ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಮಂಡ್ಯ ಜಿಲ್ಲೆಯ ಹಲ್ಲೇಗೆರೆ ಭೇಟಿಯ ಹಿನ್ನೆಲೆಯಲ್ಲಿ, ಎಸ್.ಐ.ಕೋಡಿಹಳ್ಳಿ ಗೇಟ್ನಿಂದ ಹಲ್ಲೇಗೆರೆವರೆಗೆ 7.5 ಕಿ.ಮೀ. ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ 11.4 ಕೋಟಿ ರು. ಅನುದಾನವನ್ನು ಅನುಮೋದಿಸಿದೆ.
- Home
- News
- State
- Karnataka News Live: ಬರಾಕ್ ಒಬಾಮಾಗಾಗಿ 11.4 ಕೋಟಿ ರು. ವೆಚ್ಚದಲ್ಲಿ 7.5 ಕಿ.ಮೀ. ಮಂಡ್ಯ ರಸ್ತೆ ಅಭಿವೃದ್ಧಿ
Karnataka News Live: ಬರಾಕ್ ಒಬಾಮಾಗಾಗಿ 11.4 ಕೋಟಿ ರು. ವೆಚ್ಚದಲ್ಲಿ 7.5 ಕಿ.ಮೀ. ಮಂಡ್ಯ ರಸ್ತೆ ಅಭಿವೃದ್ಧಿ

ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆಗೆ ಭಾನುವಾರ ಸುಮಾರು 40 ಸಾವಿರಕ್ಕೂ ಅಧಿಕ ಭಕ್ತರು ಭೇಟಿ ನೀಡಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದಿದ್ದಾರೆ. ರಾಜ್ಯದ ವಿವಿಧ ಭಾಗಗಳಿಂದ ಅಧಿಕ ಸಂಖ್ಯೆಯ ಭಕ್ತರು ಕ್ಷೇತ್ರಕ್ಕೆ ಭೇಟಿ ನೀಡಿದ್ದು, ಸಂಪೂರ್ಣ ದೇವಳದ ಪರಿಸರ ಜಾತ್ರೆಯ ಸಂಭ್ರಮ ನೆನಪಿಸುವಂತಿತ್ತು. ದೇವಸ್ಥಾನದ ಒಳಾಂಗಣ, ಹೊರಾಂಗಣ, ರಥಬೀದಿ ಸೇರಿದಂತೆ ಎಲ್ಲೆಡೆ ಭಕ್ತರು ತುಂಬಿದ್ದರು. ಹಲವರು ವಿಶೇಷವಾಗಿ ಆಶ್ಲೇಷಾಬಲಿ, ನಾಗಪ್ರತಿಷ್ಠೆ ಹಾಗೂ ಸರ್ಪಸಂಸ್ಕಾರ ಸೇವೆ ಸಲ್ಲಿಸಿದರು.

ಕಳೆದೊಂದು ತಿಂಗಳಿನಿಂದಲೂ ಕುಕ್ಕೆಯಲ್ಲಿ ಭಕ್ತರ ಸಂಖ್ಯೆ ಹೆಚ್ಚುತ್ತಿದ್ದು, ಭಕ್ತರ ನಿಯಂತ್ರಣಕ್ಕಾಗಿ ದೇವಸ್ಥಾನದ ಸಿಬ್ಬಂದಿ ಮೆಗಾಫೋನ್ ಬಳಸುತ್ತಿದ್ದಾರೆ.ಥಬೀದಿ ಪಕ್ಕದ ಪ್ರದೇಶ ಸೇರಿದಂತೆ ಕ್ಷೇತ್ರದ ಸುತ್ತಲಿನ ಪಾರ್ಕಿಂಗ್ ಸ್ಥಳಗಳು ಸಂಪೂರ್ಣ ಭರ್ತಿಯಾಗಿದ್ದವು.
Karnataka News Live 25 May 2026ಬರಾಕ್ ಒಬಾಮಾಗಾಗಿ 11.4 ಕೋಟಿ ರು. ವೆಚ್ಚದಲ್ಲಿ 7.5 ಕಿ.ಮೀ. ಮಂಡ್ಯ ರಸ್ತೆ ಅಭಿವೃದ್ಧಿ
Karnataka News Live 25 May 2026Bhatkal - ಅನ್ಯಕೋಮಿನವರಿಂದ ಮುರಿನಕಟ್ಟೆ ಧ್ವಂಸ - ಭಟ್ಕಳ ಪಟ್ಟಣದಲ್ಲಿ ಉದ್ವಿಘ್ನ ಪರಿಸ್ಥಿತಿ
Karnataka News Live 25 May 2026ನೀಟ್ ರದ್ದಾಗಿದ್ದಕ್ಕೆ ಜೀವ ಕಳಕೊಂಡ ವಿದ್ಯಾರ್ಥಿನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ - ಪಾಲಕರಿಗೆ ಸುಳ್ಳು
ನೀಟ್ ಪರೀಕ್ಷೆ ರದ್ದಾದ ಕಾರಣಕ್ಕೆ ಕಲಬುರಗಿಯ ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮ*ಹತ್ಯೆ ಮಾಡಿಕೊಂಡಿದ್ದಾಳೆ ಎಂದು ವರದಿಯಾಗಿತ್ತು. ಆದರೆ, ಪೊಲೀಸ್ ತನಿಖೆಯಲ್ಲಿ ಆಕೆ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗಿದ್ದು, ಈ ವಿಷಯವನ್ನು ಪಾಲಕರಿಂದ ಮುಚ್ಚಿಟ್ಟಿದ್ದಳು ಎಂಬ ಸತ್ಯಾಂಶ ಬೆಳಕಿಗೆ ಬಂದಿದೆ.
Karnataka News Live 25 May 2026ಜವಾಬ್ದಾರಿ ಸರ್ಕಾರವಾಗಿ ಎಸ್ಐಆರ್ ಜಾಗೃತಿ ಮೂಡಿಸುತ್ತಿದ್ದೇವೆ - ಡಿಸಿಎಂ ಡಿಕೆ ಶಿವಕುಮಾರ್
ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆಯಿಂದ (ಎಸ್ಐಆರ್) ಲಕ್ಷಾಂತರ ಮತಗಳು ತೆಗೆದುಹಾಕಲ್ಪಡುವ ಅಪಾಯವಿದ್ದು, ಈ ಬಗ್ಗೆ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.