07:10 PM (IST) Apr 27

Karnataka News Live 27 April 2026ರಸ್ತೆಗೆ ಮೊಳೆ ಎಸೆದೇ ಲಕ್ಷ ಲಕ್ಷ ದುಡೀತಾರೆ ಇವ್ರು! Nail Trap Mafia ಜಾಲಕ್ಕೆ ಹೈರಾಣಾದ ವಾಹನ ಸವಾರರು

ಬೆಂಗಳೂರಿನಲ್ಲಿ ರಸ್ತೆ ಮೇಲೆ ಮೊಳೆ ಎಸೆದು ವಾಹನಗಳ ಟೈಯರ್ ಪಂಕ್ಚರ್ ಮಾಡುವ ಮಾಫಿಯಾ ಸಕ್ರಿಯವಾಗಿದೆ. ಬಳಿಕ ಸಮೀಪದಲ್ಲೇ ಪಂಕ್ಚರ್ ಅಂಗಡಿ ಇಟ್ಟುಕೊಂಡು, ಸಂಕಷ್ಟಕ್ಕೆ ಸಿಲುಕಿದವರಿಂದಲೇ ಲಕ್ಷಗಟ್ಟಲೆ ಹಣ ದೋಚುತ್ತಿದ್ದಾರೆ. ಹೆಬ್ಬಾಳದಂತಹ ಪ್ರದೇಶಗಳಲ್ಲಿ ಇದು ಅವ್ಯಾಹತವಾಗಿದ್ದರೂ, ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಕ್ರಮ ಕೈಗೊಳ್ಳುವುದು ಕಷ್ಟಕರವಾಗಿದೆ.
Read Full Story
06:27 PM (IST) Apr 27

Karnataka News Live 27 April 2026ಪ್ರಧಾನಿ ನರೇಂದ್ರ ಮೋದಿ ಆಡಳಿತದಲ್ಲಿ ದೇಶ ಸಾಲದಲ್ಲಿ ಮುಳುಗಿದೆ - ಸಚಿವ ಸಂತೋಷ್ ಲಾಡ್

ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಆಡಳಿತಾವಧಿಯಲ್ಲಿ ದೇಶ ಸಾಲದಲ್ಲಿ ಮುಳುಗಿದೆ. 1947ರಲ್ಲಿ ₹55 ಲಕ್ಷ ಕೋಟಿಯಷ್ಟಿದ್ದ ದೇಶದ ಸಾಲ ಇಂದು ₹225 ಲಕ್ಷ ಕೋಟಿಯಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.

Read Full Story
05:40 PM (IST) Apr 27

Karnataka News Live 27 April 2026ಅಂಬಾನಿ ಮನೇಲಿ ಮಂಗಳಾರತಿ ಎತ್ತಿದ ಬ್ಯಾಡ್‌ಗರ್ಲ್;‌ ಗೋವಿಗೆ ಆಹಾರ ಕೊಟ್ಟ Singer Rihanna

Rihanna: ಪಾಪ್ ತಾರೆ ರಿಹಾನಾ ಮುಂಬೈನಲ್ಲಿರುವ ಅಂಬಾನಿ ನಿವಾಸಕ್ಕೆ ಭೇಟಿ ನೀಡಿ, ವಿಶೇಷ ಔತಣದಲ್ಲಿ ಭಾಗಿಯಾಗಿದ್ದಾರೆ. ಇದೇ ವೇಳೆ, ರಿಲಯನ್ಸ್ ರೀಟೇಲ್‌ನ 'ಟೈರಾ' ಪ್ಲಾಟ್‌ಫಾರ್ಮ್ ಮತ್ತು ಸೆಫೊರಾ ಮೂಲಕ ಭಾರತದಲ್ಲಿ ತಮ್ಮ 'ಫೆಂಟಿ ಬ್ಯೂಟಿ' ಬ್ರ್ಯಾಂಡ್ ಅನ್ನು ಅಧಿಕೃತವಾಗಿ ಲಾಂಚ್ ಮಾಡಿದ್ದಾರೆ.

