09:26 AM (IST) Dec 21

Karnataka News Live 21 December 2025ತಾಕತ್ತಿದ್ರೆ ನೋಟಲ್ಲಿರುವ ಗಾಂಧಿ ಚಿತ್ರ ತೆಗೆಯಿರಿ - ಕೇಂದ್ರಕ್ಕೆ ಡಿಕೆಶಿ ಸವಾಲು!

ನರೇಗಾ ಹೆಸರು ಬದಲು, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕೇಂದ್ರದ ದ್ವೇಷದ ರಾಜಕಾರಣವನ್ನು ಖಂಡಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್‌ ಬೃಹತ್ ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಮಾಡಲು ಬಿಡುವುದಿಲ್ಲ ಎಂದು ಸವಾಲು ಹಾಕಿದರು.

Read Full Story
09:08 AM (IST) Dec 21

Karnataka News Live 21 December 2025ಶುಭಾ ಪೂಂಜಾ ಶೂಟಿಂಗ್‌ ಸೆಟ್‌ನಲ್ಲಿ ಹೇಗಿರ್ತಾರೆ? ಕಾಮಿಡಿ ಕಿಲಾಡಿ ಬಿಚ್ಚಿಟ್ಟ ಸತ್ಯ ಏನು?

ನಟಿ ಶುಭಾ ಪೂಂಜಾ 'ಕಾಮಿಡಿ ಕಿಲಾಡಿಗಳು' ವೇದಿಕೆಯಲ್ಲಿ ಕೋಳಿ ಕಳ್ಳ ಖ್ಯಾತಿಯ ಮನು ಜೊತೆ ನಟಿಸಿದ್ದಾರೆ. ಅವರ ಸರಳತೆಗೆ ಸಹನಟ ಮನು ಮನಸೋತರೆ, ಹಿರಿಯ ನಟ ಜಗ್ಗೇಶ್ ಅವರ ನಟನೆ ಹಾಗೂ ಕಲಿಯುವ ಆಸಕ್ತಿಯನ್ನು ಮೆಚ್ಚಿಕೊಂಡಿದ್ದಾರೆ.

Read Full Story
08:38 AM (IST) Dec 21

Karnataka News Live 21 December 2025ಕೊಲ್ಲೂರು ದೇವಳ ಹೆಸರಲ್ಲಿ ನಕಲಿ ವೆಬ್‌ಸೈಟ್ - ಭಕ್ತರಿಗೆ ವಂಚಿಸುತ್ತಿದ್ದ ಆರೋಪಿ ನಾಸೀರ್ ಹುಸೇನ್ ಬಂಧನ

Kollur temple fake website scam :ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ಸೃಷ್ಟಿಸಿ, ಆನ್‌ಲೈನ್ ರೂಮ್ ಬುಕ್ಕಿಂಗ್ ಹೆಸರಿನಲ್ಲಿ ಭಕ್ತರಿಂದ ಹಣ ಪಡೆದು ವಂಚಿಸುತ್ತಿದ್ದ ರಾಜಸ್ಥಾನ ಮೂಲದ ನಾಸೀರ್ ಹುಸೇನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 

Read Full Story
08:36 AM (IST) Dec 21

Karnataka News Live 21 December 2025ಬಂಗಾಳದಲ್ಲಿ ಶೀಘ್ರ ಜಂಗಲ್‌ ರಾಜ್ಯ ಅಂತ್ಯ - ಮೋದಿ ಪಣ

ಪಶ್ಚಿಮ ಬಂಗಾಳದ ಜಂಗಲ್‌ ರಾಜ್ಯದಲ್ಲಿ ಭ್ರಷ್ಟಾಚಾರ, ಸ್ವಜನಪಕ್ಷಪಾತ ತಾಂಡವವಾಡುತ್ತಿದೆ. ಆದ್ದರಿಂದ 2026ರ ಚುನಾವಣೆಯಲ್ಲಿ ಡಬಲ್‌ ಎಂಜಿನ್‌ ಸರ್ಕಾರ ರಚಿಸಲು ಬಿಜೆಪಿಗೆ ಅವಕಾಶ ಕೊಡಿ’ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

