ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ ಮಾಡಿ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಒಂದೇ ದಿನದಲ್ಲಿ ಚಿರತೆ ಸೆರೆ ಹಿಡಿದಿರುವ ಕಾರಣ ನಿವಾಸಿಗಳು ನಿಟ್ಟುಸಿರು ಬಿಟ್ಟಿದ್ದಾರೆ.
- Home
- News
- State
- Karnataka News Live: ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ
Karnataka News Live: ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ

ವಿಜಯಪುರ: ವಿಧಾನ ಪರಿಷತ್ ಸದಸ್ಯ, ಬಿಜೆಪಿಗ ಕೇಶವ ಪ್ರಸಾದ್ ಅವರಿದ್ದ ಕಾರನ್ನು ತಡೆದ ರಾಷ್ಟ್ರೀಯ ಹೆದ್ದಾರಿ ಟೋಲ್ ನಾಕಾ ಸಿಬ್ಬಂದಿ ನೀವು ನಿಜವಾದ ಎಂಎಲ್ಸಿ ಅನ್ನಲು ಸಾಕ್ಷಿ ಏನು? ಎಂದು ಪ್ರಶ್ನಿಸಿದ ಘಟನೆ ನಡೆದಿದೆ. ಎನ್ಎಚ್ 52ರ ವಿಜಯಪುರ ಹೊರವಲಯದ ಹಿಟ್ಟಿನಹಳ್ಳಿ ಬಳಿ ಭಾನುವಾರ ಪ್ರಸಾದ್ರಿದ್ದ ಕಾರನ್ನು ಟೋಲ್ ಸಿಬ್ಬಂದಿ ತಡೆದಿದ್ದರಿಂದ 1 ತಾಸು ಅವರು ಟೋಲ್ ಬಳಿಯೇ ಕಾಯುವಂತಾಯಿತು. ದಾಖಲೆ ತೋರಿಸಿದರೂ ಕಾರಿನ ಮೇಲಿನ ಎಂಎಲ್ಸಿ ಗುರುತಿನ ಚೀಟಿ ಕಿತ್ತು ಗಲಾಟೆ ಮಾಡಿ, ಚಾಲಕನ ಮೊಬೈಲ್ ಕಸಿದುಕೊಂಡಿದ್ದಾರೆ. ಇದರಿಂದ ಪ್ರಸಾದ್, ಕೊನೆಗೆ ಎಸ್ಪಿಗೆ ಕರೆ ಮಾಡಿದ ಬಳಿಕ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್, ಡಿವೈಎಸ್ಪಿ ಸ್ಥಳಕ್ಕೆ ಬಂದು ವಾಹನ ಬಿಡಿಸಿ ಕಳಿಸಿದ್ದಾರೆ.
Karnataka News Live 22 December 2025ಮಹಿಳೆ ಬಲಿ ಪಡೆದ ಚಿರತೆ ಕೊನೆಗೂ ಸೆರೆ, ದಾಳಿ ಮಾಡಿದ ಅದೇ ಸ್ಥಳದಲ್ಲೇ ಕಾರ್ಯಾಚರಣೆ
Karnataka News Live 22 December 2025ಎಚ್ಎಎಲ್ ಸ್ಥಾಪನಾ ದಿನ - ಭಾರತದ ಏರೋಸ್ಪೇಸ್ ಸಾಧನೆಯ 86 ವರ್ಷಗಳ ಸಂಭ್ರಮಾಚರಣೆ
ಎಚ್ಎಎಲ್ ಸ್ಥಾಪನಾ ದಿನ: ಭಾರತದ ಏರೋಸ್ಪೇಸ್ ಸಾಧನೆಯ 86 ವರ್ಷಗಳ ಸಂಭ್ರಮಾಚರಣೆ, ಭಾರತಕ್ಕೆ ರೆಕ್ಕೆ ನೀಡಿದ ಯುವ ಮಹಾರಾಜರ ದೂರದೃಷ್ಟಿ ಮತ್ತು ದಿಟ್ಟತನ, ಜಯಚಾಮರಾಜೇಂದ್ರ ಒಡೆಯರ್ ತನ್ನ 21ನೇ ವಯಸ್ಸಿಗೆ ಭಾರತದ ಏರೋಸ್ಪೇಸ್ ಪಯಣಕ್ಕೆ ನಾಂದಿ ಹಾಡುವಂತಹ ದಿಟ್ಟ ನಿರ್ಧಾರವೊಂದನ್ನು ಕೈಗೊಂಡರು.
