09:05 AM (IST) Jun 24

Karnataka News Live 24 June 2026ಹೈಕೋರ್ಟ್ ಸರ್ಕ್ಯೂಟ್ ಪೀಠಕ್ಕೆ ಶಿವಮೊಗ್ಗ ಎಲ್ಲ ರೀತಿಯಲ್ಲೂ ಅರ್ಹವಾಗಿದೆ - ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರು ಮಲೆನಾಡು ಮತ್ತು ಮಧ್ಯ ಕರ್ನಾಟಕದ ಜನರಿಗೆ ಅನುಕೂಲವಾಗುವಂತೆ ಶಿವಮೊಗ್ಗದಲ್ಲಿ ಹೈಕೋರ್ಟ್ ಸರ್ಕ್ಯೂಟ್ ಪೀಠ ಸ್ಥಾಪಿಸಲು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪೀಠ ಸ್ಥಾಪನೆಯಾಗುವವರೆಗೂ ಶಿವಮೊಗ್ಗ ಜಿಲ್ಲೆಯನ್ನು ಬೆಂಗಳೂರು ಹೈಕೋರ್ಟ್‌ನ ಪ್ರಧಾನ ಪೀಠದ ವ್ಯಾಪ್ತಿಯಲ್ಲೇ ಮುಂದುವರಿಸುವಂತೆಯೂ ಅವರು ಕೋರಿದ್ದಾರೆ.
Read Full Story
08:58 AM (IST) Jun 24

Karnataka News Live 24 June 2026ED Raid - ಸಚಿವ ಜಾರಕಿಹೊಳಿ ಬಾಮೈದ ಮಂಜುನಾಥ್‌ಗೆ ಇಡಿ ಶಾಕ್ - ಏಕಕಾಲದಲ್ಲಿ 6 ಕಡೆ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಅವರ ಸೋದರಿಯ ಪತಿ ಹಾಗೂ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳಗಾವಿ, ಮೈಸೂರು, ಬೆಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆದಿದೆ.

Read Full Story
08:49 AM (IST) Jun 24

Karnataka News Live 24 June 2026Liquor Mafia - ಗೋವಾ ಮದ್ಯ ಸಾಗಾಟಕ್ಕೆ ಖತರ್ನಾಕ್ ಪ್ಲಾನ್! ಮೇಲೆ ಗೊಬ್ಬರ ಒಳಗೆ ಕೋಟಿ ಮೌಲ್ಯದ ಲಿಕ್ಕರ್

ಗೋವಾದಿಂದ ಮಹಾರಾಷ್ಟ್ರಕ್ಕೆ ಮದ್ಯ ಸಾಗಿಸಲು ಖದೀಮರು ಹಾಕಿದ್ದ ಖತರ್ನಾಕ್ ಪ್ಲಾನ್ ಕೇಳಿದ್ರೆ ನೀವು ಶಾಕ್ ಆಗ್ತೀರಿ. ಹತ್ತಾರು ಡ್ರೈವರ್ಸ್, ಪ್ರತ್ಯೇಕ ಜಿಪಿಎಸ್ ಲೊಕೇಶನ್, ಮೇಲೆ ಎರೆಹುಳ ಗೊಬ್ಬರದ ಮುಸುಕು! ಕರ್ನಾಟಕದ ಮೂರು ಜಿಲ್ಲೆಗಳ ಪೊಲೀಸರ ಕಣ್ಣಿಗೆ ಮಣ್ಣೆರಚಿದ್ದ ಅಂತರರಾಜ್ಯ ಖದೀಮರ ಜಾಲ!

Read Full Story
08:37 AM (IST) Jun 24

Karnataka News Live 24 June 2026ಕೈಗಾ ಹೋರಾಟಕ್ಕೆ ಜಯ - 7 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಎನ್‌ಪಿಸಿ ಅಧಿಕಾರಿಗಳ ಒಪ್ಪಿಗೆ

ಕೈಗಾ ಅಣು ವಿದ್ಯುತ್ ಸ್ಥಾವರ ನಿರ್ಮಾಣಕ್ಕಾಗಿ ಭೂಮಿ ನೀಡಿದ ನಿರಾಶ್ರಿತರ ಹೋರಾಟಕ್ಕೆ ಯಶಸ್ಸು ಸಿಕ್ಕಿದೆ. ಸ್ಥಳೀಯರಿಗೆ ಉದ್ಯೋಗ, ರಸ್ತೆ ನಿರ್ಮಾಣ, ಮತ್ತು ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ಸೇರಿದಂತೆ 7 ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಎನ್‌ಪಿಸಿ ಅಧಿಕಾರಿಗಳು ಒಪ್ಪಿಗೆ ಸೂಚಿಸಿದ್ದಾರೆ.
Read Full Story
08:06 AM (IST) Jun 24

Karnataka News Live 24 June 2026ಬದುಕು ಸಿಹಿ ಮಾಡುವ ಕಹಿ ಬೇವಿನ ಹಣ್ಣು ಆಯುವ ಕಾಯಕ; ದಿನಕ್ಕೆ ಎಷ್ಟು ಸಿಗುತ್ತೆ ಹಣ?

