ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ, ಐದು ದಿನದ ಮಗುವನ್ನು ಬಿಟ್ಟು ಬಾಣಂತಿಯೊಬ್ಬರು ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲಿ ಸೆರೆಯಾದ ಈ ಘಟನೆಯ ಹಿಂದೆ ದೆವ್ವದ ಕೈವಾಡವಿದೆ ಎಂದು ಸ್ಥಳೀಯರು ಮಾತನಾಡಿಕೊಳ್ಳುತ್ತಿದ್ದು, ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
- Home
- News
- State
- Karnataka News Live: Raichur - ಬಾಣಂತಿಯ ನಿಗೂಢ ಸಾವಿಗೆ ದೆವ್ವ ಕಾರಣ? CCTV ದೃಶ್ಯ ನೋಡಿ ಬೆಚ್ಚಿದ ಸ್ಥಳೀಯರು
Karnataka News Live: Raichur - ಬಾಣಂತಿಯ ನಿಗೂಢ ಸಾವಿಗೆ ದೆವ್ವ ಕಾರಣ? CCTV ದೃಶ್ಯ ನೋಡಿ ಬೆಚ್ಚಿದ ಸ್ಥಳೀಯರು

ದಾವಣಗೆರೆ: ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಷೇತ್ರಗಳ ಉಪಚುನಾವಣೆಯಲ್ಲಿ ಯಾರೇ ಗೆದ್ದರೂ, ಸೋತರೂ ರಾಜ್ಯ ಸರ್ಕಾರವೇನೂ ಬಿದ್ದು ಹೋಗುವುದಿಲ್ಲ. ಕೇಂದ್ರ ಸರ್ಕಾರಕ್ಕೂ ಏನೂ ಆಗುವುದಿಲ್ಲ. ಉಪ ಚುನಾವಣೆ ಫಲಿತಾಂಶ ಎರಡೂ ಸರ್ಕಾರಗಳ ಸಾಧನೆ ಮೇಲೆ ನೀಡುವ ಸಂದೇಶ ಎಂದು ಮಾಜಿ ಸಂಸದ, ಕಾಂಗ್ರೆಸ್ ಹಿರಿಯ ಮುಖಂಡ ವಿ.ಎಸ್.ಉಗ್ರಪ್ಪ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ. ಕೆ.ಶಿ. ಇಬ್ಬರೂ ಕಾಂಗ್ರೆಸ್ ಸರ್ಕಾರ ಕೊಟ್ಟ ಭರವಸೆಗಳನ್ನು ವೇಗವಾಗಿ ಈಡೇರಿಸುವ ಕೆಲಸ ಮಾಡಿದ್ದಾರೆ. 2014ರಲ್ಲಿ ಅಧಿಕಾರಕ್ಕೆ ಬರುವಾಗ ವಿದೇಶದಲ್ಲಿರುವ ಕಪ್ಪುಹಣ ತರುತ್ತೇವೆಂದು ನರೇಂದ್ರ ಮೋದಿ ಹೇಳಿದ್ದರು. ಬೆಲೆ ಇಳಿಸುತ್ತೇವೆ ಎಂದಿದ್ದರು. ಆದರೆ, ಅದು ಯಾವುದನ್ನೂ ಮಾಡಲಿಲ್ಲ. ವಚನ ಭ್ರಷ್ಟರು ಯಾರಾದರೂ ಇದ್ದರೆ ಅದು ಬಿಜೆಪಿಯವರು. ಆರ್ಎಸ್ಎಸ್ ನೋಂದಣಿಯಾಗಿಲ್ಲ. ಮತ್ತೊಂದು ಕಡೆ ಹಣದ ಲೆಕ್ಕ ಇಲ್ಲ ಎಂದರು. ದಾವಣಗೆರೆ ಚುನಾವಣೆ ಕಾಂಗ್ರೆಸ್ ಹಾಗೂ ಆರೆಸ್ಸೆಸ್- ಬಿಜೆಪಿಯ ಸಿದ್ಧಾಂತಗಳ ವಿರುದ್ಧದ ಸಂಘರ್ಷವಾಗಿದೆ. ರಾಜ್ಯದ ಶೇ.56ರಷ್ಟಿರುವ ಪರಿಶಿಷ್ಟರ ಬಗ್ಗೆ ಅಭಿಮಾನವಿದ್ದಿದ್ದರೆ ಮೋದಿ ಸರ್ಕಾರ, ಎಸ್ಸಿ-ಎಸ್ಟಿ ಮೀಸಲಾತಿ ಕಾಯ್ದೆಯನ್ನು ಸಂವಿಧಾನದ 9ನೇ ಷೆಡ್ಯೂಲ್ಗೆ ಸೇರಿಸಬಹುದಿತ್ತು. ಈ ಜನರಿಗೆ ಸಾಮಾಜಿಕ ಕೊಡಲಿ ಪೆಟ್ಟು ನೀಡಿರುವ ಬಿಜೆಪಿ ಎಸ್ಸಿ-ಎಸ್ಟಿ, ಅಹಿಂದ ಮತಗಳನ್ನು ಹೇಗೆ ಕೇಳುತ್ತದೆ? ಎಂದು ಪ್ರಶ್ನಿಸಿದರು.
