10:52 PM (IST) Jun 23

Karnataka News Live 23 June 2026 RSS - ಇಷ್ಟು ವರ್ಷ ಸಂಘದ ನೋಂದಣಿ ಏಕೆ ಪ್ರಶ್ನಿಸಲಿಲ್ಲ - ಪ್ರಿಯಾಂಕ್ ಖರ್ಗೆ ವಿರುದ್ಧ ಈಶ್ವರಪ್ಪ ವಾಗ್ದಾಳಿ

RSS Registration Controversy: ಸ್ವಾತಂತ್ರ್ಯ ಪೂರ್ವದಲ್ಲಿಯೇ ಸ್ಥಾಪಿತವಾದ ಆರ್‌ಎಸ್‌ಎಸ್‌ ಸಂಘದ ನೋಂದಣಿ ಬಗ್ಗೆ ಈಗ ಪ್ರಶ್ನಿಸುತ್ತಿರುವವರು ಇಷ್ಟು ವರ್ಷ ಏಕೆ ಸುಮ್ಮನಿದ್ದರು ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನೆ ಮಾಡಿದರು.

Read Full Story
09:31 PM (IST) Jun 23

Karnataka News Live 23 June 2026 Graveyard Dating - ಸ್ಮಶಾನದಲ್ಲಿ ಡೇಟಿಂಗ್! ಯುವಜನರ ಈ ಹೊಸ ಹುಚ್ಚಾಟದ ಅಸಲಿ ಕಥೆ ಏನು?

Graveyard Dating: ಕಾಫಿ ಶಾಪ್, ಪಾರ್ಕ್‌ಗಳೆಲ್ಲಾ ಹಳೆಯದಾಯ್ತು. ಈಗಿನ ಹೊಸ ಟ್ರೆಂಡ್ ಗ್ರೇವ್‌ಯಾರ್ಡ್ ಡೇಟಿಂಗ್. ಯುವ ಜೋಡಿಗಳು ಸ್ಮಶಾನಗಳಲ್ಲಿ ಯಾಕೆ ಡೇಟಿಂಗ್ ಮಾಡ್ತಿದ್ದಾರೆ? ಇದರ ಹಿಂದಿನ ಅಸಲಿ ಕಾರಣಗಳೇನು? ಈ ಕುತೂಹಲಕಾರಿ ವಿವರ ಇಲ್ಲಿದೆ.

Read Full Story
07:33 PM (IST) Jun 23

Karnataka News Live 23 June 2026 ಈ ಪ್ರಕಾಶ್​ ರಾಜ್​ ಅರೆಸ್ಟ್​ ಆದ್ರೆ, ಆ ಪ್ರಕಾಶ್​ ರಾಜ್​ ಓಡಿ ಬರ್ತಾರೆ; ನಾಲ್ಕು ಮಂದಿ ತಬ್ಬಿಕೊಳ್ತಾರೆ - ಸೂಲಿಬೆಲೆ ವ್ಯಂಗ್ಯ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಒಂದೇ ಹೆಸರಿನಲ್ಲಿ ನಾಲ್ಕು ವೋಟರ್ ಐಡಿ ಕಾರ್ಡ್‌ಗಳನ್ನು ಹೊಂದಿರುವ ಆರೋಪದ ಮೇಲೆ ಬೆಂಗಳೂರು ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್ ಎದುರಿಸುತ್ತಿದ್ದಾರೆ.  ಈ ಕುರಿತು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ವ್ಯಂಗ್ಯವಾಡಿದ್ದಾರೆ.

Read Full Story
07:22 PM (IST) Jun 23

Karnataka News Live 23 June 2026 Cross Voting - ಧರ್ಮಸ್ಥಳ ಆಣೆ ಬೇಡ, ಬ್ರೇನ್ ಮ್ಯಾಪಿಂಗ್ ಮಾಡಿಸಿ - ವಿಜಯೇಂದ್ರ-ಅಶೋಕ್ ವಿರುದ್ಧ ಎಂ.ಲಕ್ಷ್ಮಣ್ ಕಿಡಿ

Cross Voting: ಪರಿಷತ್ ಚುನಾವಣೆಯ ಕ್ರಾಸ್ ವೋಟಿಂಗ್ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ವಿಪಕ್ಷ ನಾಯಕ ಆರ್. ಅಶೋಕ್ ನೇರ ಹೊಣೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.

