Sebastian Sawe ಕೀನ್ಯಾದ ಸಬಾಸ್ಟಿಯನ್ ಸಾವೆ ಲಂಡನ್ ಮ್ಯಾರಥಾನ್ನಲ್ಲಿ 2 ಗಂಟೆಗಳೊಳಗೆ ಓಟ ಪೂರೈಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಲೇಖನವು ಅವರ ಅಸಾಧಾರಣ ವೇಗ, ಕಠಿಣ ತರಬೇತಿ, ಡೋಪಿಂಗ್ ಪರೀಕ್ಷೆಗಳು ಮತ್ತು ಅವರು ಧರಿಸಿದ್ದ ವಿಶೇಷ ಶೂಗಳ ವಿವರಗಳನ್ನು ನೀಡುತ್ತದೆ.
Karnataka News Live: 2 ತಾಸಲ್ಲೇ 42KM ಓಡಿ ಇಡೀ ಜಗತ್ತನ್ನೇ ಚಕಿತಗೊಳಿಸಿದ ಸಬಾಸ್ಟಿಯನ್ ಸಾವೆ!

ಬೆಂಗಳೂರು: ಕೊಪ್ಪಳ, ಗದಗ, ರಾಯಚೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸೋಮವಾರ ಮಳೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜಿ.ಬೆಂಚಮಟ್ಟಿ ಗ್ರಾಮದಲ್ಲಿ ಸೋಮವಾರ ಸಂಜೆ ಸಿಡಿಲು ಬಡಿದು ದೇವರಾಯನಗೌಡ ಪಾಟೀಲ (50) ಎಂಬುವರು ಮೃತಪಟ್ಟಿದ್ದಾರೆ. ಈ ಮಧ್ಯೆ, ಶಿವಮೊಗ್ಗ ಜಿಲ್ಲೆಯ ಹಲವೆಡೆ ಭಾರೀ ಗಾಳಿ-ಮಳೆಗೆ ಸಾವಿರಾರು ಅಡಕೆ ಮರಗಳು ಧರೆಗುರುಳಿವೆ. ಹೊಳೆಹೊನ್ನೂರು ಸಮೀಪದ ಅರಹತೊಳಲು ಗ್ರಾಮದಲ್ಲಿ ಆರ್.ಲೋಕೇಶ (52) ಎಂಬುವರು ತಮ್ಮ ಅಡಿಕೆ ಮನೆಗೆ ಹಾಕಿದ್ದ ಹೆಂಚುಗಳು ಹಾರಿ ಹೋಗಿದ್ದನ್ನು ನೋಡಿ, ಗಾಬರಿಗೊಂಡು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.
ಗದಗ ಜಿಲ್ಲೆ ಮುಂಡರಗಿಯಲ್ಲಿ ಗಾಳಿ-ಮಳೆಗೆ ಖಾಸಗಿ ಕಂಪನಿಯ ಮೊಬೈಲ್ ಟವರ್ ನ ಕಂಬ ಮುರಿದು ಬಿದ್ದಿದೆ. ರಾಯಚೂರು ಜಿಲ್ಲೆ ಹಳೆ ಕೆರೆ ಎಂಬಲ್ಲಿ ಸಿಡಿಲು ಬಡಿದು 8 ಕುರಿ ಮತ್ತು 3 ಕುರಿಮರಿಗಳು ಮೃತಪಟ್ಟಿವೆ.
Karnataka News Live 28 April 20262 ತಾಸಲ್ಲೇ 42KM ಓಡಿ ಇಡೀ ಜಗತ್ತನ್ನೇ ಚಕಿತಗೊಳಿಸಿದ ಸಬಾಸ್ಟಿಯನ್ ಸಾವೆ!
Karnataka News Live 28 April 2026ರಾಷ್ಟ್ರೀಯ ಹೆದ್ದಾರಿಗೆ ಬಂದ ಸಾಂಬಾರ್ ಜಗಳ; ಸೋದರಮಾವನಿಂದ ಹಲ್ಲೆಗೆ ಯತ್ನ, ಪೊಲೀಸರ ವಶಕ್ಕೆ
Karnataka News Live 28 April 2026ರಾಮ್ ಚರಣ್ ಜೊತೆ ಐಟಂ ಸಾಂಗ್ಸ್ಗೆ ಹೆಜ್ಜೆ ಹಾಕಿದ ನಟಿಯರಿವರು! ಈಗ ಎಲ್ಲರ ಕಣ್ಣು ಆಕೆಯ ಮೇಲೆ
Karnataka News Live 28 April 2026ಭಾರತವನ್ನ ನರಕ ಎಂದ ಟ್ರಂಪ್ ಒಬ್ಬ ಹುಚ್ಚ, ಕೇಂದ್ರದ ಕೆಲವು ನಾಯಕರು ಅಮೆರಿಕದ ಗುಲಾಮರಂತೆ ವರ್ತಿಸುತ್ತಿದ್ದಾರೆ - - ಲಾಡ್ ಆಕ್ರೋಶ