Karnataka News LiveRaichur - ಬಾಣಂತಿಯ ನಿಗೂಢ ಸಾವಿಗೆ ದೆವ್ವ ಕಾರಣ? CCTV ದೃಶ್ಯ ನೋಡಿ ಬೆಚ್ಚಿದ ಸ್ಥಳೀಯರು
Karnataka News Liveಮೆಲ್ಲಗೆ ಬರ್ತಾನೆ, ಕಾಂಪೌಂಡ್ ಹಾರ್ತಾನೆ; ಅತ್ತಿತ್ತ ನೋಡಿ ಮಹಿಳೆಯರ ಒಳಉಡುಪು ಕದಿತಾನೆ!
Karnataka News Liveಸಕ್ಕರೆ, ತೈಲ ಕಡಿಮೆ ಮಾಡಿ, ಆರೋಗ್ಯ ಕಾಯ್ದುಕೊಳ್ಳಿ - ಮೋದಿ
ಸಕ್ಕರೆ ಸೇವನೆ ಕಡಿಮೆ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಮನವಿ ಮಾಡಿದರು. ಮಾಸಿಕ ಮನ್ ಕೀ ಬಾತ್ ರೇಡಿಯೋ ಭಾಷಣ ಮಾಡಿದ ಅವರು, ‘ಸಕ್ಕರೆ ಸೇವನೆಯನ್ನು ಕಡಿಮೆ ಮಾಡಿ. ಅಡುಗೆ ಎಣ್ಣೆಯ ಬಳಕೆಯನ್ನು ಶೇ.10ರಷ್ಟು ಕಡಿತಗೊಳಿಸಿ.
Karnataka News Liveಬೆಳಗಾವಿ ರೈತ, ಬೆಂಗಳೂರು ಸಂಸ್ಥೆಗೆ ಮೋದಿ ಭೇಷ್
ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ತಮ್ಮ ‘ಮನ್ ಕೀ ಬಾತ್’ ಭಾಷಣದಲ್ಲಿ, ವಿನೂತನ ವಿಧಾನದಲ್ಲಿ ಮೀನು ಸಾಕಣೆ ಮಾಡಿ ಯಶಸ್ಸು ಕಂಡ ಬೆಳಗಾವಿ ತಾಲೂಕಿನ ರೈತ ರಾಜು ಶಿವಲಿಂಗಪ್ಪ ಹುದ್ದಾರ (27) ಅವರನ್ನು ಶ್ಲಾಘಿಸಿದ್ದಾರೆ.