Read Full Story
06:56 PM (IST) Jun 23

Karnataka News Live 23 June 2026 Bidadi Township - ವಿಧಾನಸೌಧಕ್ಕೆ ಬನ್ನಿ, ದಾಖಲೆ ತೋರಿಸುತ್ತೇವೆ - ಎಚ್‌ಡಿಕೆಗೆ ಎಂ.ಲಕ್ಷ್ಮಣ್ ಸವಾಲ್

Bidadi Township ಯೋಜನೆ ವಿಚಾರವಾಗಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. 2006ರಲ್ಲಿ ಯೋಜನೆ ಆರಂಭಿಸಿದ್ದು ನೀವೇ ಎಂದು ಪ್ರಶ್ನಿಸಿದರು.

Read Full Story
06:50 PM (IST) Jun 23

Karnataka News Live 23 June 2026 Shocking Event - ಈ ಖ್ಯಾತ ಗಾಯಕಿಗೆ ಇದ್ದಕ್ಕಿದ್ದಂತೆ ಏನಾಯ್ತು? ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಲು ಮತ್ತೊಬ್ಬರ ಸಹಾಯ ಪಡೆದು ಬಂದಿದ್ಯಾಕೆ?

ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ವರ್ಣರಂಜಿತ ವೇದಿಕೆಯಲ್ಲಿ ಭಾರತದ ಈ ಪ್ರಖ್ಯಾತ ಹಿನ್ನೆಲೆ ಗಾಯಕಿಗೆ ರಾಷ್ಟ್ರಪತಿ  ದ್ರೌಪದಿ ಮುರ್ಮು ಅವರು ಭಾರತದ ಅತ್ಯುನ್ನತ ಪ್ರಶಸ್ತಿಗಳಲ್ಲಿ ಒಂದಾದ 'ಪದ್ಮಭೂಷಣ' ಪ್ರಶಸ್ತಿ ನೀಡಿ ಗೌರವಿಸಿದರು. ಯಾರು ಈ ಗಾಯಕಿ? ಸ್ಟೋರಿ ನೋಡಿ..

Read Full Story
06:45 PM (IST) Jun 23

Karnataka News Live 23 June 2026 Gangavathi - ಮನೆಯ ಕಸ ಬೇರ್ಪಡಿಸಿ ಎಂದ ಸಿಬ್ಬಂದಿ ಮೇಲೆ ಹಲ್ಲೆ - ಆರೋಪಿಯ ಮನೆ ಮುಂದೆ ಕಸ ಸುರಿದು ಪ್ರತಿಭಟನೆ

Gangavathi ಕಿಲ್ಲಾ ಏರಿಯಾದಲ್ಲಿ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಹಾಕುವಂತೆ ಸೂಚಿಸಿದ ನಗರಸಭೆ ಸಿಬ್ಬಂದಿ ಅಬ್ದುಲ್ ನಬಿಸಾಬ್ ಮೇಲೆ ಹಲ್ಲೆ ನಡೆದಿದೆ. ಘಟನೆಯನ್ನು ಖಂಡಿಸಿ ನಗರಸಭೆ ಸಿಬ್ಬಂದಿಗಳು ಆರೋಪಿಯ ಮನೆ ಮುಂದೆ ಕಸ ಸುರಿದು ಪ್ರತಿಭಟನೆ ನಡೆಸಿದ್ದಾರೆ.