Read Full Story
05:24 PM (IST) Apr 27

Karnataka News Live 27 April 2026ಮಹಿಳಾ ಜನಾಕ್ರೋಶ ಸಭೆಗೆ ಕರೆ - ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ

ನಾರಿಶಕ್ತಿ ವಂದನೆ ಮಸೂದೆಗೆ ವಿರೋಧ ವ್ಯಕ್ತಪಡಿಸಿದ್ದನ್ನು ಖಂಡಿಸಿ ಮೇ 1ರಂದು ಮಹಿಳಾ ಜನಾಕ್ರೋಶ ಸಭೆ ಆಯೋಜಿಸಲಾಗುತ್ತಿದೆ. ಇದು ಮಹಿಳೆಯರ ಬಗ್ಗೆ ಕಾಂಗ್ರೆಸ್‌ ನೀತಿಯನ್ನು ಬಯಲು ಮಾಡುವ ಕಾರ್ಯಕ್ರಮ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

Read Full Story
05:20 PM (IST) Apr 27

Karnataka News Live 27 April 2026'ದೇಶದಲ್ಲಿ ಅನ್ನ, ನೀರಿಗೆ ಹಾಹಾಕಾರ' ಕೋಡಿ ಶ್ರೀಗಳ ಎಚ್ಚರಿಕೆ - ದೇಶಕ್ಕೆ ಕಾದಿದೆಯೇ ಮಹಾ ಸಂಕಷ್ಟ?

ಮದ್ದೂರಿನಲ್ಲಿ ಕೋಡಿ ಮಠದ ಶ್ರೀಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಹವಾಮಾನ ವೈಪರಿತ್ಯದಿಂದ ದೇಶಕ್ಕೆ ಅನ್ನ, ನೀರಿನ ಹಾಹಾಕಾರ ಎದುರಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಆದರೆ, ಈ ಸಂಕಷ್ಟದಿಂದ ಕರ್ನಾಟಕಕ್ಕೆ ಯಾವುದೇ ದೊಡ್ಡ ಸಮಸ್ಯೆ ಉಲ್ಬಣವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Read Full Story
05:00 PM (IST) Apr 27

Karnataka News Live 27 April 2026ಕೆಲಸ ಇದೆ ಎಂದು ಬೀಗಬೇಡ! ಬೃಹತ್‌ ಲಾಭವಿದ್ರೂ, ಉದ್ಯೋಗಿಗಳ ಹೊಟ್ಟೆಪಾಡು ಕಿತ್ತುಕೊಂಡ ದೈತ್ಯ ಕಂಪೆನಿ, ಬ್ಯಾಂಕ್!

ಜಾಗತಿಕ ಕಾರ್ಪೊರೇಟ್ ವಲಯದಲ್ಲಿ ಈಗ AI, 'ಡಿಜಿಟಲ್ ಹವಾ ಜೋರಾಗಿದೆ. ಒಂದು ಕಡೆ ಕಂಪನಿಗಳು ತಾಂತ್ರಿಕವಾಗಿ ಮುಂದುವರಿದು, ಸಂಬಳ ಕೊಡಬೇಕು ಎಂದು ಉದ್ಯೋಗಿಗಳ ವಜಾ ಮಾಡಲಾಗಿದೆ. ಮೆಟಾ, ಮೈಕ್ರೋಸಾಫ್ಟ್, ಒರಾಕಲ್‌ನಂತಹ ಟೆಕ್ ಕಂಪೆನಿಗಳು ಲೇಆಫ್‌ ಮಾಡುತ್ತಿವೆ. ಈಗ ಅಕ್ಸಿಸ್‌ ಬ್ಯಾಂಕ್‌ ಕೂಡ ಲೇಆಫ್‌ ಮಾಡಿದೆ.

Read Full Story
04:51 PM (IST) Apr 27

Karnataka News Live 27 April 2026ಒಂದು ದಿನವೂ ರಜೆ ತೆಗೆದುಕೊಳ್ಳದೇ ಸದಾ ಕೆಲಸ ಮಾಡುತ್ತಿದ್ದ ಶ್ವೇತಾ - ಟೆಕ್ಕಿ ಸಾವಿನ ಬಗ್ಗೆ ಸಹೋದ್ಯೋಗಿ ಹೇಳಿದ್ದೇನು?

