- Home
- News
- State
- Karnataka News Live: Karna Serial - ಮುಚ್ಚಿಟ್ಟ ಪ್ರೀತಿಯ ಸತ್ಯ ನಿತ್ಯಾ ಮುಂದೆ ರಿವೀಲ್ ಮಾಡುವಷ್ಟರಲ್ಲಿಯೇ ಆಗಬಾರದ್ದು ಆಗೋಯ್ತು!
Karnataka News Live: Karna Serial - ಮುಚ್ಚಿಟ್ಟ ಪ್ರೀತಿಯ ಸತ್ಯ ನಿತ್ಯಾ ಮುಂದೆ ರಿವೀಲ್ ಮಾಡುವಷ್ಟರಲ್ಲಿಯೇ ಆಗಬಾರದ್ದು ಆಗೋಯ್ತು!

ಬೆಂಗಳೂರು: ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಪ್ರಸಿದ್ಧ ಸುಕ್ಷೇತ್ರವಾದ ಹಾರನಹಳ್ಳಿ ಕೋಡಿ ಮಠಕ್ಕೆ ಗೃಹ ಸಚಿವ ಡಾ। ಜಿ.ಪರಮೇಶ್ವರ್ ಅವರು ಸೋಮವಾರ ಮುಂಜಾನೆ ಅಚಾನಕ್ ಭೇಟಿ ನೀಡಿ ಪೀಠಾಧ್ಯಕ್ಷ ಡಾ। ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅವರೊಂದಿಗೆ ಸುಮಾರು 1 ಗಂಟೆಗೂ ಹೆಚ್ಚು ಸಮಯ ಮಾತುಕತೆ ನಡೆಸಿದ್ದಾರೆ.
ಸಚಿವರು ಸ್ಥಳೀಯ ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ಯಾವುದೇ ಕಾಂಗ್ರೆಸ್ ಮುಖಂಡರಿಗೂ, ಹಾಗೆಯೇ ತಮ್ಮದೇ ಇಲಾಖೆಯ ಪೊಲೀಸರಿಗೂ ಮಾಹಿತಿ ನೀಡದೆ, ಏಕಾಂಗಿಯಾಗಿ, ಗೌಪ್ಯವಾಗಿ ಮಠಕ್ಕೆ ಭೇಟಿ ನೀಡಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ. ‘ಸಚಿವರು ಮಠದ ಭಕ್ತರು, ಹಾಗಾಗಿ ಭೇಟಿ ನೀಡಿದ್ದಾರೆ. ಯಾವುದೇ ರಾಜಕೀಯ ಚರ್ಚೆ ಆಗಿಲ್ಲ’ ಎಂದು ಕೋಡಿಮಠದ ಶ್ರೀಗಳು ಮಾಧ್ಯಮದವರಿಗೆ ಸ್ಪಷ್ಟನೆ ನೀಡಿದ್ದಾರೆ.
ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಗಟ್ಟಿಯಾಗಿಯೇ ಕುರ್ಚಿ ಮೇಲೆ ಕುಳಿತು, ಅಧಿಕಾರ ಮಾಡುತ್ತಿದ್ದಾರೆ. ಮುಂದೆಯೂ ಸಿಎಂ ಆಗಿಯೇ ಸಿದ್ದರಾಮಯ್ಯ ಇರುತ್ತಾರೆ ಎಂದು ಸಮಾಜ ಕಲ್ಯಾಣ ಸಚಿವ ಡಾ। ಎಚ್.ಸಿ.ಮಹದೇವಪ್ಪ ಸ್ಪಷ್ಟಪಡಿಸಿದರು. ಸರ್ಕಾರ, ಪಕ್ಷದ ಮುಂದೆ ಯಾವುದೇ ಆಲೋಚನೆಗಳೂ ಇಲ್ಲ. ಬದಲಾವಣೆ ಬಗ್ಗೆ ಪಕ್ಷದಲ್ಲಿ ಚರ್ಚೆಯೇ ಇಲ್ಲದಿದ್ದಾಗ ಅಂತೆ ಕಂತೆಗಳ ಬಗ್ಗೆ ಮಾತಾದರೂ ಯಾಕೆ ಎಂದು ಪ್ರಶ್ನಿಸಿದರು.
