ಹಳ್ಳಿಗೇರಿಯಲ್ಲಿ ನಡೆದ ಕ್ಷೇತ್ರ ಕಾರ್ಯಾಗಾರದಲ್ಲಿ, 35ಕ್ಕೂ ಹೆಚ್ಚು ಕೀಟ ಮತ್ತು 28ಕ್ಕೂ ಅಧಿಕ ಜೇಡ ಪ್ರಭೇದಗಳನ್ನು ಗುರುತಿಸಲಾಗಿದೆ. ಈ ಯಶಸ್ವಿ ಕಾರ್ಯಕ್ರಮದ ಫಲವಾಗಿ, ಸ್ಥಳೀಯ ಜೀವವೈವಿಧ್ಯ ದಾಖಲಾತಿಯ ಮಹತ್ವವನ್ನು ಸಾರುವುದರ ಜೊತೆಗೆ, ಅಪರೂಪದ ಕೀಟ ಪ್ರಪಂಚದ ಉದ್ಯಾನ ನಿರ್ಮಾಣಕ್ಕೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ.
- Home
- News
- State
- Karnataka News Live: ಹಳ್ಳಿಗೇರಿ ಪರಿಸರದಲ್ಲಿ 63 ಕೀಟ-ಜೇಡ ಪ್ರಭೇದಗಳ ದಾಖಲೆ - ಬಯಲಾಯ್ತು ಅಪರೂಪದ ರಹಸ್ಯಗಳು
Karnataka News Live: ಹಳ್ಳಿಗೇರಿ ಪರಿಸರದಲ್ಲಿ 63 ಕೀಟ-ಜೇಡ ಪ್ರಭೇದಗಳ ದಾಖಲೆ - ಬಯಲಾಯ್ತು ಅಪರೂಪದ ರಹಸ್ಯಗಳು

ಬೆಂಗಳೂರು: ಕೇಂದ್ರ ಸರ್ಕಾರವು ಅಂಬಾನಿ, ಅದಾನಿ ಗುಲಾಮ ಎಂಬುದು ಈಗಲೂ ನಮ್ಮ ಅಭಿಪ್ರಾಯ. ಆದರೆ ನ್ಯಾಯಯುತವಾಗಿ ರಾಜ್ಯದಲ್ಲಿ ಅವರಿಗೆ ಗುತ್ತಿಗೆ ಸಿಕ್ಕಿದರೆ ನಾವು ಏನೂ ಮಾಡಲಾಗುವುದಿಲ್ಲ. ಅದಾನಿ ಅವರು ನಮ್ಮ ಸರ್ಕಾರಿ ಗುತ್ತಿಗೆದಾರ ಅಷ್ಟೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನ್ಯಾಯಯುತವಾಗಿ ಅದಾನಿ ಅವರಿಗೆ ನಮ್ಮ ಸರ್ಕಾರದ ಪ್ರತಿಷ್ಠಿತ ಯೋಜನೆಯ ಟೆಂಡರ್ ಸಿಕ್ಕಿದೆ. ಹೀಗಾಗಿ ಅವರು ಸೌಜನ್ಯಕ್ಕೆ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿರಬಹುದು ಎಂದು ಸಮರ್ಥಿಸಿಕೊಂಡರು.
ರಾಹುಲ್ ಗಾಂಧಿ ಅವರು ಅಂಬಾನಿ, ಅದಾನಿ ಅವರನ್ನು ಬೈಯುತ್ತಿರುತ್ತಾರೆ ಎಂಬ ಪ್ರಶ್ನೆಗೆ, ‘ಈಗಲೂ ನಮ್ಮ ಅಭಿಪ್ರಾಯಕ್ಕೆ ನಾವು ಬದ್ಧರಿದ್ದೇವೆ. ಕೇಂದ್ರ ಸರ್ಕಾರ ಅಂಬಾನಿ, ಅದಾನಿ ಗುಲಾಮ ಎಂಬುದನ್ನು ಈಗಲೂ ಹೇಳುತ್ತೇವೆ’ ಎಂದರು.
ಅದಾನಿಗೆ ಈಗ ಟೆಂಡರ್ ಸಿಕ್ಕಿದೆ. ಬಿಜೆಪಿ ನಾಯಕರು ಸುರಂಗ ರಸ್ತೆ ಮಾಡಬೇಕು ಎನ್ನುತ್ತಾರೋ ಅಥವಾ ಇಲ್ಲ ಎನ್ನುತ್ತಾರೋ? ಬಿಜೆಪಿ ಸಂಸದರು ಈ ಹಿಂದೆ ಬಾಯಿ ಬಡಿದುಕೊಳ್ಳುತ್ತಿದ್ದರು. ಈಗ ಅವರ ನೆಂಟರಿಗೆ ಸಿಕ್ಕಿದೆ. ನೆಂಟರು, ಬೀಗರು ಟೆಂಡರ್ ಹಾಕಬಹುದು. ನಾವು ಬೇಡ ಎನ್ನಲು ಆಗುತ್ತಾ? ಎಂದು ಪ್ರಶ್ನಿಸಿದರು.
ಅದಾನಿ ಬಗ್ಗೆ ನಮ್ಮ ಅಭಿಪ್ರಾಯ ಏನೇ ಇರಬಹುದು. ನಮ್ಮ ಚಿತ್ತಾಪುರದಲ್ಲಿ ಎಸಿಸಿ ಸಿಮೆಂಟ್ ಫ್ಯಾಕ್ಟರಿ ಖರೀದಿ ಮಾಡಿದ್ದಾರೆ. ನಾನೇನಾದರೂ ಮಾಡಲು ಆಗುತ್ತಾ? ಕಾನೂನು ಪಾಲನೆ ಮಾಡಬೇಕು ಅಷ್ಟೇ.
Karnataka News Live 25 August 2026ಹಳ್ಳಿಗೇರಿ ಪರಿಸರದಲ್ಲಿ 63 ಕೀಟ-ಜೇಡ ಪ್ರಭೇದಗಳ ದಾಖಲೆ - ಬಯಲಾಯ್ತು ಅಪರೂಪದ ರಹಸ್ಯಗಳು
Karnataka News Live 25 August 2026ದೊಡ್ಡಬಳ್ಳಾಪುರ-ದಾಬಸ್ಪೇಟೆ 5000 ಎಕ್ರೆ ಕ್ವಿನ್ ಸಿಟಿಯಲ್ಲಿ ಹೊಸ ಅಧ್ಯಾಯ - MB Patil
KWIN City ದೊಡ್ಡಬಳ್ಳಾಪುರ ಮತ್ತು ದಾಬಸ್ಪೇಟೆ ನಡುವೆ 5000 ಎಕರೆಯಲ್ಲಿ ಅಭಿವೃದ್ಧಿಪಡಿಸುತ್ತಿರುವ ಕ್ವಿನ್ ಸಿಟಿಯಲ್ಲಿ, ಟೊಯೊಟಾ ಸೇರಿದಂತೆ 14 ಅಗ್ರಗಣ್ಯ ಕಂಪನಿಗಳು ಮತ್ತು ಸಂಶೋಧನಾ ಸಂಸ್ಥೆಗಳು ಒಡಂಬಡಿಕೆ ಮಾಡಿಕೊಂಡಿವೆ.