10:08 AM (IST) Jun 30

Karnataka News Live 30 June 2026ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳಕ್ಕೆ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯ ಕಾರು ತಡೆದು ಪತ್ನಿ-ಮಗನ ಅಪಹರಣ, ಚಿನ್ನ ದರೋಡೆ!

ಮಂಗಳೂರಿನ ಬೈಕಂಪಾಡಿ ಬಳಿ, ಮಹಾರಾಷ್ಟ್ರದಿಂದ ಕೇರಳಕ್ಕೆ ತೆರಳುತ್ತಿದ್ದ ಚಿನ್ನದ ವ್ಯಾಪಾರಿಯ ಕುಟುಂಬವನ್ನು ಅಡ್ಡಗಟ್ಟಿದ ದರೋಡೆಕೋರರು, ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ, ಅವರ ಪತ್ನಿ ಮತ್ತು ಮಗನನ್ನು ಕಾರು ಸಮೇತ ಅಪಹರಿಸಿ, 180 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಈ ಘಟನೆಯ ಹಿಂದೆ ಆಪ್ತರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.
Read Full Story
09:10 AM (IST) Jun 30

Karnataka News Live 30 June 2026ನಿವೃತ್ತಿ ಹೊಂದಿದ ಶಿಕ್ಷಕನಿಗೆ ಬೈಕ್ ನೀಡಿದ ವಿದ್ಯಾರ್ಥಿಗಳು; ಅಮ್ಮನ ಜೊತೆ ಮೊದಲ ರೈಡ್

ಕೊಪ್ಪಳ ಜಿಲ್ಲೆಯ ಮಸಬಹಂಚಿನಾಳ ಗ್ರಾಮದ ನಿವೃತ್ತ ಶಿಕ್ಷಕ ಜಿ.ಎಂ. ನದಾಫ್ ಅವರಿಗೆ, ಅವರ ಹಳೆಯ ವಿದ್ಯಾರ್ಥಿಗಳು ಗುರುವಂದನಾ ಕಾರ್ಯಕ್ರಮದಲ್ಲಿ ಬೈಕ್ ಉಡುಗೊರೆಯಾಗಿ ನೀಡಿದ್ದಾರೆ. 31 ವರ್ಷಗಳ ಸೇವೆ ಸಲ್ಲಿಸಿದ ಗುರುವಿನ ಈ ಉಡುಗೊರೆಗೆ ಭಾವುಕರಾದ ನದಾಫ್, ತಮ್ಮ 85 ವರ್ಷದ ತಾಯಿಯನ್ನು ಕೂರಿಸಿಕೊಂಡು ಮೊದಲ ಸವಾರಿ ಮಾಡಿದರು.
Read Full Story
09:06 AM (IST) Jun 30

Karnataka News Live 30 June 2026ಮಂಗಳೂರು - ಅಲೆಗಳ ಅಬ್ಬರಕ್ಕೆ ಅರಬ್ಬಿಯ ಆಳ ಸಮುದ್ರದಲ್ಲಿ ಮೀನುಗಾರಿಕಾ ಬೋಟ್ ಮುಳುಗಡೆ, 6 ಮಂದಿ ಬೆಸ್ತರ ರಕ್ಷಣೆ

ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ ಹವಾಮಾನದಿಂದಾಗಿ 'ಐಎಫ್‌ಬಿ ಮಂಜುಮಾತಾ' ಎಂಬ ಮೀನುಗಾರಿಕಾ ಬೋಟ್‌ ಮುಳುಗಡೆಯಾಗಿದೆ. ಭಾರತೀಯ ಕೋಸ್ಟ್ ಗಾರ್ಡ್‌ನ 'ಐಸಿಜಿಎಸ್ ಸಚೇತ್' ಹಡಗು, ರಿಮೋಟ್ ಚಾಲಿತ ಲೈಫ್‌ಬಾಯ್‌ಗಳನ್ನು ಬಳಸಿ ಬೋಟ್‌ನಲ್ಲಿದ್ದ ಎಲ್ಲಾ ಆರು ಮೀನುಗಾರರನ್ನು ಯಶಸ್ವಿಯಾಗಿ ರಕ್ಷಿಸಿದೆ. ರಕ್ಷಿಸಲ್ಪಟ್ಟ ಮೀನುಗಾರರನ್ನು ಸುರಕ್ಷಿತವಾಗಿ ನ್ಯೂ ಮಂಗಳೂರು ಬಂದರಿಗೆ ಕರೆತರಲಾಗಿದೆ.
Read Full Story
08:51 AM (IST) Jun 30

Karnataka News Live 30 June 2026ಭಾರಿ ಮಳೆಗೆ ತಾತ್ಕಾಲಿಕ ರಸ್ತೆಗೆ ಹಾನಿ, ಸೇತುವೆ ನಿರ್ಮಾಣ ಸ್ಥಳದಲ್ಲಿ ಸಂಕಷ್ಟ, ಸುತ್ತು ಬಳಸು ದಾರಿಯೇ ಗತಿ