Read Full Story
06:07 PM (IST) Jun 23

Karnataka News Live 23 June 2026 ಚಿಕ್ಕ ಹುಡುಗ ಬೇಡಿಕೊಂಡರೂ ರೂಲ್ಸ್ ನೆಪದಲ್ಲಿ ನಿರ್ಜನ ಪ್ರದೇಶದಲ್ಲಿ ಇಳಿಸಿದ ಬಸ್! ಕಂಡಕ್ಟರ್ ಅಮಾನತಿಗೆ ಶಾಸಕ ಅಶೋಕ್ ರೈ ಆದೇಶ

ತಪ್ಪು ಬಸ್ ಹತ್ತಿದ ಆರನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಕೆಎಸ್‌ಆರ್‌ಟಿಸಿ ನಿರ್ವಾಹಕನು ಅಮಾನವೀಯವಾಗಿ ನಡೆದುಕೊಂಡಿದ್ದಾನೆ. ಬಾಲಕನ ವಿನಂತಿಯನ್ನು ತಿರಸ್ಕರಿಸಿ, ಆತನನ್ನು ದೂರದ ಅಪರಿಚಿತ ಸ್ಥಳದಲ್ಲಿ ಇಳಿಸಿ ಹೋಗಿದ್ದಾನೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ನಿರ್ವಾಹಕನನ್ನು ತಕ್ಷಣವೇ ಅಮಾನತುಗೊಳಿಸುವಂತೆ ಆದೇಶಿಸಿದ್ದಾರೆ.
Read Full Story
05:39 PM (IST) Jun 23

Karnataka News Live 23 June 2026 Nagamale Darshan - ಎರಡು ಚಿರತೆಗಳು ಸೆರೆ ಸಿಕ್ಕರೂ ನಾಗಮಲೆ ದರ್ಶನಕ್ಕೆ ಯಾಕೆ ಅವಕಾಶ ಸಿಗುತ್ತಿಲ್ಲ?

Nagamale Darshan: ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ದರ್ಶನಕ್ಕೆ ಚಿರತೆ ದಾಳಿಯ ಬಳಿಕ ವಿಧಿಸಲಾದ ನಿರ್ಬಂಧ ಇನ್ನೂ ತೆರವಾಗಿಲ್ಲ. ಎರಡು ಚಿರತೆಗಳು ಸೆರೆ ಸಿಕ್ಕಿದ್ದರೂ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನೆಲೆ ಭಕ್ತರು ಪ್ರಶ್ನೆ ಎತ್ತಿದ್ದಾರೆ.

Read Full Story
05:23 PM (IST) Jun 23

Karnataka News Live 23 June 2026 Mangaluru - ಕಾಣೆಯಾದ ಚಿನ್ನು 3 ವಾರದ ಬಳಿಕ ಪತ್ತೆ, ಮನೆ ಮಗು ಹುಡುಕಿ ಕೊಟ್ಟವನಿಗೆ ಮಾಲೀಕನಿಂದ 50ಸಾವಿರ ನಗದು ಬಹುಮಾನ

ಪುತ್ತೂರಿನ ಶ್ವಾನ ಪ್ರೇಮಿ ಗಣೇಶ್ ಕೇರಾ ಅವರ ಕಾಣೆಯಾಗಿದ್ದ 'ಚಿನ್ನು' ಎಂಬ ಸಾಕುನಾಯಿ ಮೂರು ವಾರಗಳ ನಂತರ ಪತ್ತೆಯಾಗಿದೆ. ನಾಯಿಯನ್ನು ಹುಡುಕಿಕೊಟ್ಟವರಿಗೆ ₹50,000 ಬಹುಮಾನ ಘೋಷಿಸಿದ್ದ ಗಣೇಶ್, ಅದನ್ನು ಪತ್ತೆಹಚ್ಚಿದ ಸ್ಥಳೀಯ ನಿವಾಸಿ ಪುರಂದರ ಅವರಿಗೆ ವಾಗ್ದಾನದಂತೆ ನಗದು ಬಹುಮಾನವನ್ನು ಹಸ್ತಾಂತರಿಸಿದ್ದಾರೆ.
Read Full Story
04:55 PM (IST) Jun 23

