ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮತ್ತು ಯೆಲ್ಲೋ ಅಲರ್ಟ್ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿಗಳು ಜುಲೈ 23 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈ ಆದೇಶವು ಅಂಗನವಾಡಿಯಿಂದ ಪಿಯುಸಿ ವರೆಗಿನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ಅನ್ವಯವಾಗಲಿದೆ.
- Home
- News
- State
- Karnataka News Live: ಯೆಲ್ಲೋ ಅಲರ್ಟ್, ನಾಳೆ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ
Karnataka News Live: ಯೆಲ್ಲೋ ಅಲರ್ಟ್, ನಾಳೆ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಹಾಸನ: ಕೆಲವು ಬಾರಿ ಕೆಲ ಸಮಸ್ಯೆಗಳನ್ನು ಹಣದ ಆಸೆಯಿಂದ ಉದ್ಭವ ಮಾಡುತ್ತಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯ ವಿದ್ಯಾರ್ಥಿಗಳ ದಂಗೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಲವಾರು ಸಂದರ್ಭಗಳಲ್ಲಿ ಪ್ರಶ್ನೆ ಪತ್ರಿಕೆಗಳು ಸೋರಿಕೆ ಆಗಿವೆ, ಆದರೆ ಈ ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿದ್ದನ್ನು ಈ ಮಟ್ಟದಲ್ಲಿ ಅಸಮಾಧಾನ ವ್ಯಕ್ತಪಡಿಸಿ, ದುರುಪಯೋಗ ಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಯಾವುದೋ ಕಾಣದ ಶಕ್ತಿಗಳು ಇದರಲ್ಲಿ ಸೇರಿವೆ. ನಮ್ಮ ದೇಶದ ಅಭಿವೃದ್ಧಿ ಸಹಿಸಲಾರದೆ ಈ ತರಹ ಅವ್ಯವಸ್ಥೆ ಮಾಡುತ್ತಿದ್ದಾರೆ ಎಂದರು.
ನಮ್ಮ ದೇಶದಲ್ಲಿ ನಡೆಯುತ್ತಿರುವ ಕೆಲವು ಘಟನೆಗಳಲ್ಲಿ ದೇಶದ ಭದ್ರತೆಯನ್ನು ಅಸ್ಥಿರಗೊಳಿಸಲು ಹಲವಾರು ಕಾಣದ ಕೈಗಳು ಪ್ರಯತ್ನಪಡುತ್ತಿವೆ. ಆದ್ದರಿಂದ ಯುವ ಜನತೆ ತಾಳ್ಮೆಯಿಂದ ವರ್ತಿಸಬೇಕಿದೆ ಎಂದರು.
Karnataka News Live 22 July 2026 ಯೆಲ್ಲೋ ಅಲರ್ಟ್, ನಾಳೆ ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ
Karnataka News Live 22 July 2026 Nepal - ಯು-ಟರ್ನ್ ಹೊಡೆದ ನೇಪಾಳದ ಪ್ರಧಾನಿ ಬಾಲೆನ್ ಶಾ - ಭಾರತಕ್ಕೆ ಬಂತು ಬಿಗ್ ಮೆಸೇಜ್!
ಕೇವಲ 100 ದಿನಗಳು ಕಳೆಯುವುದರೊಳಗೆ ಕಠ್ಮಂಡುವಿನ ಅರಮನೆಯಲ್ಲಿ ಭಾರಿ ಸಸ್ಪೆನ್ಸ್ ಒಂದಕ್ಕೆ ತೆರೆಬಿದ್ದಿದೆ. ತಾನು ವಿಧಿಸಿಕೊಂಡಿದ್ದ ನಿಯಮವನ್ನು ತಾನೇ ಗಾಳಿಗೆ ತೂರಿ, ಬಾಲೆನ್ ಶಾ ಏಕಾಏಕಿ ದೊಡ್ಡ ಯು-ಟರ್ನ್ ಹೊಡೆದಿದ್ದಾರೆ. ಅದೇನು ಎಂದು ನೋಡೋಣ ಬನ್ನಿ!