ಹಾಸನದ 25 ವರ್ಷದ ಸಾಫ್ಟ್‌ವೇರ್ ಉದ್ಯೋಗಿ ಶ್ವೇತಾ ಹಠಾತ್ ಕುಸಿದು ಬಿದ್ದು ಸಾವನ್ನಪ್ಪಿದ ವಿಚಾರ ಅನೇಕರನ್ನು ದಂಗಾಗುವಂತೆ ಮಾಡಿದೆ. ಕೆಲಸವನ್ನು ನಿರಂತರವಾಗಿ ಪ್ರೀತಿಸುತ್ತಿದ್ದ, ಶ್ವೇತಾ ತಲೆನೋವನ್ನು ನಿರ್ಲಕ್ಷಿಸಿದ್ದಳು ಎಂದು ಅವರ ಸಹೋದ್ಯೋಗಿ ಹೇಳಿದ್ದಾರೆ. 

Read Full Story
04:17 PM (IST) Apr 27

Karnataka News Live 27 April 2026Amazon Now - ಮಂಗಳೂರು, ಮೈಸೂರಿಗೆ ಕಾಲಿಟ್ಟ ದೈತ್ಯ ಗಾತ್ರದ ಅಮೆಜಾನ್‌ ಕಂಪೆನಿ; 2800 ಕೋಟಿ ರೂ ಹೂಡಿಕೆ

Amazon Now 2800 Crore Rupees Investment: ಅಮೆಜಾನ್‌ ಕಂಪೆನಿಯು ಮಂಗಳೂರು, ಮೈಸೂರಿನತ್ತ ಕಾಲಿಟ್ಟಿದೆ. ಹೌದು, ಈ ಕಂಪೆನಿಯು ದೊಡ್ಡ ಮಟ್ಟದಲ್ಲಿ ಹೂಡಿಕೆ ಮಾಡಲು ರೆಡಿಯಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.

Read Full Story
03:38 PM (IST) Apr 27

Karnataka News Live 27 April 2026ಹಾಸನ - ಕುಸಿದು ಬಿದ್ದು ಸಾಫ್ಟ್‌ವೇರ್ ಇಂಜಿನಿಯರ್ 25 ವರ್ಷದ ಶ್ವೇತಾ ಹಠಾತ್ ಸಾವು - ಆಘಾತದಲ್ಲಿ ಪೋಷಕರು

ಹಾಸನದಲ್ಲಿ 25 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಶ್ವೇತಾ ಹಠಾತ್ ಸಾವನ್ನಪ್ಪಿದ್ದಾರೆ. ಮನೆಯಲ್ಲಿ ಕುಸಿದು ಬಿದ್ದ ಅವರು, ಮೆದುಳಿನ ತೀವ್ರ ರಕ್ತಸ್ರಾವದಿಂದಾಗಿ ಕೋಮಾಗೆ ಜಾರಿ ಮೃತಪಟ್ಟಿದ್ದಾರೆ. ಅಂಗಾಂಗ ದಾನಕ್ಕೆ ಪೋಷಕರು ಮುಂದಾದರೂ ಅದು ಸಾಧ್ಯವಾಗಲಿಲ್ಲ.
Read Full Story
02:46 PM (IST) Apr 27

Karnataka News Live 27 April 2026Mamata Banerjee - ಮೋದಿ ಚುರುಮುರಿ, ದೀದಿ ತರಕಾರಿ; ದುಡ್ಡು ಕೊಡಿ ಅಕ್ಕೋ ಎಂದ ವ್ಯಾಪಾರಿ! Video Viral

Mamata Banerjee Vegetable Shopping Video: ಪ್ರಧಾನಿ ಮೋದಿ ನರೇಂದ್ರ ಮೋದಿ ಅವರು ಚುನಾವಣೆ ಪ್ರಚಾರದಲ್ಲಿ ನಿರತರಾಗಿದ್ದಾರೆ. ಇದಾದ ಬಳಿಕ ಮಮತಾ ಬ್ಯಾನರ್ಜಿ ಅವರು ತರಕಾರಿ ತಗೊಂಡು ದುಡ್ಡು ಕೊಡದೆ ಬಂದಿದ್ದಾರೆ. ಈ ವಿಡಿಯೋ ಈಗ ವೈರಲ್‌ ಆಗ್ತಿದೆ.

