ಮಾ.30ರ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ.
- Home
- News
- State
- Karnataka News Live: ಮಾ.30ರ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಮಳೆ, 17 ಜಿಲ್ಲೆಗಳಿಗೆ ಯೆಲ್ಲೆ ಅಲರ್ಟ್
Karnataka News Live: ಮಾ.30ರ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಮಳೆ, 17 ಜಿಲ್ಲೆಗಳಿಗೆ ಯೆಲ್ಲೆ ಅಲರ್ಟ್

ಇತ್ತೀಚೆಗೆ ವಿಧಾನ ಸಭೆಯಲ್ಲಿ ಅಧಿಕಾರಿಗಳು ಶಾಸಕರ ಪ್ರಶ್ನೆಗೆ ಉತ್ತರ ನೀಡದೆ ಬಾಕಿ ಉಳಿಸಿಕೊಂಡಿದ್ದಕ್ಕೆ ಸ್ಪೀಕರ್ ಯು.ಟಿ.ಖಾದರ್ ತೀವ್ರ ಆಕ್ರೋಶ ವ್ಯಕ್ತ ಪಡಿಸಿ, ಸಭಾತ್ಯಾಗ ಮಾಡಿದ್ದರು. ಇದೇ ವಿಚಾರ ವಿಧಾನ ಪರಿಷತ್ನಲ್ಲೂ ಪುನರಾವರ್ತನೆ ಆಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ ಕಿಡಿಕಾರಿದ್ದಾರೆ. ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಬುಧವಾರದೊಳಗೆ ಉತ್ತರ ನೀಡದಿದ್ದರೆ ಅಂಥ ಅಧಿಕಾರಿ ಗಳ ವಿರುದ್ಧ ತಮ್ಮದೇ ಆದ ರೀತಿಯಲ್ಲಿ ಕ್ರಮ ಕೈಗೊಳ್ಳ ಲಾಗುವುದು. ಈ ಸಂಬಂಧ ತಾವು ಕೊಡುವ ಆದೇಶವನ್ನು ಸರ್ಕಾರ ಪಾಲಿಸಬೇಕು ಎಂದು ಸಭಾಪತಿ ಬಸವರಾಜ ಹೊರಟ್ಟಿ ಕಟುವಾಗಿ ಹೇಳಿದ್ದಾರೆ.
ಪ್ರಶೋತ್ತರ ಕಲಾಪದ ನಂತರ ವಿಷಯ ಪ್ರಸ್ತಾಪಿಸಿದ ಜೆಡಿಎಸ್ನ ಬೋಜೇಗೌಡ ಅವರು ಸದಸ್ಯರು ಕೇಳುವ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರ ನೀಡುತ್ತಿಲ್ಲ. ನಿತ್ಯ ಸಾಕಷ್ಟು ಪ್ರಶ್ನೆಗಳಿಗೆ ಉತ್ತರ ಸಿಗದೆ ಬಾಕಿ ಉಳಿಸಿಕೊಳ್ಳಲಾಗುತ್ತಿದೆ. ಸದನವನ್ನು ಅಧಿಕಾರಿಗಳು ಹಗುರವಾಗಿ ತೆಗೆದು ಕೊಂಡಿದ್ದಾರೆ. ಅಧಿವೇಶನ ಮುಗಿಯುತ್ತಾ ಬರುತ್ತಿದ್ದರೂ ಉತ್ತರ ನೀಡಲು 10-15 ದಿನ ಕಾಲಾವಕಾಶ ಕೇಳುತ್ತಿದ್ದಾರೆ. ಎಂದರು.
ಸದಸ್ಯರ ಸ್ವರ ಮಾತಿಗೆ ಸ್ಪಂದಿಸಿದ ಸಭಾಪತಿ ಹೊರಟ್ಟಿ ಅವರು, ಕಲಾಪ ಮುಗಿದ ನಂತರ ಸಭಾನಾಯಕ, ಪ್ರತಿಪಕ್ಷದ ನಾಯಕ, ಎರಡೂ ಕಡೆಯ ಮುಖ್ಯ ಸಚೇತಕರು ತಮ್ಮ ಕಚೇರಿಗೆ ಬಂದು ಎಲ್ಲ ವಿವರವನ್ನು ತಮಗೆ ತಿಳಿಸಬೇಕು. ಉತ್ತರ ನೀಡದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದರು.