Karnataka News Live 22 July 2026 Bhatkal - ಆನಂದ ಆಶ್ರಮ ಪದವಿ ಪೂರ್ವ ಕಾಲೇಜಿನಲ್ಲಿ ನಾಳೆ Business Day 2026 ಸಂಭ್ರಮ
ಭಟ್ಕಳದ ಆನಂದ ಆಶ್ರಮ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಉದ್ಯಮಶೀಲತೆ ಮತ್ತು ಆಲೋಚನಾ ಸಾಮರ್ಥ್ಯವನ್ನು ಹೆಚ್ಚಿಸಲು 'ಬಿಸಿನೆಸ್ ಡೇ 2026' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
Karnataka News Live 22 July 2026 Bantwal - ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; 6 ವರ್ಷದ ವಿದ್ಯಾರ್ಥಿನಿ ಸಾವು
ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದಲ್ಲಿ ಭಾರಿ ಮಳೆಗೆ ಬೃಹತ್ ಮರವೊಂದು ಶಾಲಾ ಬಸ್ಸಿನ ಮೇಲೆ ಉರುಳಿಬಿದ್ದಿದೆ. ಈ ಭೀಕರ ದುರಂತದಲ್ಲಿ 6 ವರ್ಷದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದು, ಹಲವು ಮಕ್ಕಳು ಗಾಯಗೊಂಡಿದ್ದಾರೆ.
Karnataka News Live 22 July 2026 NEET ಗೊಂದಲ, ಭೀಕರ ಲಾಠಿಚಾರ್ಜ್; ಕೇಂದ್ರದ ವಿರುದ್ಧ ಪ್ರತಿಪಕ್ಷಗಳಿಂದ 267ರ ಬ್ರಹ್ಮಾಸ್ತ್ರ ಪ್ರಹಾರ!
ಇತ್ತೀಚೆಗೆ ಸಂಸತ್ತಿನಲ್ಲಿ ನೀಟ್ ಅಕ್ರಮ ಮತ್ತು ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ವಿಪಕ್ಷಗಳು 'ನಿಯಮ 267' ಅಡಿ ಚರ್ಚೆಗೆ ಪಟ್ಟುಹಿಡಿದು ಗದ್ದಲ ಸೃಷ್ಟಿಸಿದವು. ಏನಿದು ನಿಯಮ ಎನ್ನುವುದನ್ನು ನೋಡೋಣ ಬನ್ನಿ.
Karnataka News Live 22 July 2026 'ಸರ್ಕಾರಿ ನ್ಯಾಯಬೆಲೆ ಅಂಗಡಿ'ಯಲ್ಲಿ ರಾಗಿಣಿ.. ಜುಲೈ 31ರಂದು ಇಡೀ ಕರ್ನಾಟಕದಲ್ಲಿ 'ಪಾರ್ವತಿ' ಆಗಮನ!
'ಸರ್ಕಾರಿ ನ್ಯಾಯಬೆಲೆ ಅಂಗಡಿʼ ಚಿತ್ರದಲ್ಲಿ ನಟಿ ರಾಗಿಣಿ ದ್ವಿವೇದಿ ಪಾರ್ವತಿ ಎಂಬ ಗ್ರಾಮೀಣ ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ‘ಮೊದಲ ಬಾರಿಗೆ ಅಪ್ಪಟ ಹಳ್ಳಿ ಮಹಿಳೆಯ ಪಾತ್ರ ಈ ಸಿನಿಮಾದಲ್ಲಿ ಸಿಕ್ಕಿದೆ. ಇಡೀ ಸಿನಿಮಾವನ್ನು ಗ್ರಾಮೀಣ ಭಾಗದಲ್ಲಿ ಚಿತ್ರೀಕರಣ ಮಾಡಲಾಗಿದೆ.
Karnataka News Live 22 July 2026 NMPA Recruitment 2026 - ನವ ಮಂಗಳೂರು ಬಂದರಿನಲ್ಲಿ ಉದ್ಯೋಗ; 2 ಲಕ್ಷದವರೆಗೆ ಸಂಬಳ
ಮಂಗಳೂರು ಪೋರ್ಟ್ ಅಥಾರಿಟಿ (NMPA) ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 12 ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹತೆ, ವೇತನ ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ವಿವರ ಇಲ್ಲಿದೆ.
Karnataka News Live 22 July 2026 ಗ್ಯಾಸ್ ಸಿಲಿಂಡರ್ ಬಳಕೆಯಲ್ಲಿ ದೇಶದಲ್ಲೇ ನಂ. 1 ರಾಜ್ಯ ಯಾವುದು ಗೊತ್ತಾ? ಇಲ್ಲಿದೆ ಅಚ್ಚರಿಯ ಮಾಹಿತಿ!