Karnataka News Live 23 June 2026 Bidadi Township - ಬೈರಮಂಗಲ ಸರ್ಕಲ್‌ಗೆ ಬನ್ನಿ, ರೈತರ ಮುಂದೆ ಚರ್ಚೆ ಮಾಡೋಣ - ಡಿಕೆಶಿಗೆ ನಿಖಿಲ್ ಬಹಿರಂಗ ಸವಾಲ್

Bidadi Township ಯೋಜನೆ ವಿಚಾರವಾಗಿ ಡಿ.ಕೆ.ಶಿವಕುಮಾರ್‌ಗೆ ನಿಖಿಲ್ ಕುಮಾರಸ್ವಾಮಿ ಬಹಿರಂಗ ಚರ್ಚೆಗೆ ಆಹ್ವಾನ ನೀಡಿದ್ದಾರೆ. ರೈತರ ಸಮ್ಮುಖದಲ್ಲೇ ಚರ್ಚೆ ನಡೆಸುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Read Full Story
04:36 PM (IST) Jun 23

Karnataka News Live 23 June 2026 Bengaluru - ಅಂಜನಾನಗರದಲ್ಲಿ ಅನುಮಾನಾಸ್ಪದ ಸಾವು - 3 ತಿಂಗಳ ಗರ್ಭಿಣಿ ವಿವಾಹಿತೆ ಮೃತದೇಹ ಪತ್ತೆ

Bengaluru ಅಂಜನಾನಗರದಲ್ಲಿ ಮೂರು ತಿಂಗಳ ಗರ್ಭಿಣಿಯಾಗಿದ್ದ ವಿವಾಹಿತೆ ತನುಜಾ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಬ್ಯಾಡರಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Read Full Story
04:33 PM (IST) Jun 23

Karnataka News Live 23 June 2026 ಮಂಗಳೂರಿಂದ ಹೊರಡುವ ಕೊಂಕಣ ರೈಲ್ವೆ ಮಾರ್ಗದಲ್ಲಿ ಹಲವು ಟ್ರೈನ್ ಸಂಚಾರ ಭಾಗಶಃ ರದ್ದು, ಮರು ವೇಳಾಪಟ್ಟಿ ಪ್ರಕಟ!

ಕೊಂಕಣ ರೈಲ್ವೆ ಮಾರ್ಗದಲ್ಲಿ ಹಳಿ ನಿರ್ವಹಣಾ ಕಾಮಗಾರಿಯಿಂದಾಗಿ ಜೂನ್ 23 ರಿಂದ 28ರವರೆಗೆ ಹಲವು ರೈಲುಗಳ ಸೇವೆಯಲ್ಲಿ ಬದಲಾವಣೆ ಮಾಡಲಾಗಿದೆ. ಕೆಲವು ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದ್ದು, ಇನ್ನು ಕೆಲವು ರೈಲುಗಳ ಸಮಯವನ್ನು ಮರುನಿಗದಿಪಡಿಸಲಾಗಿದೆ. ಪ್ರಯಾಣಿಕರು ತಮ್ಮ ಪ್ರಯಾಣಕ್ಕೂ ಮುನ್ನ ವೇಳಾಪಟ್ಟಿಯನ್ನು ಪರಿಶೀಲಿಸಲು ಸೂಚಿಸಲಾಗಿದೆ.
Read Full Story
02:34 PM (IST) Jun 23

Karnataka News Live 23 June 2026 ರಾಜ್ಯಕ್ಕೆ ನೈರುತ್ಯ ಮಾರುತಗಳ ಅಬ್ಬರ, ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್; ನಿಮ್ಮ ಜಿಲ್ಲೆಯ ಮಳೆ ವಿವರ ಇಲ್ಲಿದೆ..

ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದಲ್ಲಿ ಮುಂದಿನ ಏಳು ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಿಗೆ ರೆಡ್/ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆಯಿದೆ.
Read Full Story
02:32 PM (IST) Jun 23

Karnataka News Live 23 June 2026 ಜುಲೈನಲ್ಲಿ ಮಾರುಕಟ್ಟೆಗೆ ಬರಲಿದೆ ಹೊಸ Maruti Brezza ಫೇಸ್‌ಲಿಫ್ಟ್; ಮೊದಲ ಬಾರಿಗೆ ಡಬಲ್‌ ಎಂಜಿನ್‌ ಆಯ್ಕೆ

ಮಾರುತಿ ಸುಜುಕಿ ತನ್ನ ಜನಪ್ರಿಯ ಬ್ರೆಜ್ಜಾ ಎಸ್‌ಯುವಿಯನ್ನು ಜುಲೈ ಅಂತ್ಯದಲ್ಲಿ ಹೊಸ ರೂಪದಲ್ಲಿ ಬಿಡುಗಡೆ ಮಾಡಲಿದೆ. ಈ ಹೊಸ ಆವೃತ್ತಿಯು ಮೊದಲ ಬಾರಿಗೆ 1.0-ಲೀಟರ್ ಟರ್ಬೋ-ಪೆಟ್ರೋಲ್ ಎಂಜಿನ್ ಆಯ್ಕೆ ಮತ್ತು ಬೂಟ್ ಸ್ಪೇಸ್ ಉಳಿಸುವ ಅಂಡರ್-ಬಾಡಿ ಸಿಎನ್‌ಜಿ ಕಿಟ್‌ನಂತಹ ಪ್ರಮುಖ ಬದಲಾವಣೆಗಳೊಂದಿಗೆ ಬರಲಿದೆ.
Read Full Story
02:09 PM (IST) Jun 23

Karnataka News Live 23 June 2026 Renukaswamy Darshan Case - ದರ್ಶನ್ ಕೇಸ್‌ನಲ್ಲಿ ಬಿಗ್‌ ಅಪ್ಡೇಟ್, ಸುಪ್ರೀಂ ಕೋರ್ಟ್ ನಲ್ಲಿ ಹೀಗಂತ ಅರ್ಜಿ ಹಾಕೇಬಿಟ್ರು!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ತಮ್ಮ ಕಾನೂನು ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಈ ಹಿಂದೆ ಸುಪ್ರೀಂ ಕೋರ್ಟ್ ವಿಧಿಸಿದ್ದ ಕಠಿಣ ಷರತ್ತುಗಳನ್ನು ಸಡಿಲಿಸುವಂತೆ ಕೋರಿ, ಅವರು ಮತ್ತೆ ಸುಪ್ರೀಂ ಕೋರ್ಟ್‌ಗೆ ವಿಶೇಷ ಮಾರ್ಪಾಡು ಅರ್ಜಿ ಸಲ್ಲಿಸಿದ್ದಾರೆ.
Read Full Story
01:20 PM (IST) Jun 23

Karnataka News Live 23 June 2026 ನಟ ದರ್ಶನ್ ಪರ ವಕಾಲತ್ತಿಂದ ಅಧಿಕೃತವಾಗಿ ಹಿಂದೆ ಸರಿದ ವಕೀಲ ಸುನೀಲ್, ಕೋರ್ಟ್‌ಗೆ ಮೆಮೋ ಸಲ್ಲಿಕೆ! ಮತ್ತೊಬ್ಬನ ಎಂಟ್ರಿ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರ ವಾದಿಸುತ್ತಿದ್ದ ವಕೀಲ ಸುನಿಲ್ ಕುಮಾರ್ ಅವರು ಅಧಿಕೃತವಾಗಿ ಹಿಂದೆ ಸರಿದಿದ್ದಾರೆ. ಅವರ ಸ್ಥಾನಕ್ಕೆ ಇದೀಗ ಹಿರಿಯ ವಕೀಲ ಹಶ್ಮತ್ ಪಾಷಾ ಪ್ರವೇಶಿಸಿದ್ದು, ಈ ಬದಲಾವಣೆಯು ಪ್ರಕರಣದಲ್ಲಿ ಹೊಸ ಸಂಚಲನ ಮೂಡಿಸಿದೆ.
Read Full Story
01:06 PM (IST) Jun 23

