11:22 PM (IST) Feb 22

Karnataka News LiveChannagiri woman death - ಇಂಜೆಕ್ಷನ್ ಮಾಡಿಸಿಕೊಳ್ಳಲು ಹೋದ ಮಹಿಳೆ ಆಸ್ಪತ್ರೆಯಲ್ಲೇ ಸಾವು!

ದಾವಣಗೆರೆಯ ಚನ್ನಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಇಂಜೆಕ್ಷನ್ ಪಡೆದ ಕೆಲವೇ ನಿಮಿಷಗಳಲ್ಲಿ ಅನುಷಾ ಎಂಬ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಹೃದಯ ಸಂಬಂಧಿ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರ ಸಾವಿಗೆ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ.

Read Full Story
11:00 PM (IST) Feb 22

Karnataka News Liveಮಂತ್ರಾಲಯದಲ್ಲಿ ಗುರು ವೈಭವೋತ್ಸವ ಸಂಭ್ರಮ - ಎಚ್‌ಡಿ ಕುಮಾರಸ್ವಾಮಿ ಸೇರಿ ಗಣ್ಯರಿಗೆ 'ರಾಯರ ಅನುಗ್ರಹ' ಪ್ರಶಸ್ತಿ ಪ್ರದಾನ!

ರಾಯಚೂರಿನ ಮಂತ್ರಾಲಯದಲ್ಲಿ ಜರುಗುತ್ತಿರುವ 'ಗುರು ವೈಭವೋತ್ಸವ' ಸಪ್ತಮಿ ಕಾರ್ಯಕ್ರಮದ ಭವ್ಯ ಫೋಟೋ ಗ್ಯಾಲರಿ ವರದಿ ಇಲ್ಲಿದೆ

Read Full Story
10:11 PM (IST) Feb 22

Karnataka News Liveಮುಡಾ ಹಗರಣ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್, ದೂರು ಕೊಟ್ಟ ಆ ಮಹಿಳೆ ಯಾರು?

ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ. ಪತಿಯ ಸಾವಿನ ಮರು ತನಿಖೆಗೆ ಒತ್ತಾಯಿಸಿ ಸ್ನೇಹಮಯಿ ತಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪವಿತ್ರಾ ಎಂಬ ಮಹಿಳೆ ದೂರು ನೀಡಿದ್ದಾರೆ. 

Read Full Story
09:47 PM (IST) Feb 22

Karnataka News LiveBagalkot Shivaji Jayanti postponed - ನಾಳೆ ನಡೆಯಬೇಕಿದ್ದ ಭವ್ಯ ಶಿವಾಜಿ ಜಯಂತಿ, ಶೋಭಾಯಾತ್ರೆ ಈ ಒಂದು ಕಾರಣಕ್ಕೆ ದಿಢೀರ್ ಮುಂದೂಡಿಕೆ!

ಬಾಗಲಕೋಟೆ ನವನಗರದಲ್ಲಿ ನಡೆಯಬೇಕಿದ್ದ 396ನೇ ಶಿವಾಜಿ ಜಯಂತ್ಯೋತ್ಸವವನ್ನು ಮುಂದೂಡಲಾಗಿದೆ. ಮುಖ್ಯ ಅತಿಥಿ, ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರ ಜಿಲ್ಲಾ ಪ್ರವೇಶಕ್ಕೆ ಜಿಲ್ಲಾಡಳಿತ ನಿಷೇಧ ಹೇರಿರುವುದೇ ಇದಕ್ಕೆ ಕಾರಣವಾಗಿದೆ.

Read Full Story
09:25 PM (IST) Feb 22

Karnataka News LiveBagalkote Tragedy - ಡಿವೈಡರ್‌ಗೆ ಡಿಕ್ಕಿ ಹೊಡೆದು ಕ್ರೆಟಾ ಕಾರು ಪಲ್ಟಿ, ಎಂಜಿನಿಯರ್ ಪತ್ನಿ ಸಾವು!