Karnataka News Live 2 December 2025Karna Serial - ಮುಚ್ಚಿಟ್ಟ ಪ್ರೀತಿಯ ಸತ್ಯ ನಿತ್ಯಾ ಮುಂದೆ ರಿವೀಲ್ ಮಾಡುವಷ್ಟರಲ್ಲಿಯೇ ಆಗಬಾರದ್ದು ಆಗೋಯ್ತು!
Karnataka News Live 2 December 2025ಬೆಳೆದ ಬೆಳೆಗಳ ಕಾವಲಿಗೆ ನಿಂತ ಸನ್ನಿ ಸುಂದರಿ, ಯಾದಗಿರಿ ರೈತರ ಪ್ರಯೋಗ ಫುಲ್ ಸಕ್ಸಸ್!
ಆಂಧ್ರಪ್ರದೇಶ ಮತ್ತು ಕರ್ನಾಟಕದ ರೈತರು ತಮ್ಮ ಉತ್ತಮ ಫಸಲನ್ನು ಕೆಟ್ಟ ದೃಷ್ಟಿಯಿಂದ ರಕ್ಷಿಸಲು ಒಂದು ವಿಶಿಷ್ಟ ಉಪಾಯ ಕಂಡುಕೊಂಡಿದ್ದಾರೆ. ಅವರು ತಮ್ಮ ಹೊಲಗಳಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಅವರ ಪೋಸ್ಟರ್ಗಳನ್ನು ಹಾಕುತ್ತಿದ್ದಾರೆ.
Karnataka News Live 2 December 2025Lakshmi Nivasa - ಮನೆಬಿಟ್ಟ ಜಾಹ್ನವಿ- ಉಲ್ಟಾ ಹೊಡೆದ ವೀಕ್ಷಕರು; ಅಯ್ಯೋ ಪಾಪ ಅಂತಿದ್ದೋರೇ ಡಿವೋರ್ಸ್ ಕೊಡಿಸಲು ಮುಂದಾದ್ರು!
Karnataka News Live 2 December 2025Bigg Boss 12ರ ವಿನ್ನರ್ ಬಗ್ಗೆ ಅಚ್ಚರಿಯ ಹೇಳಿಕೆ ಕೊಟ್ಟ ಜಾಹ್ನವಿ - ಯಾರೂ ಊಹಿಸದ ಟ್ವಿಸ್ಟ್ ಇದು!
'ಬಿಗ್ ಬಾಸ್ ಕನ್ನಡ ಸೀಸನ್ 12' ರಿಂದ ಎಲಿಮಿನೇಟ್ ಆದ ಜಾಹ್ನವಿ, ಟಾಪ್ 5 ಸ್ಪರ್ಧಿಗಳ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಅಶ್ವಿನಿ ಗೌಡ ಗೆಲ್ಲಬೇಕೆಂಬುದು ತಮ್ಮ ಆಸೆಯಾದರೂ, ಗೆಲ್ಲುವುದೇ ಬೇರೆಯವರು ಎನ್ನುವ ಮೂಲಕ ಅವರ ಹೆಸರು ರಿವೀಲ್ ಮಾಡಿದ್ದಾರೆ!
Karnataka News Live 2 December 2025Amruthadhaare - ಆಗಬಾರದ್ದೇ ಆಗೋಯ್ತು! ದೇವಾಲಯದಲ್ಲಿ ಜೈದೇವನ ಎದುರೇ ಭೂಮಿ-ಮಲ್ಲಿ - ಮುಂದೇನಾಯ್ತು?
ದೇವಸ್ಥಾನದಲ್ಲಿ ಭೂಮಿಕಾಳ ಸೀರೆಗೆ ಬೆಂಕಿ ಹೊತ್ತಿಕೊಂಡಾಗ ಆಘಾತದಿಂದ ಭಾಗ್ಯಮ್ಮನಿಗೆ ದನಿ ಮರಳಿ ಬರುತ್ತದೆ. ಮತ್ತೊಂದೆಡೆ, ಮಲ್ಲಿಯನ್ನು ಹುಡುಕುತ್ತಿರುವ ಜೈದೇವನು, ಆಕೆ ತನ್ನ ಕಣ್ಣೆದುರೇ ಹಾದು ಹೋದರೂ ಕುಡಿದ ನಶೆಯಲ್ಲಿದ್ದ ರಿಂದ ಕಾಣಿಸಿಲ್ಲ, ಆದರೆ ಭಾಗ್ಯಮ್ಮ ಕಣ್ಣಿಗೆ ಬೀಳ್ತಾಳೆ. ಮುಂದೇನು?
