- Home
- News
- State
- Karnataka News Live: ಬೆಂಗಳೂರು - ಎಂಜಿ ರೋಡ್ ರಷ್ನಲ್ಲಿ ಪತ್ನಿ ನಾಪತ್ತೆ; ಆಘಾತ ತಾಳಲಾರದೆ ಪತಿಗೆ ಪಿಟ್ಸ್!
Karnataka News Live: ಬೆಂಗಳೂರು - ಎಂಜಿ ರೋಡ್ ರಷ್ನಲ್ಲಿ ಪತ್ನಿ ನಾಪತ್ತೆ; ಆಘಾತ ತಾಳಲಾರದೆ ಪತಿಗೆ ಪಿಟ್ಸ್!

ಕೊಪ್ಪಳ: ಮದುವೆಗೂ ಮುನ್ನವೇ ಜನಿಸಿದ ನವಜಾತ ಹೆಣ್ಣು ಶಿಶುವನ್ನು ಮಧ್ಯರಾತ್ರಿ ಕೊರೆಯುವ ಚಳಿಯಲ್ಲಿ ತಾಲೂಕಿನ ಹುಲಿಗಿ ಗ್ರಾಮದ ಹುಲಿಗೆಮ್ಮ ದೇವಸ್ಥಾನದ ಬಳಿ ಮುಳ್ಳು ಬೇಲಿಯಲ್ಲಿ ಬಿಸಾಡಲಾಗಿದ್ದು, ಭದ್ರತಾ ಸಿಬ್ಬಂದಿ ಆ ಮಗುವನ್ನು ರಕ್ಷಿಸಿದ್ದಾರೆ. ಮಗುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮಗು ಆರೋಗ್ಯವಾಗಿದೆ.
ಸೋಮವಾರ ಮಧ್ಯರಾತ್ರಿ 1.10ರ ಸಮಯದಲ್ಲಿ ಹುಲಿಗೆಮ್ಮ ದೇವಸ್ಥಾನದ ಹಿಂಭಾಗದಲ್ಲಿ ಭದ್ರತಾ ಸಿಬ್ಬಂದಿ ಶಿವರಾಜ ಹಿಟ್ನಾಳ ಹಾಗೂ ಮಂಜುನಾಥ ಅಗಳಿಕೇರಿ ಅವರಿಗೆ ಮಗು ಅಳುತ್ತಿರುವ ಧ್ವನಿ ಕೇಳಿಸಿತು. ತಕ್ಷಣ ಮಕ್ಕಳ ಸಹಾಯವಾಣಿ ಮತ್ತು ವೈದ್ಯರು ಹಾಗೂ ದೇವಸ್ಥಾನ ಆಡಳಿತ ಮಂಡಳಿಯನ್ನು ಸಂಪರ್ಕಿಸಿ, ಮಾಹಿತಿ ನೀಡಿದರು. ತಕ್ಷಣ ಮಗುವಿಗೆ ಪಕ್ಕದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು. ಆಗ ತಾನೆ ಜನಿಸಿದ್ದ ಮಗುವನ್ನು ಬೇಲಿಯಲ್ಲಿ ಎಸೆದಿದ್ದರಿಂದ ತರಚಿದ ಗಾಯಗಳಾಗಿವೆ. ಅಲ್ಲದೆ ಮಗುವಿನ ಮೈಗೆ ಮಣ್ಣು, ಹುಲ್ಲು, ಕಡ್ಡಿ ಮೆತ್ತಿಕೊಂಡಿದೆ. ಅದೆಲ್ಲವನ್ನು ಸ್ವಚ್ಛಗೊಳಿಸಲಾಗಿದೆ. ಮಗುವಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದ್ದು, ಜಿಲ್ಲಾಸ್ಪತ್ರೆಯ ಸಿಬ್ಬಂದಿಯ ಆರೈಕೆಯಲ್ಲಿ ಮಗು ಆರೋಗ್ಯವಾಗಿದೆ.
Karnataka News Live 31 December 2025ಬೆಂಗಳೂರು - ಎಂಜಿ ರೋಡ್ ರಷ್ನಲ್ಲಿ ಪತ್ನಿ ನಾಪತ್ತೆ; ಆಘಾತ ತಾಳಲಾರದೆ ಪತಿಗೆ ಪಿಟ್ಸ್!