ಕೆಲ ದತ್ತಾಂಶದ ಪ್ರಕಾರ, ಭಾರತದಲ್ಲಿ ಅತಿ ಹೆಚ್ಚು ಎಲ್ಪಿಜಿ ಗ್ರಾಹಕರನ್ನು ಹೊಂದಿರುವ ರಾಜ್ಯ ಯಾವುದು ಗೊತ್ತಾ? ಮಹಾರಾಷ್ಟ್ರ ಮತ್ತು ಪಶ್ಚಿಮ ಬಂಗಾಳ ನಂತರದ ಸ್ಥಾನಗಳಲ್ಲಿವೆ. 'ಪ್ರಧಾನ ಮಂತ್ರಿ ಉಜ್ವಲ ಯೋಜನೆ'ಯು ಉತ್ತರ ಪ್ರದೇಶದ ಈ ಅಗ್ರಸ್ಥಾನಕ್ಕೆ ಪ್ರಮುಖ ಕಾರಣವಾಗಿದೆ.
Karnataka News Live 22 July 2026 ಬೈಯಪ್ಪನಹಳ್ಳಿ ರೋಟರಿ ಮೇಲ್ಸೇತುವೆ ಫ್ಯಾಬ್ರಿಕೇಷನ್ ಯಾರ್ಡ್ ಧ್ವಂಸಗೊಳಿಸಿದ SWR - ಸರ್ಕಾರ-ರೈಲ್ವೆ ನಡುವೆ ಮತ್ತೆ ಜಟಾಪಟಿ!
ಬೆಂಗಳೂರಿನ ಬೈಯಪ್ಪನಹಳ್ಳಿ ಎಲಿವೇಟೆಡ್ ರೋಟರಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ಸ್ಥಾಪಿಸಲಾಗಿದ್ದ ಫ್ಯಾಬ್ರಿಕೇಷನ್ ಯಾರ್ಡ್ ಅನ್ನು ನೈಋತ್ಯ ರೈಲ್ವೆ ಇಲಾಖೆ ಧ್ವಂಸಗೊಳಿಸಿದೆ. ಈ ಕ್ರಮದಿಂದಾಗಿ ರಾಜ್ಯ ಸರ್ಕಾರಿ ಸಂಸ್ಥೆ ಬಿ-ಸ್ಮೈಲ್ ಮತ್ತು ರೈಲ್ವೆ ಇಲಾಖೆಯ ನಡುವೆ ಹೊಸ ಸಂಘರ್ಷ ಆರಂಭವಾಗಿದೆ.
Karnataka News Live 22 July 2026 ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತಷ್ಟು ದುಬಾರಿ - ಮೂರೇ ತಿಂಗಳಲ್ಲಿ ಎರಡನೇ ಬಾರಿ ಟೋಲ್ ದರ ಏರಿಕೆ!
Karnataka News Live 22 July 2026 ನಮ್ಮ ಮೆಟ್ರೋ ಪ್ರಯಾಣಿಕರ ಸುಲಿಗೆಗೆ BMRCL ಹೊಸ ಮಾರ್ಗ, ಬೆಂಗಳೂರು ಮೆಟ್ರೋ ದರ ಏರಿಕೆಗೆ ಪ್ರಸ್ತಾವನೆ!
Karnataka News Live 22 July 2026 'CID ವರದಿ ಟ್ರಾನ್ಸ್ಲೇಟ್ ಮಾಡಿದ್ದನ್ನ ಬಿಟ್ಟು ಮತ್ತೇನು ಮಾಡಿದ್ದೀರಿ..' ಧರ್ಮಸ್ಥಳ Soujanya Case ವಿಚಾರದಲ್ಲಿ ಸಿಬಿಐಗೆ ಸುಪ್ರೀಂ ಚಾಟಿ
ಧರ್ಮಸ್ಥಳದ ಸೌಜನ್ಯ ಅತ್ಯಾ*ರ ಮತ್ತು ಕೊಲೆ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ತನ್ನ ಆದೇಶವನ್ನು ಕಾಯ್ದಿರಿಸಿದೆ. ಸಿಬಿಐ ತನಿಖೆಯ ವೈಫಲ್ಯವನ್ನು ತೀವ್ರವಾಗಿ ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿದೆ.
Karnataka News Live 22 July 2026 ಬೆಂಗಳೂರು ಬೀದಿಲಿ ಕಿತ್ತಾಡಿಕೊಂಡ ಬಿಜೆಪಿ-ಕಾಂಗ್ರೆಸ್, ಬಿಪಿ ಹರೀಶ್ಗೆ ಮೊಟ್ಟೆ ಎಸೆದ ಕಾರ್ಯಕರ್ತ! ಆರ್.ಅಶೋಕ್ ಬಂಧನ
Karnataka News Live 22 July 2026 ಅವನನ್ನು ಯಾವಾಗ ಕರ್ಕೊಂಡು ಬರ್ತೀಯಪ್ಪಾ ಅಂತ ಕೇಳ್ತಿದ್ರು ತಾಯಿ, ಪರೋಕ್ಷವಾಗಿ ಪ್ರಜ್ವಲ್ ಪ್ರಕರಣ ಪ್ರಸ್ತಾಪಿಸಿದ HDK
Karnataka News Live 22 July 2026 ಬೈಯಪ್ಪನಹಳ್ಳಿ ಮೇಲ್ಸೇತುವೆ - ಸರ್ಕಾರ-ರೈಲ್ವೆ ಸಂಘರ್ಷ, ಬಿ-ಸ್ಟೈಲ್ ತಾತ್ಕಾಲಿಕ ಶೆಡ್ ನೆಲಸಮ ಮಾಡಿದ ನೈಋತ್ಯ ರೈಲ್ವೆ!
