08:05 AM (IST) Feb 23

Karnataka News Live 23 February 2026Bengaluru - ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ಲಿಂಕ್ ರೋಡ್; ಟ್ರಾಫಿಕ್‌ನಿಂದ ಬಚಾವ್

ಮೈಸೂರು ರಸ್ತೆಯ ದೀಪಾಂಜಲಿ ನಗರದಿಂದ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ಲಿಂಕ್ ರಸ್ತೆ ಶೀಘ್ರದಲ್ಲೇ ಉದ್ಘಾಟನೆಯಾಗಲಿದೆ. ಈ ರಸ್ತೆಯು ರಿಂಗ್ ರಸ್ತೆ ಹಾಗೂ ನೈಸ್ ರಸ್ತೆಯ ಮೂಲಕ ಮೈಸೂರು, ಮಾಗಡಿ, ಮತ್ತು ತುಮಕೂರು ರಸ್ತೆಗಳಿಗೆ ಸುಗಮ ಪ್ರಯಾಣವನ್ನು ಒದಗಿಸಲಿದೆ.

Read Full Story
07:50 AM (IST) Feb 23

Karnataka News Live 23 February 2026ಒರಿಜಿನಲ್‌ ಚಾಯ್ಸ್‌ ಬ್ಯಾಡ್‌ ಚಾಯ್ಸ್‌ ಸೆಲ್ಲಿಂಗ್ ವಿಸ್ಕಿ ಈಸ್‌ ರಿಸ್ಕಿ ಅಂದ್ರು ಜಡ್ಜ್

ಹೆಚ್ಚಿನ ಬೆಲೆಗೆ ಮದ್ಯ ಮಾರಾಟ ಮಾಡಿದ ಆರೋಪದ ಮೇಲೆ ಮದ್ಯದಂಗಡಿ ಮಾಲೀಕರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಹೈಕೋರ್ಟ್‌ ರದ್ದುಪಡಿಸಿದೆ. ಇಂತಹ ಪ್ರಕರಣಗಳಲ್ಲಿ ಕ್ರಮ ಜರುಗಿಸುವ ಅಧಿಕಾರ ಪೊಲೀಸರಿಗಿಲ್ಲ, ಅಬಕಾರಿ ಇಲಾಖೆಗೆ ಮಾತ್ರ ಇದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
Read Full Story
07:24 AM (IST) Feb 23

Karnataka News Live 23 February 2026ಆಳ್ವಾಸ್‌ ಕನ್ನಡ ಶಾಲೆ - 200 ಸೀಟು, 23 ಸಾವಿರಕ್ಕೂ ಅಧಿಕ ಅರ್ಜಿ ಸಲ್ಲಿಕೆ; ಯಾಕಿಷ್ಟು ಡಿಮ್ಯಾಂಡ್?

ಮೂಡುಬಿದಿರೆಯ ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯ 200 ಸೀಟುಗಳಿಗೆ 23,041 ಅರ್ಜಿಗಳು ಸಲ್ಲಿಕೆಯಾಗಿದ್ದು, ರಾಜ್ಯಾದ್ಯಂತ 20,146 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದಾರೆ. 6 ರಿಂದ 9ನೇ ತರಗತಿವರೆಗಿನ ಈ ಉಚಿತ ಸನಿವಾಸ ಶಿಕ್ಷಣಕ್ಕಾಗಿ ಪ್ರತಿಷ್ಠಾನವು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ.
Read Full Story
07:13 AM (IST) Feb 23

Karnataka News Live 23 February 2026ಮನೆ ಅಂಗಳದಲ್ಲಿ 8-12 ಅಡಿಯ 6 ಹೆಬ್ಬಾವು ಪ್ರತ್ಯಕ್ಷ! ಒಂದೆಡೆ ಇಷ್ಟೊಂದು ಹಾವು ಬಂದಿದ್ಯಾಕೆ?

