10:35 PM (IST) Sep 23

karnataka news liveಗಡೀಪಾರಾದ ತಿಮರೋಡಿ ರಾಯಚೂರಿಗೆ ಬೇಡ, ಕಾಡಿಗೆ ಕಳುಹಿಸಿ ಎಂದು ಪ್ರತಿಭಟನೆ

ಗಡೀಪಾರಾದ ತಿಮರೋಡಿ ರಾಯಚೂರಿಗೆ ಬೇಡ, ಕಾಡಿಗೆ ಕಳುಹಿಸಿ ಎಂದು ಪ್ರತಿಭಟನೆ ಶುರುವಾಗಿದೆ. ಧರ್ಮಸ್ಥಳ ವಿರುದ್ದ ಬುರುಡೆ ಷಡ್ಯಂತ್ರ ರೂಪಿಸಿದ ಆರೋಪ ಎದುರಿಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಇದೀಗ ಹಲವೆಡೆಗಳಿಂದ ಪ್ರತಿಭಟನೆ ಬಿಸಿ ಹೆಚ್ಚಾಗತೊಡಗಿದೆ.

Read Full Story
09:48 PM (IST) Sep 23

karnataka news liveಕಾರಲ್ಲ, ಸ್ಕೂಟರ್ ಮೇಲೆ 6 ಮಂದಿ ಪ್ರಯಾಣ, ಬೆಂಗಳೂರಲ್ಲಿ ಯುವಕರ ಹುಚ್ಚಾಟ

ಕಾರಲ್ಲ, ಸ್ಕೂಟರ್ ಮೇಲೆ 6 ಮಂದಿ ಪ್ರಯಾಣ, ಬೆಂಗಳೂರಲ್ಲಿ ಯುವಕರ ಹುಚ್ಚಾಟ ವರದಿಯಾದಿದೆ. ಸ್ಥಳೀಯರ ಮೊಬೈಲ್‌ನಲ್ಲಿ ದೃಶ್ಯ ಸೆರೆಯಾಗಿದೆ. ಈ ರೀತಿ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ.

Read Full Story
09:34 PM (IST) Sep 23

karnataka news liveತುಂಗಭದ್ರಾ ಡ್ಯಾಂಗೂ ವಯಸ್ಸಾಯ್ತು, ನಮ್ಗೂ ವಯಸ್ಸಾಯ್ತು! ರೈತರು ಹೊಸ ಬೆಳೆಗೆ ಬದಲಾಗಬೇಕು ಶಾಸಕ ಹಂಪನಗೌಡ ಸಲಹೆ

ಸಿಂಧನೂರಿನಲ್ಲಿ 11 ದಿನಗಳ ದಸರಾ ಉತ್ಸವಕ್ಕೆ ಸಚಿವ ಶರಣಬಸಪ್ಪ ದರ್ಶನಾಪುರ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಹಂಪನಗೌಡ ಬಾದರ್ಲಿ, ರೈತರು ಕಾಲಕ್ಕೆ ತಕ್ಕಂತೆ ಹೊಸ ಬೆಳೆಗಳಿಗೆ ಬದಲಾಗಬೇಕು ಎಂದು ಸಲಹೆ ನೀಡಿದ್ದು, ಈ ಬಾರಿ ಗ್ರಾಮೀಣ, ರೈತ, ಆರೋಗ್ಯ, ಶಿಕ್ಷಣ ಎಂದು ವಿನೂತನವಾಗಿ ಆಯೋಜಿಸಲಾಗಿದೆ.

Read Full Story
09:14 PM (IST) Sep 23

karnataka news liveವರ್ಷಪೂರ್ತಿ ಹಣ್ಣು ಬಿಡುವ ವಿದೇಶಿ ಮಾವು ಬೆಳೆದ ಬಿಸಿಲನಾಡು ವಿಜಯಪುರದ ಯುವ ರೈತ!

vijayapura mango farmer ವಿಜಯಪುರದ ಪದವೀಧರ ಯುವ ರೈತ ನವೀನ ಮಂಗಾನವರ, ಥೈಲ್ಯಾಂಡ್ ಮೂಲದ ಮಾವನ್ನು ಸಂಪೂರ್ಣ ಸಾವಯವ ಪದ್ಧತಿಯಲ್ಲಿ ಬೆಳೆದು ಯಶಸ್ಸು ಕಂಡಿದ್ದಾರೆ. ವರ್ಷಪೂರ್ತಿ ಇಳುವರಿ ನೀಡುವ ಈ ಮಾವಿಗೆ ನೇರ ಮಾರುಕಟ್ಟೆ ಸೃಷ್ಟಿಸಿಕೊಂಡು, ಸಚಿವರಿಂದ ಹಾಗೂ ಥಾಯ್ ರೈತರಿಂದಲೂ ಮೆಚ್ಚುಗೆ ಗಳಿಸಿದ್ದಾರೆ.