Karnataka News Liveಇರಾನ್ಗೆ ಟ್ರಂಪ್ ಭೂದಾಳಿ ? ತಿಂಗಳಿಂದ ನಡೆಯುತ್ತಿರುವ ಯುದ್ಧ ಮತ್ತಷ್ಟು ವಿಕೋಪದತ್ತ
ಇರಾನ್ ಮೇಲಿನ ವೈಮಾನಿಕ ದಾಳಿ 1 ತಿಂಗಳಿಂದ ನಡೆದಿರುವ ನಡುವೆಯೇ ಅಮೆರಿಕವು ಇದೀಗ ಖಾರ್ಗ್ ದ್ವೀಪದ ಮೇಲೆ ಹಾಗೂ ಹೋರ್ಮುಜ್ ಜಲಸಂಧಿ ಸಮೀಪದ ಪ್ರದೇಶಗಳ ಮೇಲೆ ಭೂಸೇನಾ ಕಾರ್ಯಾಚರಣೆಗೆ ಸಿದ್ಧತೆ ಆರಂಭಿಸಿದೆ ಎಂದು ‘ವಾಷಿಂಗ್ಟನ್ ಪೋಸ್ಟ್’ ಪತ್ರಿಕೆ ವರದಿ ಮಾಡಿದೆ.
Karnataka News Live60 ವರ್ಷದ ಬಳಿಕ ಗೆಳೆಯರ ಭೇಟಿ; ಪದವಿ ಮುಗಿದಾಗ ಇದ್ದಿದ್ದು 122, ಈಗ ಉಳಿದಿರೋದು 12 ಜನ ಮಾತ್ರ
1962-65ರ ಬ್ಯಾಚಿನಲ್ಲಿ ಓದಿದ್ದ ಸಹಪಾಠಿಗಳು 60 ವರ್ಷಗಳ ನಂತರ ತಮ್ಮ 85-86ರ ಇಳಿವಯಸ್ಸಿನಲ್ಲಿ ಮತ್ತೆ ಭೇಟಿಯಾದರು. ಮೂರು ದಿನಗಳ ಕಾಲ ನಡೆದ ಈ ಅಪರೂಪದ ಮರುಮಿಲನದಲ್ಲಿ, 122 ಸಹಪಾಠಿಗಳ ಪೈಕಿ ಉಳಿದಿರುವ 12 ಮಂದಿ ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕುತ್ತಾ ಸಂಭ್ರಮಿಸಿದರು.
Karnataka News Live2.5 ವರ್ಷದ ಮಗು ಮೇಲೆ ತಂದೆ ರೇಪ್ ಕೇಸ್ - ತಾಯಿ ಅನುಪಸ್ಥಿತಿಯಲ್ಲಿ ಬಾಲಕಿ ಹೇಳಿಕೆ ದಾಖಲಿಗೆ ಹೈಕೋರ್ಟ್ ಆಕ್ಷೇಪ
ಎರಡೂವರೆ ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಪ್ರಕರಣದಲ್ಲಿ, ತಾಯಿಯ ಅನುಪಸ್ಥಿತಿಯಲ್ಲಿ ಸಂತ್ರಸ್ತೆಯ ಹೇಳಿಕೆ ದಾಖಲಿಸಿಕೊಂಡ ಅಧೀನ ನ್ಯಾಯಾಲಯದ ಕ್ರಮವನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ. ಪ್ರಕರಣದಲ್ಲಿ ಹೈಕೋರ್ಟ್ ಹೇಳಿದ್ದೇನು?
Karnataka News Liveಟ್ರಂಪ್ ವಿರುದ್ಧ ತವರಲ್ಲೇ ಭುಗಿಲೆದ್ದ ಯುದ್ಧ !
ಇರಾನ್ ಮೇಲಿನ ಯುದ್ಧ ಸೇರಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹಲವು ನಿಲುವುಗಳನ್ನು ವಿರೋಧಿಸಿ ಅಮೆರಿಕ ಹಾಗೂ ಯುರೋಪ್ನಲ್ಲಿ ‘ನೋ ಕಿಂಗ್ಸ್’ (ಸರ್ವಾಧಿಕಾರ ಬೇಡ) ಹೆಸರಿನ ಬೃಹತ್ ರ್ಯಾಲಿ ಹಾಗೂ ಪ್ರತಿಭಟನೆಗಳು ಶನಿವಾರ ನಡೆದಿವೆ.