Read Full Story
02:37 PM (IST) Apr 27

Karnataka News Live 27 April 2026ಆನೇಕಲ್ - ಕೃಷಿ ಹೊಂಡಕ್ಕೆ ಬಿದ್ದು ತಾಯಿ ಮಗು ನಿಗೂಢ ಸಾವು

ಆನೇಕಲ್ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ತಾಯಿ ಲಾವಣ್ಯ ಮತ್ತು ಅವರ 8 ವರ್ಷದ ಮಗಳು ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಸೂರ್ಯಸಿಟಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Read Full Story
01:43 PM (IST) Apr 27

Karnataka News Live 27 April 2026ರಾಜ್ಯದಲ್ಲಿ ಕನ್ನಡ ಬಿಟ್ರೆ ಹೆಚ್ಚು ಮಾತನಾಡೋ ಭಾಷೆ ಯಾವುದು ಗೊತ್ತಾ? ಕುತೂಹಲದ ಅಂಕಿ ಅಂಶ ಬಯಲು

ಬೆಂಗಳೂರಿನಂತಹ ನಗರಗಳಲ್ಲಿ ಕನ್ನಡದ ಬಳಕೆ ಕಡಿಮೆಯಾಗುತ್ತಿರುವ ಬಗ್ಗೆ ಕಳವಳವಿದ್ದರೂ, ಕರ್ನಾಟಕದ 65% ಕ್ಕಿಂತ ಹೆಚ್ಚು ಜನರಿಗೆ ಕನ್ನಡವೇ ಪ್ರಾಥಮಿಕ ಭಾಷೆಯಾಗಿದೆ. ಈ ಲೇಖನವು ರಾಜ್ಯದಲ್ಲಿ ಅತಿ ಹೆಚ್ಚು ಮಾತನಾಡುವ ಕನ್ನಡದ ನಂತರ ಯಾವ್ಯಾವ ಭಾಷೆ ಇವೆ ಎನ್ನುವುದು ಕುತೂಹಲವನ್ನು ತಿಳಿಸುತ್ತದೆ.

Read Full Story
01:35 PM (IST) Apr 27

Karnataka News Live 27 April 2026ಪಿಯುಸಿಯಲ್ಲೂ ಪ್ರಾಚಿ ಟಾಪರ್‌ - ಮುಖದ ಮೇಲಿನ ಕೂದಲಿನ ಕಾರಣಕ್ಕೆ ಟ್ರೋಲ್ ಮಾಡಿದವರಿಗೆ ಅಂಕಗಳ ಉತ್ತರ

10ನೇ ತರಗತಿಯಲ್ಲಿ ಟಾಪರ್ ಆಗಿದ್ದಕ್ಕೆ ತನ್ನ ಮುಖದ ಮೇಲಿನ ಕೂದಲಿನ ಕಾರಣಕ್ಕೆ ಟ್ರೋಲ್ ಆಗಿದ್ದ ಪ್ರಾಚಿ ನಿಗಮ್, ಇದೀಗ ಪಿಯುಸಿಯಲ್ಲೂ 91.2% ಅಂಕ ಗಳಿಸಿ ಸಾಧನೆ ಮಾಡಿದ್ದಾರೆ. ಟ್ರೋಲ್‌ಗಳನ್ನು ಕಡೆಗಣಿಸಿ, ಅಧ್ಯಯನದತ್ತ ಗಮನಹರಿಸಿದ ಅವರ ಯಶೋಗಾಥೆ ಅನೇಕರಿಗೆ ಸ್ಫೂರ್ತಿಯಾಗಿದೆ.

Read Full Story
01:02 PM (IST) Apr 27

Karnataka News Live 27 April 2026ಕೇವಲ 1.59 ತಾಸಲ್ಲಿ 42.195 ಕಿಲೋ ಮೀಟರ್ ಮ್ಯಾರಥಾನ್ ಓಡಿದ ಸಾವೆ! ಹೊಸ ವಿಶ್ವದಾಖಲೆ

