ಎದುರಾಗಿದೆ.
Read Full Story
08:16 AM (IST) Aug 02

Karnataka News Live 2 August 2026ಶಿವಮೊಗ್ಗ - ಚಲಿಸುತ್ತಿದ್ದ ವಾಹನದ ಮೇಲೆ ಬೃಹತ್ ಮರ ಉರುಳಿ ಬಿದ್ರೂ ಬದುಕುಳಿದ ಚಾಲಕ!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ, ಚಲಿಸುತ್ತಿದ್ದ ಟಾಟಾ ಏಸ್ ವಾಹನದ ಮೇಲೆ ಬೃಹತ್ ಮರವೊಂದು ಉರುಳಿಬಿದ್ದಿದೆ. ಈ ದುರಂತದಲ್ಲಿ ವಾಹನದೊಳಗೆ ಸಿಲುಕಿದ್ದ ಚಾಲಕ ತೌಸಿಫ್ ಅವರನ್ನು ಪೊಲೀಸರು ಮತ್ತು ಸ್ಥಳೀಯರು ಹರಸಾಹಸಪಟ್ಟು ರಕ್ಷಿಸಿದ್ದು, ಚಾಲಕ ಗಂಭೀರ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Read Full Story
08:09 AM (IST) Aug 02

Karnataka News Live 2 August 2026Bengaluru To Belagavi ವಂದೇ ಭಾರತ್‌ ರೈಲು ಪ್ರಯಾಣ ತಪ್ಪಿಕೊಂಡವರಿಗೆ ಹಣ ರೀಫಂಡ್‌

Bengaluru Belagavi Vande Bharat Express train: ಬೆಂಗಳೂರು-ಬೆಳಗಾವಿ ವಂದೇ ಭಾರತ್ ರೈಲಿನ ವೇಳಾಪಟ್ಟಿ ಬದಲಾವಣೆ ಕುರಿತು ಕೆಲವು ಪ್ರಯಾಣಿಕರಿಗೆ ತಪ್ಪು ಸಂದೇಶ ರವಾನೆಯಾದ ಕಾರಣ, ಹಲವರು ರೈಲು ತಪ್ಪಿಸಿಕೊಂಡಿದ್ದಾರೆ.

Read Full Story
07:45 AM (IST) Aug 02

Karnataka News Live 2 August 2026ಪಟ್ಟಣಕ್ಕೆ ಲಗ್ಗೆ ಇಟ್ಟ ಪ್ಲಾಸಿಕ್ ಗೊಂಬೆಗಳು; ಕೈಗೆಟುವ ದರದಲ್ಲಿ ಮಾರಾಟ, ಬೆಲೆ ಎಷ್ಟು?

ರಾಜಸ್ಥಾನದ ಅಲೆಮಾರಿ ಕುಟುಂಬಗಳು ಬೀಡುಬಿಟ್ಟಿದ್ದು, ಕೈಗೆಟುಕುವ ದರದಲ್ಲಿ ಗಾಳಿ ತುಂಬುವ ಪ್ಲಾಸ್ಟಿಕ್ ಗೊಂಬೆಗಳನ್ನು ಮಾರಾಟ ಮಾಡುತ್ತಿದ್ದಾರೆ. ಕುದುರೆ, ನವಿಲು, ಆನೆಯಂತಹ ಆಕರ್ಷಕ ಗೊಂಬೆಗಳು ಕಡಿಮೆ ಬೆಲೆಗೆ ಸಿಗುತ್ತಿರುವುದರಿಂದ, ಮಕ್ಕಳಿಂದ ಹಿಡಿದು ಪಾಲಕರವರೆಗೂ ಎಲ್ಲರೂ ಖರೀದಿಗೆ ಮುಗಿಬೀಳುತ್ತಿದ್ದು, ವ್ಯಾಪಾರ ಜೋರಾಗಿ ನಡೆಯುತ್ತಿದೆ.

