- Home
- News
- State
- Karnataka News Live: Gadag - ಅಪಾಯದಂಚಿನ ಮಾರ್ಗ - ಜೀವ ಪಣಕ್ಕಿಟ್ಟು ಸಾಗುವ 1 ಕಿ.ಮೀ ರಸ್ತೆ ಪಯಣ, ಆಟೋಗಷ್ಟೇ ದಾರಿ
LIVE NOW
Karnataka News Live: Gadag - ಅಪಾಯದಂಚಿನ ಮಾರ್ಗ - ಜೀವ ಪಣಕ್ಕಿಟ್ಟು ಸಾಗುವ 1 ಕಿ.ಮೀ ರಸ್ತೆ ಪಯಣ, ಆಟೋಗಷ್ಟೇ ದಾರಿ

ಸಾರಾಂಶ
ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಪದಗ್ರಹಣದ ಬಳಿಕ ‘ಕುಮಾರ ಕೃಪ’ದ ಕಲ್ಲಿನ ಕಟ್ಟಡವನ್ನು ಗೃಹ ಕಚೇರಿ ಆಗಿ ಬಳಸುವರೇ ಎಂಬ ಪ್ರಶ್ನೆ ಉದ್ಬವವಾಗಿದೆ. 125 ವರ್ಷಗಳ ಹಿಂದೆ ಮೈಸೂರಿನ ದಿವಾನರಾಗಿದ್ದ ಕೆ.ಶೇಷಾದ್ರಿ ಅಯ್ಯರ್ ಅವರ ನಿವಾಸವಾಗಿದ್ದ ಕುಮಾರಕೃಪ ಅತಿಥಿ ಗೃಹ ಈಗ ರಾಜ್ಯ ಸರ್ಕಾರದ ಆಸ್ತಿ. ಮಹಾತ್ಮಗಾಂಧೀಜಿ, ರಾಜೀವ್ಗಾಂಧಿ ಹಾಗೂ ಇಂದಿರಾಗಾಂಧಿ ಅವರು ಸಹ ತಂಗಿದ್ದರು ಎನ್ನಲಾದ ಈ ಕಟ್ಟಡವನ್ನು ಡಿ.ಕೆ.ಶಿವಕುಮಾರ್ ಅವರು ಗೃಹ ಕಚೇರಿ ಆಗಿ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಏಕೆಂದರೆ, ಈ ಕಟ್ಟಡದ ಇನ್ ಹಾಗೂ ಔಟ್ ಗೇಟುಗಳ ಬದಲಾವಣೆ ಹಾಗೂ ದುರಸ್ತಿ ಕಾರ್ಯಕ್ಕೆ ಸೂಚನೆ ಬಂದಿದೆ, ಕಟ್ಟಡದಲ್ಲೂ ಸಣ್ಣ ಪುಟ್ಟ ಬದಲಾವಣೆಗಳ ಮೂಲಕ ವಾಸ್ತು ಪರಿಹಾರಕ್ಕೆ ಲೋಕೋಪಯೋಗಿ ಇಲಾಖೆಗೆ ಸೂಚನೆ ಹೋಗಿದೆ ಎನ್ನಲಾಗುತ್ತಿದೆ.
08:02 AM (IST) May 30
Karnataka News Live 30 May 2026Gadag - ಅಪಾಯದಂಚಿನ ಮಾರ್ಗ - ಜೀವ ಪಣಕ್ಕಿಟ್ಟು ಸಾಗುವ 1 ಕಿ.ಮೀ ರಸ್ತೆ ಪಯಣ, ಆಟೋಗಷ್ಟೇ ದಾರಿ
2019ರಿಂದ ಮಲಪ್ರಭಾ ಮತ್ತು ಬೆಣ್ಣಿಹಳ್ಳ ಪ್ರವಾಹದಿಂದಾಗಿ ಹೊಳೆಆಲೂರು-ಅಮರಗೋಳ ಸಂಪರ್ಕ ರಸ್ತೆ ತೀವ್ರವಾಗಿ ಹದಗೆಟ್ಟಿದೆ. ಸುಮಾರು 1 ಕಿ.ಮೀ ರಸ್ತೆಯು ಬಿರುಕು ಬಿಟ್ಟು ಕುಸಿಯುವ ಹಂತದಲ್ಲಿದ್ದು, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಜೀವ ಭಯದಿಂದ ಸಂಚರಿಸುವಂತಾಗಿದೆ. ಇದಕ್ಕೆ ಶಾಶ್ವತ ಪರಿಹಾರವಾಗಿ ತಡೆಗೋಡೆ ಅಥವಾ ಸೇತುವೆ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
Read Full Story