Read Full Story
08:55 PM (IST) Sep 23

karnataka news liveಇದು ಜಾತಿ ಸಮೀಕ್ಷೆಯಲ್ಲ, ಬಿಜೆಪಿ ಅಧ್ಯಕ್ಷರು ಮೋದಿಗೆ ಪತ್ರ ಬರೆಯಲಿ - ಸಚಿವ ಗುಂಡೂರಾವ್ ತಿರುಗೇಟು

ಜಾತಿ ಜನಗಣತಿ ವಿಚಾರವಾಗಿ ಬಿಜೆಪಿಗೆ ತಿರುಗೇಟು ನೀಡಿರುವ ಸಚಿವ ದಿನೇಶ್ ಗುಂಡೂರಾವ್, ಜಾತಿ ಗಣತಿ ಮಾಡಬೇಡಿ ಎಂದು ಕೇಂದ್ರಕ್ಕೆ ಪತ್ರ ಬರೆಯಲು ವಿಜಯೇಂದ್ರ ಗೆ ಸವಾಲು ಹಾಕಿದ್ದಾರೆ. ಇದು ಜಾತಿ ಗಣತಿಯಲ್ಲ, ಬದಲಿಗೆ ವೈಜ್ಞಾನಿಕ ಅಂಕಿ-ಅಂಶ ಸಂಗ್ರಹಿಸಲು ನಡೆಸುತ್ತಿರುವ ಸಮೀಕ್ಷೆ ಎಂದು ಸ್ಪಷ್ಟಪಡಿಸಿದ್ದಾರೆ.

Read Full Story
08:33 PM (IST) Sep 23

karnataka news liveಬಹುನಿರೀಕ್ಷಿತ ಹೆಬ್ಬಾಳ-ಸರ್ಜಾಪುರ ಕೆಂಪು ಮಾರ್ಗ ಮೆಟ್ರೋ ಯೋಜನೆಗೆ, ಕೇಂದ್ರದಿಂದ ಅನಿರೀಕ್ಷಿತ ತಡೆಯಾಗುತ್ತಾ?

ಹೆಬ್ಬಾಳ-ಸರ್ಜಾಪುರ ನಮ್ಮ ಮೆಟ್ರೋ ಕೆಂಪು ಮಾರ್ಗದ ₹28,405 ಕೋಟಿ ವೆಚ್ಚದ ಅಂದಾಜನ್ನು ಮರುಪರಿಶೀಲಿಸುವಂತೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಸೂಚಿಸಿದೆ. 36.59 ಕಿ.ಮೀ ಉದ್ದದ ಈ ಮಾರ್ಗದಲ್ಲಿ 28 ನಿಲ್ದಾಣಗಳಿದ್ದು, ಭೂಸ್ವಾಧೀನ ಪ್ರಕ್ರಿಯೆ ಹಾಗೂ ಯೋಜನೆಯ ಮರುಮೌಲ್ಯಮಾಪನ ಈಗ ಆರಂಭವಾಗಿದೆ.
Read Full Story
08:30 PM (IST) Sep 23

karnataka news liveಮಹೇಶ್ ಶೆಟಿ ತಿಮರೋಡಿ ಗಡೀಪಾರಿಗೆ ಕಾರಣವಾದ 5 ಕೇಸ್ ಯಾವುದು, ನಿರೀಕ್ಷಣಾ ಜಾಮೀನಿಗೆ ಅರ್ಜಿ

ಮಹೇಶ್ ಶೆಟಿ ತಿಮರೋಡಿ ಗಡೀಪಾರಿಗೆ ಕಾರಣವಾದ 5 ಕೇಸ್ ಯಾವುದು, ನಿರೀಕ್ಷಣಾ ಜಾಮೀನಿಗೆ ಅರ್ಜಿ, ಶಾಂತಿ ಕದಡುವ ಪ್ರಯತ್ನ ಹಿನ್ನಲೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿಯನ್ನು ಬೆಳಗಾವಿಗೆ ಗಡೀಪಾರು ಮಾಡಲು ಆದೇಶ ನೀಡಲಾಗಿದೆ. ತಿಮರೋಡಿ ಗಡೀಪಾರಿಗೆ ಕಾರಣವಾದ 5 ಕೇಸ್ ಯಾವುದು?