Karnataka News Live 2 December 2025ಅಣ್ಣ ಸಂತೋಷ್ನ ದುರಾಸೆಗೆ ಕ್ಯಾಕರಿಸಿ ಉಗಿದ ಭಾವನಾ - ಇದಪ್ಪಾ ಸ್ವಾಭಿಮಾನದ ತಿರುಗೇಟು?
Karnataka News Live 2 December 2025Devil ಚಿತ್ರದಿಂದ ದರ್ಶನ್ ಅಕ್ಕನ ಮಗನನ್ನು ಉದ್ದೇಶಪೂರ್ವಕವಾಗಿ ಹೊರಕ್ಕೆ ಇಟ್ವಿ - ಆ ಸತ್ಯದ ಬಗ್ಗೆ ನಿರ್ದೇಶಕ ರಿವೀಲ್
ರೇಣುಕಾಸ್ವಾಮಿ ಕೇಸ್ನಲ್ಲಿ ನಟ ದರ್ಶನ್ ಜೈಲಿನಲ್ಲಿರುವಾಗಲೇ ಅವರ 'ಡೆವಿಲ್' ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಈ ಚಿತ್ರದಿಂದ ದರ್ಶನ್ ಅಕ್ಕನ ಮಗ ಚಂದು ಅವರನ್ನು ಹೊರಗಿಟ್ಟಿರುವ ಕಾರಣವನ್ನು ನಿರ್ದೇಶಕ ಪ್ರಕಾಶ್ ಸ್ಪಷ್ಟಪಡಿಸಿದ್ದಾರೆ. ಅವರು ಹೇಳಿದ್ದೇನು?
Karnataka News Live 2 December 2025ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ನಿಂದ ತೆರಳಬೇಕಿದ್ದ 22 ವಿಮಾನ ಹಾರಾಟ ಸ್ಥಗಿತ
ಬೆಂಗಳೂರು ಕೆಂಪೇಗೌಡ ಏರ್ಪೋರ್ಟ್ನಿಂದ ತೆರಳಬೇಕಿದ್ದ 22 ವಿಮಾನ ಹಾರಾಟ ಸ್ಥಗಿತ, ಏರ್ ಬಸ್ ವಿಮಾನಗಳಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ವಿವಿದೆಡೆ ತೆರಳಬೇಕಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.
Karnataka News Live 2 December 2025ರಸ್ತೆ ಗುಂಡಿ ಸಮಸ್ಯೆಗೆ ಡ್ರೈನೆಜ್ ಲೇಯರ್ ತಂತ್ರಜ್ಞಾನ ಬಳಕೆ, ಹೊಸ ತಂತ್ರಜ್ಞಾನದ ಉಪಯೋಗವೇನು?
ಅತಿಯಾದ ಮಳೆಯಿಂದಾಗಿ ಕಾರ್ಕಳ ತಾಲೂಕಿನಲ್ಲಿ ಹದಗೆಟ್ಟ ರಸ್ತೆಗಳನ್ನು ದುರಸ್ತಿಗೊಳಿಸಲು ಲೋಕೋಪಯೋಗಿ ಇಲಾಖೆಯು 'ಡ್ರೈನೆಜ್ ಲೇಯರ್' ಎಂಬ ಹೊಸ ತಂತ್ರಜ್ಞಾನ ಅಳವಡಿಸಿಕೊಂಡಿದೆ. ಈ ವಿಧಾನವು ರಸ್ತೆಯ ಕೆಳಗೆ ನೀರು ನಿಲ್ಲುವುದನ್ನು ತಡೆದು, ಡಾಂಬರು ಪದರದ ಬಾಳಿಕೆಯನ್ನು ಹೆಚ್ಚಿಸುತ್ತದೆ.
Karnataka News Live 2 December 2025ಹೋಟೆಲ್ ರಾಜ್ಕಮಲ್ ಕೆಡವಿ ಕೊಳಗೇರಿ ನಿವಾಸಿಗೆ ವಸತಿ ಕಲ್ಪಿಸಿ, ಸಿದ್ದರಾಮಯ್ಯಗೆ ಶಾಂತಿ ಕಾರ್ಯಕರ್ತ ಇಪಿ ಮೆನನ್ ಮನವಿ
Karnataka News Live 2 December 2025ಪುತ್ತೂರಿಗೆ ಮೆಡಿಕಲ್ ಕಾಲೇಜು ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್ಗಳಲ್ಲಿ ಶಾಸಕ ಅಶೋಕ್ ರೈ ವಿಶೇಷ ಪ್ರಾರ್ಥನೆ
Karnataka News Live 2 December 2025ಖಾಸಗಿ ಶಾಲೆಗಳಿಗೆ ಸೆಡ್ಡು, ಮುಂದಿನ ವರ್ಷದಿಂದ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆ ಕಾರ್ಯಾರಂಭ
ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಮತ್ತು ಕೆಕೆಆರ್ಡಿಬಿ ನೆರವಿನೊಂದಿಗೆ ರಾಜ್ಯಾದ್ಯಂತ 700 ಕೆಪಿಎಸ್ ಶಾಲೆಗಳನ್ನು ಆರಂಭಿಸಲಿದೆ. ಈ ಮೂಲಕ, ಸರ್ಕಾರಿ ಶಾಲೆಗಳಲ್ಲಿ ಕುಸಿಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಎಲ್ಕೆಜಿಯಿಂದ 12ನೇ ತರಗತಿವರೆಗೆ ಆಂಗ್ಲ ಮಾಧ್ಯಮ ಶಿಕ್ಷಣ ನೀಡಲು ಉದ್ದೇಶಿಸಲಾಗಿದೆ.
Karnataka News Live 2 December 2025ಬೆಳಗಾವಿ ಎಟಿಎಂ ಯಂತ್ರ ಕದ್ದೊಯ್ದರೂ ಕಳ್ಳರ ಕೈಗೆ ಸಿಗಲಿಲ್ಲ ಹಣ! ಲಾಕರ್ ತೆಗೆಲಾಗದೇ ಬೀಸಾಡಿ ಹೋದ ಗ್ಯಾಂಗ್!
Karnataka News Live 2 December 2025ಕ್ಯಾನ್ಸರ್ ಶಸ್ತ್ರಚಿಕಿತ್ಸೆಯಲ್ಲಿ ಹೊಸ ಮೈಲಿಗಲ್ಲಿನತ್ತ ಮಿಮ್ಸ್ ಹೆಜ್ಜೆ, ನೈಜ ಸಮಯದಲ್ಲಿ ಗುರುತಿಸುವ ಸಂಶೋಧನೆ ಆರಂಭ!
ಮಂಡ್ಯ ಮಿಮ್ಸ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ವೇಳೆ ಉಳಿಯುವ ಕ್ಯಾನ್ಸರ್ ಅವಶೇಷವನ್ನು ನೈಜ ಸಮಯದಲ್ಲಿ ಗುರುತಿಸುವ ಸಂಶೋಧನೆ ಆರಂಭಿಸಿವೆ. ಈ ತಂತ್ರಜ್ಞಾನವು ಎಐ ಮತ್ತು ಫ್ಲೊರೆಸನ್ಸ್ ಇಮೇಜಿಂಗ್ ಬಳಸಿ ಶಸ್ತ್ರಚಿಕಿತ್ಸೆಯ ನಿಖರತೆಯನ್ನು ಹೆಚ್ಚಿಸಿ, ಚಿಕಿತ್ಸಾ ವೆಚ್ಚವನ್ನು ಕಡಿಮೆ ಮಾಡುವ ಗುರಿ ಹೊಂದಿದೆ.
Karnataka News Live 2 December 2025ಬೆಂಗಳೂರು ಏರ್ಪೋರ್ಟ್, ಶಾಪಿಂಗ್ ಮಾಲ್ಗಳಿಗೆ 'ಜೈಷ್-ಇ-ಮೊಹಮ್ಮದ್' ಹೆಸರಲ್ಲಿ ಬಾಂಬ್ ಬೆದರಿಕೆ ಇ-ಮೇಲ್
ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ 'ಜೈಷ್-ಇ-ಮೊಹಮ್ಮದ್' ಹೆಸರಿನಲ್ಲಿ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಈ ಸಂದೇಶದಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣ ಮತ್ತು ಪ್ರಮುಖ ಮಾಲ್ಗಳನ್ನು ಗುರಿಯಾಗಿಸಲಾಗಿತ್ತು.
Karnataka News Live 2 December 2025ಪುತ್ತೂರಿನಲ್ಲಿ ಮತ್ತೆ ಬಿಜೆಪಿ vs ಪುತ್ತಿಲ ಪರಿವಾರದ ಜಟಾಪಟಿ! ಮಹಾಲಿಂಗೇಶ್ವರನ ಮೊರೆ ಹೋದ ಬಿಜೆಪಿ ಉಪಾಧ್ಯಕ್ಷ!
ಪುತ್ತೂರಿನಲ್ಲಿ ಬಿಜೆಪಿ ಮತ್ತು ಪುತ್ತಿಲ ಪರಿವಾರದ ನಡುವಿನ ಸಂಘರ್ಷ ತಾರಕಕ್ಕೇರಿದೆ. ಶ್ರೀನಿವಾಸ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದ್ದ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತ ಅವರನ್ನು ಪುತ್ತಿಲ ಪರಿವಾರದ ಕಾರ್ಯಕರ್ತರು ತಡೆದು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.
Karnataka News Live 2 December 2025Clove tea Benefits - ಟೀಗೆ ಲವಂಗ ಬೆರೆಸಿ ಕುಡಿದ್ರೆ ಪ್ರಯೋಜನ ನೂರಾರು, ಅಷ್ಟಕ್ಕೂ ಇದನ್ನು ತಯಾರಿಸೋದು ಹೇಗೆ?
ಲವಂಗ ಆರೋಗ್ಯಕ್ಕೆ ಬಹಳ ಒಳ್ಳೆಯದು. ಅದು ಸಾಕಷ್ಟು ಔಷಧಿ ಗುಣವನ್ನು ಹೊಂದಿದೆ. ಚಳಿಗಾಲದಲ್ಲಿ ಲವಂಗದ ಟೀ ಕುಡಿದ್ರೆ ರೋಗನಿರೋಧಕ ಶಕ್ತಿ ಹೆಚ್ಚಾಗೋದಲ್ದೆ ಮತ್ತೇನೆಲ್ಲ ಲಾಭವಿದೆ, ಅದನ್ನು ತಯಾರಿಸೋದು ಹೇಗೆ ಎಂಬ ಮಾಹಿತಿ ಇಲ್ಲಿದೆ.
Karnataka News Live 2 December 2025ಮಲೆನಾಡಲ್ಲಿ ಮತ್ತೆ ಆತಂಕ - ಸಮಯಕ್ಕೂ ಮೊದಲೇ ಕಾಣಿಸಿಕೊಂಡ ಕೆಎಫ್ಡಿ ಸೋಂಕು, 50 ವರ್ಷದ ಮಹಿಳೆಯಲ್ಲಿ ದೃಢ!
Karnataka News Live 2 December 2025ದರ್ಶನ್ನನ್ನು ಲಾಕಪ್ ಡೆತ್ ಮಾಡಿ, ಹಣ ಕೊಡಲುಬಂದ ಪೊಲೀಸರು; ನ್ಯಾಯಾಂಗ ತನಿಖೆಗೆ ಪತ್ನಿ ಅಶ್ವಿನಿ ಆಗ್ರಹ!
Karnataka News Live 2 December 2025ಫೇಕ್ ಬೆಸ್ಕಾಂ ಅಪ್ಲಿಕೇಶನ್ ಡೌನ್ಲೋಡ್ ಮಾಡಿ 14.60 ಲಕ್ಷ ಕಳೆದುಕೊಂಡ ಬೆಂಗಳೂರು ಮಹಿಳೆ!
ಬೆಂಗಳೂರಿನ ವಿದ್ಯಾರಣ್ಯಪುರದ 60 ವರ್ಷದ ಮಹಿಳೆಯೊಬ್ಬರು, ಬೆಸ್ಕಾಮ್ ಅಧಿಕಾರಿ ಎಂದು ಹೇಳಿಕೊಂಡ ಸೈಬರ್ ವಂಚಕನ ಮಾತನ್ನು ನಂಬಿ ನಕಲಿ ಆ್ಯಪ್ ಡೌನ್ಲೋಡ್ ಮಾಡಿದ್ದಾರೆ. ಬಿಲ್ ಅಪ್ಡೇಟ್ಗಾಗಿ 12 ರೂ. ಪಾವತಿಸಲು ಹೋಗಿ,14.60 ಲಕ್ಷ ರೂ. ಕಳೆದುಕೊಂಡಿದ್ದಾರೆ.