Engineer s Wife Killed as Creta Car Hits Divider : ಬಾಗಲಕೋಟೆಯ ನವನಗರದಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಬಿಟಿಡಿಎ ಇಂಜಿನಿಯರ್ ಪತ್ನಿ ದೀಪು ನೋಟಗಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಅವರ 6 ವರ್ಷದ ಮಗನ ಸ್ಥಿತಿ ಗಂಭೀರವಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read Full Story
07:54 PM (IST) Feb 22

Karnataka News LiveBandipur safari restart details ರೈತರ ವಿರೋಧದ ನಡುವೆಯೇ ಪೊಲೀಸ್ ಭದ್ರತೆಯಲ್ಲಿ ಸಫಾರಿ ಪುನರಾಂಭ!

ಹುಲಿ ದಾಳಿಯಿಂದ ಸ್ಥಗಿತಗೊಂಡಿದ್ದ ಬಂಡೀಪುರ ಸಫಾರಿಯು, ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಪೊಲೀಸ್ ಸರ್ಪಗಾವಲಿನಲ್ಲಿ ಪುನರಾರಂಭಗೊಂಡಿದೆ. ಶೇ. 50ರಷ್ಟು ವಾಹನ ಬಳಕೆ ಮತ್ತು ಪರಿಷ್ಕೃತ ಸಮಯದಂತಹ ಮಾರ್ಪಾಡುಗಳೊಂದಿಗೆ ಆರಂಭವಾದ ಮೊದಲ ದಿನವೇ ಪ್ರವಾಸಿಗರು ಹುಲಿ, ಆನೆಗಳನ್ನು ಕಂಡು ಸಂತಸಪಟ್ಟರು.
Read Full Story
07:27 PM (IST) Feb 22

Karnataka News Liveಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ಭಾರೀ ನೇಮಕಾತಿ, ಬಿಇ-ಬಿಟೆಕ್ ಪದವೀಧರರ ಭವಿಷ್ಯಕ್ಕೆ ಹೊಸ ದಾರಿ!

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) 2026ನೇ ಸಾಲಿಗೆ 608 ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅರ್ಹ ಬಿಇ/ಬಿಟೆಕ್ ಪದವೀಧರರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ,

Read Full Story
07:20 PM (IST) Feb 22

Karnataka News LiveBigg Boss ಅಶ್ವಿನಿ ಗೌಡ - ಗಿಲ್ಲಿ ನಟ ಮಂಡ್ಯದಲ್ಲಿ ಮುಖಾಮುಖಿ! ಈ ಬಾರಿ ಇಬ್ಬರ ನಡುವೆ ರೋಚಕ ಟ್ವಿಸ್ಟ್​

ಬಿಗ್‌ಬಾಸ್‌ 12ರ ವಿಜೇತ ಗಿಲ್ಲಿ ನಟನ ಬಗ್ಗೆ ಅಸಮಾಧಾನ ಹೊಂದಿದ್ದ ಅಶ್ವಿನಿ ಗೌಡ, ಇದೀಗ ತಮ್ಮ ನಿಲುವನ್ನು ಬದಲಿಸಿದಂತೆ ಕಾಣುತ್ತಿದೆ. ಇತ್ತೀಚೆಗೆ 'ಹಯಗ್ರೀವ' ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಗಿಲ್ಲಿ ನಟನನ್ನು 'ಮಾವನ ಮಗ' ಎಂದು ಸಂಬೋಧಿಸಿದ್ದಾರೆ.

Read Full Story
07:14 PM (IST) Feb 22

Karnataka News Liveನಿಮ್ಹಾನ್ಸ್ ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇಮಕಾತಿ 2026, ನಿಮ್ಮ ಭವಿಷ್ಯ ಬದಲಿಸುವ ಅವಕಾಶ

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್) ಬೆಂಗಳೂರಿನಲ್ಲಿ 52 ಗ್ರೂಪ್ ಬಿ ಮತ್ತು ಸಿ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿಯಿಂದ ಸ್ನಾತಕೋತ್ತರ ಪದವಿವರೆಗಿನ ಶೈಕ್ಷಣಿಕ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
Read Full Story
07:08 PM (IST) Feb 22

Karnataka News Liveಚಿಕ್ಕಮಗಳೂರು - ಕಾಡಾನೆ ದಾಳಿಗೆ ಮಹಿಳೆ ಬಲಿ, ರಣಾಂಗಣವಾದ ಕಡಬಗೆರೆ, ಕಲ್ಲು ತೂರಾಟ, ಲಾಠಿ ಚಾರ್ಜ್‌!

