- Home
- News
- State
- Karnataka News Live: Karna Serial ನಿಧಿಗೆ ಹುಟ್ಟುಹಬ್ಬದ ಸಂಭ್ರಮ - ನಟಿ ಭವ್ಯಾ ಗೌಡ ವಯಸ್ಸೆಷ್ಟು? ಕೈಹಿಡಿವ ಹುಡುಗ ಯಾರು?
Karnataka News Live: Karna Serial ನಿಧಿಗೆ ಹುಟ್ಟುಹಬ್ಬದ ಸಂಭ್ರಮ - ನಟಿ ಭವ್ಯಾ ಗೌಡ ವಯಸ್ಸೆಷ್ಟು? ಕೈಹಿಡಿವ ಹುಡುಗ ಯಾರು?

ಬೆಂಗಳೂರು: ವಿದೇಶದಿಂದ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್ಎ) ಜಾರಿ ನಿರ್ದೇಶನಾಲಯ(ಇ.ಡಿ.)ವು ತನಿಖೆ ನಡೆಸಿ ಪ್ರಮುಖ ಆರೋಪಿ, ನಟಿ ಹರ್ಷವರ್ಧಿನಿ ರನ್ಯಾ ಅಲಿಯಾಸ್ ರನ್ಯಾ ರಾವ್ ಹಾಗೂ ಸಹ ಆರೋಪಿಗಳಾದ ತರುಣ್ ಕೊಂಡೂರು ಮತ್ತು ಸಾಹಿಲ್ ಸಕಾರಿಯಾ ಜೈನ್ ವಿರುದ್ಧ ನಗರದ ಪಿಎಂಎಲ್ಎ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿದೆ.
Karnataka News Live:Karna Serial ನಿಧಿಗೆ ಹುಟ್ಟುಹಬ್ಬದ ಸಂಭ್ರಮ - ನಟಿ ಭವ್ಯಾ ಗೌಡ ವಯಸ್ಸೆಷ್ಟು? ಕೈಹಿಡಿವ ಹುಡುಗ ಯಾರು?
Karnataka News Live:ಮಕ್ಕಳ ಆರೈಕೆ ರಜೆ ಮಗುವಿನ ಹಕ್ಕು - ಹೈಕೋರ್ಟ್
ಮಕ್ಕಳ ಆರೈಕೆ ರಜೆ (ಸಿಸಿಎಲ್) ಮಗುವಿನ ಹಕ್ಕಾಗಿದ್ದು, ಸಿಸಿಎಲ್ ಕೋರಿಕೆ ಬಂದಾಗ ನಿರಾಕರಿಸದೆ ಆದ್ಯತೆ ಮೇರೆಗೆ ರಜೆ ಮಂಜೂರು ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
Karnataka News Live:ಅದೊಂದು ಕಾರಣಕ್ಕಾಗಿ ವಿಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾ ಗೆಲ್ಲಲಿ ಅಂತ ಪ್ರಾರ್ಥಿಸುತ್ತಿದೆ ಟೀಂ ಇಂಡಿಯಾ!
ಅಹಮದಾಬಾದ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್-8 ಹಂತದ ಪಂದ್ಯದಲ್ಲಿಂದು ವೆಸ್ಟ್ ಇಂಡೀಸ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯದ ಫಲಿತಾಂಶದ ಮೇಲೆ ಟೀಂ ಇಂಡಿಯಾ ಕಣ್ಣಿಟ್ಟಿದೆ. ಈ ಮ್ಯಾಚ್ ಹರಿಣಗಳು ಗೆಲ್ಲಲಿ ಎಂದು ಭಾರತ ಪ್ರಾರ್ಥಿಸುತ್ತಿದೆ.
Karnataka News Live:ಹಾಸನ - ಜೀತಕ್ಕಿದ್ದ 18ಮಂದಿ ರಕ್ಷಣೆ, ಕೂಡಿ ಹಾಕಿದ್ದ ಶೆಡ್ನಿಂದ ಓರ್ವ ತಪ್ಪಿಸಿಕೊಂಡಿದ್ದರಿಂದ ಬಯಲಾಯ್ತು ಕರಾಳ ಸತ್ಯ!
