ಬೆಂಗಳೂರಿನಲ್ಲಿ, ಎರಡು ತಿಂಗಳ ಬಾಕಿ ಸಂಬಳ ಕೇಳಿದ ಆಂಬ್ಯುಲೆನ್ಸ್ ಚಾಲಕ ಕಿರಣ್ ಮೇಲೆ ಮಾಲೀಕ ನಾಗರಾಜ್ ಮತ್ತು ಇನ್ನೊಬ್ಬ ಚಾಲಕ ಸೇರಿ ನೈಸ್ ರಸ್ತೆಯಲ್ಲಿ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಸಂಬಳ ಕೊಡುವ ನೆಪದಲ್ಲಿ ಕರೆಸಿ ದೌರ್ಜನ್ಯ ಎಸಗಲಾಗಿದ್ದು, ಸಂತ್ರಸ್ತರು ಬ್ಯಾಟರಾಯನಪುರ ಠಾಣೆಯಲ್ಲಿ ದೂರು ದಾಖಲು
- Home
- News
- State
- Karnataka News Live: ದುಡಿದ ಸಂಬಳ ಕೇಳಿದ್ದಕ್ಕೆ ಆಂಬ್ಯುಲೆನ್ಸ್ ಚಾಲಕನ ಮೇಲೆ ಮಾಲೀಕನಿಂದ ಭೀಕರ ಹಲ್ಲೆ!
Karnataka News Live: ದುಡಿದ ಸಂಬಳ ಕೇಳಿದ್ದಕ್ಕೆ ಆಂಬ್ಯುಲೆನ್ಸ್ ಚಾಲಕನ ಮೇಲೆ ಮಾಲೀಕನಿಂದ ಭೀಕರ ಹಲ್ಲೆ!

ಬಳ್ಳಾರಿ: ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣದ ಬ್ಯಾನರ್ ಅಳವಡಿಕೆ ಹಿನ್ನೆಲೆಯಲ್ಲಿ ನಡೆದ ಗುಂಪು ಘರ್ಷಣೆ ವೇಳೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ರೆಡ್ಡಿ ಸಾವಿಗೆ ಸಂಬಂಧಿಸಿದಂತೆ ನಗರದ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿವೆ.ಪ್ರತ್ಯೇಕ ದೂರು ಆಧರಿಸಿ ಮೂರು (01/2026, 02/2026, 03/2026) ಎಫ್ಐಆರ್ ಮತ್ತು ಬಳ್ಳಾರಿ ನಗರ ಡಿವೈಎಸ್ಪಿ ಚಂದ್ರಕಾಂತ ನಂದಾ ರೆಡ್ಡಿ ಅವರ ದೂರಿನ ಆಧಾರದಲ್ಲಿ ಒಂದು ಸ್ವಯಂ ಪ್ರೇರಿತ ಪ್ರಕರಣ (04/2026)ವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರನ ಕೊಲೆ, ಜಾತಿ ನಿಂದನೆ, ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಮೇಲಿನ ಹಲ್ಲೆಗೆ ಸಂಬಂಧಿಸಿದಂತೆ ನೀಡಲಾದ ದೂರು ಆಧರಿಸಿ ಪ್ರಕರಣ ಎಫ್ಐಆರ್ ದಾಖಲು ಮಾಡಲಾಗಿದೆ.
ಎಲ್ಲ ಪ್ರಕರಣಗಳಲ್ಲಿಯೂ ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ ರೆಡ್ಡಿ ಮತ್ತು ಶ್ರೀರಾಮುಲು ಅವರನ್ನು ಕ್ರಮವಾಗಿ ಎ1, ಎ2, ಎ3 ಆರೋಪಿಗಳನ್ನಾಗಿ ಮಾಡಲಾಗಿದೆ. ಪೊಲೀಸರು ದಾಖಲು ಮಾಡಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದಲ್ಲಿ ಶಾಸಕ ಜನಾರ್ದನ ರೆಡ್ಡಿ ಮತ್ತು ಸಹಚರರ ಜೊತೆಗೆ, ಭರತ್ ರೆಡ್ಡಿ ಅವರ ಆಪ್ತ ಸತೀಶ್ ರೆಡ್ಡಿ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿದ
Karnataka News Live 3 January 2026ದುಡಿದ ಸಂಬಳ ಕೇಳಿದ್ದಕ್ಕೆ ಆಂಬ್ಯುಲೆನ್ಸ್ ಚಾಲಕನ ಮೇಲೆ ಮಾಲೀಕನಿಂದ ಭೀಕರ ಹಲ್ಲೆ!
