08:12 AM (IST) Jul 26

Karnataka News Live 26 July 2026Indian Oilನಿಂದ 5-10 ಕೆಜಿ ಸಿಲಿಂಡರ್‌ ವಿತರಣೆ; ಬುಕ್ಕಿಂಗ್ ವಾಟ್ಸಪ್ ನಂಬರ್ ಇಲ್ಲಿದೆ

ಇಂಡಿಯನ್‌ ಆಯಿಲ್‌ 'ಎಕ್ಸಟ್ರಾ ಲೈಟ್‌ ನೌ' ಹೆಸರಿನಲ್ಲಿ 10 ಮತ್ತು 5 ಕೆಜಿ ಎಲ್‌ಪಿಜಿ ಸಿಲಿಂಡರ್‌ಗಳ ಎಕ್ಸ್‌ಪ್ರೆಸ್‌ ಸೇವೆಯನ್ನು ಆರಂಭಿಸಿದೆ. ಈ ಸೇವೆಯು ನಗರವಾಸಿಗಳು ಮತ್ತು ಸಣ್ಣ ಕುಟುಂಬಗಳಿಗೆ ಅನುಕೂಲಕರವಾಗಿದ್ದು, ಬುಕ್ಕಿಂಗ್ ಮಾಡಿದ ನಾಲ್ಕು ಗಂಟೆಗಳೊಳಗೆ ಹಗುರವಾದ, ಪಾರದರ್ಶಕ ಸಿಲಿಂಡರ್‌ಗಳನ್ನು ವಿತರಿಸುತ್ತದೆ.
Read Full Story
07:51 AM (IST) Jul 26

Karnataka News Live 26 July 2026Bengaluru - ರಾಮೋಹಳ್ಳಿ ಗೇಟ್‌ನಲ್ಲಿ ನಿರ್ಮಿಸಿದ ರಸ್ತೆ ಕೆಳಸೇತುವೆ ಓಡಾಟಕ್ಕೆ ಮುಕ್ತ

ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ರಾಮೋಹಳ್ಳಿ ರೈಲ್ವೆ ಗೇಟ್‌ನಲ್ಲಿ 8.84 ಕೋಟಿ ರು. ವೆಚ್ಚದಲ್ಲಿ ನಿರ್ಮಿಸಲಾದ ಹೊಸ ರಸ್ತೆ ಕೆಳಸೇತುವೆಯನ್ನು ಉದ್ಘಾಟಿಸಿದರು. ಈ ಯೋಜನೆಯು ಲೆವೆಲ್ ಕ್ರಾಸಿಂಗ್‌ನಿಂದ ಉಂಟಾಗುತ್ತಿದ್ದ ಸಂಚಾರ ದಟ್ಟಣೆಯನ್ನು ನಿವಾರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಿದೆ. ರೈಲ್ವೆ ಇಲಾಖೆಯೇ ಸಂಪೂರ್ಣ ವೆಚ್ಚ ಭರಿಸಿ ಈ ಕಾಮಗಾರಿಯನ್ನು ಪೂರ್ಣಗೊಳಿಸಿದೆ.
Read Full Story
07:48 AM (IST) Jul 26

Karnataka News Live 26 July 2026ತೀರ್ಥಹಳ್ಳಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 60+ ಮಕ್ಕಳು ಅಸ್ವಸ್ಥ!

ಕಲುಷಿತ ಆಹಾರ ಸೇವಿಸಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನ ನ್ಯಾಷನಲ್ ರೆಸಿಡೆನ್ಸಿ ವಸತಿ ಶಾಲೆಯಲ್ಲಿ ನಡೆದಿದೆ.

Read Full Story
07:42 AM (IST) Jul 26

Karnataka News Live 26 July 2026BDA - ಸುಪ್ರೀಂ ತೀರ್ಪಿನ ವಿರುದ್ಧವಾಗಿ ಬಡಾವಣೆ ಅನುಮೋದಿತ ನಕ್ಷೆಯನ್ನೇ ಬದಲಿಸಿದ ಬಿಡಿಎ

ವಿಶ್ವೇಶ್ವರಯ್ಯ ಬಡಾವಣೆಯಲ್ಲಿ, ಅನುಮೋದಿತ ನಕ್ಷೆಯನ್ನು ಬದಲಿಸಿ ನಿವೇಶನ ಹರಾಜು ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಹರಾಜಿನಲ್ಲಿ ಮಾರಾಟವಾದ ಮೂಲೆ ನಿವೇಶನದ ಅಳತೆ ತಪ್ಪಾಗಿದ್ದು, ಇದನ್ನು ಸರಿಪಡಿಸಲು ಎಂಜಿನಿಯರ್‌ಗಳು ಪಕ್ಕದ ನಿವೇಶನದಾರರಿಗೆ ಕಿರುಕುಳ ನೀಡುತ್ತಿದ್ದಾರೆ. ಈ ಅಕ್ರಮದ ಕುರಿತು ಶಾಸಕ ಎಸ್.ಟಿ. ಸೋಮಶೇಖರ್ ಅವರು ಬಿಡಿಎ ಆಯುಕ್ತರಿಗೆ ದೂರು ನೀಡಿದ್ದಾರೆ.

Read Full Story
07:29 AM (IST) Jul 26

Karnataka News Live 26 July 2026ಐಟಿ ಕಂಪನಿಗಳಿರೋ ರಸ್ತೆ ಅಭಿವೃದ್ಧಿಗೆ 450 ಕೋಟಿ ರೂ ಅನುದಾನ - ಸಚಿವ ಕೃಷ್ಣ ಬೈರೇಗೌಡ

ಹೊರವರ್ತುಲ ರಸ್ತೆಯನ್ನು (ಒಆರ್‌ಆರ್) ₹450 ಕೋಟಿ ವೆಚ್ಚದಲ್ಲಿ ಸಮಗ್ರವಾಗಿ ಮೇಲ್ದರ್ಜೆಗೇರಿಸಲು ಸರ್ಕಾರ ನಿರ್ಧರಿಸಿದೆ. ಮೆಟ್ರೋ ಕಾಮಗಾರಿ ಮುಗಿದ ನಂತರ, ಜಂಕ್ಷನ್‌ಗಳು, ಸರ್ವಿಸ್ ರಸ್ತೆಗಳು, ಮತ್ತು ಪಾದಚಾರಿ ಮಾರ್ಗಗಳ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

Read Full Story