ಕಾರವಾರದ ಕಠಿಣಕೋಣ ಗ್ರಾಮದ ಮನೆಯೊಂದರ ಅಂಗಳದಲ್ಲಿ 8 ರಿಂದ 12 ಅಡಿ ಉದ್ದದ ಆರು ಬೃಹತ್ ಹೆಬ್ಬಾವುಗಳು ಪತ್ತೆಯಾಗಿವೆ. ಉರಗ ರಕ್ಷಕರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಈ ಹಾವುಗಳನ್ನು ಸುರಕ್ಷಿತವಾಗಿ ಸೆರೆಹಿಡಿದು ಕಾಡಿಗೆ ಬಿಟ್ಟಿದ್ದಾರೆ. 

Read Full Story
06:54 AM (IST) Feb 23

Karnataka News Live 23 February 2026ಯಾವ ಶಾಸಕರಾದರೂ 5 ಲಕ್ಷ ತೆಗೆದುಕೊಳ್ತಾರಾ? ಚಂದ್ರು ಲಮಾಣಿ ಪರ ಶ್ರೀರಾಮುಲು ಬ್ಯಾಟಿಂಗ್

ಬಾಗಲಕೋಟೆಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ಶ್ರೀರಾಮುಲು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲವರನ್ನು ಮಾತ್ರ ಬಂಧಿಸಿ, ಉಳಿದವರನ್ನು ರಕ್ಷಿಸಲಾಗುತ್ತಿದೆ ಎಂದು ಆರೋಪಿಸಿದರು.

Read Full Story
06:50 AM (IST) Feb 23

Karnataka News Live 23 February 2026ಸಂಸದೆಯರ ಮುಂದೆಬಿಟ್ಟು ಪ್ರಧಾನಿ ಆಗಬೇಕೆ ? - ಮೋದಿ

ಇತ್ತೀಚೆಗೆ ಲೋಕಸಭೆಯಲ್ಲಿ ಕಾಂಗ್ರೆಸ್‌ನ ಮಹಿಳಾ ಸಂಸದರು ತಮ್ಮ ಸ್ಥಾನದತ್ತ ಧಾವಿಸಿ ಬಂದ ಘಟನೆಯ ಬಗ್ಗೆ ಮೊದಲ ಬಾರಿ ಮೌನ ಮುರಿದಿರುವ ಪ್ರಧಾನಿ ನರೇಂದ್ರ ಮೋದಿ ‘ಸಂಸತ್ತಿನಲ್ಲಿ ಕಾಂಗ್ರೆಸ್‌ ತಾನೂ ಕೆಲಸ ಮಾಡಲ್ಲ, ತನ್ನ ಮಿತ್ರ ಪಕ್ಷಗಳಿಗೂ ಕೆಲಸ ಮಾಡಲು ಬಿಡಲ್ಲ.

Read Full Story
06:45 AM (IST) Feb 23

Karnataka News Live 23 February 2026ಗೌಡ, ಎಚ್‌ಡಿಕೆ ಜಾತಿವಾದಿಗಳಲ್ಲ, ಕುಟುಂಬವಾದಿಗಳು - ಸಿದ್ದರಾಮಯ್ಯ ತರಾಟೆ

‘ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡ ಜಾತಿವಾದಿಗಳಲ್ಲ, ಸ್ವಜಾತಿ ವಿರೋಧಿಗಳು. ಸ್ವಜಾತಿ ನಾಯಕರು ಬೆಳೆಯದಂತೆ ಒಬ್ಬೊಬ್ಬರನ್ನು ಮುಗಿಸಿದ ಕುಟುಂಬವಾದಿಗಳು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಪಾದಿಸಿದ್ದಾರೆ.

Read Full Story
06:39 AM (IST) Feb 23

Karnataka News Live 23 February 2026₹ 5 ಅಕ್ರಮದಲ್ಲಿ ಪಾರಾಗಿದ್ದ ಲಮಾಣಿ ₹5 ಲಕ್ಷ ಕೇಸ್‌ನಲ್ಲಿ ಲೋಕಾ ಖೆಡ್ಡಾಕ್ಕೆ!

ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ₹5 ಲಕ್ಷ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದು ಜೈಲು ಪಾಲಾಗಿರುವ ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ, ಈ ಹಿಂದೆಯೂ ಲೋಕಾಯುಕ್ತ ಬಿಸಿ ಎದುರಿಸಿದ್ದರು.

Read Full Story