ಚಿಕ್ಕಮಗಳೂರಿನ ಕಡಬಗೆರೆಯಲ್ಲಿ ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾದ ನಂತರ, ಆನೆ ಹಾವಳಿಗೆ ಶಾಶ್ವತ ಪರಿಹಾರ ಕೋರಿ ಸ್ಥಳೀಯರು ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯು ವಿಕೋಪಕ್ಕೆ ತಿರುಗಿ, ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ, ಕಲ್ಲು ತೂರಾಟ ಹಾಗೂ ಲಾಠಿ ಚಾರ್ಜ್.

Read Full Story
06:59 PM (IST) Feb 22

Karnataka News Liveಆರ್‌ಬಿಐ ಸಹಾಯಕ ಹುದ್ದೆಗಳ ನೇಮಕಾತಿ, ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ ಪದವೀಧರರಿಗೆ ಸುವರ್ಣಾವಕಾಶ

RBI 2026ರ ಸಾಲಿನ 650 ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪದವೀಧರರಿಗೆ ಕೇಂದ್ರ ಬ್ಯಾಂಕ್‌ನಲ್ಲಿ ಉದ್ಯೋಗ ಪಡೆಯಲು ಇದೊಂದು ಸುವರ್ಣಾವಕಾಶವಾಗಿದ್ದು, ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಆಕರ್ಷಕ ವೇತನ ಹಾಗೂ ಭತ್ಯೆಗಳು ಲಭ್ಯವಿವೆ.

Read Full Story
06:41 PM (IST) Feb 22

Karnataka News LiveSullia - ಕ್ರಾಂತಿಗಳ ಊರು ಸುಳ್ಯ ತಾಲೂಕಿಗೆ ಈಗ 60ರ ಹರೆಯ, ದಕ್ಷಿಣದ ಕನ್ನಡದ ಈ ತಾಲೂಕು ಕೊಡುಗೆ ಅಪಾರ

1965ರಲ್ಲಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರಿಂದ ಉದ್ಘಾಟನೆಗೊಂಡ ಸುಳ್ಯ ತಾಲೂಕು 60ವರ್ಷಗಳನ್ನು ಪೂರೈಸಿದೆ. ಒಂದು ಕಾಲದಲ್ಲಿ ಮುಳಿಹುಲ್ಲಿನ ಗುಡಿಸಲುಗಳ ಊರಾಗಿದ್ದ ಸುಳ್ಯವು, ತಾಲೂಕಾಗಿ ರೂಪುಗೊಂಡು, ಇಂದು ಶೈಕ್ಷಣಿಕ, ರಾಜಕೀಯ ಹಾಗೂ ಸಾಂಸ್ಕೃತಿಕವಾಗಿ ಬೆಳೆದು ನಿಂತಿದೆ.

Read Full Story
06:39 PM (IST) Feb 22

Karnataka News Liveದರ್ಶನ್​ ಬಗ್ಗೆ ಗುಡ್​ನ್ಯೂಸ್​ ಕೊಟ್ಟ ವಿಜಯಲಕ್ಷ್ಮಿ - ಕುಣಿದಾಡಿದ ಅಭಿಮಾನಿಗಳು- ಬಿಡುಗಡೆ ಯಾವಾಗ?