Read Full Story
08:19 AM (IST) Dec 21

Karnataka News Live 21 December 2025ನಾನಿಲ್ಲದೆ Bigg Boss ಮನೇಲಿ Spark ಇಲ್ಲ ಎಂದ Rakshita Shetty; ಅಲ್ಲೇ ಸತ್ಯದರ್ಶನ ಮಾಡಿಸಿದ ಕಿಚ್ಚ ಸುದೀಪ್

ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಕ್ಷಿತಾ, ಧ್ರುವಂತ್‌ ಅವರು ಸೀಕ್ರೆಟ್‌ ರೂಮ್‌ನಲ್ಲಿದ್ದರು. ಅಲ್ಲಿಂದ ಅವರು ದೊಡ್ಮನೆಯಲ್ಲಿ ಏನು ನಡೆಯುತ್ತಿದೆ ಎಂದು ನೋಡುತ್ತಿದ್ದರು, ಆಮೇಲೆ ಟೀಂ ರಚನೆ ಮಾಡಿದ್ದರು. ತನ್ನಿಂದಲೇ ಎಲ್ಲ, ತಾನೇ ಎಲ್ಲ ಎಂದುಕೊಂಡ ರಕ್ಷಿತಾಗೆ ಉಳಿದವರು ಠಕ್ಕರ್‌ ಕೊಟ್ಟಿದ್ದಾರೆ.

Read Full Story
08:18 AM (IST) Dec 21

Karnataka News Live 21 December 2025ಬೆಳಗಾವಿಯಲ್ಲಿ ಕೊನೆ ದಿನ 11 ಗಂಟೆ ಅಧಿವೇಶನ ನಡೆಸಿ ಹೊರಟ್ಟಿ ದಾಖಲೆ

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿ ಅಧಿವೇಶನದ ಕೊನೆಯ ದಿನ ಸತತ 11.10 ಗಂಟೆಗಳ ಕಾಲ ಸದನ ನಡೆಸಿ ಹೊಸ ದಾಖಲೆ ಬರೆದಿದ್ದಾರೆ. 45 ವರ್ಷಗಳ ಕಾಲ ಪರಿಷತ್ ಸದಸ್ಯರಾಗಿ ವಿಶ್ವದಾಖಲೆ ಹೊಂದಿರುವ ಹೊರಟ್ಟಿ, ಈ ಮೂಲಕ ಮತ್ತೊಂದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

Read Full Story
08:13 AM (IST) Dec 21

Karnataka News Live 21 December 2025Winter - ಚಳಿಗಾಲದಲ್ಲಿ ಈ ಟ್ರಿಕ್ಸ್‌ನಿಂದ ಮನೆ ಬೆಚ್ಚಗಿಡಿ, ಚಳಿ ನಿಮಿಷದಲ್ಲಿ ಓಡಿಹೋಗುತ್ತೆ

ಚಳಿಗಾಲದಲ್ಲಿ ರಾತ್ರಿ ಹೊತ್ತು ಮನೆ ಬೆಚ್ಚಗಿಡಲು ಕಿಟಕಿಗಳನ್ನು ಸರಿಯಾಗಿ ಮುಚ್ಚುವುದು, ದಪ್ಪ ಪರದೆಗಳನ್ನು ಬಳಸುವುದು ಮತ್ತು ನೆಲದ ಮೇಲೆ ರಗ್‌ಗಳನ್ನು ಹಾಕುವುದು ಮುಖ್ಯ. ಹೆಚ್ಚು ಚಳಿ ಇದ್ದರೆ, ಸುರಕ್ಷಿತವಾಗಿ ರೂಮ್ ಹೀಟರ್ ಬಳಸಬಹುದು.

Read Full Story
08:04 AM (IST) Dec 21

Karnataka News Live 21 December 2025World Meditation Day 2025 - ಮಾನಸಿಕ ಆರೋಗ್ಯಕ್ಕೆ ಧ್ಯಾನವೊಂದೇ ಪರಿಹಾರ

ಜಗತ್ತಿನಲ್ಲಿರುವ ಎಲ್ಲಕ್ಕಿಂತ ಹೆಚ್ಚಾಗಿ ನೀವು ನಿಮಗೆ ಬೆಲೆ ನೀಡಬೇಕು. ಮನಸ್ಸು ಬಲವಾಗಿದ್ದರೆ, ದುರ್ಬಲ ದೇಹವನ್ನೂ ಸಹ ಅದು ನೋಡಿಕೊಳ್ಳುತ್ತದೆ. ಜೀವನದ ಬಗ್ಗೆ ನಿಮಗಿರುವ ದೃಷ್ಟಿಕೋನವನ್ನು ವಿಸ್ತರಿಸಿಕೊಳ್ಳಿ, ನಿಮ್ಮ ಆತ್ಮಶಕ್ತಿಯಲ್ಲಿ ವಿಶ್ವಾಸವನ್ನು ಇಡಿ. ಧ್ಯಾನವನ್ನು ಅಭ್ಯಾಸ ಮಾಡಿ.

