ರಾಷ್ಟ್ರೀಯ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಚೇತರಿಕೆಗಾಗಿ ಶಿವಮೊಗ್ಗ ನಗರ ಯುವ ಕಾಂಗ್ರೆಸ್ ವತಿಯಿಂದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಜ್ವರ ಹಾಗೂ ಸೋಂಕಿನಿಂದ ದೆಹಲಿಯ ಆಸ್ಪತ್ರೆಗೆ ದಾಖಲಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
- Home
- News
- State
- Karnataka News Live: ಸೋನಿಯಾ ಚೇತರಿಕೆಗಾಗಿ ಆಂಜನೇಯನ ಮೊರೆ ಹೋದ ಕಾಂಗ್ರೆಸ್ - ಹನುಮನಿಗೆ ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು
Karnataka News Live: ಸೋನಿಯಾ ಚೇತರಿಕೆಗಾಗಿ ಆಂಜನೇಯನ ಮೊರೆ ಹೋದ ಕಾಂಗ್ರೆಸ್ - ಹನುಮನಿಗೆ ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು

ಬೆಂಗಳೂರು: ಬಿರಿಯಾನಿ ಸವಿಯಲು ಬುಲೆಟ್ನಲ್ಲಿ ಹೊರಟಿದ್ದ ಮೂವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಭೀಕರ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಮರೂರು ಹ್ಯಾಂಡ್ ಪೋಸ್ಟ್ ಬಳಿ ಶನಿವಾರ ಮುಂಜಾನೆ ಸಂಭವಿಸಿದೆ.
ಬೆಂಗಳೂರಿನ ಸಪ್ತಗಿರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ, ದಾವಣಗೆರೆ ಮೂಲದ ಮನೋಜ್ (21), ಹಾಸನ ಜಿಲ್ಲೆ ಬೇಲೂರು ಮೂಲದ ಅಭಿಲಾಷ್ (21), ಆಚಾರ್ಯ ಕಾಲೇಜಿನ ವಿದ್ಯಾರ್ಥಿ, ರಾಯಚೂರು ಮೂಲದ ನವೀನ್ (21) ಮೃತರು. ಅಪಘಾತದ ತೀವ್ರತೆಗೆ ಮನೋಜ್ ಮತ್ತು ಅಭಿಲಾಷ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ನವೀನ್ ಅವರನ್ನು ನೆಲಮಂಗಲದ ಸರ್ಕಾರಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರಿನಲ್ಲಿ ನೆಲೆಸಿದ್ದ ಇವರು ಶನಿವಾರ ಮುಂಜಾನೆ 4ರ ಸುಮಾರಿಗೆ ಕುಣಿಗಲ್ಗೆ ಬಿರಿಯಾನಿ ತಿನ್ನಲು ಬುಲೆಟ್ನಲ್ಲಿ ತೆರಳುತ್ತಿದ್ದರು. ರಾಗಿ ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಬೈಕ್ ಡಿಕ್ಕಿದೆ.
Karnataka News Live 29 March 2026ಸೋನಿಯಾ ಚೇತರಿಕೆಗಾಗಿ ಆಂಜನೇಯನ ಮೊರೆ ಹೋದ ಕಾಂಗ್ರೆಸ್ - ಹನುಮನಿಗೆ ವಿಶೇಷ ಪೂಜೆ ಸಲ್ಲಿಸಿದ ಕಾರ್ಯಕರ್ತರು
Karnataka News Live 29 March 2026Davanagere By Poll Rich vs Poor Battle - ದಾವಣಗೆರೆಯಲ್ಲಿ ಶ್ರೀಮಂತ ವರ್ಸಸ್ ಬಡವ - ಶ್ರೀನಿವಾಸ್ - ನಾನು ಹಮಾಲಿ ಮಾಡುವವರ ಮಗ - ಬಿಜೆಪಿಗ
ದಾವಣಗೆರೆ ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸಕರಿಯಪ್ಪ, ಈ ಬಾರಿಯ ಚುನಾವಣೆಯನ್ನು ಶ್ರೀಮಂತರು ಮತ್ತು ಬಡವರ ನಡುವಿನ ಹೋರಾಟ ಎಂದು ಬಣ್ಣಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ಶ್ರೀಮಂತ ಹಿನ್ನೆಲೆಯನ್ನು ಟೀಕಿಸಿರುವ ಅವರು, ಹಮಾಲಿ ಮಾಡುವವರ ಮಗನಾದ ನನಗೆ ಜನ ಬೆಂಬಲ ಇದೆ ಎಂದಿದ್ದಾರೆ.
