06:19 AM (IST) Mar 24

Karnataka News Live 24 March 2026 ಜೀವಂತ ವ್ಯಕ್ತಿ ಹೆಸರಲ್ಲಿ ಮರಣ ಪತ್ರ ನೀಡಿದ ಬಿಬಿಎಂಪಿಗೆ ಹೈಕೋರ್ಟ್‌ ತರಾಟೆ

ಜೀವಂತವಾಗಿರುವ ವ್ಯಕ್ತಿಯ ಹೆಸರಿನಲ್ಲಿ ಬಿಬಿಎಂಪಿ ಮರಣ ಪ್ರಮಾಣ ಪತ್ರ ನೀಡಿದ ಪ್ರಕರಣದಲ್ಲಿ ಹೈಕೋರ್ಟ್‌ ಮಧ್ಯಪ್ರವೇಶಿಸಿದೆ. ಈ ತಪ್ಪಿನಿಂದಾಗಿ ಪಡಿತರ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಸಂತ್ರಸ್ತರು ನ್ಯಾಯಾಲಯದ ಮೊರೆ ಹೋಗಿದ್ದರು. ಕೂಡಲೇ ಪ್ರಮಾಣಪತ್ರ ರದ್ದುಪಡಿಸುವಂತೆ ನ್ಯಾಯಾಲಯವು ಬಿಬಿಎಂಪಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ.
Read Full Story
06:14 AM (IST) Mar 24

Karnataka News Live 24 March 2026 ಬಾಗಲಕೋಟೆಯಲ್ಲಿ ಕೈ-ಕಮಲ ಶಕ್ತಿ ಪ್ರದರ್ಶನ; ಕಣ್ಣೀರಿಟ್ಟು ಮಂಡಿಯೂರಿ ಮತಕೇಳಿದ ಮೇಟಿ ಮಕ್ಕಳು

ಬಾಗಲಕೋಟೆ ವಿಧಾನಸಭೆ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನದಂದು, ಕಾಂಗ್ರೆಸ್ ಅಭ್ಯರ್ಥಿ ಉಮೇಶ ಮೇಟಿ ಮತ್ತು ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಸಿದರು. ಬೃಹತ್ ಮೆರವಣಿಗೆಗಳನ್ನು ನಡೆಸುವ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿ, ತಮ್ಮ ಶಕ್ತಿಯನ್ನು ಪ್ರದರ್ಶಿಸಿದವು.

Read Full Story
05:54 AM (IST) Mar 24

Karnataka News Live 24 March 2026 ಹೋಟೆಲ್‌ಗಳಿಗೆ ಶೇ.50 ರಷ್ಟು ಗ್ಯಾಸ್‌ ಪೂರೈಕೆ ಪುನರಾರಂಭಿಸಲು ಕೇಂದ್ರ ಸರ್ಕಾರ ಆದೇಶ

ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ವಾಣಿಜ್ಯ ಎಲ್‌ಪಿಜಿ ಪೂರೈಕೆ ಕಡಿತಗೊಂಡಿದ್ದು, ರಾಜ್ಯದ ಹೋಟೆಲ್‌ಗಳು ಮುಚ್ಚುವ ಅಥವಾ ಸೌದೆ ಒಲೆ ಬಳಸುವ ಸ್ಥಿತಿಗೆ ತಲುಪಿವೆ. ಹೋಟೆಲ್‌ ಮಾಲೀಕರ ಸಂಘದ ಮನವಿ ಮೇರೆಗೆ, ಕೇಂದ್ರ ಸರ್ಕಾರವು ಇದೀಗ ಶೇ.50 ರಷ್ಟು ಗ್ಯಾಸ್‌ ಪೂರೈಕೆಯನ್ನು ಪುನರಾರಂಭಿಸಲು ಆದೇಶಿಸಿದೆ.
Read Full Story
05:40 AM (IST) Mar 24

Karnataka News Live 24 March 2026 ಬೆಲೆ ಏರಿಕೆ ನಡುವೆಯೂ ಗದಗ ಜಿಲ್ಲೆಯಲ್ಲಿ ಬರೋಬ್ಬರಿ ₹340 ಕೋಟಿ ಮೊತ್ತದ ಮದ್ಯ ಬಿಕರಿ

2025-26ನೇ ಆರ್ಥಿಕ ವರ್ಷದಲ್ಲಿ, ಸರ್ಕಾರದ ಬೆಲೆ ಏರಿಕೆಯ ಹೊರತಾಗಿಯೂ ಗದಗ ಜಿಲ್ಲೆಯಲ್ಲಿ ಮದ್ಯ ಮಾರಾಟದಿಂದ ದಾಖಲೆಯ ಆದಾಯ ಸಂಗ್ರಹವಾಗಿದೆ. ಲಿಕ್ಕರ್ ಮಾರಾಟದ ಪ್ರಮಾಣ ಸ್ವಲ್ಪ ಕುಸಿದರೂ ಆದಾಯದಲ್ಲಿ ₹35 ಕೋಟಿ ಹೆಚ್ಚಳವಾಗಿದ್ದರೆ, ಬಿಯರ್ ಮಾರಾಟ ಮತ್ತು ಆದಾಯ ಎರಡರಲ್ಲೂ ಕುಸಿತ ಕಂಡುಬಂದಿದೆ. 

Read Full Story
05:27 AM (IST) Mar 24

Karnataka News Live 24 March 2026 ದಾವಣಗೆರೆ ದಕ್ಷಿಣ -ಬಾಗಲಕೋಟೆ ಉಪ ಚುನಾವಣೆ ಕಣ - ತೆರೆಮರೆಯಲ್ಲಿ ಶುರುವಾದ ಅಸಲಿ ಆಟ?

ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ರಂಗೇರಿದೆ. ಬಿಜೆಪಿ ಮತ್ತು ಕಾಂಗ್ರೆಸ್‌ನ ಪ್ರಮುಖ ಅಭ್ಯರ್ಥಿಗಳು ತಮ್ಮ ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಬೃಹತ್ ಮೆರವಣಿಗೆಯೊಂದಿಗೆ ನಾಮಪತ್ರ ಸಲ್ಲಿಸಿದ್ದಾರೆ. 

Read Full Story