11:12 PM (IST) Dec 27

Karnataka News Live 27 December 2025MNREGA Row - ಕಾಂಗ್ರೆಸ್‌ಗೆ ಯಾವುದೇ ನೀತಿ ಇಲ್ಲ, ಗದ್ದಲ ಕೇವಲ ರಾಜಕೀಯ - ಶಿವರಾಜ್ ಸಿಂಗ್ ಚೌಹಾಣ್ ಕಿಡಿ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ನರೇಗಾ ಯೋಜನೆ ಕುರಿತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಯೋಜನೆಯಡಿ ಕೆಲಸದ ದಿನಗಳನ್ನು 100 ರಿಂದ 125 ಕ್ಕೆ ಹೆಚ್ಚಿಸಲಾಗಿದೆ ಮತ್ತು ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಅಧಿಕಾರ ನೀಡಿ ಪಾರದರ್ಶಕತೆ ತರಲಾಗಿದೆ ಎಂದರು.

Read Full Story
10:47 PM (IST) Dec 27

Karnataka News Live 27 December 2025ಡೇಂಜರ್ ಡಿಸೆಂಬರ್ - ಧಾರವಾಡದಲ್ಲಿ ಧಗಧಗನೇ ಹೊತ್ತಿ ಉರಿದ ಕಾರು, ಇಬ್ಬರು ಪ್ರಾಣಾಪಾಯದಿಂದ ಪಾರು!

Dharwad Car Catches Fire: ಧಾರವಾಡ ನಗರದಲ್ಲಿ ಚಲಿಸುತ್ತಿದ್ದ ಕಾರೊಂದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ತಕ್ಷಣವೇ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Read Full Story
10:29 PM (IST) Dec 27

Karnataka News Live 27 December 2025ಗುಂಡ್ಲುಪೇಟೆಯಲ್ಲಿ ಹನುಮ ಭಕ್ತರ ಆಕ್ರೋಶ; ಡಿಜೆ ವಶಕ್ಕೆ ಪಡೆದ ಪೊಲೀಸರ ವಿರುದ್ಧ ಭಾರಿ ಪ್ರತಿಭಟನೆ!

ಗುಂಡ್ಲುಪೇಟೆಯಲ್ಲಿ ಹನುಮ ಜಯಂತಿ ಮೆರವಣಿಗೆಯ ನಂತರ, ನಿಗದಿತ ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿ ಬಳಸಿದ್ದಕ್ಕೆ ಪೊಲೀಸರು ಡಿಜೆ ವಾಹನವನ್ನು ವಶಕ್ಕೆ ಪಡೆದರು. ಆಕ್ರೋಶಗೊಂಡ ಹನುಮ ಭಕ್ತರಿಂದ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ. ಒತ್ತಡಕ್ಕೆ ಮಣಿದ ಪೊಲೀಸರು, ಒಂದೂವರೆ ಗಂಟೆ ಬಳಿಕ ವಾಹನ ಬಿಡುಗಡೆ ಮಾಡಿದರು.

Read Full Story
10:06 PM (IST) Dec 27

Karnataka News Live 27 December 2025ಕಾರವಾರ - ಕರಾವಳಿ ಉತ್ಸವದಲ್ಲಿ ಶ್ವಾನಗಳ ದರ್ಬಾರ್ - 25 ತಳಿ ನಾಯಿಗಳಿಂದ ಅದ್ಭುತ ಸಾಹಸ ಪ್ರದರ್ಶನ!

ಕಾರವಾರದ ಕರಾವಳಿ ಉತ್ಸವದ ಅಂಗವಾಗಿ ನಡೆದ ಆಕರ್ಷಕ ಶ್ವೇತ-ವರ್ಣರಂಜಿತ ಶ್ವಾನ ಪ್ರದರ್ಶನದ ಫೋಟೋ ಗ್ಯಾಲರಿ ವರದಿ ಇಲ್ಲಿದೆ.

Read Full Story
09:06 PM (IST) Dec 27

Karnataka News Live 27 December 2025ಬಂಡೀಪುರ - ಹುಲಿ ಪಂಜದ ಒಂದೇ ಏಟಿಗೆ ಉಸಿರು ನಿಲ್ಲಿಸಿದ ವಾಚರ್!

ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ವೀಕ್ಷಕ ಸಣ್ಣ ಹೈದ ಎಂಬುವವರು ಹುಲಿ ದಾಳಿಗೆ ಬಲಿಯಾಗಿದ್ದಾರೆ. 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಇವರ ಮೇಲೆ ಹುಲಿ ಏಕಾಏಕಿ ದಾಳಿ ಮಾಡಿ ಕೊಂದಿದೆ. ಅರಣ್ಯ ಇಲಾಖೆ ಮೃತರ ಕುಟುಂಬಕ್ಕೆ ಪರಿಹಾರ ಮತ್ತು ಉದ್ಯೋಗದ ಭರವಸೆ.

Read Full Story
09:02 PM (IST) Dec 27

Karnataka News Live 27 December 2025ಮಾತೃಭಾಷೆ ಮಾತನಾಡುತ್ತಿಲ್ಲ ಎಂದು 6 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ

ಮಾತೃಭಾಷೆ ಮಾತನಾಡುತ್ತಿಲ್ಲ ಎಂದು 6 ವರ್ಷದ ಮಗಳನ್ನೇ ಕೊಂದ ಪಾಪಿ ತಾಯಿ, ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ. ಆದರೆ ಮಗಳ ಹತ್ಯೆಗೆ ಕಾರಣ ಇದಲ್ಲ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

Read Full Story
08:45 PM (IST) Dec 27

Karnataka News Live 27 December 2025ಸಮಾಜದಲ್ಲಿ ಸಾಮರಸ್ಯ ಸಾಧಿಸಲು ಆಧ್ಯಾತ್ಮಿಕತೆ ಬಹಳ ಸಹಕಾರಿ - ಭಟ್ಟಾರಕ ಶ್ರೀ

ಕುಂದಗೋಳ ತಾಲೂಕಿನ ಹರಲಾಪೂರದಲ್ಲಿ ಮುನಿಶ್ರೀ ಸುಧರ್ಮಸಾಗರರ 33ನೇ ಪುಣ್ಯತಿಥಿ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ಕಾರ್ಯಕ್ರಮ ಜರುಗಿತು. ಸೋಂದಾ ಜೈನ ಮಠದ ಶ್ರೀಗಳು ಅಹಿಂಸೆ, ಸಂಯಮ ಮತ್ತು ತಪದಿಂದ ಆಧ್ಯಾತ್ಮಿಕ ಉನ್ನತಿ ಸಾಧ್ಯ ಎಂದು ಸಂದೇಶ ನೀಡಿದರು.
Read Full Story
08:26 PM (IST) Dec 27

Karnataka News Live 27 December 2025Hero Super Splendor XTEC - ಒಂದೇ ಒಂದು ಫುಲ್ ಟ್ಯಾಂಕ್‌ಗೆ 700 ಕಿ.ಮೀ ಓಡುತ್ತೆ! ಬೆಲೆ ಕಡಿಮೆ, ಮೈಲೇಜ್ ಸಿಕ್ಕಾಪಟ್ಟೆ!

ಹೀರೋ ಮೋಟೋಕಾರ್ಪ್ ಹೊಸ ಸೂಪರ್ ಸ್ಪ್ಲೆಂಡರ್ XTEC ಬೈಕನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಬಜೆಟ್ ಸ್ನೇಹಿ ಬೆಲೆ, 68 kmpl ವರೆಗಿನ ಅತ್ಯುತ್ತಮ ಮೈಲೇಜ್ ಬ್ಲೂಟೂತ್ ಕನೆಕ್ಟಿವಿಟಿಯಂತಹ ಸ್ಮಾರ್ಟ್ ಫೀಚರ್ಸ್ ಹೊಂದಿದೆ. 124.7cc ಎಂಜಿನ್ ಹೊಂದಿರುವ ಇದು, ಹೋಂಡಾ ಶೈನ್, ಬಜಾಜ್ ಪ್ಲಾಟಿನಾ ಬೈಕ್‌ಗಳಿಗೆ ಪೈಪೋಟಿ

Read Full Story
07:54 PM (IST) Dec 27

Karnataka News Live 27 December 2025ತುಮಕೂರು-ಬೆಂ.ದಕ್ಷಿಣ ಜಿಲ್ಲೆಗೆ ರೈಲ್ವೆ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ ಬದ್ಧ, ವಿ.ಸೋಮಣ್ಣ ಸ್ಪಷ್ಟನೆ

ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. 21 ಕೋಟಿ ವೆಚ್ಚದ ರಾಮನಗರ ರೈಲು ನಿಲ್ದಾಣದ ಆಧುನೀಕರಣ ಕಾಮಗಾರಿ ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ,

