12:02 AM (IST) Jan 01

Karnataka News Live 31 December 2025ಬೆಂಗಳೂರು - ಎಂಜಿ ರೋಡ್ ರಷ್‌ನಲ್ಲಿ ಪತ್ನಿ ನಾಪತ್ತೆ; ಆಘಾತ ತಾಳಲಾರದೆ ಪತಿಗೆ ಪಿಟ್ಸ್!

ಹೊಸ ವರ್ಷದ ಸಂಭ್ರಮಕ್ಕಾಗಿ ಬೆಂಗಳೂರಿನ ಎಂ.ಜಿ. ರಸ್ತೆಗೆ ಬಂದಿದ್ದ ದಂಪತಿಗಳಲ್ಲಿ, ಪತ್ನಿ ಜನದಟ್ಟಣೆಯಲ್ಲಿ ಕಳೆದುಹೋಗಿದ್ದಾರೆ. ಈ ಆಘಾತದಿಂದ ಪತಿಗೆ ಫಿಟ್ಸ್ ಬಂದಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ನಾಪತ್ತೆಯಾದ ಪತ್ನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
Read Full Story
11:36 PM (IST) Dec 31

Karnataka News Live 31 December 2025ಹೊಸವರ್ಷ ಅಮಲಿನಲ್ಲಿ ಮಹಿಳಾ ಪೊಲೀಸ್, ಯುವತಿಯರ ಜೊತೆ ಅನುಚಿತ ವರ್ತನೆ, ನಾಲ್ವರು ವಶಕ್ಕೆ

ಹೊಸವರ್ಷ ಅಮಲಿನಲ್ಲಿ ಮಹಿಳಾ ಪೊಲೀಸ್, ಯುವತಿಯರ ಜೊತೆ ಅನುಚಿತ ವರ್ತನೆ, ನಾಲ್ವರು ವಶಕ್ಕೆ, ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ಈ ಘಟನೆ ನಡೆದಿದೆ. ಸಿಸಿಬಿ ಪೊಲೀಸರುು ಯುವಕರನ್ನು ವಶಕ್ಕೆ ಪಡೆದಿದ್ದಾರೆ.

Read Full Story
11:07 PM (IST) Dec 31

Karnataka News Live 31 December 2025Bengaluru New Year 2026 - ಎಂಜಿ ರೋಡ್ ಬಿಟ್ಟು ಕೋರಮಂಗಲಕ್ಕೆ ಜನಸಾಗರ; ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಹಿಳೆ ಜೊತೆ ಟೋಯಿಂಗ್ ಚಾಲಕನ ಕಿರಿಕ್!

ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆಯ ಕೇಂದ್ರ ಈ ಬಾರಿ ಬದಲಾಗಿದೆ. ಸಾಂಪ್ರದಾಯಿಕ ತಾಣವಾದ ಬ್ರಿಗೇಡ್ ರಸ್ತೆ ಕಳೆಗುಂದಿದ್ದು, ಯುವ ಸಮೂಹ ಕೋರಮಂಗಲದತ್ತ ಮುಖ ಮಾಡಿದೆ. ಜನಸಂದಣಿಯನ್ನು ನಿಯಂತ್ರಿಸಲು ಮತ್ತು ಸುರಕ್ಷತೆ ಖಚಿತಪಡಿಸಲು ಪೊಲೀಸರು ಕೋರಮಂಗಲದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದಾರೆ.
Read Full Story
10:40 PM (IST) Dec 31

Karnataka News Live 31 December 2025ಹೊಸ ವರ್ಷಕ್ಕೆ ಕೆಲವೇ ಹೊತ್ತಲ್ಲಿ ಶಾಕ್! ಕೊಳ್ಳೇಗಾಲದಲ್ಲಿ ಭೀಕರ ಅಗ್ನಿ ಅವಘಡ; ಬೇಕರಿ ಸೇರಿದಂತೆ ಮೂರು ಅಂಗಡಿಗಳು ಭಸ್ಮ!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಹೊಸ ವರ್ಷದ ಮುನ್ನಾದಿನದಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಮಯೂರ ಬೇಕರಿಯಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯು ಪಕ್ಕದ ಅಂಗಡಿಗಳಿಗೂ ವ್ಯಾಪಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ನಾಶವಾಗಿದೆ. 

