- Home
- News
- State
- Karnataka News Live: ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳಕ್ಕೆ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯ ಕಾರು ತಡೆದು ಪತ್ನಿ-ಮಗನ ಅಪಹರಣ, ಚಿನ್ನ ದರೋಡೆ!
Karnataka News Live: ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳಕ್ಕೆ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯ ಕಾರು ತಡೆದು ಪತ್ನಿ-ಮಗನ ಅಪಹರಣ, ಚಿನ್ನ ದರೋಡೆ!

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಸೋಮವಾರ ಉತ್ತರ ಕನ್ನಡ, ಧಾರವಾಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಸೇರಿ ವಿವಿಧೆಡೆ ಮಳೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕಳೆದೊಂದು ತಿಂಗಳಿಂದ ತೀವ್ರ ಮಳೆ ಕೊರತೆಯಾಗಿತ್ತು. ಸೋಮವಾರ ಉತ್ತಮ ಮಳೆಯಾಗಿದೆ. ಹಿಂದಿನ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯಲ್ಲಿ 32.30 ಮಿ.ಮೀ. ಮಳೆ ಸುರಿದಿದೆ. 7 ದಿನಗಳ ಕಾಲ ಸಮುದ್ರ ಮೇಲೆ 45 - 55 ಕಿ.ಮಿ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ನಿಧಾನಗತಿಯಿಂದ ಮಳೆ ಬಿರುಸು ಪಡೆಯುತ್ತಿದ್ದು, ಸೋಮವಾರ ಮಂಗಳೂರು ಸೇರಿದಂತೆ ಜಿಲ್ಲೆಯ ಸುಳ್ಯ, ಕಡಬ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ, ಮೂಡುಬಿದಿರೆ, ಮೂಲ್ಕಿ, ಮಂಗಳೂರು ತಾಲೂಕಿನ ವಿವಿಧೆಡೆ ಧಾರಕಾರ ಮಳೆಯಾಗಿದೆ. ಜೂ.30, ಜು.1ರಂದು ಜಿಲ್ಲೆಗ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಶೃಂಗೇರಿ ತಾಲೂಕಿನಾದ್ಯಂತ ಮಳೆ ಮುಂದುವರಿದಿದ್ದು, ತಾಲೂಕಿನ ಕೆರೆಕಟ್ಟೆ,ನೆಮ್ಮಾರು ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಡುವು ನೀಡದೇ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿರುವುದರಿಂದ ತುಂಗಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾಗಿದೆ.
Karnataka News Live 30 June 2026ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳಕ್ಕೆ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯ ಕಾರು ತಡೆದು ಪತ್ನಿ-ಮಗನ ಅಪಹರಣ, ಚಿನ್ನ ದರೋಡೆ!
Karnataka News Live 30 June 2026ನಿವೃತ್ತಿ ಹೊಂದಿದ ಶಿಕ್ಷಕನಿಗೆ ಬೈಕ್ ನೀಡಿದ ವಿದ್ಯಾರ್ಥಿಗಳು; ಅಮ್ಮನ ಜೊತೆ ಮೊದಲ ರೈಡ್
Karnataka News Live 30 June 2026ಮಂಗಳೂರು - ಅಲೆಗಳ ಅಬ್ಬರಕ್ಕೆ ಅರಬ್ಬಿಯ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 6 ಮಂದಿ ಬೆಸ್ತರ ರಕ್ಷಣೆ
Karnataka News Live 30 June 2026ಭಾರಿ ಮಳೆಗೆ ತಾತ್ಕಾಲಿಕ ರಸ್ತೆಗೆ ಹಾನಿ, ಸೇತುವೆ ನಿರ್ಮಾಣ ಸ್ಥಳದಲ್ಲಿ ಸಂಕಷ್ಟ, ಸುತ್ತು ಬಳಸು ದಾರಿಯೇ ಗತಿ
Karnataka News Live 30 June 2026'ರಾಜಕೀಯದಲ್ಲಿ ಓಡ್ತಿರಬೇಕು, ಓಡದಿದ್ರೆ ಹಿಂದೆ ಬೀಳ್ತೀವಿ..' ಸಿದ್ದರಾಮಯ್ಯ ಕಡೆಗಣನೆ ಬಗ್ಗೆ ಸತೀಶ್ ಜಾರಕಿಹೊಳಿ ಹಿಂಗ್ಯಾಕ ಅಂದ್ರು!?
‘ರಾಜಕೀಯದಲ್ಲಿ ಓಡುತ್ತಲೇ ಇರಬೇಕು, ಇಲ್ಲದಿದ್ರೆ ಹಿಂದೆ ಬೀಳ್ತೀವಿ’ ಒಂದು ಕಾಲದಲ್ಲಿ ಸಿದ್ದರಾಮಯ್ಯರ ಅತ್ಯಂತ ಆಪ್ತರಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಂಪೇಗೌಡ ಜಯಂತಿಯಲ್ಲಿ ಸಿದ್ದರಾಮಯ್ಯರ ಕಡೆಗಣನೆ ಕುರಿತಂತೆ ಅಚ್ಚರಿ ಗೊಂದಲಮಯ ಹೇಳಿಕೆ ನೀಡಿದ್ದಾರೆ.ಅವರ ಮಾತಿನ ಹಿಂದಿನ ಅರ್ಥವೇನು?