Karnataka News Live 3 January 2026Yellapur Ranjitha murder case - ಶಾಸಕ ಶಿವರಾಮ್ ಹೆಬ್ಬಾರ್ ಕೆಂಡಾಮಂಡಲ, ನಿರ್ದಾಕ್ಷಿಣ್ಯ ಕ್ರಮಕ್ಕೆ ಸೂಚನೆ
Karnataka News Live 3 January 2026ಸುದ್ದಿ ನಿಷೇಧಕ್ಕೆ ದುರುದ್ದೇಶದ ಅರ್ಜಿ, ರಿಪೋರ್ಟರ್ ಟಿವಿಗೆ ದಂಡ ವಿಧಿಸಿದ ಬೆಂಗಳೂರು ಕೋರ್ಟ್
ಸುದ್ದಿ ನಿಷೇಧಕ್ಕೆ ದುರುದ್ದೇಶದ ಅರ್ಜಿ, ರಿಪೋರ್ಟರ್ ಟಿವಿಗೆ ದಂಡ ವಿಧಿಸಿದ ಬೆಂಗಳೂರು ಕೋರ್ಟ್, ರಿಪೋರ್ಟ್ ಟಿವಿ ವಾಹನಿ ತೀವ್ರ ಮುಖಭಂಗಕ್ಕೀಡಾಗಿದೆ. ರಿಪೋರ್ಟ್ ಟಿವಿಗೆ ಛೀಮಾರಿ ಹಾಕಿದ್ದು ಮಾತ್ರವಲ್ಲ ದಂಡ ವಿಧಿಸಿ ಕೋರ್ಟ್ ಆದೇಶಿಸಿದೆ.
Karnataka News Live 3 January 2026ನನ್ನ ವಿರುದ್ಧ ದೊಡ್ಡ ಮಟ್ಟದ ಷಡ್ಯಂತ್ರ ನಡೆಯುತ್ತಿದೆ; ಪರೋಕ್ಷವಾಗಿ ಜಾರಕಿಹೊಳಿ ಸಹೋದರರ ವಿರುದ್ಧ ಲಕ್ಷ್ಮಣ್ ಸವದಿ ವಾಗ್ದಾಳಿ
ಅಥಣಿ ಶಾಸಕ ಲಕ್ಷ್ಮಣ್ ಸವದಿ ಅವರು ತಮ್ಮ ವಿರುದ್ಧ ಕಳೆದ ಎರಡು ತಿಂಗಳಿಂದ ವ್ಯವಸ್ಥಿತ ರಾಜಕೀಯ ಸಂಚು ನಡೆಯುತ್ತಿದೆ ಎಂದು ಗಂಭೀರ ಆರೋಪ. ಡಿಸಿಸಿ ಬ್ಯಾಂಕ್ ಅಧಿಕಾರಿಯಾಗಿದ್ದ ತಮ್ಮ ಸಂಬಂಧಿಕನ ವರ್ಗಾವಣೆ ಹಿಂದೆ ಷಡ್ಯಂತ್ರವಿದೆ ಎಂದು ಹೇಳುವ ಮೂಲಕ, ಪರೋಕ್ಷವಾಗಿ ಜಾರಕಿಹೊಳಿ ಸಹೋದರರ ವಿರುದ್ಧ ವಾಗ್ದಾಳಿ
Karnataka News Live 3 January 2026ಅಮಾನತ್ತಿನಿಂದ ಆಘಾತ ಆದ್ರೆ ಆತ್ಮ0ತ್ಯೆಗೆ ಪ್ರಯತ್ನಿಸಿಲ್ಲ, ಸ್ಫೋಟಕ ಮಾಹಿತಿ ಹಂಚಿಕೊಂಡ SP ನೆಜ್ಜೂರು ತಂದೆ
ಅಮಾನತ್ತಿನಿಂದ ಆಘಾತ ಆದ್ರೆ ಆತ್ಮ0ತ್ಯೆಗೆ ಪ್ರಯತ್ನಿಸಿಲ್ಲ, ಸ್ಫೋಟಕ ಮಾಹಿತಿ ಹಂಚಿಕೊಂಡ SP ನೆಜ್ಜೂರು ತಂದೆ, ಬಳ್ಳಾರಿ ಗಲಭೆ ಪ್ರಕರಣ , ದಕ್ಷ ಅಧಿಕಾರಿ ಪವನ್ ನೆಜ್ಜೂರ್ ನಿರ್ವಹಿಸಿದ ರೀತಿ ಹಾಗೂ ನಂತರದ ಬೆಳವಣಿಗೆ ಕುರಿತು ಪೊಲೀಸ್ ಅಧಿಕಾರಿ ತಂದೆ ಮಾಹಿತಿ ಹಂಚಿಕೊಂಡಿದ್ದಾರೆ.