Read Full Story
10:25 PM (IST) Dec 31

Karnataka News Live 31 December 2025ಬೆಂಗಳೂರು ಹೊಸವರ್ಷ ಸಂಭ್ರಮದಲ್ಲಿ ನಶೆ ಏರಿದ ಮಹಿಳೆಯರಿಗೆ ರಾತ್ರಿ ಇಡಿ ಉಚಿತ ಡ್ರಾಪ್

ಬೆಂಗಳೂರು ಹೊಸವರ್ಷ ಸಂಭ್ರಮದಲ್ಲಿ ನಶೆ ಏರಿದ ಮಹಿಳೆಯರಿಗೆ ರಾತ್ರಿ ಇಡಿ ಉಚಿತ ಡ್ರಾಪ್, ಬೆಂಗಳೂರು ಪೊಲೀಸರು ಜೊತೆ ಆಟೋ ಚಾಲಕರು ಕೈಜೋಡಿಸಿದ್ದಾರೆ. ಈ ಮೂಲಕ ಮಹಿಳೆಯರಿಗೆ ಆಟೋ ಸೇವೆ ನೀಡಲಿದ್ದಾರೆ.

Read Full Story
10:00 PM (IST) Dec 31

Karnataka News Live 31 December 2025ಮಂಗಳೂರು ಕಂಬಳದಲ್ಲಿ ಹಿರಿಯ ತೀರ್ಪುಗಾರಗೆ ಅವಮಾನ, ಜಾಲತಾಣದಲ್ಲಿ ವ್ಯಾಪಕ ಅಕ್ರೋಶ

ಮಂಗಳೂರಿನಲ್ಲಿ ನಡೆದ ಕಂಬಳದಲ್ಲಿ ಹಿರಿಯ ತೀರ್ಪುಗಾರ ಗುಣಪಾಲ ಕಡಂಬ ಅವರಿಗೆ ಅವಮಾನವಾಗಿದೆ ಎಂಬ ವಿವಾದ ಭುಗಿಲೆದ್ದಿದೆ. ಇದೇ ವೇಳೆ, ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ‘ಬ್ಯಾಕ್ ಟು ಊರು’ ಪರಿಕಲ್ಪನೆಗೆ ಮೆಚ್ಚುಗೆ ವ್ಯಕ್ತವಾಗಿದ್ದು, ವಿವಿಧ ವಿಭಾಗಗಳ ಕಂಬಳದ ಅಂತಿಮ ಫಲಿತಾಂಶವನ್ನು ಪ್ರಕಟಿಸಲಾಗಿದೆ.
Read Full Story
09:23 PM (IST) Dec 31

Karnataka News Live 31 December 2025ಚಿಕ್ಕಮಗಳೂರು ನೂತನ ಎಸ್‌ಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ

ಚಿಕ್ಕಮಗಳೂರು ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ನೇಮಿಸಲಾಗಿದೆ. ಈ ಹಿಂದೆ ಧರ್ಮಸ್ಥಳದ ಬುರುಡೆ ಪ್ರಕರಣವನ್ನು ಭೇದಿಸಿದ್ದ ಮತ್ತು ನಕ್ಸಲ್ ನಿಗ್ರಹ ಪಡೆಯಲ್ಲಿ ಸೇವೆ ಸಲ್ಲಿಸಿದ್ದ ಇವರು, ವಿಕ್ರಮ್ ಅಮಟೆ ಅವರ ಸ್ಥಾನವನ್ನು ತುಂಬಲಿದ್ದಾರೆ.
Read Full Story
09:21 PM (IST) Dec 31

