54,430 ಅನುಮಾನಾಸ್ಪದ ಪಿಂಚಣಿದಾರರನ್ನು ಸರ್ಕಾರ ಗುರುತಿಸಿದ್ದು, ಸುಳ್ಳು ದಾಖಲೆಗಳ ಶಂಕೆಯ ಮೇಲೆ ಭೌತಿಕ ಪರಿಶೀಲನೆಗೆ ಆದೇಶಿಸಿದೆ. ಈ ಕ್ರಮದಿಂದ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುವ ಆತಂಕ ಎದುರಾಗಿದ್ದು, ಅರ್ಹರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
- Home
- News
- State
- Karnataka News Live: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 54 ಸಾವಿರ ಸಂಶಯ ಪಿಂಚಣಿದಾರರನ್ನು ಗುರುತಿಸಿದ ಸರ್ಕಾರ
Karnataka News Live: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 54 ಸಾವಿರ ಸಂಶಯ ಪಿಂಚಣಿದಾರರನ್ನು ಗುರುತಿಸಿದ ಸರ್ಕಾರ

ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿನ ಸಂಪುಟ ಪುನಾರಚನೆ, ಸಿಎಂ ಬದಲಾವಣೆ ಚರ್ಚೆ ನಡುವೆಯೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಯಲ್ಲಿ ಶುಕ್ರವಾರ ಎಐಸಿಸಿ ಅಧ್ಯಕ್ಷ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ, ಮಹತ್ವದ ಮಾತುಕತೆ ನಡೆಸಿದರು. ಸಹೋದರ ಡಿ.ಕೆ.ಸುರೇಶ್ ಜೊತೆ ಶುಕ್ರವಾರ ಸಂಜೆ ದೆಹಲಿಯ ರಾಜಾಜಿಮಾರ್ಗದಲ್ಲಿರುವ ಖರ್ಗೆಯವರ ನಿವಾಸಕ್ಕೆ ತೆರಳಿದ ಡಿಕೆಶಿ, ಸುಮಾರು ಒಂದೂವರೆ ಗಂಟೆಗಳ ಕಾಲ ಅವರ ನಿವಾಸದಲ್ಲಿ ಕಳೆದರು. ಭೇಟಿ ವೇಳೆ, ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು ಎನ್ನಲಾಗಿದೆ. ಆದರೆ, ಮಾತುಕತೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಡಿಕೆಶಿ ನಿರಾಕರಿಸಿದರು.
Karnataka News Live 25 April 2026ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ 54 ಸಾವಿರ ಸಂಶಯ ಪಿಂಚಣಿದಾರರನ್ನು ಗುರುತಿಸಿದ ಸರ್ಕಾರ
Karnataka News Live 25 April 2026Bagalkote - ಅನೈತಿಕ ಸಂಬಂಧ ಅನುಮಾನ; ಎದೆ, ಹೊಟ್ಟೆ ಭಾಗಕ್ಕೆ ಪತ್ನಿಯನ್ನು ಕೊಂದ ಪತಿ
Karnataka News Live 25 April 2026ಬೆಂಗಳೂರು ಮಧ್ಯೆದಲ್ಲಿ ಡಾ ರಾಜ್ ಸಮಾಧಿಗೆ 2.5 ಎಕರೆ ಭೂಮಿ ಕೊಟ್ಟಿದ್ದು ಸರಿಯಲ್ಲ; ಅಣ್ಣಾವ್ರ ಹುಟ್ಟುಹಬ್ಬದ ನಟ ಚೇತನ್ ಹೇಳಿಕೆ ವಿವಾದ
Karnataka News Live 25 April 2026ಕೆಎಸ್ಟಿಡಿಸಿಯಿಂದ ಬನ್ನೇರುಘಟ್ಟ-ಮುತ್ಯಾಲಮಡು ಪ್ರವಾಸ - ಈ ಪ್ಯಾಕೇಜ್ನ ಸಂಪೂರ್ಣ ಮಾಹಿತಿ
ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಬೇಸಿಗೆ ರಜೆಗಾಗಿ ಬೆಂಗಳೂರಿನಿಂದ ಬನ್ನೇರುಘಟ್ಟ ಮತ್ತು ಮುತ್ಯಾಲಮಡುವು ಪ್ರವಾಸಿ ತಾಣಗಳಿಗೆ ಹೊಸ ಹವಾನಿಯಂತ್ರಿತ ಬಸ್ ಪ್ರವಾಸವನ್ನು ಆರಂಭಿಸಿದೆ. ಈ ಪ್ಯಾಕೇಜ್ನಲ್ಲಿ ಪ್ರಯಾಣ, ಪ್ರವೇಶ ಶುಲ್ಕಗಳು, ಸಫಾರಿ, ಬೋಟಿಂಗ್ ಮತ್ತು ಊಟದ ವ್ಯವಸ್ಥೆ ಸೇರಿದೆ.