ಹಾಸನದಲ್ಲಿ, ಜೀತ ಪದ್ಧತಿಯಡಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳುತ್ತಿದ್ದ 18 ಕಾರ್ಮಿಕರನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ವಿಜಯಪುರದ ವೃದ್ಧೆಯೊಬ್ಬರು ತಮ್ಮ ಮಗನನ್ನು ಜೀತಕ್ಕಿಟ್ಟುಕೊಂಡಿದ್ದಾರೆ ಎಂದು ಮಾಧ್ಯಮಕ್ಕೆ ದೂರು ನೀಡಿದ ನಂತರ ಈ ಕಾರ್ಯಾಚರಣೆ ನಡೆದಿದೆ.
Karnataka News Live:ಹೊಯ್ಸಳರ ಬೇಲೂರು ದೇವಸ್ಥಾನಕ್ಕೂ ಲೂಯಿ ವಿಟಾನ್ ಲಾಂಛನಕ್ಕೂ ಇದೆ ನಂಟು? ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ!
ವಿಶ್ವವಿಖ್ಯಾತ 'ಲೂಯಿ ವಿಟಾನ್' ಬ್ರ್ಯಾಂಡ್ನ ಲಾಂಛನಕ್ಕೂ ಮತ್ತು ಕರ್ನಾಟಕದ ಬೇಲೂರಿನ 12ನೇ ಶತಮಾನದ ಹೊಯ್ಸಳ ಶಿಲ್ಪಕಲೆಗೂ ಇರುವ ಅಚ್ಚರಿಯ ಸಾಮ್ಯತೆ ಜಾಗತಿಕ ಚರ್ಚೆಗೆ ಕಾರಣವಾಗಿದೆ. ಆಸ್ಟ್ರೇಲಿಯಾದ ಇನ್ಫ್ಲುಯೆನ್ಸರ್ ಒಬ್ಬರು ಹಂಚಿಕೊಂಡ ವಿಡಿಯೋ ಈ ಚರ್ಚೆಗೆ ನಾಂದಿ ಹಾಡಿದೆ.
Karnataka News Live:ಪರೀಕ್ಷೆಗೂ ಮುನ್ನ ದ್ವಿತೀಯ PUC ಮತ್ತು SSLC ಪ್ರಶ್ನೆಪತ್ರಿಕೆ ಲೀಕ್ ಆಯ್ತಾ? ಹಣಕ್ಕೆ ಬೇಡಿಕೆ ಇಟ್ಟು ಇನ್ಸ್ಟಾದಲ್ಲಿ ಪೋಸ್ಟ್!
ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆಪತ್ರಿಕೆ ಮಾರಾಟದ ಸುಳ್ಳು ಪೋಸ್ಟ್ಗಳು ಹರಿದಾಡುತ್ತಿವೆ. ವಿದ್ಯಾರ್ಥಿಗಳನ್ನು ಮತ್ತು ಪೋಷಕರನ್ನು ಗುರಿಯಾಗಿಸಿಕೊಂಡು ಹಣ ದೋಚುವ ಈ ಜಾಲದ ಬಗ್ಗೆ ಎಚ್ಚರದಿಂದಿರಲು ಈ ಲೇಖನವು ಎಚ್ಚರಿಸುತ್ತದೆ.
Karnataka News Live:BPL ಕಾರ್ಡ್ ಅನರ್ಹತೆ - ಇಲ್ಲಿದೆ ಮಹತ್ವದ ಅಪ್ಡೇಟ್
ನೆಲಮಂಗಲ ತಾಲೂಕಿನಲ್ಲಿ ಅರ್ಹರ ಬಿಪಿಎಲ್ ಪಡಿತರ ಚೀಟಿಗಳನ್ನು ಅನರ್ಹಗೊಳಿಸದಂತೆ ಅಧಿಕಾರಿಗಳಿಗೆ ತಿಳಿಸಿದ್ದು ಅದರಂತೆ ಸೋಲೂರು ಹೋಬಳಿಯ ರದ್ದುಗೊಳಿಸುವ ಪಟ್ಟಿಯಲ್ಲಿರುವ ಸುಮಾರು 470ಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ಪರಿಶೀಲಿಸಿ ಕ್ರಮ ವಹಿಸಬೇಕೆಂದು ಶಾಸಕ ಶ್ರೀನಿವಾಸ್ ಅಧಿಕಾರಿಗಳಿಗೆ ತಾಕೀತು
Karnataka News Live:ರಣಜಿ ಟ್ರೋಫಿ ಫೈನಲ್ - ಎರಡನೇ ದಿನವೂ ಜಮ್ಮು-ಕಾಶ್ಮೀರ ಪ್ರಾಬಲ್ಯ, 6ಕ್ಕೆ 527 ರನ್!
ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್ ಪಂದ್ಯದ ಎರಡನೇ ದಿನ ಜಮ್ಮು-ಕಾಶ್ಮೀರ ತಂಡ 6 ವಿಕೆಟ್ಗೆ 527 ರನ್ ಗಳಿಸಿ ಬೃಹತ್ ಮೊತ್ತ ಪೇರಿಸಿದೆ. ಶುಭಂ ಪುಂಡೀರ್ ಶತಕ ಹಾಗೂ ಇತರ ಬ್ಯಾಟರ್ಗಳ ಅರ್ಧಶತಕದ ನೆರವಿನಿಂದ ತಂಡ ಬಲಿಷ್ಠ ಸ್ಥಿತಿಯಲ್ಲಿದೆ.
Karnataka News Live:ಪೋಕ್ಸೋ ಕೇಸ್ ಬೆನ್ನಲ್ಲೇ ಹೈದರಾಬಾದ್ನಲ್ಲಿ ತಲೆ ಮರೆಸಿಕೊಂಡ ಖ್ಯಾತ ಸ್ವಾಮೀಜಿ!
ಯಾದಗಿರಿಯ ಶಹಪುರ ತಾಲೂಕಿನ ಖ್ಯಾತ ಸ್ವಾಮೀಜಿ ಮಲ್ಲಿಕಾರ್ಜುನ ಮುತ್ಯಾ, ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯ ವಿಡಿಯೋ ವೈರಲ್ ಆದ ನಂತರ, ಅವರ ವಿರುದ್ಧ 75(2) ಬಿಎನ್ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
Karnataka News Live:ಬೆಂಗಳೂರಿನಲ್ಲಿ ರೌಡಿಶೀಟರ್ ಭೀಕರ ಹತ್ಯೆ, ಹೆತ್ತ ತಾಯಿಯ ಎದುರೇ ಮಾರಾಕಾಸ್ತ್ರಗಳಿಂದ ಕೊಚ್ಚಿ ಹಾಕಿದ್ರು!
Karnataka News Live:ಕಬ್ಬು ಬೆಳೆಗಾರರಿಗೆ ₹ 300 ಕೋಟಿ ಬಿಡುಗಡೆ
ರಾಜ್ಯ ಸರ್ಕಾರ ಘೋಷಣೆ ಮಾಡಿದಂತೆ 2025-26ನೇ ಸಾಲಿನಲ್ಲಿ ರಾಜ್ಯದ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಪೂರೈಕೆ ಮಾಡಿದ ರಾಜ್ಯದ ರೈತರಿಗೆ ಪ್ರತಿ ಟನ್ಗೆ ₹50 ಆರ್ಥಿಕ ನೆರವಿನ ಮೊತ್ತ ಒಟ್ಟು ₹300 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ
Karnataka News Live:ಸ್ವತ್ತುಗಳಿಗೆ ನಕಲಿ ಇ-ಖಾತಾ - ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಆಗ್ರಹ
ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ಅವರು, ಬೆಂಗಳೂರಿನ ಉತ್ತರಹಳ್ಳಿ ಮತ್ತು ಹೆಮ್ಮಿಗೆಪುರ ವಾರ್ಡ್ಗಳಲ್ಲಿ ನಕಲಿ ಇ-ಪಿಐಡಿ ಮತ್ತು ಇ-ಖಾತಾ ಸೃಷ್ಟಿಸಿರುವ ಹಗರಣವನ್ನು ಬಯಲಿಗೆಳೆದಿದ್ದಾರೆ.
Karnataka News Live:ಬೆಂಗಳೂರು ನಗರಕ್ಕೆ 3 ಜಿಲ್ಲೆಯಿಂದಲೇ ಅಧಿಕ ತರಕಾರಿ ಪೂರೈಕೆ!
ಬೆಂಗಳೂರಿಗೆ ಶೇ.90ರಷ್ಟು ತರಕಾರಿ ಪೂರೈಸುವ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ತರಕಾರಿಗಳಲ್ಲಿ ಅಪಾಯಕಾರಿ ಸೀಸ ಮತ್ತು ಕ್ರಿಮಿನಾಶಕ ಅಂಶಗಳು ಪತ್ತೆಯಾಗಿವೆ. ನಗರಕ್ಕೆ ನಿತ್ಯ 700 ಟನ್ಗೂ ಅಧಿಕ ತರಕಾರಿ ಸರಬರಾಜಾಗುತ್ತಿದೆ.