- Home
- News
- State
- Karnataka News Live 31 August 2026: ಕಾರಂತ ಬಡಾವಣೆ - 17 ಹಳ್ಳಿ, 3069 ಎಕರೆ ಪ್ರದೇಶ; 600 ಮಾಲೀಕರಿಗೆ ಇಂದು ನಿವೇಶನ ಹಂಚಿಕೆ
Karnataka News Live 31 August 2026: ಕಾರಂತ ಬಡಾವಣೆ - 17 ಹಳ್ಳಿ, 3069 ಎಕರೆ ಪ್ರದೇಶ; 600 ಮಾಲೀಕರಿಗೆ ಇಂದು ನಿವೇಶನ ಹಂಚಿಕೆ

ವಿಜಯಪುರ: ಪಾದಯಾತ್ರೆ ಬಿಜೆಪಿಯ ನಿರ್ಧಾರವಾಗಿದೆ. ನಾಗೇಂದ್ರ ರಾಜೀನಾಮೆಗೆ ಅವರೂ ಕಾರಣವಾಗಿರಬಹುದು, ಜೊತೆಗೆ ರಾಜೀನಾಮೆ ನಮ್ಮ ಪಕ್ಷದ ನಿರ್ಧಾರವೂ ಆಗಿರುತ್ತದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಬಿಜೆಪಿಗೆ ಟಾಂಗ್ ನೀಡಿದರು.
ಸಚಿವ ನಾಗೇಂದ್ರ ರಾಜೀನಾಮೆ ಬಳಿಕವೂ ಬಿಜೆಪಿ ಪಾದಯಾತ್ರೆ ಮಾಡುತ್ತಿರುವ ವಿಚಾರವಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಅಷ್ಟೇ ಅಲ್ಲ ವಾಲ್ಮೀಕಿ ಹಗರಣದ ಹಣ ಎಲ್ಲಿ ಹೋಯ್ತು ಎಂದು ಬಿಜೆಪಿ ಪ್ರಶ್ನೆ ಮಾಡಿದ್ದು, ಹಣದ ಕುರಿತು ಸದನದಲ್ಲೇ ಮಾಹಿತಿ ನೀಡಲಾಗಿದೆ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಹಾಗೂ ಈಗ ಸಿಎಂ ಆಗಿರುವ ಡಿ.ಕೆ.ಶಿವಕುಮಾರ್ ಅವರು ಸಹ ಹೇಳಿದ್ದಾರೆ ಎಂದರು.
ಎರಡು ಸಚಿವ ಸ್ಥಾನ ಖಾಲಿ ಹಾಗೂ ಮಹಿಳೆಯರಿಗೆ ಅವಕಾಶ ನೀಡುವ ವಿಚಾರವಾಗಿ ಪ್ರತಿಕ್ರಿಯಿಸಿ, ಹೈಕಮಾಂಡ್ ಎಲ್ಲವನ್ನೂ ತೀರ್ಮಾನ ಮಾಡುತ್ತದೆ. ಯಾರಿಗೆ ಏನು ಕೊಡಬೇಕೆಂದು ತೀರ್ಮಾನಿಸಲಾಗುತ್ತದೆ ಎಂದರು. ವಿಜಯಪುರಕ್ಕೆ ಮತ್ತೊಂದು ಸಚಿವ ಸ್ಥಾನ ನೀಡಬೇಕೆಂದು ಒತ್ತಾಯದ ವಿಚಾರವಾಗಿ ಮಾತನಾಡಿ, ಹಿಂದೆ ಎರಡು ಸಚಿವ ಸ್ಥಾನ ನೀಡಲಾಗಿತ್ತು. ಈ ಬಾರಿ ಒಂದು ಸಚಿವ ಸ್ಥಾನ ಮಾತ್ರ ನೀಡಲಾಗಿದೆ. ಇನ್ನೊಂದು ಸಚಿವ ಸ್ಥಾನ ಸಿಗಬೇಕಿತ್ತು, ಕಾರಣಾಂತರಗಳಿಂದ ನೀಡಿಲ್ಲ. ಎಲ್ಲದಕ್ಕೂ ಕಾಯಬೇಕಾಗುತ್ತದೆ, ಸಮಯ ಬಂದಾಗ ಅವಕಾಶ ಸಿಗುತ್ತದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
Karnataka News Live 31 August 2026ಕಾರಂತ ಬಡಾವಣೆ - 17 ಹಳ್ಳಿ, 3069 ಎಕರೆ ಪ್ರದೇಶ; 600 ಮಾಲೀಕರಿಗೆ ಇಂದು ನಿವೇಶನ ಹಂಚಿಕೆ
Karnataka News Live 31 August 2026Bengaluru - ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾದ ಯುವಕನಿಂದ 3.75 ಲಕ್ಷ ದೋಚಿದ ಯುವತಿ
Karnataka News Live 31 August 2026ನಾಳೆಯಿಂದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ 10 ದಿನ, 175 ಕಿ.ಮೀ. ದೂರ ಕಾಲ್ನಡಿಗೆ
Karnataka News Live 31 August 2026ಹನೂರು ಹಿಂಸಾಚಾರ ಬಗ್ಗೆ ನಕ್ಸಲ್ ನಿಗ್ರಹ ದಳ ತನಿಖೆ?ತನಿಖಾ ಅಖಾಡಕ್ಕೆ NIA ಪ್ರವೇಶ?
Karnataka News Live 31 August 2026ನನಗೀಗ 80, ಎಷ್ಟು ವರ್ಷ ಬದುಕಿರ್ತೀನೋ? ಚುನಾವಣೆಗಳು ಈಗ ತುಂಬಾ ದುಬಾರಿ - ಸಿದ್ದರಾಮಯ್ಯ
Karnataka News Live 31 August 2026ನೀಟ್ ರೋಷ - ಬಿಜೆಪಿ ಕಚೇರಿ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರೀ ಪ್ರತಿಭಟನೆ
ನೀಟ್ ಪರೀಕ್ಷಾ ಅಕ್ರಮ ಮತ್ತು ವಿದ್ಯಾರ್ಥಿಗಳ ಆತ್ಮ*ಹತ್ಯೆ ಖಂಡಿಸಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು, ನೂರಾರು ಕಾರ್ಯಕರ್ತರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.