ಸಿಲಿಕಾನ್ ಸಿಟಿಯಲ್ಲಿ ಗೃಹಿಣಿಯೊಬ್ಬರು ಪತಿಯ ಕಿರುಕುಳ ಹಾಗೂ ಅತಿಯಾದ ಅನುಮಾನಕ್ಕೆ ಬೇಸತ್ತು ಆತ್ಮ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ.ಎಸ್.ಸಿ (B.Sc) ಮುಗಿಸಿ ಬದುಕಿನ ದೊಡ್ಡ ಕನಸು ಕಾಣುತ್ತಿದ್ದ 21 ವರ್ಷದ ಪ್ರೇರಣಾ ಎಂಬ ಯುವತಿ ಬದುಕನ್ನು ಅರ್ಧಕ್ಕೇ ಅಂತ್ಯಗೊಳಿಸಿದ ದುರ್ದೈವಿ.
ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ; 21 ವರ್ಷಕ್ಕೆ ಬದುಕು ಮುಗಿಸಿದ ಪ್ರೇರಣಾ

ನಗರ ಪ್ರದೇಶಗಳಲ್ಲಿ ಪ್ರತಿ ವಿದ್ಯಾರ್ಥಿಯಿಂದ 50 ಸಾವಿರ ರು.ಗಿಂತ ಹೆಚ್ಚಿನ ಶುಲ್ಕ ಪಡೆಯುತ್ತಿರುವ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಕಡ್ಡಾಯವಾಗಿ ದತ್ತು ಪಡೆಯಬೇಕು. ಒಂದು ವೇಳೆ ಸರ್ಕಾರಿ ಶಾಲೆ ದತ್ತು ಪಡೆಯದಿದ್ದರೆ ಆ ಖಾಸಗಿ ಶಾಲೆಗಳು ಪಡೆಯುವ ಶುಲ್ಕಕ್ಕೆ ಮಿತಿ (ಕ್ಯಾಪ್) ಹಾಕಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ನನ್ನ ಮಗಳಿಂದಲೂ 3 ಶಾಲೆಗಳು ದತ್ತು
ನಗರದ ಪ್ರದೇಶದ ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿಗಿಂತ ಉತ್ತಮ ಬೋಧಕ ವರ್ಗ ನಿಯೋಜಿಸಿದರೆ ಸಾಕು. ನಾವೂ ಶಿಕ್ಷಣ ಸಂಸ್ಥೆ ಹೊಂದಿದ್ದು, ಗ್ರಾಮೀಣ ಭಾಗದ ಸರ್ಕಾರಿ ಶಾಲೆ ದತ್ತು ಪಡೆಯುವಂತೆ ನನ್ನ ಮಗಳಿಗೆ ಸೂಚಿಸಿದ್ದೆ. ಅದರಂತೆ ಆಕೆ ಮೂರು ಶಾಲೆ ದತ್ತು ಪಡೆದಿದ್ದಾಳೆ.
ಗ್ರಾಮೀಣ ಮೀಸಲಲ್ಲಿ ಅರ್ಧದಷ್ಟು ಸರ್ಕಾರಿ ಶಾಲೆಯವರಿಗೆ ನಿಗದಿ
ಸರ್ಕಾರಿ ನೇಮಕಾತಿ ವೇಳೆ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ಶೇ.15ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಅದರಲ್ಲಿ ಶೇ. 7.5ರಷ್ಟನ್ನು ಸರ್ಕಾರಿ ಶಾಲೆಯಲ್ಲಿ ಓದಿದವರಿಗೆ ನೀಡಲಾಗುವುದು. ಈ ಸಂಬಂಧ ಕಾಯ್ದೆ ತಿದ್ದುಪಡಿ ತರಲು ನಿರ್ಧರಿಸಲಾಗಿದೆ. ಈ ಕುರಿತು ಮುಂದಿನ 100 ದಿನಗಳೊಳಗಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದರು.
Karnataka News Live:ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ; 21 ವರ್ಷಕ್ಕೆ ಬದುಕು ಮುಗಿಸಿದ ಪ್ರೇರಣಾ
Karnataka News Live:ಪಾರಿವಾಳ ಪ್ರಿಯರೇ ಎಚ್ಚರ - ಸಾರ್ವಜನಿಕ, ಖಾಸಗಿ ಸ್ಥಳದಲ್ಲಿ ಕಾಳು ಹಾಕಿದ್ರೆ ಹುಷಾರ್, ಸರ್ಕಾರದ ಹೊಸ ನಿಯಮ ಜಾರಿ!
ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ, ಆರೋಗ್ಯ ಇಲಾಖೆಯು ಎಲ್ಲೆಂದರಲ್ಲಿ ಪಾರಿವಾಳಗಳಿಗೆ ಆಹಾರ ನೀಡುವುದನ್ನು ನಿರ್ಬಂಧಿಸಿ ಸುತ್ತೋಲೆ ಹೊರಡಿಸಿದೆ. ಇನ್ನು ಮುಂದೆ, ನಿಗದಿತ ಸ್ಥಳಗಳಲ್ಲಿ ಮತ್ತು ನಿಗದಿತ ಸಮಯದಲ್ಲಿ ಮಾತ್ರ ಆಹಾರ ನೀಡಲು ಅವಕಾಶವಿದ್ದು, ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆ.
Karnataka News Live:ಭಾರತದ ಬಾಸುಮತಿ ಅಕ್ಕಿಗೆ ಸಂಕಷ್ಟ ತಂದಿಟ್ಟ ಕೊಲ್ಲಿ ದೇಶಗಳ ಯುದ್ಧ, ಟನ್ ಗಟ್ಟಲೆ ಸರಕು ಬಂದರುಗಳಲ್ಲೇ ಬಾಕಿ!
Karnataka News Live:Crigler-Najjar Syndrome - 9 ವರ್ಷದ ಬಾಲಕನ ಅನುವಂಶಿಕ ಕಾಯಿಲೆಗೆ ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಶಸ್ತ್ರಚಿಕಿತ್ಸೆ!
Karnataka News Live:ಟೆಕ್ ಮಹೀಂದ್ರಾ ವಿರುದ್ಧ ರೊಚ್ಚಿಗೆದ್ದ ಮಹಿಳೆ.. ಹೀಗೆ ಕೂರುವ ಹಿಂದಿದೆ ಒಂದು ಕರುಣಾಜನಕ ಕತೆ
Karnataka News Live:RAMAYANA - ಅಮೆರಿಕಾದಲ್ಲಿ ಯಶ್, ಫೋಟೋಗಾಗಿ ಮುಗಿಬಿದ್ದ ಫ್ಯಾನ್ಸ್.. 'ರಾಮಾಯಣ' ಪ್ರಚಾರಕಾರ್ಯ ಇನ್ನೆಷ್ಟು ದಿನ?
ಕಾಮಿಕ್ ಕಾನ್ ಕಾರ್ಯಕ್ರಮದಲ್ಲಿ ರಾಮಾಯಣ ಸಿನಿಮಾವನ್ನು ಪ್ರಚಾರ ಮಾಡುತ್ತಿರುವ ನಟ ಯಶ್ ಹಾಗೂ ರಣಬೀರ್ ಕಪೂರ್ ಅವರು ತಮ್ಮ ಚಿತ್ರತಂಡದೊಂದಿಗೆ ಅಮೆರಿಕಾದಲ್ಲಿ ಬೀಡುಬಿಟ್ಟಿದ್ದಾರೆ. 'ಕಾಮಿಕ್ ಕಾನ್'ನಲ್ಲಿ ರಾಮಾಯಣ ಚಿತ್ರದ ಟ್ರೇಲರ್ ಲಾಂಚ್ ಮಾಡಿದ ಚಿತ್ರತಂಡವು ಅಮೆರಿಕಾದ ಹಲವು ಕಡೆ ಪ್ರಚಾರದಲ್ಲಿ ನಿರತವಾಗಿದೆ.
Karnataka News Live:ಹಿಟ್ ಅಂಡ್ ರನ್ ಕೇಸ್ಗೆ ರೋಚಕ ಟ್ವಿಸ್ಟ್.. ಆಪ್ತಮಿತ್ರನ ಸದ್ದಿಲ್ಲದೇ ಮುಗಿಸಿಬಿಟ್ಟಿದ್ದ ಸ್ನೇಹಿತ..!
