ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ ಎಂದು ಡಿ.ಕೆ.ಶಿವಕುಮಾರ್ ಸವಾಲೆಸೆದರು.
- Home
- News
- State
- Karnataka News Live: ಬದ್ಧತೆ ಇದ್ದರೆ ಬನ್ನಿ... ನೀರಾವರಿ ಯೋಜನೆಗೆ ಒಟ್ಟಿಗೆ ಒತ್ತಡ ಹಾಕೋಣ - ಡಿ.ಕೆ.ಶಿವಕುಮಾರ್
Karnataka News Live: ಬದ್ಧತೆ ಇದ್ದರೆ ಬನ್ನಿ... ನೀರಾವರಿ ಯೋಜನೆಗೆ ಒಟ್ಟಿಗೆ ಒತ್ತಡ ಹಾಕೋಣ - ಡಿ.ಕೆ.ಶಿವಕುಮಾರ್

ಬೆಂಗಳೂರು: ಧರ್ಮಸ್ಥಳ ಗ್ರಾಮ ಸುತ್ತಮುತ್ತ ಶವಗಳನ್ನು ಹೂತ ಆರೋಪ ಸಂಬಂಧ ತನಿಖೆ ನಡೆಸಲು ರಚಿಸಿದ್ದ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಶೀಘ್ರ ಚಾರ್ಜ್ಶೀಟ್ ಸಲ್ಲಿಸಲು ರಾಜ್ಯ ಸರ್ಕಾರ ಸೂಚಿಸಿದ್ದು, ವಾರದಲ್ಲಿ ಈ ಕುರಿತ ತನಿಖೆ ಪ್ರಕ್ರಿಯೆ ಪೂರ್ಣಗೊಳ್ಳುವ ಸುಳಿವು ಲಭಿಸಿದೆ. ಪ್ರಕರಣದ ಬಗ್ಗೆ ನಡೆಸಿರುವ ತನಿಖೆಯಲ್ಲಿ ಲಭ್ಯವಾಗಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಸದ್ಯದಲ್ಲೇ ನ್ಯಾಯಾಲಯಕ್ಕೆ ಎಸ್ಐಟಿ ಚಾರ್ಜ್ಶೀಟ್ ಸಲ್ಲಿಕೆ ಮಾಡಲಿದೆ. ರಾಜ್ಯ ಸರ್ಕಾರ ಆದಷ್ಟು ಬೇಗ ತನಿಖೆ ಪೂರ್ಣಗೊಳಿಸಿ ಚಾರ್ಜ್ಶೀಟ್ ಸಲ್ಲಿಸುವಂತೆ ಗೃಹ ಇಲಾಖೆ ಸೂಚಿಸಿದೆ ಎಂದು ಮೂಲಗಳು ತಿಳಿಸಿವೆ.
Karnataka News Live 24 October 2025ಬದ್ಧತೆ ಇದ್ದರೆ ಬನ್ನಿ... ನೀರಾವರಿ ಯೋಜನೆಗೆ ಒಟ್ಟಿಗೆ ಒತ್ತಡ ಹಾಕೋಣ - ಡಿ.ಕೆ.ಶಿವಕುಮಾರ್
Karnataka News Live 24 October 2025ರಾಜ್ಯದಲ್ಲಿ ಅಹಿಂದ ನಾಯಕತ್ವವಿದೆ - ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ರಾಜ್ಯದಲ್ಲಿ ಅಹಿಂದ ನಾಯಕತ್ವ ಇದ್ದೇ ಇದೆ. ಅದು ಇಲ್ಲದೇ ಸಂಘಟನೆ ಮಾಡಲು ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಕಾಕತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
Karnataka News Live 24 October 2025ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದದ್ದು ಕಾಂಗ್ರೆಸ್ಸಿಗರು - ಎಚ್.ಡಿ.ಕುಮಾರಸ್ವಾಮಿ
ಅಧಿಕಾರಕ್ಕಾಗಿ ನಮ್ಮ ಮನೆ ಬಾಗಿಲಿಗೆ ಬಂದಿದ್ದು ಇದೇ ಕಾಂಗ್ರೆಸ್ಸಿಗರು. ಅದಕ್ಕೂ ಮೊದಲು ನಾನು ಬಿಜೆಪಿ ಜತೆ ಸೇರಿ ಸರ್ಕಾರ ರಚನೆ ಮಾಡಿದ್ದು ಅವರಿಗೆ ಗೊತ್ತಿರಲಿಲ್ಲವೇ? ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹರಿಹಾಯ್ದಿದ್ದಾರೆ.
