07:53 AM (IST) Feb 24

Karnataka News Live 24 February 2026ಬೆಂಗಳೂರಿನ 142 ಕೆರೆಗಳ ನೀರು ಕುಡಿಯಲು ಯೋಗ್ಯವಲ್ಲ - ಮಾಲಿನ್ಯ ನಿಯಂತ್ರಣ ಮಂಡಳಿ ವರದಿ

ಬೆಂಗಳೂರಿನ 142 ಕೆರೆಗಳ ನೀರು ಅತ್ಯಂತ ಕಲುಷಿತಗೊಂಡಿದ್ದು, ಸಂಸ್ಕರಿಸಿದರೂ ಕುಡಿಯಲು ಯೋಗ್ಯವಲ್ಲ. ಬಹುತೇಕ ಕೆರೆಗಳ ನೀರು 'ಡಿ' ಮತ್ತು 'ಇ' ವರ್ಗದಲ್ಲಿದ್ದು, ಕೈಗಾರಿಕಾ ಬಳಕೆಗೆ ಮಾತ್ರ ಸೀಮಿತವಾಗಿದೆ ಮತ್ತು ಕೆಲವು ಕೆರೆಗಳು ಜಲಚರಗಳಿಗೂ ಯೋಗ್ಯವಾಗಿಲ್ಲ ಎಂದು ವರದಿ ತಿಳಿಸಿದೆ.

Read Full Story
07:36 AM (IST) Feb 24

Karnataka News Live 24 February 2026ತಾಳಗುಪ್ಪದವರೆಗೆ ಯಶವಂತಪುರ–ಶಿವಮೊಗ್ಗ ರೈಲು ವಿಸ್ತರಣೆ; ಹೆಚ್ಚುವರಿ ಪ್ರಯಾಣಿಕರ ದಟ್ಟಣೆ

ಶಿರಸಿಯ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. 

Read Full Story
07:27 AM (IST) Feb 24

Karnataka News Live 24 February 2026ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಬಳಿಕ ಸಹಪಾಠಿಯನ್ನ ಕೊಂದ ಅನ್ಯಕೋಮಿನ ಮೂವರು ವಿದ್ಯಾರ್ಥಿಗಳು

ಶಿವಮೊಗ್ಗದ ಸೂಳೆಬೈಲಿನಲ್ಲಿ, ಸಹಪಾಠಿ ಗಿರೀಶ್‌ನ ಸಹಾಯಕ್ಕೆ ಹೋದ 15 ವರ್ಷದ ಸಂಕೇತ್‌ನನ್ನು ಮೂವರು ವಿದ್ಯಾರ್ಥಿಗಳು ಹಲ್ಲೆ ನಡೆಸಿ ಕೊಂದಿದ್ದಾರೆ. ಈ ಘಟನೆಯು ಕೋಮುಘರ್ಷಣೆಯ ಆತಂಕವನ್ನು ಸೃಷ್ಟಿಸಿದ್ದು, ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
Read Full Story