Karnataka News Live 22 December 2025ಕುಕ್ಕೆ ದೇಗುಲದ ತೆರಿಗೆ ವಿವಾದ ತೆರೆ, ನೋಟಿಸ್ ಬೆನ್ನಲ್ಲೇ ಗ್ರಾಮ ಪಂಚಾಯತ್ಗೆ 2.67 ಕೋಟಿ ಪಾವತಿಸಿದ ಆಡಳಿತ ಮಂಡಳಿ
ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಬಾಕಿ ಉಳಿಸಿಕೊಂಡಿದ್ದ ರೂ. 2.67 ಕೋಟಿ ಆಸ್ತಿ ತೆರಿಗೆಯನ್ನು ಪಾವತಿಸಿದೆ. ಪಂಚಾಯತ್ನಿಂದ ನೋಟಿಸ್ ಜಾರಿಯಾದ ಬಳಿಕ, ಆಡಳಿತ ಮಂಡಳಿಯು ಸಂಪೂರ್ಣ ಬಾಕಿ ಮೊತ್ತವನ್ನು ಪಾವತಿಸುವ ಮೂಲಕ ದೀರ್ಘಕಾಲದ ವಿವಾದಕ್ಕೆ ತೆರೆ ಎಳೆದಿದೆ.
Karnataka News Live 22 December 2025ಬೆಂಗಳೂರು ಬ್ಯುಸಿನೆಸ್ ಕಾರಿಡಾರ್ - ಭೂಸ್ವಾಧೀನಕ್ಕೆ ವೇಗ; ಎಕರೆಗೆ ₹15.60 ಕೋಟಿವರೆಗೂ ಸಿಗಲಿದೆ ಪರಿಹಾರ!
ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ (PRR-1) ಯೋಜನೆಗಾಗಿ ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಂಡಿದ್ದು, ಭೂಮಾಲೀಕರಿಗೆ ನೀಡಲಾಗುವ ಪರಿಹಾರದ ವಿವರಗಳನ್ನು ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ದಾಖಲೆ ಸಲ್ಲಿಸಿದ 15 ದಿನಗಳೊಳಗೆ ಪರಿಹಾರ ಇತ್ಯರ್ಥಪಡಿಸುವ ಭರವಸೆಯನ್ನು ನೀಡಲಾಗಿದೆ.
Karnataka News Live 22 December 2025ಬೆಂಗಳೂರು ಕೇಂದ್ರದಲ್ಲಿ ಏರ್ಟ್ಯಾಕ್ಸಿ ಪರೀಕ್ಷೆ ಆರಂಭಿಸಿದ ಸರ್ಲಾ ಏವಿಯೇಷನ್, 2028ಕ್ಕೆ ಲಾಂಚ್
Sarla Aviation Starts Air Taxi Ground Testing in Bengaluru ಗ್ರೌಂಡ್ ಟೆಸ್ಟಿಂಗ್ ನಡೆಯುತ್ತಿರುವುದರಿಂದ, ಸರ್ಲಾ ಏವಿಯೇಷನ್ನ ಏರ್ ಟ್ಯಾಕ್ಸಿ ಕಾರ್ಯಕ್ರಮವು ಅದರ ಪ್ರಮುಖ ಮೌಲ್ಯೀಕರಣ ಹಂತವನ್ನು ಪ್ರವೇಶಿಸುತ್ತಿದೆ.
Karnataka News Live 22 December 2025ದುಬೈ ಮರುಭೂಮಿಯಲ್ಲಿ ನಿಗೂಢ ಜೀವಿ ಪತ್ತೆ - ಪ್ರವಾಸಿ ಮಹಿಳೆ ಹಂಚಿಕೊಂಡ ವಿಡಿಯೋ ಭಾರೀ ವೈರಲ್!
ದುಬೈನ ಹೊರವಲಯದಲ್ಲಿ ಅಲೆದಾಡುತ್ತಿದ್ದ ಒಂದು ವಿಚಿತ್ರ ಪ್ರಾಣಿಯನ್ನು ನೋಡಿದ್ದಾಗಿ ಯುವತಿಯೊಬ್ಬಳು ಹೇಳಿಕೊಂಡಿದ್ದಾಳೆ. ಆ ಪ್ರಾಣಿಯ ವಿಡಿಯೋವನ್ನು ತನ್ನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾಳೆ. ಈ ವಿಡಿಯೋ ಒಂದೇ ದಿನದಲ್ಲಿ 16 ಲಕ್ಷಕ್ಕೂ ಹೆಚ್ಚು ಜನರು ಈ ವಿಡಿಯೋವನ್ನು ನೋಡಿದ್ದಾರೆ.