Karnataka News Live 24 October 2025ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ಗೆ ಮದುವೆಯಾ? ಇನ್ಸ್ಟಾ ಪೋಸ್ಟ್ನಿಂದ ಗೊಂದಲಕ್ಕೊಳಗಾದ ಫ್ಯಾನ್ಸ್!
ದಿವಂಗತ ನಟಿ ಶ್ರೀದೇವಿ ಅವರ ಪುತ್ರಿ ಜಾನ್ವಿ ಕಪೂರ್, ತಮ್ಮ ಮದುವೆಯನ್ನು ಖಚಿತಪಡಿಸುವಂತೆ ಇನ್ಸ್ಟಾಗ್ರಾಮ್ನಲ್ಲಿ ಹಾಕಿರುವ ಪೋಸ್ಟ್ ಅಭಿಮಾನಿಗಳಲ್ಲಿ ಗೊಂದಲ ಮೂಡಿಸಿದೆ. ಮದುವೆ ಘೋಷಣೆ ಮಾಡ್ತಾರಾ?
Karnataka News Live 24 October 2025ಕಾಮಗಾರಿ ಹಿನ್ನಲೆಯಲ್ಲಿ ನ.2 ರಿಂದ ಬೆಂಗಳೂರು-ಮಂಗಳೂರು ಹಲವು ರೈಲು ಸಂಚಾರ ರದ್ದು
ಕಾಮಗಾರಿ ಹಿನ್ನಲೆಯಲ್ಲಿ ನ.2 ರಿಂದ ಬೆಂಗಳೂರು-ಮಂಗಳೂರು ಹಲವು ರೈಲು ಸಂಚಾರ ರದ್ದು ಮಾಡಲಾಗಿದೆ. ಸರಿಸುಮಾರು ಒಂದೂವರೆ ತಿಂಗಳು ದಿನಗಳ ಕಾಲ ಕಾಮಗಾರಿ ನಡೆಯಲಿದೆ. ಹೀಗಾಗಿ ಈ ಮಾರ್ಗದಲ್ಲಿ ಸಂಚರಿಸುವ ರೈಲು ಸೇವೆಗಳು ರದ್ದಾಗುತ್ತಿದೆ. ಯಾವ ರೈಲು ಸೇವೆ ರದ್ದಾಗಿದೆ?
Karnataka News Live 24 October 2025Karna Serial - ತ್ಯಾಗಮಯಿ ಕರ್ಣನ ಮೇಲೆ ಮತ್ತೊಂದು ಅಪವಾದ; ನೀಚನ ದುಷ್ಟತನಕ್ಕೆ ವೀಕ್ಷಕರ ಹಿಡಿಶಾಪ
Karnataka News Live 24 October 2025ಸದ್ಯ ಜೆಡಿಎಸ್ ರಾಜ್ಯಾಧ್ಯಕ್ಷರ ಬದಲು ಇಲ್ಲ - ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ
ಸದ್ಯಕ್ಕೆ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಇಲ್ಲ. ಈ ವಿಷಯ ಚರ್ಚೆಗೆ ಬಂದಿಲ್ಲ. ಈಗ ನಾನೇ ಅಧ್ಯಕ್ಷನಾಗಿದ್ದೇನೆ ಎಂದು ಜೆಡಿಎಸ್ನ ಹಾಲಿ ರಾಜ್ಯಾಧ್ಯಕ್ಷರೂ ಆಗಿರುವ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
Karnataka News Live 24 October 2025ಬಿಹಾರದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ - ಸಿ.ಟಿ. ರವಿ
ಬಿಹಾರದಲ್ಲಿ ಎನ್ಡಿಎ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ಜನಾಭಿಪ್ರಾಯ ಎನ್ಡಿಎ ಪರವಾಗಿದೆ ಎಂದರು.