Read Full Story
07:50 AM (IST) Dec 21

Karnataka News Live 21 December 2025BBK 12 - ರಕ್ಷಿತಾ ಆಟದ ನಿಗೂಢ ತಂತ್ರಗಾರಿಕೆ ಬಿಚ್ಚಿಟ್ಟ ಧ್ರುವಂತ್‌ಗೆ ಫಿದಾ ಆದ್ರು ಗಿಲ್ಲಿ ಫ್ಯಾನ್ಸ್

ಸೀಕ್ರೆಟ್ ರೂಮ್‌ನಲ್ಲಿದ್ದ ಧ್ರುವಂತ್, ರಕ್ಷಿತಾ ಅವರ ಆಟದ ತಂತ್ರಗಾರಿಕೆಯನ್ನು ವೀಕೆಂಡ್ ಸಂಚಿಕೆಯಲ್ಲಿ ಬಹಿರಂಗಪಡಿಸಿದ್ದಾರೆ. ಫಿನಾಲೆಯಲ್ಲಿ ಗಿಲ್ಲಿ ಜೊತೆಗಿರಲು ರಕ್ಷಿತಾ, ಕಾವ್ಯಾ ಮತ್ತು ಸ್ಪಂದನಾ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಧ್ರುವಂತ್ ವಿವರಿಸಿದರು. 

Read Full Story
07:40 AM (IST) Dec 21

Karnataka News Live 21 December 2025BBK 12 - ಫಿನಾಲೆ ಟೈಮ್‌ನಲ್ಲಿ ಟೇಸ್ಟ್‌ ಗೊತ್ತಾಗ್ತಿಲ್ಲ, ಕೊರೊನಾ ಬಂತಾ ಎಂದು ಚಿಂತೆಗೆ ಬಿದ್ದ Gilli Nata

Bigg Boss Kannada Season 12 Episode Update: ಬಿಗ್‌ ಬಾಸ್‌ ಮನೆಯಲ್ಲಿ ಸೂಪರ್‌ ಸಂಡೇ ವಿಥ್‌ ಸುದೀಪ ಎಪಿಸೋಡ್‌ ಸಖತ್‌ ಕಾಮಿಡಿಯಿಂದಲೇ ಶುರುವಾಗಿದೆ. ಹೌದು, ಇಂದು ಸ್ಪರ್ಧಿಗಳೆಲ್ಲ ಸಿಕ್ಕಾಪಟ್ಟೆ ನಕ್ಕಿದ್ದಾರೆ. ವಾಹಿನಿಯು ಪ್ರೋಮೋ ರಿಲೀಸ್‌ ಮಾಡಿದೆ.

Read Full Story
07:32 AM (IST) Dec 21

Karnataka News Live 21 December 2025ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ

ಬೆಳಗಾವಿ ಅಧಿವೇಶನದಲ್ಲಿ ಗೃಹಲಕ್ಷ್ಮೀ ಯೋಜನೆ ಹಣ ಬಿಡುಗಡೆ ಬಗ್ಗೆ ಸರ್ಕಾರವನ್ನು ಪ್ರಶ್ನಿಸಿದ್ದ ಶಾಸಕ ಮಹೇಶ ಟೆಂಗಿನಕಾಯಿಗೆ ಹುಬ್ಬಳ್ಳಿಯಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಗೃಹಲಕ್ಷ್ಮೀ ಮಾತ್ರವಲ್ಲದೆ ಶಕ್ತಿ ಯೋಜನೆಯಲ್ಲೂ ಸರ್ಕಾರ ಜನರಿಗೆ ಮೋಸ ಮಾಡಿದೆ ಹಣ ಬಿಡುಗಡೆಯಾಗುವವರೆಗೂ ಪ್ರತಿಭಟನೆಗೆ ಕರೆ..

Read Full Story