ಒಂದೂವರೆ ತಿಂಗಳ ಹಿಂದೆ ನಡೆದ ಆ ಘಟನೆಯನ್ನು ಎಲ್ಲರೂ ಒಂದು ಭೀಕರ ರಸ್ತೆ ಅಪಘಾತ ಎಂದೇ ಭಾವಿಸಿದ್ದರು. ಅಪಘಾತ ನಡೆದ ಜಾಗದಲ್ಲಿ ಪಲ್ಟಿಯಾಗಿದ್ದ ಗೂಡ್ಸ್ ಆಟೋ ಆ ಅನುಮಾನವನ್ನು ಮತ್ತಷ್ಟು ಪುಷ್ಟೀಕರಿಸಿತ್ತು. ಪೊಲೀಸರ ಹದ್ದಿನ ಕಣ್ಣು ಈ ಅಪಘಾತದ ಹಿಂದಿದ್ದ ಕರಾಳ ಕೊಲೆಯ ರಹಸ್ಯವನ್ನು ಬಯಲಿಗೆಳೆದಿದೆ.
Karnataka News Live:ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ - ದೂಧಗಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟು?
Karnataka News Live:ಬೆಂಗಳೂರು - ಉದ್ಘಾಟನೆಗೂ ಮೊದಲೇ ವಾಲಿಕೊಂಡ ಕೂಡ್ಲುನಲ್ಲಿರುವ ವಸತಿ ಕಟ್ಟಡ, 18 ಮಹಡಿ ಅಪಾರ್ಟ್ಮೆಂಟ್ ಕೆಡವಲು ನಿರ್ಧಾರ
Karnataka News Live:ಮನೆ ಖರ್ಚಿಗೆ 5000 ಕೇಳಿದ್ದಕ್ಕೆ ವೃದ್ಧ ಪತ್ನಿಗೆ ಹೊಡೆದ ಪತಿಗೆ ಹೈಕೋರ್ಟ್ ಶಾಕ್, ಇನ್ಮುಂದೆ ತಿಂಗಳಿಗೆ 10,000 ನೀಡುವಂತೆ ಆದೇಶ
ಮನೆ ಖರ್ಚಿಗೆಂದು ಐದು ಸಾವಿರ ರುಪಾಯಿ ಕೇಳಿದ 65 ವರ್ಷದ ಪತ್ನಿಗೆ ಹಲ್ಲೆ ನಡೆಸಿದ 73 ವರ್ಷದ ಪತಿಯ ವಿರುದ್ಧದ ಕ್ರಿಮಿನಲ್ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮಾಡಿದ ತಪ್ಪಿಗೆ ಪ್ರಾಯಶ್ಚಿತ್ತವಾಗಿ, ಪತ್ನಿಗೆ ಮಾಸಿಕ 10 ಸಾವಿರ ರುಪಾಯಿ ನೀಡುವಂತೆ ನ್ಯಾಯಾಲಯ ಪತಿಗೆ ಕಟ್ಟುನಿಟ್ಟಿನ ನಿರ್ದೇಶನ.
Karnataka News Live:ಇಬ್ಬರು ಹೆಣ್ಣುಮಕ್ಕಳಿಗೆ ಭಾರವಾಗಬಾರದೆಂದು ಜೀವ ತ್ಯಾಗ ಮಾಡಿದ ವೃದ್ಧ ದಂಪತಿ!
ಬೆಂಗಳೂರಿನ ಮಂಜುನಾಥನಗರದಲ್ಲಿ, ಅನಾರೋಗ್ಯ ಹಾಗೂ ತಮ್ಮ ಇಬ್ಬರು ಹೆಣ್ಣುಮಕ್ಕಳಿಂದ ಹಣ ಪಡೆದು ಜೀವನ ನಡೆಸುತ್ತಿದ್ದಕ್ಕೆ ಬೇಸತ್ತು ವೃದ್ಧ ದಂಪತಿಗಳು ತಂಪು ಪಾನೀಯದಲ್ಲಿ ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾರೆ. ಈ ಮನಕಲಕುವ ಘಟನೆಯು ಕೆಲಸದಾಕೆ ಮನೆಗೆ ಬಂದಾಗ ಬೆಳಕಿಗೆ ಬಂದಿದೆ.