Read Full Story
07:58 PM (IST) Sep 23

karnataka news liveಚಾಮುಂಡಿ ತಾಯಿ ಕ್ಷೇತ್ರದಿಂದ ಗೃಹ'ಲಕ್ಷ್ಮೀ'ಯರಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಸಚಿವೆ ಹೆಬ್ಬಾಳ್ಕರ್

ಮೈಸೂರಿನಲ್ಲಿ ನಡೆದ ಮಹಿಳಾ ದಸರಾ ಕಾರ್ಯಕ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದಾರೆ. ಈ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಸರ್ಕಾರ ಒತ್ತು ನೀಡಿದೆ.

Read Full Story
07:43 PM (IST) Sep 23

karnataka news liveಗ್ರಾಮೀಣ ಯುವತಿಯರಿಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿಗೆ ಅರ್ಜಿ ಆಹ್ವಾನ

ರುಡ್ಸೆಟ್ ಸಂಸ್ಥೆಯು ಗ್ರಾಮೀಣ ನಿರುದ್ಯೋಗಿ ಯುವತಿಯರಿಗಾಗಿ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿಯನ್ನು ನವೆಂಬರ್ 5 ರಿಂದ ಆಯೋಜಿಸಿದೆ. ಇದು ವಸತಿಯುತವಾಗಿದ್ದು, ಊಟ ಮತ್ತು ವಸತಿ ಉಚಿತ. 18-45 ವರ್ಷ ವಯಸ್ಸಿನ, ಕನ್ನಡ ಬಲ್ಲ, ಬಿಪಿಎಲ್ ಕಾರ್ಡ್‌ ಹೊಂದಿರುವವರಿಗೆ ಆದ್ಯತೆ.

Read Full Story
07:25 PM (IST) Sep 23

karnataka news liveಸರ್ಕಾರಿ ನೌಕರರಿಗೆ ಗುಡ್ ನ್ಯೂಸ್; ಅ.1ರಿಂದ ನಗದುರಹಿತ ಚಿಕಿತ್ಸೆ ನೀಡುವ 'ಆರೋಗ್ಯ ಸಂಜೀವಿನಿ' ಜಾರಿ

ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ 'ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ' (KASS) ಅಕ್ಟೋಬರ್ 1, 2025 ರಿಂದ ಜಾರಿಗೆ ಬರಲಿದೆ. ಈ ಯೋಜನೆಗಾಗಿ ನೌಕರರ ವೇತನದಿಂದ ಗ್ರೂಪ್‌ಗೆ ಅನುಗುಣವಾಗಿ ಮಾಸಿಕ ವಂತಿಕೆ ಕಡಿತಗೊಳಿಸಲಾಗುವುದು.

Read Full Story
07:05 PM (IST) Sep 23

karnataka news liveರೋಡಲ್ಲಿ ರೀಲ್ಸ್ ಮಾಡ್ಕೊಂಡಿದ್ದ ಸುಂದರಿ ಈಗ ಟಾಪ್ ಹೀರೋಯಿನ್; ಕಾಲ್‌ಶೀಟ್‌ಗೆ ಡೈರೆಕ್ಟರ್ಸ್ ವೇಟಿಂಗ್!