ಭಾರತವನ್ನು ನರಕವೆಂದು ಕರೆದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು 'ಹುಚ್ಚ' ಎಂದು ಸಚಿವ ಸಂತೋಷ್ ಲಾಡ್ ತೀವ್ರವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಮೌನ ವಹಿಸಿರುವುದು ಪ್ರಶ್ನಿಸಿರುವ ಅವರು, ಮೋದಿ ಹಾಗೂ ಬಿಜೆಪಿಯ ಚುನಾವಣಾ ತಂತ್ರ ಮತ್ತು ಮಹಿಳಾ ಮೀಸಲಾತಿ ನಿಲುವಿನ ಬಗ್ಗೆಯೂ ವಾಗ್ದಾಳಿ
Karnataka News Live 28 April 2026ನೋಂದಾಯಿಸಿದ್ದ ಯಾದಗಿರಿಯ 3000 ಗರ್ಭಿಣಿಯರು ಪತ್ತೆಯೇ ಇಲ್ಲ; ಆರೋಗ್ಯ ಇಲಾಖೆಯೇ ಶಾಕ್
ಯಾದಗಿರಿ ಜಿಲ್ಲೆಯಲ್ಲಿ ನೋಂದಣಿಯಾದ 30,000ಕ್ಕೂ ಹೆಚ್ಚು ಗರ್ಭಿಣಿಯರಲ್ಲಿ 3,000ಕ್ಕೂ ಅಧಿಕ ಮಂದಿಯ ಹೆರಿಗೆಯ ಮಾಹಿತಿ ಲಭ್ಯವಿಲ್ಲದಿರುವುದು ಸಾವಿರಾರು ಭ್ರೂಣಹತ್ಯೆಗಳ ಅನುಮಾನಕ್ಕೆ ಕಾರಣವಾಗಿದೆ. ಕನ್ನಡಪ್ರಭ ವರದಿಯ ಬೆನ್ನಲ್ಲೇ ಆರೋಗ್ಯ ಇಲಾಖೆ ರಾಜ್ಯಮಟ್ಟದ ಸಮಿತಿ ರಚಿಸಿ ತನಿಖೆ ನಡೆಸುತ್ತಿದೆ.
Karnataka News Live 28 April 2026ಅಡ್ಡಬೋರ್ ಮೂಲಕ ಬತ್ತಿದ ಕೆರೆ, ಬಾವಿಗಳಲ್ಲಿ ನೀರಿನ ಸೆಲೆ; ಮಂಗಳೂರಿನಲ್ಲಿ ಜಲಕ್ರಾಂತಿ
ಬೇಸಿಗೆಯಲ್ಲಿ ಬತ್ತಿಹೋಗುವ ಕರಾವಳಿಯ ಕೆರೆ ಮತ್ತು ಬಾವಿಗಳಿಗೆ ಅಡ್ಡ ಬೋರ್ ಕೊರೆಯುವ ಮೂಲಕ ಮತ್ತೆ ಜೀವ ನೀಡಲಾಗುತ್ತಿದೆ. ಭೂಮಿಯೊಳಗೆ ಅಡ್ಡಲಾಗಿ ಕೊರೆದು ನೀರಿನ ಸೆಲೆಯನ್ನು ಪತ್ತೆಹಚ್ಚುವ ಈ ಯಶಸ್ವಿ ತಂತ್ರವು, ವರ್ಷಪೂರ್ತಿ ನೀರು ಹರಿಯುವಂತೆ ಮಾಡಿ ನೀರಿನ ಅಭಾವವನ್ನು ನೀಗಿಸುತ್ತಿದೆ.
Karnataka News Live 28 April 2026Bengaluru - ಬೆತ್ತಲೆ ಸ್ಥಿತಿಯಲ್ಲಿ ಜಾರ್ಖಂಡ್ ಮೂಲದ ಯುವತಿಯ ಅರೆಕೊಳೆತ ಶವ ಪತ್ತೆ
ಜಾರ್ಖಂಡ್ ಮೂಲದ ಪೂಜಾ ದತ್ತಾ ಎಂಬ ಯುವತಿಯ ಮೃತದೇಹವು ಆಕೆ ವಾಸವಿದ್ದ ಬಾಡಿಗೆ ಮನೆಯಲ್ಲಿ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮನೆಯಿಂದ ದುರ್ವಾಸನೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದ್ದು, ಇದು ಕೊ*ಲೆಯೋ ಅಥವಾ ಆತ್ಮ*ಹತ್ಯೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Karnataka News Live 28 April 2026ಕಾಂಗ್ರೆಸ್ಸಲ್ಲಿ ಅಹಿಂದ ದಂಗಲ್ - ಹುಬ್ಬಳ್ಳಿಯಲ್ಲಿ ಸಮಾವೇಶ ನಡೆಸಲು ಒಂದು ಬಣ ಸಿದ್ಧತೆ
ಹುಬ್ಬಳ್ಳಿಯಲ್ಲಿ ಉದ್ದೇಶಿಸಿರುವ ಅಹಿಂದ ಸಮಾವೇಶವು ರಾಜ್ಯ ಕಾಂಗ್ರೆಸ್ನಲ್ಲಿ ಎರಡು ಬಣಗಳನ್ನು ಸೃಷ್ಟಿಸಿದೆ. ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಬಣವು ಪಕ್ಷಕ್ಕೆ ಲಾಭವೆಂದು ಸಮಾವೇಶಕ್ಕೆ ಒತ್ತಾಯಿಸಿದರೆ, ಮತ್ತೊಂದು ಬಣ ಪಕ್ಷಕ್ಕೆ ಹಾನಿಕರ ಎಂದು ವಿರೋಧ. ಈ ಗೊಂದಲ ಇದೀಗ ಹೈಕಮಾಂಡ್ ಅಂಗಳ ತಲುಪಿದೆ.