ಕೀನ್ಯಾದ ಕ್ರೀಡಾಪಟು ಸಬಾಸ್ಟಿಯನ್‌ ಸಾವೆ ಲಂಡನ್‌ ಮ್ಯಾರಥಾನ್‌ನಲ್ಲಿ 1 ಗಂಟೆ 59 ನಿಮಿಷ, 30 ಸೆಕೆಂಡ್‌ಗಳಲ್ಲಿ ಓಟ ಪೂರ್ಣಗೊಳಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಈ ಮೂಲಕ 2 ಗಂಟೆಯೊಳಗೆ ಮ್ಯಾರಥಾನ್‌ ಪೂರ್ಣಗೊಳಿಸಿದ ಮೊದಲ ಅಥ್ಲೀಟ್‌ ಎನಿಸಿಕೊಂಡಿದ್ದಾರೆ. ಮಹಿಳಾ ವಿಭಾಗದಲ್ಲಿ ಎಥಿಯೋಪಿಯಾದ ಟಿಗ್ಸ್ಟ್ ಅಸ್ಸೆಫಾ ಚಾಂಪಿಯನ್‌ ಆಗಿದ್ದಾರೆ.
Read Full Story
12:51 PM (IST) Apr 27

Karnataka News Live 27 April 2026Bengaluru Employee Termination - ಆಫೀಸ್‌ ನನ್ನ ಲೈಫ್ ಅನ್ಕೊಂಡೆ;‌ ಕೆಲಸದಿಂದಲೇ ತೆಗೆದ್ರು; ಬೆಂಗಳೂರು ಹುಡುಗಿ

Bengaluru Women Nidhi Job Terminate: ಇಂದು ಸಾಕಷ್ಟು ಜನರು ಕಾರ್ಪೋರೇಟ್‌ ಕಂಪೆನಿಗಳಲ್ಲಿ ಕೆಲಸ ಮಾಡುತ್ತಿರುತ್ತಾರೆ. ಒಂದಿನ ತಕ್ಷಣ ಲೇಆಫ್‌ ಅಥವಾ ಟರ್ಮಿನೇಟ್‌ ಎಂದು ಹೇಳಿ ಕೆಲಸದಿಂದ ತೆಗೆದು ಹಾಕಲಾಗುವುದು. ಹೀಗೆ ಟರ್ಮಿನೇಟ್‌ ಆದ ಬೆಂಗಳೂರಿನ ಹುಡುಗಿಯೊಬ್ಬರು ಏನು ತಪ್ಪು ಮಾಡಿದೆ ಎಂದು ಹೇಳಿದ್ದಾರೆ.

Read Full Story
11:57 AM (IST) Apr 27

Karnataka News Live 27 April 2026ಕನ್ನಡ ನಾಡಿನ ಮಕ್ಕಳು ಕನ್ನಡ ಪರೀಕ್ಷೇಲೇ ಫೇಲ್‌ ಕಳವಳಕಾರಿ

ಈ ಬಾರಿಯ SSLC ಪರೀಕ್ಷೆಯಲ್ಲಿ ಐತಿಹಾಸಿಕ ಫಲಿತಾಂಶ ಬಂದಿದ್ದರೂ, ಪ್ರಥಮ ಭಾಷೆ ಕನ್ನಡದಲ್ಲೇ ಸುಮಾರು 19 ಸಾವಿರ ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ. ಇದು ಕನ್ನಡ ಬೋಧನಾ ಕ್ರಮ, ಭಾಷೆಯ ಭವಿಷ್ಯದ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ತಕ್ಷಣದ ಪರಾಮರ್ಶೆಯ ಅಗತ್ಯವನ್ನು ಒತ್ತಿಹೇಳುತ್ತದೆ.

Read Full Story
11:55 AM (IST) Apr 27

Karnataka News Live 27 April 2026'ಮದುವೆ ಬೇಡ, ಮಗು ಬೇಕು ಅಂದ್ರೇನು ತಪ್ಪು?'.. ಕನ್ನಡತಿ ನಿತ್ಯಾ ಮೆನನ್ ಬೋಲ್ಡ್ ಮಾತಿಗೆ ಸಿಕ್ಕಾಪಟ್ಟೆ ಸಂಚಲನ!

ಸಿನಿಮಾದಲ್ಲಿ ಅಷ್ಟೇ ಅಲ್ಲದೆ ನಿಜ ಜೀವನದಲ್ಲೂ ನಿತ್ಯಾ ಮೆನನ್ ಒಬ್ಬ 'ಬೋಲ್ಡ್ ಅಂಡ್ ಬ್ಯೂಟಿಫುಲ್' ಲೇಡಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಬದುಕು ನಿಮ್ಮದು, ನಿರ್ಧಾರವೂ ನಿಮ್ಮದೇ ಎನ್ನುವ ನಿತ್ಯಾ ಮೆನನ್ ಅವರ ಈ ವೈಚಾರಿಕತೆಗೆ ನಿಮ್ಮ ಅಭಿಪ್ರಾಯವೇನು? ಭಿನ್ನ ಅಭಿಪ್ರಾಯಕ್ಕೂ ಬೆಲೆ ಇದೆ, ತಿಳಿಸಿ..

