ದೇಶದಲ್ಲಿ ಬೇಸಿಗೆ ನಿಧಾನಕ್ಕೆ ಕಾಲಿಟ್ಟಿರುವ ನಡುವೆ ಹಲವು ರಾಜ್ಯಗಳಲ್ಲಿ ಮಾ.24ರ ತನಕ ಗುಡುಗು, ಆಲಿಕಲ್ಲು ಸಹಿತ ಮಹಿಳೆ ಸಂಭವಿಸಬಹುದು. ಜತೆಗೆ ಪ್ರಬಲ ಬಿರುಗಾಳಿಯೂ ಬೀಸಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Karnataka News Live: ದೇಶದಲ್ಲಿ ಭಾರೀ ಮಳೆ, ಬಿರುಗಾಳಿ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ

ಕರ್ನಾಟಕ ವಿಧಾನಸಭೆ ಉಪ ಚುನಾವಣೆ ಸಮರ ಕಾವೇರಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಇದರ ನಡುವೆ ಹಣ, ಮದ್ಯ, ಆಮಿಷಗಳು ಜೋರಾಗುತ್ತಿದೆ. ಬಾಗಲಕೋಟೆಯಲ್ಲಿ ದಾಖಲೆ ಇಲ್ಲದೆ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ಹಣ ಸೀಝ್ ಮಾಡಲಾಗಿದೆ. ಮಾರುತಿ ಎರ್ಟಿಗಾ ಕಾರಿನಲ್ಲಿ ಹಣ ಸಾಗಿಸುತ್ತಿದ್ದ ವೇಳೆ ಹಣ ಪತ್ತೆಯಾಗಿದೆ. ಚುನಾವಣೆ ಕದನ ಸೇರಿದಂತೆ ರಾಜ್ಯದ ಇಂದಿನ ಕ್ಷಣ ಕ್ಷಣ ದ ಸುದ್ದಿ ಅಪ್ಡೇಟ್ ಇಲ್ಲಿದೆ.
Karnataka News Live 22 March 2026ದೇಶದಲ್ಲಿ ಭಾರೀ ಮಳೆ, ಬಿರುಗಾಳಿ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
Karnataka News Live 22 March 2026ಮುಧೋಳ - ಫಸಲ್ ಬಿಮಾ ಯೋಜನೆಯಡಿ ₹30 ಕೋಟಿ ವಂಚಿಸಿದ್ದ ಗ್ಯಾಂಗ್ ಅರೆಸ್ಟ್!
ಬಾಗಲಕೋಟೆಯ ಮುಧೋಳ ತಾಲೂಕಿನಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಸುಮಾರು ₹30 ಕೋಟಿಗೂ ಅಧಿಕ ವಂಚನೆ ನಡೆದಿದೆ. ಏಜೆಂಟರು, ವಿಮಾ ಕಂಪನಿ ಹಾಗೂ ಇಲಾಖೆ ನೌಕರರು ಸೇರಿ ಖೊಟ್ಟಿ ದಾಖಲೆ ಸೃಷ್ಟಿಸಿ ಈ ಹಣ ಪಡೆದಿದ್ದು, ವಿಶೇಷ ತನಿಖಾ ತಂಡ ನಾಲ್ವರನ್ನು ಬಂಧಿಸಿದೆ.
Karnataka News Live 22 March 2026ಡಿಕೆಶಿ, ಪ್ರಿಯಾಂಕ್ ಖರ್ಗೆ ರೀತಿ ನಮಗೂ ಮಂತ್ರಿ ಪದವಿ ಕೊಡಿ - ಮಂತ್ರಿಗಿರಿಗಾಗಿ ಇಕ್ಬಾಲ್ ಪಟ್ಟು!
ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು, ಮೊದಲ ಹಾಗೂ ಎರಡನೇ ಬಾರಿ ಗೆದ್ದ ಸುಮಾರು 55 ಶಾಸಕರಿಗೆ ಮುಂಬರುವ ಸಂಪುಟ ಪುನಾರಚನೆಯಲ್ಲಿ ಮಂತ್ರಿಗಿರಿ ನೀಡಬೇಕೆಂದು ಆಗ್ರಹಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದ್ದು, ತಮ್ಮ ಬೇಡಿಕೆಗೆ ಸ್ಪಂದಿಸುವ ವಿಶ್ವಾಸವಿದೆ ಎಂದರು.
Karnataka News Live 22 March 2026ಬೆಂಗಳೂರು ಬಳಿ ಭೀಕರ ಅಪಘಾತ, ನಿಂತಿದ್ದ ಕ್ಯಾಂಟರ್ಗೆ ಟಾಟಾ ಎಸ್ ಡಿಕ್ಕಿಯಾಗಿ ಮೂವರು ಸಾವು
ಬೆಂಗಳೂರು ಬಳಿ ಭೀಕರ ಅಪಘಾತ, ನಿಂತಿದ್ದ ಕ್ಯಾಂಟರ್ಗೆ ಟಾಟಾ ಎಸ್ ಡಿಕ್ಕಿಯಾಗಿ ಮೂವರು ಸಾವು, ಬೆಂಗಳೂರಿನ ಹೊರವಲಯದ ಮೇಲ್ಸೇತುವೆ ಬಳಿ ಈ ಘಟನೆ ನಡೆದಿದೆ. ಪಂಚರ್ ಆಗಿ ನಿಂತಿದ್ದ ವಾಹನಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.
Karnataka News Live 22 March 2026ಯುಗಾದಿ ಹಬ್ಬಕ್ಕೆ ಊರಿಗೆ ಹೋಗದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸ್ವತಃ ಅಭ್ಯಂಜನ ಸ್ನಾನ ಮಾಡಿಸಿದ ಶಿಕ್ಷಕ!
ಎಸ್ಎಸ್ಎಲ್ಸಿ ಪರೀಕ್ಷೆಯ ಕಾರಣ ಯುಗಾದಿ ಹಬ್ಬಕ್ಕೆ ಮನೆಗೆ ಹೋಗಲಾಗದ ವಸತಿ ಶಾಲೆಯ ವಿದ್ಯಾರ್ಥಿಗಳ ಬೇಸರವನ್ನು ಶಿಕ್ಷಕರು ದೂರಾಗಿಸಿದ್ದಾರೆ. ಕಡೂರಿನ ಜೋಡಿಹೋಚಿಹಳ್ಳಿ ಮೊರಾರ್ಜಿ ಶಾಲೆಯ ಶಿಕ್ಷಕರು ತಾವೇ ಅಭ್ಯಂಜನ ಸ್ನಾನ ಮಾಡಿಸಿ, ಹಬ್ಬದೂಟ ಬಡಿಸಿ ಮನೆಯ ವಾತಾವರಣ ನಿರ್ಮಿಸಿ ಮಾದರಿಯಾಗಿದ್ದಾರೆ.
Karnataka News Live 22 March 2026ತೀವ್ರಗೊಂಡ ತಪಾಸಣೆ
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ಪೊಲೀಸರ ಕಾರ್ಯಾಚರಣೆ ತೀವ್ರಗೊಂಡಿದೆ. ಪ್ರತಿ ವಾಹನಗಳ ತಪಾಸಣೆ ನಡೆಸುತ್ತಿದ್ದಾರೆ. ಬಾಗಲಕೋಟೆಯಲ್ಲಿ KA36 P 3991 ನಂಬರ್ ಪ್ಲೇಟ್ ಹೊಂದಿರುವ ಎರ್ಟಿಗಾ ಕಾರಿನಲ್ಲಿ ಸಾಗಿಸುತ್ತಿದ್ದ 32.50 ಲಕ್ಷ ರೂಪಾಯಿ ಹಣ ವಶಕ್ಕೆ ಪಡೆಯಲಾಗಿದೆ.