ಬೆಳ್ತಂಗಡಿಯ ಅಂಬಡಬೆಟ್ಟು ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ಸೇತುವೆಯ ಬಳಿ ನಿರ್ಮಿಸಿದ್ದ ತಾತ್ಕಾಲಿಕ ರಸ್ತೆಯು ಭಾರಿ ಮಳೆಗೆ ಕೊಚ್ಚಿಹೋಗಿದೆ. ಇದರಿಂದಾಗಿ ಗುರಿಪಳ್ಳ, ನಡ, ಇಂದಬೆಟ್ಟು ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಕುಟುಂಬಗಳು ಉಜಿರೆ, ಬೆಳ್ತಂಗಡಿ ಮತ್ತು ಮುಂಡಾಜೆಗೆ ತೆರಳಲು ಕಿಲೋಮೀಟರ್‌ಗಟ್ಟಲೆ ಸುತ್ತು ಬಳಸಿ ಪ್ರಯಾಣಿಸುವ ಅನಿವಾರ್ಯತೆ ಎದುರಾಗಿದೆ.
Read Full Story
08:28 AM (IST) Jun 30

Karnataka News Live 30 June 2026'ರಾಜಕೀಯದಲ್ಲಿ ಓಡ್ತಿರಬೇಕು, ಓಡದಿದ್ರೆ ಹಿಂದೆ ಬೀಳ್ತೀವಿ..' ಸಿದ್ದರಾಮಯ್ಯ ಕಡೆಗಣನೆ ಬಗ್ಗೆ ಸತೀಶ್ ಜಾರಕಿಹೊಳಿ ಹಿಂಗ್ಯಾಕ ಅಂದ್ರು!?

‘ರಾಜಕೀಯದಲ್ಲಿ ಓಡುತ್ತಲೇ ಇರಬೇಕು, ಇಲ್ಲದಿದ್ರೆ ಹಿಂದೆ ಬೀಳ್ತೀವಿ’ ಒಂದು ಕಾಲದಲ್ಲಿ ಸಿದ್ದರಾಮಯ್ಯರ ಅತ್ಯಂತ ಆಪ್ತರಾಗಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ಕೆಂಪೇಗೌಡ ಜಯಂತಿಯಲ್ಲಿ ಸಿದ್ದರಾಮಯ್ಯರ ಕಡೆಗಣನೆ ಕುರಿತಂತೆ ಅಚ್ಚರಿ ಗೊಂದಲಮಯ ಹೇಳಿಕೆ ನೀಡಿದ್ದಾರೆ.ಅವರ ಮಾತಿನ ಹಿಂದಿನ ಅರ್ಥವೇನು?

Read Full Story
08:19 AM (IST) Jun 30

Karnataka News Live 30 June 2026ಈ ವರ್ಷ ಮೊದಲ ಬಾರಿಗೆ ತುಂಗಾ & ಭದ್ರಾ ನದಿ ನೀರಿನ ಮಟ್ಟದಲ್ಲಿ ಏರಿಕೆ; ಮಲೆನಾಡಿನಲ್ಲಿ ಮಳೆ

ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ತುಂಗಾ ಮತ್ತು ಭದ್ರಾ ನದಿಗಳ ನೀರಿನ ಮಟ್ಟದಲ್ಲಿ ದಿಢೀರ್ ಏರಿಕೆಯಾಗಿದೆ. ಶೃಂಗೇರಿಯಲ್ಲಿ ಪ್ರವಾಹದ ಆತಂಕ ಸೃಷ್ಟಿಯಾಗಿದ್ದು, ಸೇತುವೆ ಕಾಮಗಾರಿಯ ಕ್ರೇನ್ ಒಂದು ನದಿಯಲ್ಲಿ ಮುಳುಗಡೆಯಾಗಿದೆ.

Read Full Story
07:49 AM (IST) Jun 30

Karnataka News Live 30 June 2026Belagavi - ವಿವಾಹಿತೆ ಜೊತೆ ಪರಾರಿಯಾದ ಯುವಕನ ಮನೆ ಧ್ವಂಸಗೊಳಿಸಿದ ಮಹಿಳೆ ಕುಟುಂಬಸ್ಥರು

ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಪರಾರಿಯಾದ ಘಟನೆ ನಡೆದಿದೆ. ಇದರಿಂದ ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಯುವಕನ ಮನೆ ಮೇಲೆ ದಾಳಿ ನಡೆಸಿ, ಧ್ವಂಸಗೊಳಿಸಿದ್ದಾರೆ. ಸಂತ್ರಸ್ತ ಕುಟುಂಬವು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

Read Full Story
07:44 AM (IST) Jun 30

Karnataka News Live 30 June 2026ಒಕ್ಕಲಿಗರ ಸಂಘದ ಹಗರಣ - ನನ್ನ ಬಳಿ ದಾಖಲೆ ಇವೆ, ಇಂಚಿಂಚು ಬಿಚ್ಚಿಡ್ತೇನೆ - ಉಮಾಪತಿ ಶ್ರೀನಿವಾಸಗೌಡ