Karnataka News Live 22 December 2025ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಿದ ಕನ್ನಡಿಗ ಕೆ.ಗೌತಮ್!
Karnataka News Live 22 December 2025ಕೊಂಕಣ ರೈಲ್ವೆ ಭಾರತೀಯ ರೈಲ್ವೇ ವಿಲೀನಕ್ಕೆ ರಾಜ್ಯ ಸರ್ಕಾರಗಳ ಸಹಕಾರ ಬೇಕು - ಸಚಿವ ಅಶ್ವಿನಿ ವೈಷ್ಣವ್
ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳಿಸಲು ಕೇಂದ್ರ ಸರ್ಕಾರವು ರಾಜ್ಯಗಳ ಸಹಕಾರವನ್ನು ಕೋರಿದೆ. ಗೋವಾ, ಕೇರಳ ಮತ್ತು ಮಹಾರಾಷ್ಟ್ರ ಒಪ್ಪಿಗೆ ಸೂಚಿಸಿದ್ದು, ಕರ್ನಾಟಕವು ಉತ್ತಮ ನಿರ್ಗಮನ ಪ್ರಸ್ತಾಪಕ್ಕಾಗಿ ಕಾಯುತ್ತಿದೆ.
Karnataka News Live 22 December 2025ಬೆಂಗಳೂರಲ್ಲಿ ಅಖಾಡಕ್ಕಿಳಿದ 'ಬ್ಲೂ ಫೋರ್ಸ್' - ಜಲಮಂಡಳಿ ನೀರುಗಳ್ಳರಿಗೆ ಕರ್ಮ ರಿಟರ್ನ್ಸ್ ಫಿಕ್ಸ್!
ಅಕ್ರಮ ನೀರು ಮತ್ತು ಒಳಚರಂಡಿ ಸಂಪರ್ಕ ಪತ್ತೆಗೆ ಜಲಮಂಡಳಿ 'ಬ್ಲೂ ಫೋರ್ಸ್' ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 4,000ಕ್ಕೂ ಹೆಚ್ಚು ಸ್ಥಳಗಳ ತಪಾಸಣೆ ನಡೆಸಿ ಅನಧಿಕೃತ ನೀರಿನ ಸಂಪರ್ಕಗಳಿಗೆ ಬ್ರೇಕ್ ಹಾಕಿದೆ.
Karnataka News Live 22 December 2025ರಾಜ್ಯಾದ್ಯಂತ 2000 ಕೋಟಿ ವೆಚ್ಚದಲ್ಲಿ ರೈಲ್ವೆ ವಿದ್ಯುದ್ದೀಕರಣ, ಆಧುನೀಕರಣ, ಕೋಲಾರದಲ್ಲಿ ರೈಲ್ವೆ ಫ್ಯಾಕ್ಟರಿ?
ಕೇಂದ್ರ ಸಚಿವ ವಿ.ಸೋಮಣ್ಣ ಅವರು ಟೇಕಲ್ನಲ್ಲಿ 23.5 ಕೋಟಿ ರೂ. ವೆಚ್ಚದ ರೈಲ್ವೆ ಮೇಲ್ಸೇತುವೆಯನ್ನು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ, ರಾಜ್ಯದಲ್ಲಿ 2000 ಕೋಟಿ ರೂ. ವೆಚ್ಚದ ರೈಲ್ವೇ ಆಧುನೀಕರಣ ಮತ್ತು ಕೋಲಾರದಿಂದ ಬೆಂಗಳೂರಿಗೆ ನೇರ ರೈಲು ಮಾರ್ಗ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದರು.
Karnataka News Live 22 December 2025ಕನ್ನಡ ಇಂಡಸ್ಟ್ರಿಗೆ ಪ್ರಾಣ ಕೊಟ್ಟರೂ ಚೆನ್ನಾಗಿ ನೋಡಿಕೊಂಡಿಲ್ಲ - ಕಣ್ಣೀರು ಹಾಕಿದ ತುಪ್ಪದ ಬೆಡಗಿ ರಾಗಿಣಿ ಹೇಳಿದ್ದೇನು?