'ಹಯಗ್ರೀವ' ಸಿನಿಮಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ, ಜೈಲಿನಲ್ಲಿರುವ ತಮ್ಮ ಪತಿಯ ಬಗ್ಗೆ ಮಹತ್ವದ ಅಪ್‌ಡೇಟ್ ನೀಡಿದ್ದಾರೆ. ಅಭಿಮಾನಿಗಳ ಬೆಂಬಲದಿಂದ ದರ್ಶನ್ ಮಾನಸಿಕವಾಗಿ ತುಂಬಾ ಸ್ಟ್ರಾಂಗ್ ಆಗಿದ್ದಾರೆ ಎಂದು ತಿಳಿಸಿ, ಅಭಿಮಾನಿಗಳ ಆತಂಕವನ್ನು ದೂರ ಮಾಡಿದ್ದಾರೆ.
Read Full Story
06:29 PM (IST) Feb 22

Karnataka News Liveಕಾರವಾರಕ್ಕೆ ಸಿಎಂ ಸಿದ್ದರಾಮಯ್ಯ ಭರ್ಜರಿ ಗಿಫ್ಟ್; ಮುಂದಿನ ಬಜೆಟ್‌ನಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಘೋಷಣೆ!

Karwar Super Specialty Hospital ಕಾರವಾರದಲ್ಲಿ 450 ಬೆಡ್‌ಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಸಕ ಸತೀಶ್ ಸೈಲ್ ಅವರ ಕೋರಿಕೆಯ ಮೇರೆಗೆ ಮುಂದಿನ ಬಜೆಟ್‌ನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುವುದಾಗಿ ಭರವಸೆ ನೀಡಿದರು. 

Read Full Story
06:16 PM (IST) Feb 22

Karnataka News Liveಆರೋಗ್ಯಕ್ಕೆ ಬೇಕು ತಂಗಳನ್ನ - ನಟರಾದ ಸಪ್ತಮಿ ಗೌಡ- ನೀನಾಸಂ ಸತೀಶ್​ ಹೇಳಿದ ಮಾತು ಕೇಳಿ

ಆಧುನಿಕ ಆಹಾರ ಪದ್ಧತಿಯಿಂದ ಹೆಚ್ಚುತ್ತಿರುವ ರೋಗಗಳ ನಡುವೆ, ನಮ್ಮ ಹಿರಿಯರ ಆಹಾರವಾದ ತಂಗಳನ್ನದ ಮಹತ್ವವನ್ನು ನಟರಾದ ಸತೀಶ್ ನಿನಾಸಂ ಮತ್ತು ಸಪ್ತಮಿಗೌಡ ವಿವರಿಸಿದ್ದಾರೆ. ಶುಗರ್ ನಿಯಂತ್ರಣ ಸೇರಿದಂತೆ ಹಲವು ಆರೋಗ್ಯ ಪ್ರಯೋಜನ ಹೊಂದಿರುವ ತಂಗಳನ್ನದ ಬಗ್ಗೆ ವೈದ್ಯರೂ ಶಿಫಾರಸು ಮಾಡುತ್ತಾರೆ ಎಂದಿದ್ದಾರೆ.

Read Full Story
05:58 PM (IST) Feb 22

Karnataka News Liveಬೆಂಗಳೂರು - ಮಾದಾವರ ಮೆಟ್ರೋ ನಿಲ್ದಾಣ ಬಳಿ 4 ವಾಹನಗಳ ಮಧ್ಯೆ ಸರಣಿ ಅಪಘಾತ! 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೆಂಗಳೂರಿನ ಮಾದಾವರ ಮೆಟ್ರೋ ನಿಲ್ದಾಣದ ಬಳಿಯ ಪ್ಲೈಓವರ್ ಮೇಲೆ KSRTC ಬಸ್ ಸೇರಿದಂತೆ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Read Full Story
05:56 PM (IST) Feb 22

Karnataka News Liveಕಾರವಾರದಲ್ಲಿ ಆಸ್ಪತ್ರೆ ಉದ್ಘಾಟನೆ; ಪಕ್ಕದಲ್ಲೇ ಇದ್ದರೂ ಸಿಎಂ-ಡಿಸಿಎಂ ನಡುವೆ ಮಾತಿಲ್ಲ, ಕಥೆಯಿಲ್ಲ!