Karnataka News Live 24 October 2025ಮುಂದಿನ ಸಿಎಂ ಹೇಳಿಕೆ ಕೋಲಾಹಲ, ಪುತ್ರನಿಂದ ವಿವರಣೆ ಪಡೆದು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ
ಮುಂದಿನ ಸಿಎಂ ಹೇಳಿಕೆ ಕೋಲಾಹಲ, ಪುತ್ರನಿಂದ ವಿವರಣೆ ಪಡೆದು ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ಸಿದ್ದರಾಮಯ್ಯ ನಿವೃತ್ತಿ ಬಳಿಕ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗಬಹುದು ಅನ್ನೋ ಹೇಳಿಕೆ ಕುರಿತು ಇದೀಗ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
Karnataka News Live 24 October 2025Bigg Boss ವೇಳೆ ಸುದೀಪ್ ಹಿಡಿದಿರೋ ಗ್ಲಾಸ್ನಲ್ಲಿ ಇರೋ ಡ್ರಿಂಕ್ಸ್ ಏನು? ಕಿಚ್ಚನಿಂದ ಕೊನೆಗೂ ಗುಟ್ಟು ರಿವೀಲ್
ಬಿಗ್ ಬಾಸ್ ಪ್ರೊಮೋದಲ್ಲಿ ಕಿಚ್ಚ ಸುದೀಪ್ ಕೈಯಲ್ಲಿದ್ದ ಗ್ಲಾಸ್ನ ಪಾನೀಯದ ಬಗ್ಗೆ ಭಾರೀ ಚರ್ಚೆಯಾಗಿತ್ತು. ಇದೀಗ ವೈರಲ್ ವಿಡಿಯೋವೊಂದರಲ್ಲಿ ಸ್ವತಃ ಸುದೀಪ್ ಅವರೇ ಆ ಗ್ಲಾಸ್ ರಹಸ್ಯವನ್ನು ತೆರೆದಿಟ್ಟಿದ್ದಾರೆ. ಅವರು ಹೇಳಿದ್ದೇನು?
Karnataka News Live 24 October 2025ಸ್ಟಾರ್ ಹೀರೋಗೆ ಡ್ಯಾಡಿ ಅಂದ ನಟಿ.. ಕೊನೆಗೆ ಅವರ ಜೊತೆಯೇ ಹೀರೋಯಿನ್ ಆಗಿ ರೊಮ್ಯಾನ್ಸ್ ಮಾಡಿದ್ರು!
ಒಬ್ಬ ಖ್ಯಾತ ನಟಿ ತಾನು ಅಂಕಲ್, ಡ್ಯಾಡಿ ಅಂತ ಕರೆಯುತ್ತಿದ್ದ ಹೀರೋಗಳ ಜೊತೆಯಲ್ಲೇ ನಾಯಕಿಯಾಗಿ ನಟಿಸಿ ರೊಮ್ಯಾನ್ಸ್ ಮಾಡಿದ್ದಾರೆ. ಅಷ್ಟಕ್ಕೂ ಆ ನಟಿ ಯಾರು? ಆ ಹೀರೋಗಳು ಯಾರು? ಅನ್ನೋದನ್ನು ಈ ಲೇಖನದಲ್ಲಿ ತಿಳಿಯಿರಿ.
Karnataka News Live 24 October 2025ಇನ್ಸ್ಟಾಗ್ರಾಂ ಮೂಲಕ ಪರಿಚಯ,ಹಾವೇರಿಯಲ್ಲಿ ನಾಲ್ವರಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ
ಇನ್ಸ್ಟಾಗ್ರಾಂ ಮೂಲಕ ಪರಿಚಯ,ಹಾವೇರಿಯಲ್ಲಿ ನಾಲ್ವರಿಂದ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತೆ ಗರ್ಭಿಣಿಯಾಗುತ್ತಿದ್ದಂತೆ ಪ್ರಕರಣ ಬೆಳಕಿಗೆ ಬಂದಿದೆ. ಪೋಕ್ಸೋ ಕೇಸ್ ದಾಖಲಾಗಿದೆ.
Karnataka News Live 24 October 2025Karna Serial ರೋಚಕ ಟ್ವಿಸ್ಟ್ - ಮದುಮಗ ತೇಜಸ್ ಕಿಡ್ನಾಪ್- 3 ತಿಂಗಳ ಗಡುವು ಕೇಳಿದ ನಿತ್ಯಾ!
Karnataka News Live 24 October 2025ಸ್ಟಾರ್ ಹೀರೋಗಳ ಲುಕ್ ಬಗ್ಗೆ ಖ್ಯಾತ ಕಾಸ್ಟ್ಯೂಮ್ ಡಿಸೈನರ್ ನೀರಜಾ ಕೋನಾ ಹೇಳಿದ್ದಿಷ್ಟು..
ಖ್ಯಾತ ಕಾಸ್ಟ್ಯೂಮ್ ಡಿಸೈನರ್ ಮತ್ತು ನಿರ್ದೇಶಕಿ ನೀರಜಾ ಕೋನಾ, ಇತ್ತೀಚೆಗೆ ಯೂಟ್ಯೂಬ್ ಸಂದರ್ಶನವೊಂದರಲ್ಲಿ ತಮ್ಮ ವೃತ್ತಿಜೀವನದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಸ್ಟಾರ್ ಹೀರೋಗಳ ಲುಕ್ ಬಗ್ಗೆ ಹಲವು ಪ್ರಮುಖ ಕಾಮೆಂಟ್ಗಳನ್ನು ಮಾಡಿದ್ದಾರೆ. ಆ ವಿವರಗಳೇನು ಎಂದು ಈಗ ತಿಳಿಯೋಣ.
Karnataka News Live 24 October 2025ದಿವ್ಯಾ ಸುರೇಶ್ ಹಿಟ್ ಅಂಡ್ ರನ್ - ಇನ್ಸ್ಟಾಗ್ರಾಮ್ನಲ್ಲಿ ಉಡಾಫೆ ಮಾತಾಡಿದ ನಟಿಗೆ ಶಿಕ್ಷೆ ನೀಡಲು ಆಗ್ರಹ!
Karnataka News Live 24 October 202540 ಕೋಟಿ ಸಂಭಾವನೆ, 1000 ಕೋಟಿ ಆಸ್ತಿ.. ಚಿತ್ರರಂಗ ನನ್ನನ್ನು ಹೊರಹಾಕಿದೆ ಎಂದ ನಟಿ ಯಾರು?
ಆಕೆ ಒಬ್ಬ ಸ್ಟಾರ್ ನಟಿ, ಹೀರೋಗಳಿಗಿಂತ ಹೆಚ್ಚು ಸಂಭಾವನೆ ಪಡೆದ ನಟಿ, ಸುಮಾರು 1000 ಕೋಟಿ ಆಸ್ತಿ ಹೊಂದಿರುವ ಸುಂದರಿ. ಚಿತ್ರರಂಗ ತನ್ನನ್ನು ಹೊರಹಾಕಿದೆ ಎಂದು ಆರೋಪಿಸಿದ ತಾರೆ.. ಸದ್ಯ ಪ್ಯಾನ್ ವರ್ಲ್ಡ್ ಸಿನಿಮಾ ಮಾಡುತ್ತಿರುವ ಈ ನಟಿ ಯಾರೆಂದು ಗೊತ್ತಾ?