'ತುಪ್ಪದ ಬೆಡಗಿ' ಖ್ಯಾತಿಯ ನಟಿ ರಾಗಿಣಿ ದ್ವಿವೇದಿ, ಚಿತ್ರರಂಗದಲ್ಲಿ 15 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. ಕನ್ನಡ ಚಿತ್ರರಂಗ ತನ್ನನ್ನು ಕಡೆಗಣಿಸಿದೆ ಮತ್ತು ಕಷ್ಟದ ಸಮಯದಲ್ಲಿ ಯಾರೂ ಬೆಂಬಲಕ್ಕೆ ನಿಲ್ಲಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
Karnataka News Live 22 December 2025ಬರೋಬ್ಬರಿ 6 ವರ್ಷಗಳ ಬಳಿಕ ಸಂಚಾರಕ್ಕೆ ಮುಕ್ತವಾಗಲಿದೆ ಬೆಂಗಳೂರಿನ ಕಾಮರಾಜ್ ರಸ್ತೆ!
ನಮ್ಮ ಮೆಟ್ರೋ ಕಾಮಗಾರಿಯಿಂದಾಗಿ 2019ರಿಂದ ಭಾಗಶಃ ಮುಚ್ಚಲಾಗಿದ್ದ ಬೆಂಗಳೂರಿನ ಕಾಮರಾಜ್ ರಸ್ತೆಯು, ಜನವರಿ 2026ರ ಆರಂಭದಲ್ಲಿ ದ್ವಿಮುಖ ಸಂಚಾರಕ್ಕೆ ಸಂಪೂರ್ಣವಾಗಿ ತೆರೆಯಲಿದೆ. ಇದು ಎಂಜಿ ರಸ್ತೆ ಮತ್ತು ಕಮರ್ಷಿಯಲ್ ಸ್ಟ್ರೀಟ್ ಸುತ್ತಮುತ್ತಲಿನ ದಟ್ಟಣೆಯನ್ನು ಕಡಿಮೆ ಮಾಡಲಿದೆ.
Karnataka News Live 22 December 2025ಬೆಂಗಳೂರು ನಮ್ಮ ಮೆಟ್ರೋ ಹಳದಿ ಮಾರ್ಗ - 6ನೇ ರೈಲು ಸೇರ್ಪಡೆ, ಇನ್ಮುಂದೆ 13 ನಿಮಿಷಕ್ಕೊಂದು ರೈಲು ಸಂಚಾರ!
ಬೆಂಗಳೂರು ಮೆಟ್ರೋದ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ಡಿಸೆಂಬರ್ 23, 2025 ರಿಂದ 6ನೇ ರೈಲು ಸೇವೆಗೆ ಸೇರ್ಪಡೆಯಾಗಲಿದೆ. ಇದರಿಂದಾಗಿ, ಜನದಟ್ಟಣೆ ವೇಳೆ ರೈಲುಗಳ ನಡುವಿನ ಅಂತರವು 15 ನಿಮಿಷಗಳಿಂದ 13 ನಿಮಿಷಗಳಿಗೆ ಇಳಿಕೆಯಾಗಲಿದ್ದು, ಪ್ರಯಾಣಿಕರ ಕಾಯುವ ಸಮಯ ಕಡಿಮೆಯಾಗಲಿದೆ.
Karnataka News Live 22 December 2025Bigg Bossನಲ್ಲಿ 10 ಪಟ್ಟು ಹೆಚ್ಚು ಸಂಭಾವನೆ ಸಿಕ್ಕಿದ್ದು ನಿಜ - ರಜತ್, ಚೈತ್ರಾ ಕುಂದಾಪುರ ರಿವೀಲ್ ಮಾಡಿದ್ದೇನು?
Karnataka News Live 22 December 2025ರಾಮೇಶ್ವರಂ ಕೆಫೆಗೆ ಬಿಗ್ ರಿಲೀಫ್ - ವಿಮಾನ ನಿಲ್ದಾಣ ಮಳಿಗೆ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿರುವ 'ರಾಮೇಶ್ವರಂ ಕೆಫೆ' ವಿರುದ್ಧ ದಾಖಲಾಗಿದ್ದ ಎಫ್ಐಆರ್ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮೇಲ್ನೋಟಕ್ಕೆ ಆರೋಪಗಳು ಸುಳ್ಳು ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ತನಿಖೆಯನ್ನು ಸ್ಥಗಿತಗೊಳಿಸಲು ಆದೇಶಿಸಿದೆ.