Karnataka News Live 31 December 2025ಹೊಸವರ್ಷ ಅಮಲಿನಲ್ಲಿ ಮಹಿಳಾ ಪೊಲೀಸ್, ಯುವತಿಯರ ಜೊತೆ ಅನುಚಿತ ವರ್ತನೆ, ನಾಲ್ವರು ವಶಕ್ಕೆ
ಹೊಸವರ್ಷ ಅಮಲಿನಲ್ಲಿ ಮಹಿಳಾ ಪೊಲೀಸ್, ಯುವತಿಯರ ಜೊತೆ ಅನುಚಿತ ವರ್ತನೆ, ನಾಲ್ವರು ವಶಕ್ಕೆ, ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಈ ಘಟನೆ ನಡೆದಿದೆ. ಸಿಸಿಬಿ ಪೊಲೀಸರುು ಯುವಕರನ್ನು ವಶಕ್ಕೆ ಪಡೆದಿದ್ದಾರೆ.
Karnataka News Live 31 December 2025Bengaluru New Year 2026 - ಎಂಜಿ ರೋಡ್ ಬಿಟ್ಟು ಕೋರಮಂಗಲಕ್ಕೆ ಜನಸಾಗರ; ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಜೊತೆ ಟೋಯಿಂಗ್ ಚಾಲಕನ ಕಿರಿಕ್!
Karnataka News Live 31 December 2025ಹೊಸ ವರ್ಷಕ್ಕೆ ಕೆಲವೇ ಹೊತ್ತಲ್ಲಿ ಶಾಕ್! ಕೊಳ್ಳೇಗಾಲದಲ್ಲಿ ಭೀಕರ ಅಗ್ನಿ ಅವಘಡ; ಬೇಕರಿ ಸೇರಿದಂತೆ ಮೂರು ಅಂಗಡಿಗಳು ಭಸ್ಮ!
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಹೊಸ ವರ್ಷದ ಮುನ್ನಾದಿನದಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಮಯೂರ ಬೇಕರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯು ಪಕ್ಕದ ಅಂಗಡಿಗಳಿಗೂ ವ್ಯಾಪಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಾಶವಾಗಿದೆ.
Karnataka News Live 31 December 2025ಬೆಂಗಳೂರು ಹೊಸವರ್ಷ ಸಂಭ್ರಮದಲ್ಲಿ ನಶೆ ಏರಿದ ಮಹಿಳೆಯರಿಗೆ ರಾತ್ರಿ ಇಡಿ ಉಚಿತ ಡ್ರಾಪ್
ಬೆಂಗಳೂರು ಹೊಸವರ್ಷ ಸಂಭ್ರಮದಲ್ಲಿ ನಶೆ ಏರಿದ ಮಹಿಳೆಯರಿಗೆ ರಾತ್ರಿ ಇಡಿ ಉಚಿತ ಡ್ರಾಪ್, ಬೆಂಗಳೂರು ಪೊಲೀಸರು ಜೊತೆ ಆಟೋ ಚಾಲಕರು ಕೈಜೋಡಿಸಿದ್ದಾರೆ. ಈ ಮೂಲಕ ಮಹಿಳೆಯರಿಗೆ ಆಟೋ ಸೇವೆ ನೀಡಲಿದ್ದಾರೆ.
Karnataka News Live 31 December 2025ಮಂಗಳೂರು ಕಂಬಳದಲ್ಲಿ ಹಿರಿಯ ತೀರ್ಪುಗಾರಗೆ ಅವಮಾನ, ಜಾಲತಾಣದಲ್ಲಿ ವ್ಯಾಪಕ ಅಕ್ರೋಶ
Karnataka News Live 31 December 2025ಚಿಕ್ಕಮಗಳೂರು ನೂತನ ಎಸ್ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ
Karnataka News Live 31 December 20252025 ಹಲವು ಘಟನೆಗಳಿಗೆ ಸಾಕ್ಷಿ, ಮದ್ದೂರು ಕೋಮುಗಲಭೆ ಮಂಡ್ಯದ ಪಾಲಿಗೆ ಕರಾಳ, ಸಕ್ಕರೆ ನಾಡಿಗೆ ಸಿಹಿಗಿಂತ ಕಹಿಯೇ ಹೆಚ್ಚು!
