08:13 AM (IST) Feb 25

Karnataka News Live 25 February 2026ರಣಜಿ ಫೈನಲ್ - ಪುಂಡೀರ್ ಶತಕ, ಕರ್ನಾಟಕ ಎದುರು ಬೃಹತ್ ಮೊತ್ತದತ್ತ ಜಮ್ಮು- ಕಾಶ್ಮೀರ

ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಫೈನಲ್‌ನ ಮೊದಲ ದಿನ ಜಮ್ಮು ಮತ್ತು ಕಾಶ್ಮೀರ ತಂಡವು ಕರ್ನಾಟಕದ ವಿರುದ್ಧ ಮೇಲುಗೈ ಸಾಧಿಸಿದೆ. ಶುಭಂ ಸಿಂಗ್ ಪುಂಡೀರ್ ಅವರ ಅಜೇಯ ಶತಕ (117*) ಹಾಗೂ ಯಾವರ್ ಹಸನ್ (88) ಮತ್ತು ಅಬ್ದುಲ್ ಸಮದ್ (52*) ಅವರ ಅರ್ಧಶತಕಗಳ ನೆರವಿನಿಂದ 2 ವಿಕೆಟ್‌ಗೆ 284 ರನ್ ಗಳಿಸಿದೆ.

Read Full Story
08:00 AM (IST) Feb 25

Karnataka News Live 25 February 2026ಇಡೀ ಊರಿಗೆ ಊಟ ಹಾಕಿಸಿ ಎತ್ತಿನ ಹುಟ್ಟುಹಬ್ಬ ಆಚರಿಸಿದ ರೈತ; ಗ್ರಾಮದಲ್ಲಿ ಹಬ್ಬದ ವಾತಾವರಣ

ರೈತ ಉಮೇಶ ಶಿಂದೆ, ತಮ್ಮ 'ಚಂಡ' ಎಂಬ ಎತ್ತಿನ ಮೂರನೇ ವರ್ಷದ ಹುಟ್ಟುಹಬ್ಬವನ್ನು ಊರಿಗೆ ಊಟ ಹಾಕಿಸುವ ಮೂಲಕ ಅದ್ಧೂರಿಯಾಗಿ ಆಚರಿಸಿದ್ದಾರೆ. ಕೇಕ್ ಕತ್ತರಿಸಿ, ಸಿಹಿ ಹಂಚಿ ಸಂಭ್ರಮಿಸಿದ ಈ ಕಾರ್ಯಕ್ರಮದಲ್ಲಿ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು.

Read Full Story
07:39 AM (IST) Feb 25

Karnataka News Live 25 February 2026Rain - ಚರಂಡಿಯಲ್ಲಿ ಕೊಚ್ಚಿ ಹೋಗ್ತಿದ್ದ ಐದು ಪುಟ್ಟ ನಾಯಿ ಮರಿಗಳನ್ನು ರಕ್ಷಿಸಿದ ಮಕ್ಕಳು

ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಒಳಚರಂಡಿಯಲ್ಲಿ ಸಿಲುಕಿದ್ದ ಐದು ನವಜಾತ ನಾಯಿ ಮರಿಗಳನ್ನು ಸ್ಥಳೀಯ ಮಕ್ಕಳು ರಕ್ಷಿಸಿದ್ದಾರೆ. ತಮ್ಮ ಜೀವವನ್ನೂ ಲೆಕ್ಕಿಸದೆ ಈ ಮಕ್ಕಳು ತೋರಿದ ಕರುಣೆ ಮತ್ತು ಧೈರ್ಯಕ್ಕೆ ಸಾರ್ವಜನಿಕರಿಂದ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Read Full Story
07:30 AM (IST) Feb 25