ರಾಜ್ಯ ಒಕ್ಕಲಿಗರ ಸಂಘದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಆರೋಪ ಸಂಬಂಧ ನಿರ್ಮಾಪಕ, ಸಂಘದ ನಿರ್ದೇಶಕರೂ ಆಗಿರುವ ಉಮಾಪತಿ ಶ್ರೀನಿವಾಸಗೌಡ ಮತ್ತೆ ಗಂಭೀರ ಆರೋಪ ಮಾಡಿದ್ದು, ಎಲ್ಲ ಹಗರಣಗಳ ದಾಖಲೆ ನನ್ನ ಬಳಿ ಇವೆ. ಇಂಚಿಂಚು ಬಿಚ್ಚಿಡುತ್ತೇನೆ ಎಂದು ಎಚ್ಚರಿಸಿದ್ದಾರೆ. ಏನಿದು ಹಗರಣ? 

Read Full Story
07:30 AM (IST) Jun 30

Karnataka News Live 30 June 2026ಬೆಂಗಳೂರು-ಮಂಗಳೂರು ಚತುಷ್ಪಥ ರೈಲ್ವೆ ಮಾರ್ಗ - ವಿಜಯಪುರಕ್ಕೆ ವಂದೇ ಭಾರತ್ ಸ್ಲೀಪರ್

ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಚನ್ನಪಟ್ಟಣದಲ್ಲಿ ಮೇಲ್ಸೇತುವೆ ಉದ್ಘಾಟಿಸಿ, ಬೆಂಗಳೂರಿನಿಂದ ಮಂಗಳೂರಿಗೆ ಚತುಷ್ಪಥ ರೈಲು ಮಾರ್ಗ ಅಭಿವೃದ್ಧಿಪಡಿಸುವ ಮಹತ್ವದ ಯೋಜನೆಯನ್ನು ಪ್ರಕಟಿಸಿದರು. ಇ

Read Full Story
07:15 AM (IST) Jun 30

Karnataka News Live 30 June 2026Karnataka SIR - ಎಸ್‌ಐಆರ್‌ನಲ್ಲಿ ಮತಹಕ್ಕು ಕಳೆದುಕೊಂಡ್ರೆ ಗ್ಯಾರಂಟಿ ಇಲ್ಲ, ಪಿಂಚಣಿ, ಸರ್ಕಾರಿ ಮನೆ ಕೂಡ ಸಿಗೋಲ್ಲ! ಸಿಎಂ ಹೇಳಿದ್ದೇನು?

ರಾಜ್ಯದಲ್ಲಿ ಇಂದಿನಿಂದ ಎಸ್‌ಐಆರ್ ನಡೆಯಲಿರುವ ಹಿನ್ನೆಲೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಎಲ್ಲ ಮತದಾರರು ಕಡ್ಡಾಯವಾಗಿ ಬೂತ್ ಮಟ್ಟದ ಅಧಿಕಾರಿಗಳಿಂದ ಭರ್ತಿ ಮಾಡಿ ಅಗತ್ಯ ದಾಖಲೆ ನೀಡುವಂತೆ ಮನವಿ ಮಾಡಿದ್ದಾರೆ. ಮತಹಕ್ಕು ಕಳೆದುಕೊಂಡರೆ ಏನಾಗುತ್ತೆ?

Read Full Story
07:13 AM (IST) Jun 30

Karnataka News Live 30 June 2026ಯಲಹಂಕದಲ್ಲಿ ಕೊಯಮತ್ತೂರು-ಮುಂಬೈ ಎಕ್ಸ್‌ಪ್ರೆಸ್‌ ರೈಲು ನಿಲುಗಡೆ; ಮೆಗಾ ರೈಲ್ವೆ ಟರ್ಮಿನಲ್!

ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಅವರು ಯಲಹಂಕ ರೈಲು ನಿಲ್ದಾಣದಲ್ಲಿ ಕೊಯಮತ್ತೂರು-ಮುಂಬೈ ಎಕ್ಸ್‌ಪ್ರೆಸ್‌ ರೈಲಿಗೆ ಹೊಸ ನಿಲುಗಡೆಗೆ ಚಾಲನೆ ನೀಡಿದರು. ಈ ಸೌಲಭ್ಯದಿಂದ ಸ್ಥಳೀಯ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ಬೆಂಗಳೂರಿನ ಇತರ ನಿಲ್ದಾಣಗಳ ಮೇಲಿನ ಒತ್ತಡ ಕಡಿಮೆ ಮಾಡಲು ಯಲಹಂಕದಲ್ಲಿ ಹೊಸ ಮೆಗಾ ರೈಲ್ವೆ ಟರ್ಮಿನಲ್ ನಿರ್ಮಿಸಲು ಯೋಜಿಸಲಾಗಿದೆ.
Read Full Story