Karnataka News Live 29 March 2026Davanagere Bypolls - ನನ್ನ ಆಸ್ತಿಗಿಂತ ಬಿಜೆಪಿ ಅಭ್ಯರ್ಥಿಯ ಆಸ್ತಿ ದುಪ್ಪಟ್ಟಿದೆ - ಬೇಕಾದರೆ ಅಫಿಡವಿಟ್ ನೋಡಿ - ಕೈ ಅಭ್ಯರ್ಥಿ ಸಮರ್ಥ
ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಎಂ.ಶಾಮನೂರು, ಶ್ರೀಮಂತ ವರ್ಸಸ್ ಬಡವರ ಚುನಾವಣೆ ಎಂಬ ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ಗಳನ್ನು ಹೋಲಿಸಿದರೆ, ಬಿಜೆಪಿ ಅಭ್ಯರ್ಥಿಯ ಆಸ್ತಿಯೇ ತಮಗಿಂತ ಎರಡು ಪಟ್ಟು ಹೆಚ್ಚಿದೆ ಎಂದಿದ್ದಾರೆ.
Karnataka News Live 29 March 2026ಮೂರು ಕಾರಣಗಳಿಗೆ ಟಾಕ್ಸಿಕ್ ಚಿತ್ರಕ್ಕೆ ಕಿಯಾರಾ ಆಯ್ಕೆಯಾಗಿದ್ದು - ನಿರ್ದೇಶಕಿ ಗೀತು ಮೋಹನ್ ದಾಸ್
Bollywood Actress Kiara Advani in Toxic movie: ಯಶ್ ಅಭಿನಯದ 'ಟಾಕ್ಸಿಕ್' ಚಿತ್ರಕ್ಕೆ ನಾಯಕಿಯಾಗಿ ಕಿಯಾರಾ ಅಡ್ವಾಣಿ ಆಯ್ಕೆಯಾಗಲು ನಿರ್ದೇಶಕಿ ಗೀತು ಮೋಹನ್ ದಾಸ್ ಮೂರು ಪ್ರಮುಖ ಕಾರಣಗಳನ್ನು ಬಹಿರಂಗಪಡಿಸಿದ್ದಾರೆ.
Karnataka News Live 29 March 2026SSLC ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಭದ್ರತೆ ಇಲ್ಲದೆ ಬೈಕ್ನಲ್ಲಿ ಸಾಗಿಸಿ ಶಿಕ್ಷಣ ಇಲಾಖೆ!
ಬೆಳಗಾವಿಯ ಮೂಡಲಗಿ ಪಟ್ಟಣದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ನಿಯಮಬಾಹಿರವಾಗಿ ಬೈಕ್ನಲ್ಲಿ ಸಾಗಿಸಲಾಗಿದೆ. ಉಮಾಬಾಯಿ ಪ್ರೌಢಶಾಲೆಯಿಂದ ಬಿಇಒ ಕಚೇರಿಗೆ ಯಾವುದೇ ಪೊಲೀಸ್ ಭದ್ರತೆ ಇಲ್ಲದೆ ಪತ್ರಿಕೆಗಳನ್ನು ಕೊಂಡೊಯ್ದಿದ್ದು, ಶಿಕ್ಷಣ ಇಲಾಖೆ ನಿರ್ಲಕ್ಷ್ಯಕ್ಕೆ ತೀವ್ರ ಆಕ್ರೋಶ
Karnataka News Live 29 March 2026Bengaluru ಒಂದೇ ಕುಟುಂಬದ ನಾಲ್ವರು ಆತ್ಮ*ಹತ್ಯೆಗೆ ಯತ್ನ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ
ಬೆಂಗಳೂರಿನ ಆನೇಕಲ್ ಬಳಿ ಸಾಲದ ಬಾಧೆ ತಾಳಲಾರದೆ ಒಂದೇ ಕುಟುಂಬದ ನಾಲ್ವರು ಆತ್ಮ*ಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ ತಾಯಿ ಮತ್ತು ಮಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.