2025ನೇ ವರ್ಷವು ಮಂಡ್ಯ ಜಿಲ್ಲೆಯ ಪಾಲಿಗೆ ಹಲವು ಏರಿಳಿತಗಳಿಗೆ ಸಾಕ್ಷಿಯಾಯಿತು. ಮದ್ದೂರಿನಲ್ಲಿ ನಡೆದ ಕೋಮುಗಲಭೆ, ರೈತರ ಆತ್ಮಹತ್ಯೆ, ಕೆಆರ್ಎಸ್ನಲ್ಲಿ ಕಾವೇರಿ ಆರತಿ, ಮತ್ತು 'ತಿಥಿ' ಖ್ಯಾತಿಯ ಗಡ್ಡಪ್ಪನವರ ನಿಧನದಂತಹ ಪ್ರಮುಖ ಘಟನೆಗಳು ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದವು.
Karnataka News Live 31 December 2025ಹೊಸ ವರ್ಷ ಪಾರ್ಟಿ ಮೂಡ್ನಲ್ಲಿದ್ದವರಿಗೆ ಶಾಕ್, ಬೆಂಗಳೂರಿನ ಕೆಲವೆಡೆ ಭಾರಿ ಮಳೆ
ಹೊಸ ವರ್ಷ ಪಾರ್ಟಿ ಮೂಡ್ನಲ್ಲಿದ್ದವರಿಗೆ ಶಾಕ್, ಬೆಂಗಳೂರಿನ ಕೆಲವೆಡೆ ಭಾರಿ ಮಳೆ, ಸಂಭ್ರಮಾಚರಣೆ ಮಾಡುತ್ತಿದ್ದವರು ಕಾರ್ಯಕ್ರಮ ಸ್ಥಗಿತಗೊಳಿಸಿದ್ದಾರೆ. ಕೆಲ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವರು ನಿರಾಸೆಗೊಂಡಿದ್ದಾರೆ.
Karnataka News Live 31 December 2025ಹೊಸ ವರ್ಷ 2026 - ಕರ್ನಾಟಕ ರಾಜ್ಯದ ಸಾರ್ವತ್ರಿಕ ರಜೆಗಳ ಪಟ್ಟಿ, ಕೊಡಗು ಜಿಲ್ಲೆಗೆ ಮಾತ್ರ ಸ್ಪೆಷಲ್ ರಜೆ
ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜೆಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಒಟ್ಟು 20 ಸಾರ್ವತ್ರಿಕ ರಜೆಗಳು ಮತ್ತು 21 ಪರಿಮಿತ ರಜೆಗಳಿದ್ದು, ಕೊಡಗು ಜಿಲ್ಲೆಗೆ ವಿಶೇಷ ಸ್ಥಳೀಯ ರಜೆಗಳನ್ನು ಘೋಷಿಸಲಾಗಿದೆ.
Karnataka News Live 31 December 2025ಹೋರಾಟದಲ್ಲೇ ಉರುಳಿದ 2025ರ ವರ್ಷ, ಬಿಡದಿ ಟೌನ್ ಶಿಪ್ ಯೋಜನೆ ರಾಮನಗರ ಬೆಂಗಳೂರು ದಕ್ಷಿಣವಾಗಿ ಬದಲಾಗಿದ್ದೆ ಸಾಧನೆ!
2025ರಲ್ಲಿ ರಾಮನಗರ ಜಿಲ್ಲೆಯು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾಯಿತು. ಬಿಡದಿ ಟೌನ್ ಶಿಪ್ ಯೋಜನೆ, ರಾಜಕೀಯ ಮೇಲಾಟ, ಮಾನವ-ವನ್ಯಜೀವಿ ಸಂಘರ್ಷ, ಅಪಘಾತಗಳು ಮತ್ತು ಸಾವು-ನೋವುಗಳು ವರ್ಷವಿಡೀ ಸುದ್ದಿಯಲ್ಲಿದ್ದವು. ಇದೇ ವರ್ಷ ನಟಿ ಬಿ. ಸರೋಜಾದೇವಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಮ್ಮನ್ನಗಲಿದರು.
Karnataka News Live 31 December 2025ಹೊಸ ವರ್ಷದ ಕಿಕ್ನಲ್ಲಿ ಡ್ರಿಂಕ್ ಆಂಡ್ ಡ್ರೈವ್ ಮಾಡಿದ್ರೆ ಅಷ್ಟೇ.. ಬೆಂಗಳೂರಿನ 50 ಫ್ಲೈ ಓವರ್ಗಳು ಬಂದ್; ರಸ್ತೆಗಿಳಿಯುವ ಮುನ್ನ ತಿಳಿಯಿರಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಂತಹ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ನಗರದ ಫ್ಲೈ ಓವರ್ಗಳನ್ನು ಮುಚ್ಚಲಾಗಿದ್ದು, ಡ್ರಿಂಕ್ ಆಂಡ್ ಡ್ರೈವ್ ವಿರುದ್ಧ ಕಠಿಣ ತಪಾಸಣೆ ನಡೆಸಲಾಗುತ್ತಿದೆ.