Karnataka News Live ಮಾ.30ರ ವರೆಗೆ ರಾಜ್ಯದಲ್ಲಿ ಗುಡುಗು ಮಿಂಚು ಸಹಿತ ಮಳೆ, 17 ಜಿಲ್ಲೆಗಳಿಗೆ ಯೆಲ್ಲೆ ಅಲರ್ಟ್
Karnataka News Live ವಾಹನ ಮಾಲೀಕರೇ ಎಚ್ಚರ ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭ, ಈ ಬಾರಿ ದಂಡ ದುಬಾರಿ
ವಾಹನ ಮಾಲೀಕರೇ ಎಚ್ಚರ ಬೆಂಗಳೂರಲ್ಲಿ ಮತ್ತೆ ಟೋಯಿಂಗ್ ಆರಂಭ, ಈ ಬಾರಿ ದಂಡ ದುಬಾರಿ, ಎಲ್ಲೆಂದರಲ್ಲಿ ಪಾರ್ಕಿಂಗ್, ನೋ ಪಾರ್ಕಿಂಗ್ನಲ್ಲಿ ವಾಹನ ಪಾರ್ಕಿಂಗ್ ಮಾಡಿದರೆ ನಿಮ್ಮ ವಾಹನ ಟೋಯಿಂಗ್ ಮಾಡಿ ದುಬಾರಿ ದಂಡ ವಿಧಿಸಲಾಗುತ್ತದೆ.
Karnataka News Live ಹುಬ್ಬಳ್ಳಿ-ರಾಮೇಶ್ವರಂ ನಡುವೆ ವಿಶೇಷ ರೈಲು, ಒಟ್ಟು 9 ಟ್ರಿಪ್, ಕರ್ನಾಟಕದ ಈ ಎಲ್ಲಾ ಜಿಲ್ಲೆಗಳಲ್ಲಿ ಹಾದು ಹೋಗಲಿದೆ!
Karnataka News Live 15 ನಿಮಿಷದಲ್ಲಿ ಆರ್ಸಿಬಿ ಉದ್ಘಟನಾ ಪಂದ್ಯದ ಟಿಕೆಟ್ ಸೋಲ್ಡ್ ಔಟ್, ಅಭಿಮಾನಿಗಳ ಆಕ್ರೋಶ
15 ನಿಮಿಷದಲ್ಲಿ ಆರ್ಸಿಬಿ ಉದ್ಘಟನಾ ಪಂದ್ಯದ ಟಿಕೆಟ್ ಸೋಲ್ಡ್ ಔಟ್, ಅಭಿಮಾನಿಗಳ ಆಕ್ರೋಶ ಹೊರಹಾಕಿದ್ದಾರೆ. ನೆಚ್ಚಿನ ತಂಡದ ಪಂದ್ಯ ನೋಡಲು ಕಾತರಗೊಂಡಿದ್ದ ಸಾವಿರಾರು ಅಭಿಮಾನಿಗಳಿಗೆ ಟಿಕೆಟ್ ಸಿಕ್ಕಿಲ್ಲ.
Karnataka News Live ಚಿಕ್ಕಮಗಳೂರು ರೆಸಾರ್ಟ್ನಲ್ಲಿ ನಾಗಾಲ್ಯಾಂಡ್ ಯುವತಿ ದುರಂತ ಅಂತ್ಯ, ಇಬ್ಬರ ಮೇಲೆ ಅನುಮಾನ
ಚಿಕ್ಕಮಗಳೂರು ರೆಸಾರ್ಟ್ನಲ್ಲಿ ನಾಗಾಲ್ಯಾಂಡ್ ಯುವತಿ ದುರಂತ ಅಂತ್ಯ, ಇಬ್ಬರ ಮೇಲೆ ಅನುಮಾನ ವ್ಯಕ್ತವಾಗಿದೆ. ರೆಸಾರ್ಟ್ನಲ್ಲಿ ಕೆಲಸಕ್ಕಿದ್ದ ಯುವತಿಗೆ ಇಬ್ಬರು ಕಿರುಕುಳ ನೀಡುತ್ತಿದ್ದರು ಎಂಬ ಆರೋಪಗಳು ಕೇಳಿಬಂದಿದೆ.
Karnataka News Live ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆ
ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆಯಾಗಿದೆ. ಉದ್ಯಮಿ ಬಳಿಯಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗ ಸಾಕ್ಷ್ಯಗಳು ಲಭ್ಯವಾಗಿದೆ. ಈ ಕುರಿತು ಸ್ಫೋಟಕ ವರದಿ ಇಲ್ಲಿದೆ.