Karnataka News Live 25 February 2026ದಿನಪತ್ರಿಕೆಗಳನ್ನು ಹಂಚುತ್ತಿದ್ದ ಹುಡುಗ ಈಗ ಜಡ್ಜ್

ಕರ್ನಾಟಕ ರಾಜ್ಯ ನ್ಯಾಯಾಂಗ ಸೇವೆಯ ಸಿವಿಲ್ ನ್ಯಾಯಾಧೀಶರಾಗಿ ಆಯ್ಕೆಯಾಗಿರುವ ಶಶಾಂಕ್ ಹೆಚ್ ಅವರಿಗೆ ದಿನಪತ್ರಿಕೆ ವಿತರಕರ ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಕರ್ನಾಟಕ ರಾಜ್ಯ ವೃತ್ತ ಪತ್ರಿಕೆ ವಿತರಕರ ಕ್ಷೇಮಾಭಿವೃದ್ಧಿ ಸಮಿತಿ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

Read Full Story
07:19 AM (IST) Feb 25

Karnataka News Live 25 February 2026ರಕ್ಷಣಾ ಉತ್ಪನ್ನ ಉತ್ಪಾದನೆಗೆ 200 ಎಕರೆ ಪಾರ್ಕ್‌ - ಸಚಿವ ಎಂ.ಬಿ.ಪಾಟೀಲ್

200 ಎಕರೆ ಪ್ರತ್ಯೇಕ ಪಾರ್ಕ್: ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಕರ್ನಾಟಕವನ್ನು ರಕ್ಷಣೆ ಮತ್ತು ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಯಲ್ಲಿ ದೇಶದ ರಾಜಧಾನಿಯನ್ನಾಗಿಸುವ ಗುರಿ ವ್ಯಕ್ತಪಡಿಸಿದ್ದಾರೆ. 

Read Full Story
07:12 AM (IST) Feb 25

Karnataka News Live 25 February 2026ಆಸ್ತಿ ಖಾತಾ ಬದಲು ಈಗ ಸ್ವಯಂಚಾಲಿತ!

ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ ಅಥವಾ ಆಸ್ತಿ ನೋಂದಣಿಯಾದ ಏಳು ದಿನಗಳ ನೋಟಿಸ್‌ ಅವಧಿಯಲ್ಲಿ ಯಾವುದೇ ಆಕ್ಷೇಪಣೆ ಸಲ್ಲಿಕೆಯಾಗದಿದ್ದರೆ ಸ್ವಯಂಚಾಲಿತವಾಗಿ ಖಾತೆ ಬದಲಾವಣೆ ಆಗುವ ಸ್ವಯಂಚಾಲಿತ ಮ್ಯುಟೇಷನ್‌ ವ್ಯವಸ್ಥೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಕಾಸಸೌಧದಲ್ಲಿ ಮಂಗಳವಾರ ಚಾಲನೆ ನೀಡಿದರು.

Read Full Story
07:04 AM (IST) Feb 25

Karnataka News Live 25 February 2026ಆಸ್ತಿ ಖರೀದಿ ಇನ್ನಷ್ಟು ಭಾರ ಸಂಭವ - ಏಪ್ರಿಲ್‌ಗೆ ಹೊಸ ದರ ಜಾರಿ ?

ಸಾಲು-ಸಾಲು ಬೆಲೆ ಏರಿಕೆಗಳ ನಡುವೆ ರಾಜ್ಯ ಸರ್ಕಾರವು ರಾಜ್ಯಾದ್ಯಂತ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೆ ಸಿದ್ಧತೆ ನಡೆಸಿದ್ದು, ಆಸ್ತಿ ಖರೀದಿ ಮತ್ತಷ್ಟು ತುಟ್ಟಿಯಾಗುವ ಸಾಧ್ಯತೆಯಿದೆ.

ಸ್ಥಿರಾಸ್ತಿಗಳ ಮಾರುಕಟ್ಟೆ ದರದ ಆಧಾರದ ಮೇಲೆ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಲು ಈಗಾಗಲೇ ಸಭೆ ನಡೆಸಲಾಗಿದೆ.

Read Full Story