Read Full Story
07:29 PM (IST) Dec 27

Karnataka News Live 27 December 2025'ವೃಷಭ' ಸಿನಿಮಾ ರಿಲೀಸ್;‌ ಕಣ್ಣು ಕಳೆದುಕೊಳ್ಳೋ ಸ್ಥಿತಿ ಬಂದಿದ್ರೂ, ಬೆಲೆ ಇಲ್ಲ ಎಂದ Bigg Boss ರಘು

Bigg Boss Raghu News: ಬಿಗ್‌ ಬಾಸ್‌ ಕನ್ನಡ ಸೀಸನ್‌ 12 ಶೋನಲ್ಲಿ ರಘು ಅವರು ವೈಲ್ಡ್‌ಕಾರ್ಡ್‌ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟಿದ್ದಾರೆ, ಫಿನಾಲೆಗೆ ಕೆಲವೇ ದಿನಗಳು ಬಾಕಿ ಉಳಿದಿವೆ. ರಘು ಅವರು ಫಿನಾಲೆಗೆ ಹೋಗುತ್ತಾರಾ? ಇಲ್ಲವಾ ಎಂದು ಕಾದು ನೋಡಬೇಕಿದೆ.

Read Full Story
07:18 PM (IST) Dec 27

Karnataka News Live 27 December 2025New Year 2026 ಮದ್ಯಪ್ರಿಯರೇ ಡೋಂಟ್ ವರಿ, ಡಿ.31ಕ್ಕೆ ನೀವು ಹಲ್ಲು ಉಜ್ಜೋ ಮುಂಚೆಯೇ ಓಪನ್ ಇರುತ್ತೆ ಬಾರ್!

ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ, ಬೆಂಗಳೂರು ನಗರ ಪೊಲೀಸ್ ಕಮಿಷನರ್ ಡಿಸೆಂಬರ್ 31ರಂದು ಮದ್ಯ ಮಾರಾಟದ ಅವಧಿಯನ್ನು ಮಧ್ಯರಾತ್ರಿ 1 ಗಂಟೆಯವರೆಗೆ ವಿಸ್ತರಿಸಿದ್ದಾರೆ. ಈ ನಿಯಮವು CL-5 ಲೈಸೆನ್ಸ್ ಹೊಂದಿರುವ ಖಾಸಗಿ ಪಾರ್ಟಿಗಳಿಗೂ ಅನ್ವಯವಾಗಲಿದೆ.

Read Full Story
06:54 PM (IST) Dec 27

Karnataka News Live 27 December 2025BBK 12 ಫಿನಾಲೆಗೆ ಕೆಲವೇ ದಿನಗಳು ಬಾಕಿ; ವೀಕ್ಷಕರ ಇಚ್ಛೆಯಂತೆ ಟಾಪ್‌ 3 ರಲ್ಲಿ ಗೆಲ್ಲೋರು ಯಾರು?

BBK 12: ಇನ್ನು 20 ದಿನಗಳಲ್ಲಿ ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಗ್ರ್ಯಾಂಡ್‌ ಫಿನಾಲೆ ನಡೆಯಲಿದೆ. ಈ ಬಾರಿ ಯಾರು ಬಿಗ್‌ ಬಾಸ್‌ ಶೋ ಗೆಲ್ಲುತ್ತಾರೆ ಎಂದು ಚರ್ಚೆ ಶುರುವಾಗಿದೆ. ಸೋಶಿಯಲ್‌ ಮೀಡಿಯಾದಲ್ಲಿ ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿಗೆ ಮತ ಹಾಕ್ತೀವಿ ಎಂದು ಹೇಳುವವರ ಸಂಖ್ಯೆ ಜಾಸ್ತಿ ಇದೆ.

Read Full Story
06:46 PM (IST) Dec 27

Karnataka News Live 27 December 2025ಹುಬ್ಬಳ್ಳಿ - ವಿಮಾನ ನಿಲ್ದಾಣಗಳಿಗೆ ಕನ್ನಡಿಗರ ಹೆಸರಿಡಲು ಆಗ್ರಹ; ಜೋಶಿ ಕಚೇರಿ ಮುಂದೆ ಪೂಜಾ ಗಾಂಧಿ, ಕೋನರೆಡ್ಡಿ ಪ್ರತಿಭಟನೆ!

ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ರಾಜ್ಯದ ವಿಮಾನ ನಿಲ್ದಾಣಗಳಿಗೆ ಕನ್ನಡಿಗ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಲು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ನಟಿ ಪೂಜಾ ಗಾಂಧಿ ಹಾಗೂ ಶಾಸಕ ಕೋನರೆಡ್ಡಿ ನೇತೃತ್ವದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಚೇರಿಗೆ ಮುತ್ತಿಗೆ ಹಾಕಿದರು.

Read Full Story
06:31 PM (IST) Dec 27

Karnataka News Live 27 December 2025ವಿಜಯಪುರದಲ್ಲಿ ವಿಕೃತ ಘಟನೆ, ಹಾಲು ತರಲು ಹೋದ ಮಹಿಳೆಯ ಕಿವಿ ಕತ್ತರಿಸಿ ಚಿನ್ನ ಕದ್ದ ಕಳ್ಳರು!

ವಿಜಯಪುರದಲ್ಲಿ ಹಾಲು ತರಲು ಹೋದ ಕಲಾವತಿ ಗಾಯ್ಕವಾಡ್ ಎಂಬ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಪರಿಚಿತರಂತೆ ನಟಿಸಿ, ಆಕೆಯ ಕಿವಿ ಕತ್ತರಿಸಿ ಮಾಂಗಲ್ಯ ಸರ ಹಾಗೂ ಕಿವಿಯೋಲೆ ದೋಚಿ ಪರಾರಿಯಾಗಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗೋಳಗುಮ್ಮಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Full Story
06:16 PM (IST) Dec 27

Karnataka News Live 27 December 2025ಶಿಡ್ಲಘಟ್ಟದ 'ಹನಿ' ಹಿಂದೆ ಹೋದ ಚಿಕ್ಕಬಳ್ಳಾಪುರದ ಬಾಲಾಜಿ, ಟ್ರ್ಯಾಪ್‌ ಆಗಿದ್ದಕ್ಕೆ ಜೀವನವನ್ನೇ ಮುಗಿಸಿದ!

ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ವಿವಾಹಿತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಹಿಂದೆ ಹನಿಟ್ರ್ಯಾಪ್‌ ಶಂಕೆ ವ್ಯಕ್ತವಾಗಿದೆ. ಶಿಡ್ಲಘಟ್ಟ ಮೂಲದ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕ, ಆಕೆಯ ಬ್ಲ್ಯಾಕ್‌ಮೇಲ್‌ಗೆ ಹೆದರಿ ಈ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.
Read Full Story
05:39 PM (IST) Dec 27

Karnataka News Live 27 December 2025ಬೆಂಗಳೂರಲ್ಲಿ ಯಾವುದೇ ದಾಖಲೆ ಇಲ್ಲದೆ ಆಟೋ ಓಡಿಸ್ತಿದ್ದಾರಾ ಬಾಂಗ್ಲಾದವ್ರು? ತಮ್ಮವರಿಗೆ ವಿಡಿಯೋ ಮೂಲಕ ಕರೆದ ಯುವಕರು!

ಬೆಂಗಳೂರಿನಲ್ಲಿ ದಾಖಲೆಗಳಿಲ್ಲದೆ ಆಟೋ ಚಲಾಯಿಸುತ್ತಿರುವ ಬಾಂಗ್ಲಾದೇಶಿಗರೆಂದು ಹೇಳಿಕೊಳ್ಳುವ ಮೂವರ ವಿಡಿಯೋ ವೈರಲ್ ಆಗಿದೆ. ಉತ್ತಮ ಆದಾಯಕ್ಕಾಗಿ ಬೆಂಗಳೂರಿಗೆ ಬರುವಂತೆ ತಮ್ಮ ಜನರನ್ನು ಆಹ್ವಾನಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕ ಮತ್ತು ಭದ್ರತೆಯ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Read Full Story
05:31 PM (IST) Dec 27

Karnataka News Live 27 December 2025ರಾಯಚೂರು - ಬಸ್ ಇಲ್ಲದೆ ರಾತ್ರಿವರೆಗೆ ಪರದಾಡಿದ ಶಾಲಾ ಮಕ್ಕಳು; ಅಧಿಕಾರಿಗಳಿಗೆ ಬೆವರಿಳಿಸಿದ ಶಾಸಕಿ ಕರೆಮ್ಮ ನಾಯಕ್!