Karnataka News Live 3 January 2026Ballari Banner Fight - ಸಿಎಂ ಭೇಟಿಯಾದ ಶಾಸಕ ಭರತ್ ರೆಡ್ಡಿ,ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸಾಥ್!
Karnataka News Live 3 January 2026ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ - 10 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರು ಅಂತರರಾಜ್ಯ ದಂಧೆಕೋರರ ಬಂಧನ!
ಬೀದರ್ ಜಿಲ್ಲೆಯ ಸಂತಪೂರ್ ಪೊಲೀಸರು ತೆಲಂಗಾಣದಿಂದ ನಡೆಯುತ್ತಿದ್ದ ಅಕ್ರಮ ಗಾಂಜಾ ಸಾಗಾಟ ಜಾಲವನ್ನು ಯಶಸ್ವಿಯಾಗಿ ಬೇಧಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ನಡೆಸಿದ ದಾಳಿಯಲ್ಲಿ, ಮೂವರು ಆರೋಪಿಗಳನ್ನು ಬಂಧಿಸಿ 10 ಲಕ್ಷ ಮೌಲ್ಯದ 20.63 ಕೆಜಿ ಗಾಂಜಾ ಹಾಗೂ ಸಾಗಾಟಕ್ಕೆ ಬಳಸಿದ್ದ ಆಟೋ ವಶಪಡಿಸಿಕೊಂಡಿದ್ದಾರೆ.
Karnataka News Live 3 January 2026Yellapur Ranjitha murder case - ಹಿಂದೂ ಮಹಿಳೆಯ ಕಗ್ಗೊಲೆ, ಲವ್ ಜಿಹಾದ್ ಶಂಕೆ, ನಾಳೆ ಯಲ್ಲಾಪುರ ಬಂದ್ಗೆ ಕರೆ
Karnataka News Live 3 January 2026ಜನರೊಳಗೆ ಮಾನಭಂಗ ಮಾಡಿದವರಿಗೆ ಒಳ್ಳೆಯದಾಗಲಿ - ದಿಢೀರ್ ಲೈವ್ಗೆ ಬಂದ Anchor Anushree ಹೇಳಿದ್ದೇನು?
Karnataka News Live 3 January 2026ರಾಯಚೂರು - ಅಂಬಾ ದೇವಿಯ ದರ್ಶನ ಆಗಿದ್ದು ನನ್ನ ಪುಣ್ಯ - ಸಿಎಂ ಸಿದ್ದರಾಮಯ್ಯ
Karnataka News Live 3 January 2026ಗದಗ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರ ಆತ್ಮ೧ಹತ್ಯೆ; ಪತ್ತೆಯಾದ ಡೆತ್ ನೋಟ್ನಲ್ಲೇನಿದೆ?
Gadag Ayurvedic Hospital incident: ಗದಗ ಜಿಲ್ಲೆಯ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಡಿ ಗ್ರೂಪ್ ನೌಕರ ಮಹಾಲಿಂಗೇಶ್ವರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಅಸ್ಪಷ್ಟವಾಗಿ ಬರೆದ ಡೆತ್ ನೋಟ್ ಪತ್ತೆಯಾಗಿದೆ.