Karnataka News Live 30 June 2026ಈ ವರ್ಷ ಮೊದಲ ಬಾರಿಗೆ ತುಂಗಾ & ಭದ್ರಾ ನದಿ ನೀರಿನ ಮಟ್ಟದಲ್ಲಿ ಏರಿಕೆ; ಮಲೆನಾಡಿನಲ್ಲಿ ಮಳೆ
ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ತುಂಗಾ ಮತ್ತು ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ದಿಢೀರ್ ಏರಿಕೆಯಾಗಿದೆ. ಶೃಂಗೇರಿಯಲ್ಲಿ ಪ್ರವಾಹದ ಆತಂಕ ಸೃಷ್ಟಿಯಾಗಿದ್ದು, ಸೇತುವೆ ಕಾಮಗಾರಿಯ ಕ್ರೇನ್ ಒಂದು ನದಿಯಲ್ಲಿ ಮುಳುಗಡೆಯಾಗಿದೆ.
Karnataka News Live 30 June 2026Belagavi - ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸಗೊಳಿಸಿದ ಮಹಿಳೆ ಕುಟುಂಬಸ್ಥರು
ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಪರಾರಿಯಾದ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಯುವಕನ ಮನೆ ಮೇಲೆ ದಾಳಿ ನಡೆಸಿ, ಧ್ವಂಸಗೊಳಿಸಿದ್ದಾರೆ. ಸಂತ್ರಸ್ತ ಕುಟುಂಬವು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
Karnataka News Live 30 June 2026ಒಕ್ಕಲಿಗರ ಸಂಘದ ಹಗರಣ - ನನ್ನ ಬಳಿ ದಾಖಲೆ ಇವೆ, ಇಂಚಿಂಚು ಬಿಚ್ಚಿಡ್ತೇನೆ - ಉಮಾಪತಿ ಶ್ರೀನಿವಾಸಗೌಡ
ರಾಜ್ಯ ಒಕ್ಕಲಿಗರ ಸಂಘದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ನಿರ್ಮಾಪಕ, ಸಂಘದ ನಿರ್ದೇಶಕರೂ ಆಗಿರುವ ಉಮಾಪತಿ ಶ್ರೀನಿವಾಸಗೌಡ ಮತ್ತೆ ಗಂಭೀರ ಆರೋಪ ಮಾಡಿದ್ದು, ಎಲ್ಲ ಹಗರಣಗಳ ದಾಖಲೆ ನನ್ನ ಬಳಿ ಇವೆ. ಇಂಚಿಂಚು ಬಿಚ್ಚಿಡುತ್ತೇನೆ ಎಂದು ಎಚ್ಚರಿಸಿದ್ದಾರೆ. ಏನಿದು ಹಗರಣ?
Karnataka News Live 30 June 2026ಬೆಂಗಳೂರು-ಮಂಗಳೂರು ಚತುಷ್ಪಥ ರೈಲ್ವೆ ಮಾರ್ಗ - ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್
ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಚನ್ನಪಟ್ಟಣದಲ್ಲಿ ಮೇಲ್ಸೇತುವೆ ಉದ್ಘಾಟಿಸಿ, ಬೆಂಗಳೂರಿನಿಂದ ಮಂಗಳೂರಿಗೆ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿಪಡಿಸುವ ಮಹತ್ವದ ಯೋಜನೆಯನ್ನು ಪ್ರಕಟಿಸಿದರು. ಇ
Karnataka News Live 30 June 2026Karnataka SIR - ಎಸ್ಐಆರ್ನಲ್ಲಿ ಮತಹಕ್ಕು ಕಳೆದುಕೊಂಡ್ರೆ ಗ್ಯಾರಂಟಿ ಇಲ್ಲ, ಪಿಂಚಣಿ, ಸರ್ಕಾರಿ ಮನೆ ಕೂಡ ಸಿಗೋಲ್ಲ! ಸಿಎಂ ಹೇಳಿದ್ದೇನು?
ರಾಜ್ಯದಲ್ಲಿ ಇಂದಿನಿಂದ ಎಸ್ಐಆರ್ ನಡೆಯಲಿರುವ ಹಿನ್ನೆಲೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಎಸ್ಐಆರ್ ಪ್ರಕ್ರಿಯೆಯಲ್ಲಿ ಎಲ್ಲ ಮತದಾರರು ಕಡ್ಡಾಯವಾಗಿ ಬೂತ್ ಮಟ್ಟದ ಅಧಿಕಾರಿಗಳಿಂದ ಭರ್ತಿ ಮಾಡಿ ಅಗತ್ಯ ದಾಖಲೆ ನೀಡುವಂತೆ ಮನವಿ ಮಾಡಿದ್ದಾರೆ. ಮತಹಕ್ಕು ಕಳೆದುಕೊಂಡರೆ ಏನಾಗುತ್ತೆ?