- Home
- News
- State
- Karnataka News Live: BWSSB water restrictions - ಕುಡಿಯುವ ನೀರಲ್ಲಿ ಬೈಕ್, ಕಾರು ತೊಳೆದರೆ ಬೀಳುತ್ತೆ ₹5000 ದಂಡ! ಜಲಮಂಡಳಿ ಕಠಿಣ ಆದೇಶ!
Karnataka News Live: BWSSB water restrictions - ಕುಡಿಯುವ ನೀರಲ್ಲಿ ಬೈಕ್, ಕಾರು ತೊಳೆದರೆ ಬೀಳುತ್ತೆ ₹5000 ದಂಡ! ಜಲಮಂಡಳಿ ಕಠಿಣ ಆದೇಶ!

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಹಾಗೂ ನೆರೆಯ ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಕೃಷ್ಣಾ, ವೇದಗಂಗಾ ಹಾಗೂ ದೂಧಗಂಗಾ ನದಿಗಳ ನೀರಿನ ಮಟ್ಟ ಏರಿಕೆಯಾಗಿದ್ದು, ಬೆಳಗಾವಿ ಜಿಲ್ಲೆಯ ಕೆಲವೆಡೆ ನೆರೆ ಭೀತಿ ಎದುರಾಗಿದೆ. ಮಹಾರಾಷ್ಟ್ರದ ಜಲಾಶಯಗಳಿಂದ ಕೃಷ್ಣಾ ನದಿಗೆ ಸುಮಾರು 80 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ. ಇದರಿಂದಾಗಿ ಚಿಕ್ಕೋಡಿ ಮತ್ತು ನಿಪ್ಪಾಣಿ ತಾಲೂಕು ವ್ಯಾಪ್ತಿಯ ಕೆಳಹಂತದ ಐದು ಸೇತುವೆಗಳು ಜಲಾವೃತವಾಗಿವೆ.
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಯಿಂದಾಗಿ ನಿಪ್ಪಾಣಿ ನಗರ ವ್ಯಾಪ್ತಿಯಲ್ಲಿ ಹಾದು ಹೋಗುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕುಸಿದಿದ್ದು, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಪರದಾಡುವಂತಾಗಿದೆ. ಕೇಂದ್ರ ಸರ್ಕಾರ ಇದನ್ನು 6 ಪಥದ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಿದ್ದು, ಕಳೆದೆರಡು ವರ್ಷಗಳಿಂದ ಕಾಮಗಾರಿ ಭರದಿಂದ ಸಾಗಿದೆ. ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ಕಾಮಗಾರಿ ಇನ್ನೂ ಪೂರ್ಣಗೊಳ್ಳುವ ಮುನ್ನವೇ ಹೆದ್ದಾರಿ ಕುಸಿದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
Karnataka News Live 30 July 2026BWSSB water restrictions - ಕುಡಿಯುವ ನೀರಲ್ಲಿ ಬೈಕ್, ಕಾರು ತೊಳೆದರೆ ಬೀಳುತ್ತೆ ₹5000 ದಂಡ! ಜಲಮಂಡಳಿ ಕಠಿಣ ಆದೇಶ!
Karnataka News Live 30 July 2026Ramayana Trailer - 'ರಾಮಾಯಣ' ಟ್ರೇಲರ್ ರಿಲೀಸ್ ಬಳಿಕ ಜಗತ್ತಿನ ರೆಸ್ಪಾನ್ಸ್ ಹೇಗಿದೆ? ನೆಟ್ಟಿಗರು ಹೇಳ್ತಿರೋದೇನು? ಇಲ್ಲಿ ನೋಡಿ..
ರಾಮಾಯಣ ಚಿತ್ರದ ಬಗ್ಗೆ ಅಂತರ್ಜಾಲದಲ್ಲಿ ಸಿಕ್ಕಾಪಟ್ಟೆ ಚರ್ಚೆ ಶುರುವಾಗಿದೆ. ಅದಕ್ಕೆ ಕಾರಣ ಹಲವು. ರಾಮಾಯಣ ಚಿತ್ರ ಬರುತ್ತೆ ಅಂದಾಗ, ಅದರಲ್ಲಿ ರಾಮನ ಪಾತ್ರವನ್ನು ರಣಬೀರ್ ಕಪೂರ್, ರಾವಣನಾಗಿ ಯಶ್ ಹಾಗೂ ಸೀತೆಯಾಗಿ ಸಾಯಿ ಪಲ್ಲವಿ ನಟಿಸುತ್ತಾರೆ ಎಂಬ ಸುದ್ದಿ ಹೊರಬೀಳುತ್ತಿದ್ದಂತೆ, ಹಲವರು ಪ್ರಶ್ನೆ ಎತ್ತಿದ್ದರು.
Karnataka News Live 30 July 2026KPSC Scam - ಕೆಪಿಎಸ್ಸಿ ನೇಮಕಾತಿ ಹಗರಣ - ಸಿಬಿಐಗೆ ವಹಿಸಲು ಹೈಕೋರ್ಟ್ ಇಂಗಿತ, ಹೇಳಿದ್ದೇನು?
ಬೃಹತ್ ಪ್ರಮಾಣದಲ್ಲಿ ಅಕ್ರಮ ಹಾಗೂ ಭ್ರಷ್ಟಾಚಾರ ನಡೆದಿರುವ ಹಿನ್ನೆಲೆಯಲ್ಲಿ ಪಶು ವೈದ್ಯಾಧಿಕಾರಿ (ಗ್ರೂಪ್-ಬಿ) ಹುದ್ದೆಗಳ ನೇಮಕಾತಿ ಪ್ರಕ್ರಿಯೆ ತನಿಖೆಯನ್ನು ಸಿಐಡಿಗೆ ಸರ್ಕಾರ ವಹಿಸಿದ ಮರುದಿನವೇ, ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಯ (ಸಿಬಿಐ) ತನಿಖೆಗೆ ವಹಿಸಲು ಹೈಕೋರ್ಟ್ ಇಂಗಿತ ವ್ಯಕ್ತಪಡಿಸಿದೆ.