Karnataka News Live 3 January 2026BBK - ಅವನ ನೋಡಿದ್ದು ಕಣ್ಣು, ಪ್ರೀತಿಸಿದ್ದು ಮನಸ್ಸು, ಬ್ರೇಕ್ ಆಗಿದ್ದು ಹಾರ್ಟು! ಲವ್ ಫೇಲ್ ಬಗ್ಗೆ ರಕ್ಷಿತಾ ಶೆಟ್ಟಿ ಹೇಳಿಕೆ!
ಬಿಗ್ ಬಾಸ್ ಫೈನಲಿಸ್ಟ್ ರಕ್ಷಿತಾ ಶೆಟ್ಟಿ ಅವರು ತಮ್ಮ ಪ್ರೀತಿ ಹಾಗೂ ಲವ್ ಬ್ರೇಕಪ್ ಕುರಿತು ಮಾತನಾಡಿದ್ದಾರೆ. ಹುಡುಗನನ್ನು ನೋಡಿ ಪ್ರೀತಿಯಾಗಿ, ಮನಸ್ಸಿಗೆ ಖುಷಿಯಾಗಿ, ನಂತರ ಬ್ರೇಕಪ್ ಆದಾಗ ಹೃದಯ ಒಡೆಯುತ್ತದೆ. ಅಂತಿಮವಾಗಿ, ನೋಡಿದ ಕಣ್ಣುಗಳೇ ಅಳುವ ಮೂಲಕ ಶಿಕ್ಷೆ ಅನುಭವಿಸುತ್ತವೆ ಎಂದಿದ್ದಾರೆ.
Karnataka News Live 3 January 2026ಶಾಸಕ ಲಕ್ಷ್ಮಣ ಸವದಿ ಅಂಡ್ ಸನ್ಸ್ನಿಂದ ಡಿಸಿಸಿ ಬ್ಯಾಂಕ್ ನೌಕರನ ಮೇಲೆ ಹಲ್ಲೆ; ಮನೆಗೆ ಕರೆಸಿಕೊಂಡು ಥಳಿತ!
ಅಥಣಿ ಶಾಸಕ ಲಕ್ಷ್ಮಣ ಸವದಿ ಮತ್ತು ಅವರ ಪುತ್ರ ಚಿದಾನಂದ ಸವದಿ ಅವರು ಡಿಸಿಸಿ ಬ್ಯಾಂಕ್ ನೌಕರ ಹಾಗೂ ಹಾಲುಮತ ಸಮಾಜದ ಮುಖಂಡರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸತ್ಯಪ್ಪ ಬಾಗನ್ನವರ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಮತ್ತು ಅವರ ಪುತ್ರನ ತಕ್ಷಣದ ಬಂಧನಕ್ಕೆ ಆಗ್ರಹಿಸಲಾಗಿದೆ.
Karnataka News Live 3 January 2026ಲೋಕಲ್ ಕ್ರಿಕೆಟ್ ಟೂರ್ನಿಯಲ್ಲಿ ಪುಟ್ಟ ಬಾಲಕನ ಕನ್ನಡ-ಇಂಗ್ಲೀಷ್ ಕಮೆಂಟರಿ ವಿಡಿಯೋ ಜನ ಪಿಧಾ
ಲೋಕಲ್ ಕ್ರಿಕೆಟ್ ಟೂರ್ನಿಯಲ್ಲಿ ಪುಟ್ಟ ಬಾಲಕನ ಕನ್ನಡ-ಇಂಗ್ಲೀಷ್ ಕಮೆಂಟರಿ ವಿಡಿಯೋ ಜನ ಪಿಧಾ, ಈ ಬಾಲಕನಿಗೆ ರವಿ ಶಾಸ್ತ್ರಿ ಹಾಗೂ ಹರ್ಷಾ ಬೋಗ್ಲೆ ಕೋಚಿಂಗ್ ನೀಡಿದ್ದಾರೆ ಎಂದು ಹಲವರು ಪ್ರತಿಕ್ರಿಯಿಸಿದ್ದಾರೆ.