Karnataka News Live 23 June 2026 ಹುಬ್ಬಳ್ಳಿ Chennamma Circle ಫ್ಲೈಓವರ್ ಇಡೀ ಕಾಮಗಾರಿಯೇ ಕಳಪೆ - ಎಂಜಿನಿಯರ್‌ ತಂಡದಿಂದ ದೂರು

ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವೃತ್ತದ ಬಳಿ ನಿರ್ಮಾಣವಾಗುತ್ತಿರುವ ಫ್ಲೈಓವರ್ ಕಾಮಗಾರಿಯಲ್ಲಿ ಗಂಭೀರ ತಾಂತ್ರಿಕ ಲೋಪಗಳನ್ನು 'ಇಂಡಿಯನ್ ಕಾಂಕ್ರೀಟ್ ಇನ್‌ಸ್ಟಿಟ್ಯೂಟ್' ತಜ್ಞರು ಪತ್ತೆಹಚ್ಚಿದ್ದಾರೆ.

Read Full Story
01:02 PM (IST) Jun 23

Karnataka News Live 23 June 2026 ಗದಗ ಬೈಪಾಸ್ ಎಫೆಕ್ಟ್? ನಾವು ಹೋಗಬೇಕಲ್ವಾ ? ನಾವೇನು ಮಾಡೋದು? ರೈಲು ಪ್ರಯಾಣಿಕರ ಆಕ್ರೋಶ

ಮೈಸೂರು-ಪಂಢರಪುರ ಗೋಲ್ ಗುಂಬಜ್ ಎಕ್ಸ್‌ಪ್ರೆಸ್ ರೈಲನ್ನು ಗದಗ ಬೈಪಾಸ್ ಮೂಲಕ ಸಂಚರಿಸಲು ರೈಲ್ವೆ ಇಲಾಖೆ ನಿರ್ಧರಿಸಿದೆ. ಈ ನಿರ್ಧಾರದಿಂದ ಪಂಢರಪುರಕ್ಕೆ ಹೋಗುವ ಭಕ್ತರು ಸೇರಿದಂತೆ ಸಾವಿರಾರು ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿದ್ದು, ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.
Read Full Story
12:28 PM (IST) Jun 23

Karnataka News Live 23 June 2026 Chandan Flirt Plan - ಮತ್ತೊಮ್ಮೆ 'ಫ್ಲರ್ಟ್' ಮಾಡಲು ಪ್ಲಾನ್ ಮಾಡಿರೋ ಹ್ಯಾಂಡ್‌ಸಮ್ ಹುಡುಗ ಚಂದನ್ ಕುಮಾರ್!

'ಸ್ಪುರದ್ರೂಪಿ' ನಟ ಚಂದನ್ ಕುಮಾರ್ ನಟನಾಗಿ ಮಾತ್ರವಲ್ಲದೆ ಒಬ್ಬ ಸಮರ್ಥ ನಿರ್ದೇಶಕನಾಗಿಯೂ ಅಬ್ಬರಿಸಲು ಸಜ್ಜಾಗಿದ್ದಾರೆ. ಮೊದಲ ಬಾರಿಗೆ ಆ್ಯಕ್ಷನ್-ಕಟ್ ಹೇಳಿದ್ದ ಚಿತ್ರ ‘ಫ್ಲರ್ಟ್’ (Flirt) ಚಿತ್ರ ಪ್ರೇಕ್ಷಕರು , ವಿಮರ್ಶಕರಿಂದ ಉತ್ತಮ ಮೆಚ್ಚುಗೆ  ಪಡೆದಿತ್ತು. ಆದರೆ, ಇಲ್ಲೊಂದು ಟ್ವಿಸ್ಟ್ ಇದೆ!

Read Full Story