ರೋಡ್, ರೋಡಲ್ಲಿ ರೀಲ್ಸ್ ಮಾಡುತ್ತಾ ಸಾಮಾಜಿಕ ಮಾಧ್ಯಮದಲ್ಲಿ ಶೇರ್ ಮಾಡುತ್ತಿದ್ದ ಯುವತಿ ಇದೀಗ ಸ್ಟಾರ್ ನಟಿ. ಎಂಥಾ ಗ್ಲಾಮರ್‌ಗೂ ಸೈ ಎಂದ ನಟಿ ಚಿತ್ರರಂಗದಲ್ಲಿ ಕಿಚ್ಚೆಬ್ಬಿಸಿದ್ದಾಳೆ. ಈ ನಟಿಗಾಗಿ ನಿರ್ದೇಶಕರು ಕಾಲ್‌ಶೀಟ್‌ಗೆ ವೇಟಿಂಗ್ ಮಾಡ್ತಿದ್ದಾರೆ. ಕನ್ನಡ ಡೈರೆಕ್ಟರ್ಸ್ ಕಾಯ್ತಿದ್ದಾರೆ.

Read Full Story
06:36 PM (IST) Sep 23

karnataka news liveSudeep ಮಡಿಲಿನಲ್ಲಿ ಮಗುವಾಗಿ ಅಮ್ಮ - ಅದ್ಭುತ ಕಲೆಗೆ ಕಿಚ್ಚ ಭಾವುಕ- ಚಪ್ಪಲಿ ಬಿಟ್ಟು ಕೃತಿ ಸ್ವೀಕಾರ...

ಕಲಾವಿದ ಭರತ್ ಭೂಪತಿ ಅವರು, ನಟ ಸುದೀಪ್ ಅವರ ನಿಧನರಾದ ತಾಯಿ ಸರೋಜಾ ಅವರ ಚಿತ್ರವನ್ನು ರಚಿಸಿದ್ದಾರೆ. ಈ ಚಿತ್ರದಲ್ಲಿ ತಾಯಿ ಮಗನ ಮಡಿಲಲ್ಲಿ ಮಲಗಿದ್ದು, ಇದನ್ನು ಸ್ವೀಕರಿಸಿದ ಸುದೀಪ್ ಅರೆಕ್ಷಣ ಭಾವುಕರಾದರು. ತಮ್ಮ ತಾಯಿಯ ಬಗ್ಗೆ ಸುದೀಪ್ ಹೊಂದಿದ್ದ ಪ್ರೀತಿ ಈ ಲೇಖನ ವಿವರಿಸುತ್ತದೆ.

Read Full Story
06:32 PM (IST) Sep 23

karnataka news liveಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರ ವೇಷದಲ್ಲಿ ತಮಿಳುನಾಡು ಕಳ್ಳರು; ಶ್ರೀಗಂಧ ಸಮೇತ ಸಿಕ್ಕಿಬಿದ್ದರು!

ಮಹದೇಶ್ವರ ಬೆಟ್ಟಕ್ಕೆ ಭಕ್ತರ ಸೋಗಿನಲ್ಲಿ ಬಂದು ಶ್ರೀಗಂಧ ಕಳ್ಳಸಾಗಣೆ ಮಾಡುತ್ತಿದ್ದ ತಮಿಳುನಾಡು ಮೂಲದ ಇಬ್ಬರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ, ಓರ್ವ ಬಾಲಕ ಸೇರಿದಂತೆ ಇಬ್ಬರು ಸಿಕ್ಕಿಬಿದ್ದಿದ್ದು, ಅವರಿಂದ ಅಪಾರ ಪ್ರಮಾಣದ ಶ್ರೀಗಂಧದ ತುಂಡುಗಳ ವಶ.

Read Full Story
06:21 PM (IST) Sep 23

karnataka news liveಬೆಂಗಳೂರಿನಲ್ಲಿ ಒಂದು ರಸ್ತೆ ಗುಂಡಿ ಮುಚ್ಚಲು 5 ಲಕ್ಷ ಖರ್ಚು ಮಾಡ್ತಿದ್ಯಾ ಸರ್ಕಾರ?