Read Full Story
09:44 AM (IST) Apr 27

Karnataka News Live 27 April 2026ನಾಲ್ವರು ಸಾಗುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ - ಇಬ್ಬರ ದಾರುಣ ಸಾವು, ಯುವತಿ ಕಾಲು ಕಟ್ - ಅಪಘಾತದ ರಭಸಕ್ಕೆ ಛಿದ್ರವಾದ ದೇಹಗಳು

 ಜಾತ್ರೆ ಮುಗಿಸಿ ವಾಪಸಾಗುತ್ತಿದ್ದ ವೇಳೆ ನಾಲ್ವರು ಸಂಚರಿಸುತ್ತಿದ್ದ ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾ ಬಾಲಕಿ ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

Read Full Story
09:01 AM (IST) Apr 27

Karnataka News Live 27 April 2026ಓಪನ್ ಕಿಚನ್‌ಗೆ ವಾಲ್ ಪ್ಯಾನೆಲ್ ಐಡಿಯಾ; ಇನ್ಮುಂದೆ ನಿಮ್ಮ ಅಡುಗೆಮನೆ ಇನ್ನಷ್ಟು ಸ್ಟೈಲಿಶ್

ಓಪನ್ ಕಿಚನ್‌ಗೆ ಸ್ಟೈಲಿಶ್ ಹಾಗೂ ಲಕ್ಸುರಿ ಲುಕ್ ಕೊಡಬೇಕಾ? ಹಾಗಿದ್ರೆ ವುಡನ್, ಮಾರ್ಬಲ್, 3D, ಗ್ಲಾಸ್ ಮತ್ತು ಜಿಯೋಮೆಟ್ರಿಕ್ ವಾಲ್ ಪ್ಯಾನೆಲ್ ಡಿಸೈನ್‌ಗಳನ್ನು ಟ್ರೈ ಮಾಡಿ. ಇವು ನಿಮ್ಮ ಕಿಚನ್ ಹಾಗೂ ಲಿವಿಂಗ್ ಏರಿಯಾವನ್ನು ಹೇಗೆ ಸುಂದರ ಮತ್ತು ಮಾಡರ್ನ್ ಆಗಿ ಮಾಡುತ್ತವೆ ಅಂತ ನೋಡಿ.
Read Full Story
08:49 AM (IST) Apr 27

Karnataka News Live 27 April 2026ಎಂಆರ್‌ಪಿಎಲ್ 4ನೇ ತ್ರೈಮಾಸಿಕದಲ್ಲಿ 119 ಕೋಟಿ ರು. ನಿವ್ವಳ ಲಾಭಾಂಶ- ಕಳೆದ ವರ್ಷ 85 ಚಿಲ್ಲರೆ ಮಾರಾಟದ ಸ್ಟೇಷನ್‌ ಆರಂಭ

ಕೇಂದ್ರ ಸರ್ಕಾರಿ ಸ್ವಾಮ್ಯದ ಎಂಆರ್‌ಪಿಎಲ್ ಕಂಪನಿಯು ತನ್ನ 4ನೇ ತ್ರೈಮಾಸಿಕದಲ್ಲಿ ₹119 ಕೋಟಿ ನಿವ್ವಳ ಲಾಭವನ್ನು ಪ್ರಕಟಿಸಿದೆ. ವಾರ್ಷಿಕ ಲೆಕ್ಕಾಚಾರದಲ್ಲಿ, ನಿವ್ವಳ ಆದಾಯವು ₹1,931 ಕೋಟಿಗೆ ಏರಿಕೆಯಾಗಿದ್ದು, ಕಳೆದ ಹಣಕಾಸು ವರ್ಷದಲ್ಲಿ 85 ಹೊಸ ಚಿಲ್ಲರೆ ಮಾರಾಟ ಕೇಂದ್ರಗಳನ್ನು ಆರಂಭಿಸಲಾಗಿದೆ.
Read Full Story