Karnataka News Live 3 January 2026Bigg Bossನಲ್ಲಿ ನನ್ನ ಸಾಯಿಸೋ ಪ್ರಯತ್ನ ನಡೆದಿತ್ತು - ಆ ದಿನ ನಡೆದ ಶಾಕಿಂಗ್ ಘಟನೆ ನೆನೆದ ಸಂಗೀತಾ ಶೃಂಗೇರಿ
Karnataka News Live 3 January 2026ಒಂದೇ ಭಾರತ್ ರೈಲಿನಲ್ಲಿ ರೋಮ್ಯಾನ್ಸ್ ಮಾಡಿ ವೈರಲ್ ಆದ ಜೋಡಿಗೆ ಮದುವೆ ಭಾಗ್ಯ
ವಂದೇ ಭಾರತ್ ರೈಲಿನಲ್ಲಿ ಅಸಭ್ಯವಾಗಿ ವರ್ತಿಸಿ ವೈರಲ್ ಆಗಿದ್ದ ಜೋಡಿಯ ಪ್ರಕರಣಕ್ಕೆ ಅಚ್ಚರಿಯ ತಿರುವು ಸಿಕ್ಕಿದೆ. ವಿಡಿಯೋ ವೈರಲ್ ಆಗಿ ತೀವ್ರ ಆಕ್ರೋಶ ವ್ಯಕ್ತವಾದ ನಂತರ, ಎರಡೂ ಕುಟುಂಬದವರು ಸೇರಿ ಈ ಜೋಡಿಗೆ ಮದುವೆ ಮಾಡಲು ಮುಂದಾಗಿದ್ದಾರೆ.
Karnataka News Live 3 January 2026ಮೊದಲ ಮಹಡಿಯಲ್ಲಿ ನಿಂತು ಸತ್ತೋಗ್ತೀನಿ ಎಂದು ಬೊಬ್ಬೆ ಹಾಕಿದ ಯುವಕ; ಈತನ ರಂಪಾಟಕ್ಕೆ ಪೊಲೀಸರೇ ತಬ್ಬಿಬ್ಬು!
ಚಿಕ್ಕಮಗಳೂರು ನಗರದ ನೆಹರೂ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಕಟ್ಟಡದ ಮೇಲೇರಿ ಆತ್ಮ*ಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿ ಆತಂಕ ಸೃಷ್ಟಿಸಿದ್ದ. ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಹೈಡ್ರಾಮಾದಲ್ಲಿ, ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆತನನ್ನು ಯಶಸ್ವಿಯಾಗಿ ರಕ್ಷಿಸಿದರು.
Karnataka News Live 3 January 2026ಇದೇ ಮೊದಲ ಬಾರಿಗೆ ಸಕಾಲದಲ್ಲಿ ಬೆಂ. ದಕ್ಷಿಣ ಹೊಸ ಸಾಧನೆ, ಅಗ್ರ ಮೂರನೇ ಸ್ಥಾನ, ಫಸ್ಟ್ ಪ್ಲೇಸ್ ಯಾವ ಜಿಲ್ಲೆಗೆ?
ಸಕಾಲ ಯೋಜನೆಯಡಿ ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯು ರಾಜ್ಯಕ್ಕೆ ಮೂರನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ ಸ್ವೀಕರಿಸಿದ 57,001 ಅರ್ಜಿಗಳ ಪೈಕಿ 53,955 ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡುವ ಮೂಲಕ ಈ ಐತಿಹಾಸಿಕ ಸಾಧನೆ ಮಾಡಲಾಗಿದೆ.
Karnataka News Live 3 January 2026Ballari Banner row - ರಾಜ್ಯ ಸರ್ಕಾರಕ್ಕೆ ಕಾನೂನು ಕಾಪಾಡಲು ಸಾಧ್ಯವಾಗದಿದ್ರೆ, ಕೇಂದ್ರ ಮುಂದಿನ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತೆ - ಪ್ರಲ್ಹಾದ್ ಜೋಶಿ ಎಚ್ಚರಿಕೆ
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಬಳ್ಳಾರಿ ಗುಂಡಿನ ಚಕಮಕಿ ಮತ್ತು ಕೋಗಿಲು ಬಡಾವಣೆ ತೆರವು ವಿಚಾರವಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವ ಬದಲು ಶಾಸಕರನ್ನು ರಕ್ಷಿಸುತ್ತಿದೆ ಎಂದು ಗಂಭೀರವಾಗಿ ಆರೋಪಿಸಿದರು.