Govt Spending ₹5 Lakh Per Bengaluru Pothole ಬೆಂಗಳೂರಿನ ರಸ್ತೆಗುಂಡಿಗಳನ್ನು ಮುಚ್ಚಲು ಸರ್ಕಾರ ₹750 ಕೋಟಿ ಮೀಸಲಿಟ್ಟಿದೆ. ಆದರೆ, ಪ್ರತಿ ಗುಂಡಿಗೆ ₹5 ಲಕ್ಷ ಖರ್ಚು ಮಾಡಲಾಗುತ್ತಿದೆ ಎಂಬ ಲೆಕ್ಕಾಚಾರವು ಪಾರದರ್ಶಕತೆ ಮತ್ತು ಕಾಮಗಾರಿಯ ಗುಣಮಟ್ಟದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Read Full Story
05:59 PM (IST) Sep 23

karnataka news liveರಾಕೇಶ್ ಪೂಜಾರಿ ಕಾಂತಾರ ಚಾಪ್ಟರ್-1 ನಗುವಿನ ರಾಯಭಾರಿ; ನಗಿಸುವ ವ್ಯಕ್ತಿ ಜೊತೆಗಿಲ್ಲದಿರುವುದೇ ಬೇಸರ!

'ಕಾಂತಾರ: ಚಾಪ್ಟರ್ 1' ಟ್ರೇಲರ್, ದೈವದ ಮೂಲ, ಕಾಡಿನ ಜನರ ಹೋರಾಟ ಮತ್ತು ನಾಯಕ-ರಾಣಿಯ ಪ್ರೇಮಕಥೆಯ ಸುಳಿವು ನೀಡುತ್ತದೆ. ರಾಜ ಮತ್ತು ಕಾಡಿನ ಜನರ ನಡುವಿನ ಯುದ್ಧ, ದೈವದ ಪ್ರವೇಶ ಹಾಗೂ ಅದ್ಭುತ ದೃಶ್ಯ ವೈಭವವಿದೆ. ಇದರ ನಡುವೆ ಇತ್ತೀಚೆಗೆ ನಿಧನ ಹೊಂದಿದ ರಾಕೇಶ್ ಪೂಜಾರಿ ನಟನಾ ದೃಶ್ಯವೂ ಸದ್ದು ಮಾಡುತ್ತಿದೆ.

Read Full Story
05:54 PM (IST) Sep 23

karnataka news liveನಮ್ಮ ಮನೆಯಲ್ಲೂ ಕನ್ನಡಿ ಇದೇರಿ... Body Shaming ಬಗ್ಗೆ Laskhmi Nivasa ಚಿನ್ನುಮರಿ ಗರಂ....

'ಲಕ್ಷ್ಮೀ ನಿವಾಸ' ಧಾರಾವಾಹಿ ಖ್ಯಾತಿಯ ನಟಿ ಚಂದನಾ ಅನಂತಕೃಷ್ಣ ಅವರು ಬಾಡಿ ಷೇಮಿಂಗ್​ ಮಾಡುವವರಿಗೆ ಖಡಕ್ ಉತ್ತರ ನೀಡಿದ್ದಾರೆ. ದಪ್ಪ, ಸಣ್ಣ ಎಂದು ಟೀಕಿಸುವವರಿಗೆ, ನಮ್ಮ ದೇಹದ ಬಗ್ಗೆ ನಮಗೆ ಅರಿವಿದೆ ಮತ್ತು ನಮ್ಮ ಮನೆಯಲ್ಲೂ ಕನ್ನಡಿ ಇದೆ ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Read Full Story
05:52 PM (IST) Sep 23

karnataka news liveಕಾಂತಾರ ಚಾಪ್ಟರ್ 1 - ರಿಷಬ್ ಶೆಟ್ಟಿ ಸೇರಿದಂತೆ ಪ್ರಮುಖ ಕಲಾವಿದರು ಪಡೆದ ಸಂಭಾವನೆ ಎಷ್ಟು?

ಕಾಂತಾರ ಚಾಪ್ಟರ್ 1 ಚಿತ್ರದ ಬಜೆಟ್ 135 ಕೋಟಿ ಎಂದು ಹೇಳಲಾಗುತ್ತಿದ್ದು, ಚಿತ್ರದ ಪ್ರಮುಖ ಕಲಾವಿದರ ಸಂಭಾವನೆಯ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಪಡೆದ ಸಂಭಾವನೆ ಎಷ್ಟು?

Read Full Story
05:44 PM (IST) Sep 23

karnataka news liveಭಾರತ ತಂಡದಲ್ಲಿ ಕರುಣ್‌ ನಾಯರ್‌ಗೆ ಸಿಗುತ್ತಾ ಇನ್ನೊಂದು ಚಾನ್ಸ್? ಕರುಣ್‌ಗೆ ಹಾದಿಗೆ ಅಡ್ಡಗಾಲು ಹಾಕುತ್ತಿರೋರ್ಯಾರು?