ಕಾರವಾರದಲ್ಲಿ 450 ಬೆಡ್‌ಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದರು. ಆದರೆ, ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಇಬ್ಬರೂ ನಾಯಕರು ಪರಸ್ಪರ ಮಾತನಾಡದೆ ಮೌನ ವಹಿಸಿದ್ದು, ಅವರ ನಡುವಿನ ಅಸಮಾಧಾನ ಮತ್ತೆ ಬಹಿರಂಗ?

Read Full Story
05:30 PM (IST) Feb 22

Karnataka News Liveಬಿಜೆಪಿ ಶಾಸಕನ ಮೇಲೆ ಲೋಕಾಯುಕ್ತ ದಾಳಿ - ನಮಗೂ ಇದಕ್ಕೂ ಸಂಬಂಧವಿಲ್ಲ ಎಂದ ಡಿಸಿಎಂ, 'ಇಕ್ಬಾಲ್ ಬಾಯಿ ಮುಚ್ಚು' ಎಂದಿದ್ದೇಕೆ ಡಿಕೆಶಿ?

ಬಿಜೆಪಿ ಶಾಸಕ ಚಂದ್ರು ಲಮಾಣಿ ಮೇಲಿನ ಲೋಕಾಯುಕ್ತ ದಾಳಿಯು ಸ್ವತಂತ್ರ ಸಂಸ್ಥೆಯ ತನಿಖೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ, ಅನಗತ್ಯ ಹೇಳಿಕೆ ನೀಡುತ್ತಿರುವ ಸ್ವಪಕ್ಷದ ಶಾಸಕರಿಗೆ ಬಾಯಿ ಮುಚ್ಚುವಂತೆ ಎಚ್ಚರಿಕೆ ನೀಡಿದರು.

Read Full Story
05:21 PM (IST) Feb 22

Karnataka News Liveಲಂಚ ಪಡೆದು ಶಾಸಕ ಲಮಾಣಿ ಜೈಲಿಗೆ, ಇದರ ಬೆನ್ನಲ್ಲೇ ಗುತ್ತಿಗೆದಾರನಿಗೆ ಧಮ್ಕಿ ಹಾಕೋ ಆಡಿಯೋ ವೈರಲ್, ಎಲ್ಲಾ ಬೀಪ್ ಸೌಂಡ್!

ಶಿರಹಟ್ಟಿ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರು ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದು ಬಂಧನಕ್ಕೊಳಗಾಗಿದ್ದಾರೆ. ಇದರ ಬೆನ್ನಲ್ಲೇ, ಅವರು ಗುತ್ತಿಗೆದಾರರಿಗೆ ಕಮಿಷನ್‌ಗಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾದ ಸಂಭಾಷಣೆಯ ಆಡಿಯೋ ಕ್ಲಿಪ್‌ಗಳು ವೈರಲ್ ಆಗಿದ್ದು, ತೀವ್ರ ಸಂಚಲನ ಸೃಷ್ಟಿಸಿವೆ.

Read Full Story
05:04 PM (IST) Feb 22

Karnataka News Liveಮನೆಯಲ್ಲಿ ಏನೇ ಕಳುವಾದ್ರೂ ನಾನೇ ಅಂತಿದ್ರು - ನನ್ನ ಕುದುರೆ ಅಂತ ಕರೀತಿದ್ರು- ಬಾಲ್ಯಕ್ಕೆ ಜಾರಿದ ಅಶ್ವಿನಿ ಪುನೀತ್​

ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು 'ನಾ ಕಂಡ ಅಪ್ಪು' ಸಂದರ್ಶನದಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಕಳೆದ ದಿನಗಳು, 'ಕುದುರೆ' ಎಂಬ ಅಡ್ಡಹೆಸರು, ಮತ್ತು ಮರ ಹತ್ತಿ ಹಣ್ಣು ಕೀಳುತ್ತಿದ್ದ ತುಂಟಾಟದ ಕ್ಷಣಗಳನ್ನು ಅವರು ಮೆಲುಕು ಹಾಕಿದ್ದಾರೆ.
Read Full Story