Karnataka News Live 22 December 2025ಶಾಸಕ ಕೆ.ಎನ್ ರಾಜಣ್ಣ-ಡಿಕೆಶಿ ಭೇಟಿಯಲ್ಲಿ ತಪ್ಪಿಲ್ಲ, ಸಿಎಂ ಸ್ಥಾನ ಬದಲಾವಣೆ ವಿಷಯದ ಚರ್ಚೆ ಇಲ್ಲ - ಶಾಸಕ ಪೊನ್ನಣ್ಣ
ಸಿಎಂ ಸ್ಥಾನದ ಗೊಂದಲದ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಕಾಂಗ್ರೆಸ್ನಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಿಎಂ ಮತ್ತು ಡಿಸಿಎಂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಿಎಂ ಬದಲಾವಣೆಯ ಚರ್ಚೆಯೇ ಇಲ್ಲ ಎಂದರು.
Karnataka News Live 22 December 2025ಚಿಂದಿ ಬಟ್ಟೆ ಧರಿಸಿ ಜಾಲತಾಣದಲ್ಲಿ ಚಿಂದಿ ಉಡಾಯಿಸಿದ Toxic ನಟಿ - ಬೆಲೆ ಕೇಳಿದ್ರೆ ಹೌಹಾರಿ ಹೋಗ್ತೀರಾ!
ಬಾಲಿವುಡ್ ನಟಿ ಹುಮಾ ಖುರೇಷಿ ಇತ್ತೀಚೆಗೆ ಧರಿಸಿದ್ದ ಹರಿದು ಚಿಂದಿಯಾದ ಡ್ರೆಸ್ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಫ್ಯಾಷನ್ ಹೆಸರಿನಲ್ಲಿ ಗಮನ ಸೆಳೆಯಲು ಯತ್ನಿಸಿರುವ ನಟಿಯ ಈ ಡ್ರೆಸ್ನ ಬೆಲೆ ಕೇಳಿ ಫ್ಯಾನ್ಸ್ ಹೌಹಾರಿದ್ದಾರೆ. ಸೆಲೆಬ್ರಿಟಿಗಳ ವಿಚಿತ್ರ ಫ್ಯಾಷನ್ ಕುರಿತು ಚರ್ಚೆ ಹುಟ್ಟುಹಾಕಿದೆ
Karnataka News Live 22 December 2025ಕಲಬುರಗಿ - ಮಠದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದ ಸ್ವಾಮೀಜಿ! ಎಸ್ಕೇಪ್ ಆಗಿದ್ದಾತ ಮರಳಿ ಬಂದು ಕೃತ್ಯ
ಕಲಬುರಗಿ ಜಿಲ್ಲೆಯ ಉಡಚಣ ಗ್ರಾಮದ ಶಂಕರಲಿಂಗೇಶ್ವರ ಮಠದಲ್ಲಿ, ಎಂಟು ತಿಂಗಳ ನಂತರ ಮರಳಿದ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ್ದಾರೆ. ಹೊಸ ಪೀಠಾಧಿಪತಿ ನೇಮಕದ ಚರ್ಚೆಯ ನಡುವೆ ನಡೆದ ಈ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ.
Karnataka News Live 22 December 2025'ಯಾವುದಾದರೂ ಪುಸ್ತಕ ಸುಟ್ಟುಹಾಕಿದ್ದರೆ ಅದರು ಹೇಳಿ ಹೋಗು ಕಾರಣ..' ಲೇಖಕಿಯ ಪೋಸ್ಟ್ಗೆ ಭಾರೀ ಕಾಮೆಂಟ್ಸ್!
Karnataka News Live 22 December 2025ಗಂಡನೂ ಇಲ್ಲ, ಪ್ರೇಮಿಯೂ ಸೇರಿಸ್ತಿಲ್ಲ; 'ಯಾರಿಗೆ ಬೇಕು ಈ ಲೋಕ'ವೆಂದು ಲೈವ್ನಲ್ಲಿ ನೇಣಿಗೆ ಶರಣಾದ ಗೃಹಿಣಿ!
ಬಳ್ಳಾರಿಯ ಹುಸೇನ್ ನಗರದಲ್ಲಿ ಮುನ್ನಿ ಎಂಬ 23 ವರ್ಷದ ಗೃಹಿಣಿ ವಿಡಿಯೋ ಮಾಡುತ್ತಲೇ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಪ್ರೇಮ ವೈಮನಸ್ಸು ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.