Read Full Story
07:31 AM (IST) Aug 02

Karnataka News Live 2 August 2026Bengaluru ಖಾಲಿ ನಿವೇಶನ ಮಾಲೀಕರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಡಿಕೆ ಶಿವಕುಮಾರ್

ಸರ್ಕಾರ ಅಥವಾ ಸೊಸೈಟಿಯಿಂದ ಪಡೆದ ಖಾಲಿ ನಿವೇಶನಗಳಲ್ಲಿ 5 ವರ್ಷದೊಳಗೆ ಮನೆ ನಿರ್ಮಿಸದಿದ್ದರೆ ಅಂತಹ ನಿವೇಶನಗಳನ್ನು ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಯಮ ಉಲ್ಲಂಘಿಸುವ ಮಾಲೀಕರಿಗೆ ದುಪ್ಪಟ್ಟು ತೆರಿಗೆ ವಿಧಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಎಚ್ಚರಿಸಿದ್ದಾರೆ.
Read Full Story
07:27 AM (IST) Aug 02

Karnataka News Live 2 August 2026Green Bengaluru - ಬೆಂಗಳೂರಿಗರೇ ಗುಡ್‌ನ್ಯೂಸ್, ಸಸಿ ನೆಡಲು ಜಾಗ ಇದೆಯಾ? ಪಾಲಿಕೆಯ ಈ ನಂಬರ್‌ಗೆ ವಾಟ್ಸಪ್ ಮಾಡಿ ಸಾಕು

ಆಗಸ್ಟ್ 15 ರಿಂದ 'ಬೆಂಗಳೂರು ಹಸಿರೂರು' ಅಭಿಯಾನ ಆರಂಭವಾಗಲಿದ್ದು, ನಾಗರಿಕರು ತಮ್ಮ ಬಡಾವಣೆಗಳಲ್ಲಿ ಸಸಿಗಳನ್ನು ನೆಡಲು ಆಗಸ್ಟ್ 10ರೊಳಗೆ ಮನವಿ ಸಲ್ಲಿಸಬಹುದು. ಪಾಲಿಕೆಯು ಸ್ಥಳ ಪರಿಶೀಲನೆ ನಡೆಸಿ, ಸೂಕ್ತ ಸ್ಥಳಗಳಲ್ಲಿ ತಾನೇ ಸಸಿಗಳನ್ನು ನೆಡಲಿದೆ. ಈ ಅಭಿಯಾನದಡಿ 60 ಸಾವಿರ ಸಸಿ ನೆಡುವ ಗುರಿ ಹೊಂದಲಾಗಿದೆ.

Read Full Story
07:20 AM (IST) Aug 02

Karnataka News Live 2 August 2026ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ - ಬೆಂಗಳೂರು-ಮಂಗಳೂರು ಮಾರ್ಗದ ರೈಲು ಸಂಚಾರ ಸಂಪೂರ್ಣ ಸ್ಥಗಿತ

ಹಾಸನ ಜಿಲ್ಲೆಯ ಯಡಕುಮರಿ ಬಳಿ ಭಾರಿ ಮಳೆಯಿಂದಾಗಿ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿದೆ. ಈ ಕಾರಣದಿಂದ ಬೆಂಗಳೂರು-ಮಂಗಳೂರು ಮಾರ್ಗದ ರೈಲು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದ್ದು, ಹಲವು ರೈಲುಗಳನ್ನು ವಿವಿಧ ನಿಲ್ದಾಣಗಳಲ್ಲಿ ನಿಲ್ಲಿಸಲಾಗಿದೆ. ಇದರಿಂದಾಗಿ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
Read Full Story
06:59 AM (IST) Aug 02

Karnataka News Live 2 August 2026ಆಗಸ್ಟ್ 5ಕ್ಕೆ ಕಾರಂತ ಬಡಾವಣೆ ನಿವೇಶನಕ್ಕೆ ಅರ್ಜಿ; ಬೆಲೆ ಎಷ್ಟು? ಮಧ್ಯಮ ವರ್ಗಕ್ಕೆ ಸಿಗುತ್ತಾ?

ಬಹುನಿರೀಕ್ಷಿತ ಡಾ.ಕೆ.ಶಿವರಾಮ ಕಾರಂತ ಬಡಾವಣೆಯ ನಿವೇಶನಗಳಿಗೆ ಬಿಡಿಎ ಆಗಸ್ಟ್‌ 5ರಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಿದೆ. ಈ ಬಡಾವಣೆಯಲ್ಲಿ ಭೂಮಿ ನೀಡಿದ ರೈತರಿಗೆ ಮತ್ತು ಸಾರ್ವಜನಿಕರಿಗೆ ನಿವೇಶನಗಳನ್ನು ಹಂಚಿಕೆ ಮಾಡಲು ಪ್ರಾಧಿಕಾರ ಸಿದ್ಧತೆ ನಡೆಸಿದೆ.

Read Full Story