Karnataka News Live 24 October 2025ರಿಷಬ್ರದ್ದು ಒನ್ ಮ್ಯಾನ್ ಶೋ... ಕಾಂತಾರ ಚಾಪ್ಟರ್ 1 ಬಗ್ಗೆ ಅಲ್ಲು ಅರ್ಜುನ್ ಸೆನ್ಸೇಷನಲ್ ವಿಮರ್ಶೆ
ಕಾಂತಾರ ಚಾಪ್ಟರ್ 1 ಸಿನಿಮಾ ದೇಶದಾದ್ಯಂತ ಸಂಚಲನ ಸೃಷ್ಟಿಸುತ್ತಿದೆ. ಈ ಚಿತ್ರದ ಬಗ್ಗೆ ಟಾಲಿವುಡ್ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ತಡವಾಗಿ ಪ್ರತಿಕ್ರಿಯಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಸಿನಿಮಾ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
Karnataka News Live 24 October 2025ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಕಾನೂನು ಸುವ್ಯವಸ್ಥೆ ಎನ್ನುವುದೇ ಇಲ್ಲ - ಆರ್.ಅಶೋಕ್
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಕಾನೂನು ಸುವ್ಯವಸ್ಥೆ ಇಲ್ಲವೇ ಇಲ್ಲ. ಗೃಹ ಸಚಿವ ಪರಮೇಶ್ವರ ಅವರಿಗೆ ಏನೇ ಕೇಳಿದರೂ ಗೊತ್ತಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದರು.
Karnataka News Live 24 October 2025ಮೆಣಸಿನ ಪುಡಿಯಲ್ಲಿ ಕಲಬೆರಕೆ ಆಗಿದ್ಯಾ? ಮನೆಯಲ್ಲೇ ಪತ್ತೆ ಹಚ್ಚುವುದು ಹೇಗೆ? ಇಲ್ಲಿದೆ ಸುಲಭದ ವಿಧಾನ
ಇಂದಿನ ಕಲಬೆರಕೆ ಯುಗದಲ್ಲಿ, ಹಣದ ದುರಾಸೆಗಾಗಿ ಮೆಣಸಿನ ಪುಡಿಯಲ್ಲಿಯೂ ಅಪಾಯಕಾರಿ ವಸ್ತುಗಳನ್ನು ಬೆರೆಸಲಾಗುತ್ತಿದೆ, ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಈ ಲೇಖನದಲ್ಲಿ, ನೀರಿನ ಸಹಾಯದಿಂದ, ಕೈಗಳಿಂದ ಉಜ್ಜುವ ಮೂಲಕ ಸುಲಭವಾಗಿ ಪತ್ತೆ ಹಚ್ಚುವುದು ಹೇಗೆಂದು ವಿವರಿಸಲಾಗಿದೆ.
Karnataka News Live 24 October 2025ಮಾಸ್ ಸಿನಿಮಾ ನಿರ್ದೇಶನಕ್ಕಿಳಿದ ಸತ್ಯಪ್ರಕಾಶ್ - ಡಾ. ರಾಜ್ ಮೊಮ್ಮಗ ಧೀರೇನ್ ಹೀರೋ!
ಸಿನಿಮಾ ಬಗ್ಗೆ ವಿವರ ನೀಡಿದ ನಿರ್ದೇಶಕ ಸತ್ಯಪ್ರಕಾಶ್, ಹೊಸ ಸಿನಿಮಾ ಈಗ ಪ್ರಿ ಪ್ರೊಡಕ್ಷನ್ ಹಂತದಲ್ಲಿದೆ. ಸದ್ಯ ಧೀರೇನ್ ಅವರು ಪಬ್ಬಾರ್ ಸಿನಿಮಾ ಶೂಟಿಂಗ್ನಲ್ಲಿದ್ದಾರೆ. ಆ ಕೆಲಸದ ಬಳಿಕ ಈ ಸಿನಿಮಾ ಸೆಟ್ಟೇರಲಿದೆ ಎಂದರು.