ರಾಯಚೂರು ಜಿಲ್ಲೆಯ ದೇವದುರ್ಗದಲ್ಲಿ, ಸರಿಯಾದ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಶಾಲಾ ವಿದ್ಯಾರ್ಥಿಗಳು ರಾತ್ರಿಯಿಡೀ ಬಸ್ ನಿಲ್ದಾಣದಲ್ಲಿ ಪರದಾಡಿದರು. ವಿದ್ಯಾರ್ಥಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕಿ ಕರೆಮ್ಮ ನಾಯಕ್, ಸ್ಥಳಕ್ಕೆ ಭೇಟಿ ನೀಡಿ ಸಾರಿಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

Read Full Story
05:05 PM (IST) Dec 27

Karnataka News Live 27 December 2025ಮರಾಠಾ ಮಹಾಮೇಳಾವ್‌ನಲ್ಲಿ ಸಚಿವ ಸಂತೋಷ್ ಲಾಡ್ ಭಾಗಿ! ಗಡಿಭಾಗದ ಸಮಸ್ಯೆ ಬಗ್ಗೆ ಮಹತ್ವದ ಹೇಳಿಕೆ!

Santosh Lad attended the Maratha Mahamelav event: ಚಿಕ್ಕೋಡಿಯಲ್ಲಿ ನಡೆದ ಮರಾಠಾ ಮಹಾಮೇಳಾವ್‌ನಲ್ಲಿ ಭಾಗವಹಿಸಿದ್ದ ಕಾರ್ಮಿಕ ಸಚಿವ ಸಂತೋಷ್ ಲಾಡ್, ಗಡಿಭಾಗದ ಜನರ ವಲಸೆ ತಡೆಯಲು ಇಂಡಸ್ಟ್ರಿಯಲ್ ಮತ್ತು ಟೆಕ್ಸ್‌ಟೈಲ್ ಪಾರ್ಕ್ ನಿರ್ಮಿಸುವ ಭರವಸೆ ನೀಡಿದರು.

Read Full Story
04:29 PM (IST) Dec 27

Karnataka News Live 27 December 2025ಬಂಡೀಪುರದಲ್ಲಿ ಪಾದಯಾತ್ರೆ ತಡೆ - ಅಯ್ಯಪ್ಪ ಮಾಲಾಧಾರಿಗಳು ಅರಣ್ಯ ಸಿಬ್ಬಂದಿ ನಡುವೆ ವಾಗ್ವಾದ!

ಶಬರಿಮಲೆಗೆ ಪಾದಯಾತ್ರೆ ಹೊರಟಿದ್ದ ಅಯ್ಯಪ್ಪ ಮಾಲಾಧಾರಿಗಳನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ತಡೆದಿದ್ದಾರೆ. ವನ್ಯಜೀವಿ ಸುರಕ್ಷತಾ ನಿಯಮಗಳ ಕಾರಣ ನೀಡಿ ಪಾದಯಾತ್ರೆಗೆ ಅನುಮತಿ ನಿರಾಕರಿಸಿದ್ದರಿಂದ, ಭಕ್ತರು ಮತ್ತು ಅಧಿಕಾರಿಗಳ ನಡುವೆ ತೀವ್ರ ವಾಗ್ವಾದ ನಡೆದಿದೆ.

Read Full Story
04:10 PM (IST) Dec 27

Karnataka News Live 27 December 2025BBK 12 - ಗಿಲ್ಲಿ ನಟನ ವಿರುದ್ಧ ತಿರುಗಿ ಬೀಳೋಕೆ ಎಲ್ಲ ಸ್ಪರ್ಧಿಗಳಿಗೆ ಸಿಕ್ಕಿದೆ ಬ್ರಹ್ಮಾಸ್ತ್ರ! ಇದು ಸ್ವಯಂ ಅಪರಾಧ!

Bigg Boss Kannada Season 12 Episode Update: ತಂಡವನ್ನು ಮುನ್ನಡೆಸಬೇಕಾದ ನಾಯಕನೇ ಸೋಮಾರಿಯಾದರೆ, ಆ ಸೈನ್ಯ ಸುಮ್ಮನಿರುತ್ತದೆಯೇ? ಈಗ ಬಿಗ್ ಬಾಸ್ ಕನ್ನಡ ಸೀಸನ್‌ 12 ಮನೆಯಲ್ಲಿ 'ಕೆಲಸ'ದ ಯುದ್ಧ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ.

Read Full Story