ಇಂಗ್ಲೆಂಡ್ ಪ್ರವಾಸದಲ್ಲಿ ನಿರಾಸೆ ಮೂಡಿಸಿದ ಕರುಣ್ ನಾಯರ್ ಅವರ ವೆಸ್ಟ್ ಇಂಡೀಸ್ ಸರಣಿಯ ಸ್ಥಾನವು ಅನಿಶ್ಚಿತವಾಗಿದೆ. ನಾಲ್ಕು ಪಂದ್ಯಗಳಿಂದ ಕೇವಲ 205 ರನ್ ಗಳಿಸಿ ವಿಫಲರಾದ ಅವರ ಸ್ಥಾನಕ್ಕೆ ದೇವದತ್ ಪಡಿಕ್ಕಲ್, ಶ್ರೇಯಸ್ ಅಯ್ಯರ್, ಮತ್ತು ಸಾಯಿ ಸುದರ್ಶನ್ ಅವರಂತಹ ಆಟಗಾರರು ಪೈಪೋಟಿ ನಡೆಸುತ್ತಿದ್ದಾರೆ.
Read Full Story
05:38 PM (IST) Sep 23

karnataka news liveವಿಜಯಪುರ ವಿಮಾನ ನಿಲ್ದಾಣಕ್ಕೆ ಬಂದ ₹12 ಕೋಟಿಗೊಂದ್ ಫೈರ್ ಇಂಜಿನ್ ವಾಹನ!

ವಿಜಯಪುರ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣಕ್ಕೆ ಆಸ್ಟ್ರಿಯಾದಿಂದ ₹24 ಕೋಟಿ ವೆಚ್ಚದ ಎರಡು ಅತ್ಯಾಧುನಿಕ, ಕಂಪ್ಯೂಟರೀಕೃತ ಅಗ್ನಿಶಾಮಕ ವಾಹನಗಳು ಬಂದಿವೆ. ಈ ವಾಹನಗಳ ಆಗಮನದಿಂದ ವಿಮಾನ ನಿಲ್ದಾಣದ ಸುರಕ್ಷತಾ ಮಾನದಂಡಗಳು ಪೂರ್ಣಗೊಂಡಿದ್ದು, ಪರಿಸರ ಅನುಮತಿ ದೊರೆತ ತಕ್ಷಣ ಉದ್ಘಾಟನೆಗೆ ಸಿದ್ಧವಾಗಲಿದೆ.

Read Full Story
05:37 PM (IST) Sep 23

karnataka news liveಕಾಂಗ್ರೆಸ್ ಸರ್ಕಾರಕ್ಕೆ ಸಮಸ್ಯೆ ತಂದಿಟ್ಟ ಬೆಂಗಳೂರು ಟ್ರಾಫಿಕ್, ಅಜೀಂ ಪ್ರೇಮ್‌ಜೀಗೆ ಪತ್ರ ಬರೆದು ಸಹಾಯ ಕೇಳಿದ ಸಿಎಂ

ಬೆಂಗಳೂರಿನ ತೀವ್ರ ಟ್ರಾಫಿಕ್ ಸಮಸ್ಯೆಯನ್ನು ನಿವಾರಿಸುವ ನಿಟ್ಟಿನಲ್ಲಿ, ಸಿಎಂ ಸಿದ್ದರಾಮಯ್ಯ ಅವರು ವಿಪ್ರೋ ಸಂಸ್ಥಾಪಕ ಅಜೀಂ ಪ್ರೇಮ್‌ಜೀ ಗೆ ಪತ್ರ ಬರೆದಿದ್ದಾರೆ. ಇಬ್ಲೂರು ಜಂಕ್ಷನ್ ಬಳಿಯ ದಟ್ಟಣೆ ಕಡಿಮೆ ಮಾಡಲು, ಪೀಕ್ ಅವರ್ ನಲ್ಲಿ ವಿಪ್ರೋ ಕ್ಯಾಂಪಸ್ ಮೂಲಕ ಸಂಚಾರಕ್ಕೆ ಅವಕಾಶ ನೀಡುವಂತೆ ಕೇಳಿದ್ದಾರೆ 

Read Full Story