Karnataka News Live 31 December 2025ಸರ್ಕಾರಕ್ಕೆ 'ಮನೆಗೆದ್ದು ಮಾರು ಗೆಲ್ಲು' ಎಂದ ಶ್ರೀಶೈಲ ಶ್ರೀಗಳು; ಹೊಸ ವರ್ಷದ ಅಬ್ಬರಕ್ಕೆ ಶ್ರೀಗಳ ಸಂದೇಶವೇನು?
Karnataka News Live 31 December 2025ಮಗನ ಅಂತರ್ಜಾತಿ ವಿವಾಹವೇ ಪ್ರಾಣಕ್ಕೆ ಮುಳುವಾಯ್ತು - ಉಮೇಶನ ಕೊಲೆಗೈದ ದಂಪತಿ ಪೊಲೀಸರಿಗೆ ಶರಣು!
Karnataka News Live 31 December 2025ಕೋಲಾರದಲ್ಲಿ ಒಂದೇ ದಿನ ಬರೋಬ್ಬರಿ 21 ಮಂದಿಗೆ ಕಚ್ಚಿದ ಬೀದಿನಾಯಿ, ನಾಯಿಯನ್ನು ಹೊಡೆದು ಕೊಂದ ಗ್ರಾಮಸ್ಥರು!
ಕೋಲಾರ ನಗರದ ಆರ್ಟಿಒ ಕಚೇರಿ ಬಳಿ ಬೀದಿನಾಯಿಯೊಂದು ಏಕಾಏಕಿ ದಾಳಿ ನಡೆಸಿ, ಒಂದೇ ದಿನದಲ್ಲಿ 21 ಜನರನ್ನು ಕಚ್ಚಿ ಗಾಯಗೊಳಿಸಿದೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊನೆಗೆ ಸ್ಥಳೀಯರೇ ನಾಯಿಯನ್ನು ಹೊಡೆದು ಸಾಯಿಸಿದ್ದಾರೆ.
Karnataka News Live 31 December 2025ದರ್ಶನ್ ಹೇಗಿದ್ದಾರೆ? ಜೈಲಿಂದ ಹೊರಬಂದು ಅಭಿಮಾನಿಗಳ ಆತಂಕ ದೂರಮಾಡಿದ ಶಾಸಕ ವೀರೇಂದ್ರ ಪಪ್ಪಿ!
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 4 ತಿಂಗಳ ಜೈಲುವಾಸದ ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಜೈಲಿನಲ್ಲಿದ್ದಾಗ ನಟ ದರ್ಶನ್ ಅವರನ್ನು ಭೇಟಿಯಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಡಿಸಿಎಂ ಡಿ.ಕೆ. ಶಿವಕುಮಾರ್ ಆತ್ಮಸ್ಥೈರ್ಯ ತುಂಬಿದ್ದ ಬಗ್ಗೆ ತಿಳಿಸಿದರು.
Karnataka News Live 31 December 2025ಹೊಸ ವರ್ಷ ಗಲಾಟೆ, ಗದ್ದಲ ಇಲ್ಲದೆ ಶಾಂತಿಯಿಂದ ಆಚರಿಸಿ - ಗೃಹ ಸಚಿವ ಜಿ. ಪರಮೇಶ್ವರ್
Karnataka News Live 31 December 2025ಬನ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನ್ಯೂಸ್ ಆಂಕರ್ ಜಯಪ್ರಕಾಶ್ ಶೆಟ್ಟಿ!
ಪ್ರಖ್ಯಾತ ಕನ್ನಡ ಸುದ್ದಿ ನಿರೂಪಕ ಜಯಪ್ರಕಾಶ್ ಶೆಟ್ಟಿ ಅವರು ತುಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ. ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದ 'ಬನ' ಎಂಬ ಚಿತ್ರದಲ್ಲಿ ಅವರು ವಿಶೇಷ ಪಾತ್ರವೊಂದರಲ್ಲಿ ನಟಿಸಿದ್ದು, ನಾಗಬನದ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ.