- Home
- News
- State
- Karnataka News Live: Gadag - ಬಟ್ಟೆ ತೊಳೆಯಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಲಕ್ಷ್ಮವ್ವ, ಮುತ್ತವ್ವ ಸಾವು
Karnataka News Live: Gadag - ಬಟ್ಟೆ ತೊಳೆಯಲು ಹೋಗಿ ಕೃಷಿಹೊಂಡದಲ್ಲಿ ಬಿದ್ದು ಲಕ್ಷ್ಮವ್ವ, ಮುತ್ತವ್ವ ಸಾವು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಬ್ಬರ ಮುಂದುವರಿದಿದ್ದು, ಮಂಗಳವಾರ ದಾವಣಗೆರೆ, ಬೀದರ್, ರಾಯಚೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ ಸೇರಿದಂತೆ ವಿವಿಧೆಡೆ ಮಳೆಯಾಗಿದೆ. ಬಳ್ಳಾರಿಯಲ್ಲಿ ವರುಣನ ಆರ್ಭಟಕ್ಕೆ ಸುಮಾರು 500ಕ್ಕೂ ಅಧಿಕ ಮರಗಳು ಹಾಗೂ 76 ವಿದ್ಯುತ್ ಕಂಬಗಳು ಧರೆಗುರುಳಿವೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಗುಡುಗು, ಮಿಂಚಿನ ಮಳೆಗೆ 20 ಅಡಕೆ ಮರಗಳು ಸುಟ್ಟುಹೋಗಿದೆ. ಇನ್ನೂ ರಾಯಚೂರಿನ ಮಾನ್ವಿ, ಮಸ್ಕಿ ಹಾಗೂ ಲಿಂಗಸುಗೂರು ಇತರೆ ಪ್ರದೇಶಗಳಲ್ಲಿ ವಿದ್ಯುತ್ ಕಂಬ, ಮರಗಳು ನೆಳಕ್ಕುರುಳಿವೆ.

ಕಾರವಾರದಲ್ಲಿ ಚಂಡಮಾರುತ, ಭಾರಿ ಮಳೆ ಸಾಧ್ಯತೆ ಹಿನ್ನೆಲೆ ಜಿಲ್ಲೆಯಲ್ಲಿ ಜಲಸಾಹಸ ಕ್ರೀಡೆಗಳನ್ನು ಜಿಲ್ಲಾಡಳಿತ ಸ್ಥಗಿತಗೊಳಿಸಿದೆ. ಗೋಕರ್ಣ, ಮುರು ಡೇಶ್ವರ, ಕಾರವಾರ ಬೀಚ್ಗಳಲ್ಲಿ ಬೋಟಿಂಗ್ ಸ್ಥಗಿತಗೊಳಿಸಲಾಗಿದೆ. ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್ಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಚಂಡಮಾರುತ ಹಾಗೂ ಭಾರಿ ಮಳೆ ಉಂಟಾಗುವ ಸಾಧ್ಯತೆ ಕುರಿತು ಮುನ್ಸೂಚನೆ ನೀಡಿರುವುದರಿಂದ ಸುರಕ್ಷತೆ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.