ಬೇವಿನ ಹಣ್ಣಿನ ಸುಗ್ಗಿ ಆರಂಭವಾಗಿದ್ದು, ಗ್ರಾಮೀಣ ಭಾಗದ ಮಹಿಳೆಯರು ಇದನ್ನು ಸಂಗ್ರಹಿಸಿ ಮಾರಾಟ ಮಾಡುವ ಮೂಲಕ ಉಪ ಆದಾಯ ಗಳಿಸುತ್ತಿದ್ದಾರೆ. ಔಷಧೀಯ ಗುಣಗಳನ್ನು ಹೊಂದಿರುವ ಈ ಬೇವಿನ ಬೀಜಗಳು ಸಾವಯವ ಕೃಷಿಯಲ್ಲಿ ಕೀಟನಾಶಕವಾಗಿ ಮತ್ತು ಗೊಬ್ಬರವಾಗಿ ಬಳಕೆಯಾಗುತ್ತಿದ್ದು, ಇತ್ತೀಚೆಗೆ ಇದಕ್ಕೆ ಬೇಡಿಕೆ ಹೆಚ್ಚಾಗಿದೆ.
Read Full Story
07:52 AM (IST) Jun 24

Karnataka News Live 24 June 2026Basavaraj Patil Marum victory - ಮಹಾರಾಷ್ಟ್ರ ವಿಧಾನಪರಿಷತ್‌ಗೆ ಕಲಬುರಗಿಯ ಕನ್ನಡಿಗ ಆಯ್ಕೆ

ಮಹಾರಾಷ್ಟ್ರದ ಹಿರಿಯ ಬಿಜೆಪಿ ನಾಯಕ ಬಸವರಾಜ ಪಾಟೀಲ ಮರುಮ್ ಅವರು ಧಾರಾಶಿವ-ಲಾತೂರ-ಬೀಡ ವಿಧಾನ ಪರಿಷತ್ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಆಳಂದ ಪುರಸಭೆ ಮಾಜಿ ಅಧ್ಯಕ್ಷ ವಿಠ್ಠಲರಾವ್ ಪಾಟೀಲ್ ಅವರ ಸಹೋದರರಾದ ಇವರ ಗೆಲುವನ್ನು ಆಳಂದದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
Read Full Story
07:49 AM (IST) Jun 24

Karnataka News Live 24 June 2026ಪುತ್ತೂರಿನ ಕೂಲಿ ಕಾರ್ಮಿಕ ಪುರಂದರ್‌ಗೆ ಅದೃಷ್ಟ ತಂದು ಕೊಟ್ಟ ದೇಸಿ ನಾಯಿ ‘ಚಿನ್ನು’

ಪುತ್ತೂರಿನಲ್ಲಿ ಕಾಣೆಯಾಗಿದ್ದ 'ಚಿನ್ನು' ಎಂಬ ದೇಸಿ ನಾಯಿಯನ್ನು ಪತ್ತೆ ಹಚ್ಚಿಕೊಟ್ಟ ಕೂಲಿ ಕಾರ್ಮಿಕ ಪುರಂದರ ಅವರಿಗೆ, ಶ್ವಾನಪ್ರೇಮಿ ಮಾಲೀಕ ಗಣೇಶ್ ಭಟ್ ಕೇರ ಅವರು 50 ಸಾವಿರ ರೂಪಾಯಿ ಬಹುಮಾನ ನೀಡಿದ್ದಾರೆ. ಫಿಟ್ಸ್ ಸಮಸ್ಯೆಯಿಂದ ಬಳಲುತ್ತಿದ್ದ ನಾಯಿಯ ಹುಡುಕಾಟಕ್ಕಾಗಿ ಮಾಲೀಕರು ಬಹುಮಾನ ಘೋಷಿಸಿದ್ದರು.

Read Full Story
07:35 AM (IST) Jun 24

Karnataka News Live 24 June 2026Monsoon - ಬರಿದಾಗುತ್ತಿದೆ ಕೃಷ್ಣೆಯ ಒಡಲು - ಮಹಾರಾಷ್ಟ್ರದಿಂದ ಬಿಡುಗಡೆ ಆಗಿಲ್ಲ ಯಾಕೆ ನೀರು?

ಮಹಾರಾಷ್ಟ್ರದಲ್ಲಿ ತೀವ್ರ ನೀರಿನ ಅಭಾವದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ ಕಷ್ಟಕರವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ತಿಳಿಸಿದ್ದಾರೆ. ಆದರೆ, ಬೆಳಗಾವಿ ನಗರಕ್ಕೆ ಜುಲೈ ಅಂತ್ಯದವರೆಗೆ ಹಿಡಕಲ್ ಜಲಾಶಯದಲ್ಲಿ ಸಾಕಷ್ಟು ನೀರಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಅವರು ಜನರಿಗೆ ಭರವಸೆ ನೀಡಿದ್ದಾರೆ.
Read Full Story