Karnataka News Live 22 July 2026 ವಿದ್ಯಾರ್ಥಿಗಳ ಪ್ರತಿಭಟನೆ; ಸುಮ್ಮನೇ ನೋಡುತ್ತಾ ಕೂತವರಿಗೆ ಯುವ ರಾಜ್ಕುಮಾರ್ ಪ್ರಶ್ನೆ
ನೀಟ್ ಪರೀಕ್ಷಾ ಹಗರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆ ಕುರಿತು ಸ್ಯಾಂಡಲ್ವುಡ್ ನಟ ಯುವ ರಾಜ್ಕುಮಾರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಧ್ವನಿಯನ್ನು ಆಲಿಸಿ, ಸತ್ಯಾಂಶಗಳನ್ನು ತಿಳಿದು, ಹೊಣೆಗಾರಿಕೆಯನ್ನು ಪ್ರಶ್ನಿಸಬೇಕು ಎಂದು ಕರೆ ನೀಡಿದ್ದಾರೆ.
Karnataka News Live 22 July 2026 Viral News - ಭವ್ಯಾ ಗೌಡ-ಚೇತನ್ ಗೌಡ ಫೋಟೋಶೂಟ್ ಭಾರೀ ವೈರಲ್.. 'ಮೋಸದ ಮೇಲೆ ಮೋಸ' ಎಂದಿದ್ದ ರೈತ ಈಗ ನಾಯಕ!
ಯುವ ರೈತ ಚೇತನ್ ಗೌಡ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ದೇವಿ ಚಿತ್ರದಲ್ಲಿ ಭವ್ಯಾ ಗೌಡ ಅವರು ನಾಯಕ ಚೇತನ್ ಗೌಡ ಅವರಿಗೆ ನಾಯಕಿ ಆಗಿದ್ದಾರೆ. ಈ ಹೊಸ ಜೋಡಿ ಸ್ಯಾಂಡಲ್ವುಡ್ನಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ.
Karnataka News Live 22 July 2026 ಆರ್ಟ್ ಆಫ್ ಲಿವಿಂಗ್ ವಿರುದ್ಧ ಭೂ ಒತ್ತುವರಿ ಆರೋಪ, ರಾಜ್ಯ ಸರ್ಕಾರದಿಂದ ತನಿಖೆಗೆ SIT ರಚನೆ, ಸ್ವಾಗತಿಸಿದ ಸಂಸ್ಥೆ
Karnataka News Live 22 July 2026 Ra Ra RX - ಬೈಕ್ ಬೆನ್ನುಬಿದ್ದ ಯತಿರಾಜ್.. ಮದ್ದೂರಿನಲ್ಲಿ "ರಾ ರಾ ಆರೆಕ್ಸ್' ಜರ್ನಿ ಶುರು!
ಆರೆಕ್ಸ್ ಬೈಕಿನ ಸುತ್ತ ನಡೆಯುವ ಕಥೆಯ ಜೊತೆಗೆ ಹಾರರ್ ಕಥಾಹಂದರ ಕೂಡಾ ಇದರೊಟ್ಟಿಗೆ ಬೆಸೆದುಕೊಂಡಿದೆ. ಹಾಗಂತ ಬೆನ್ನುಬೀಳುವ ದೆವ್ವ, ಪ್ರೇತಕಾಟ, ರೆಗ್ಯುಲರ್ ಎನ್ನಿಸುವ ಭಯಾನಕ ದೃಶ್ಯಗಳು ಯಾವುವೂ ಇಲ್ಲಿರೋದಿಲ್ಲ. ಬದಲಿಗೆ, ಬದುಕಿನ ತಳಮಳಗಳು, ಹೆತ್ತವಳ ಸಂಕಟ, ಪ್ರೀತಿಯ ಉತ್ಕಟತೆಗಳೆಲ್ಲಾ ಇಲ್ಲಿ ಪಾತ್ರಗಳಾಗಿ ಹೊರಹೊಮ್ಮಲಿವೆ.