Karnataka News Live 31 December 20252025 ಹಲವು ಘಟನೆಗಳಿಗೆ ಸಾಕ್ಷಿ, ಮದ್ದೂರು ಕೋಮುಗಲಭೆ ಮಂಡ್ಯದ ಪಾಲಿಗೆ ಕರಾಳ, ಸಕ್ಕರೆ ನಾಡಿಗೆ ಸಿಹಿಗಿಂತ ಕಹಿಯೇ ಹೆಚ್ಚು!

2025ನೇ ವರ್ಷವು ಮಂಡ್ಯ ಜಿಲ್ಲೆಯ ಪಾಲಿಗೆ ಹಲವು ಏರಿಳಿತಗಳಿಗೆ ಸಾಕ್ಷಿಯಾಯಿತು. ಮದ್ದೂರಿನಲ್ಲಿ ನಡೆದ ಕೋಮುಗಲಭೆ, ರೈತರ ಆತ್ಮಹತ್ಯೆ, ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ, ಮತ್ತು 'ತಿಥಿ' ಖ್ಯಾತಿಯ ಗಡ್ಡಪ್ಪನವರ ನಿಧನದಂತಹ ಪ್ರಮುಖ ಘಟನೆಗಳು ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದವು.

Read Full Story
09:18 PM (IST) Dec 31

Karnataka News Live 31 December 2025ಹೊಸ ವರ್ಷ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಶಾಕ್, ಬೆಂಗಳೂರಿನ ಕೆಲವೆಡೆ ಭಾರಿ ಮಳೆ

ಹೊಸ ವರ್ಷ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಶಾಕ್, ಬೆಂಗಳೂರಿನ ಕೆಲವೆಡೆ ಭಾರಿ ಮಳೆ, ಸಂಭ್ರಮಾಚರಣೆ ಮಾಡುತ್ತಿದ್ದವರು ಕಾರ್ಯಕ್ರಮ ಸ್ಥಗಿತಗೊಳಿಸಿದ್ದಾರೆ. ಕೆಲ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವರು ನಿರಾಸೆಗೊಂಡಿದ್ದಾರೆ.

Read Full Story
08:30 PM (IST) Dec 31

Karnataka News Live 31 December 2025ಹೊಸ ವರ್ಷ 2026 - ಕರ್ನಾಟಕ ರಾಜ್ಯದ ಸಾರ್ವತ್ರಿಕ ರಜೆಗಳ ಪಟ್ಟಿ, ಕೊಡಗು ಜಿಲ್ಲೆಗೆ ಮಾತ್ರ ಸ್ಪೆಷಲ್ ರಜೆ

ಕರ್ನಾಟಕ ಸರ್ಕಾರವು 2026ನೇ ಸಾಲಿನ ಸಾರ್ವತ್ರಿಕ ಹಾಗೂ ಪರಿಮಿತ ರಜೆಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ವರ್ಷ ಒಟ್ಟು 20 ಸಾರ್ವತ್ರಿಕ ರಜೆಗಳು ಮತ್ತು 21 ಪರಿಮಿತ ರಜೆಗಳಿದ್ದು, ಕೊಡಗು ಜಿಲ್ಲೆಗೆ ವಿಶೇಷ ಸ್ಥಳೀಯ ರಜೆಗಳನ್ನು ಘೋಷಿಸಲಾಗಿದೆ.

Read Full Story
07:40 PM (IST) Dec 31

Karnataka News Live 31 December 2025ಹೋರಾಟದಲ್ಲೇ ಉರುಳಿದ 2025ರ ವರ್ಷ, ಬಿಡದಿ ಟೌನ್ ಶಿಪ್ ಯೋಜನೆ ರಾಮನಗರ ಬೆಂಗಳೂರು ದಕ್ಷಿಣವಾಗಿ ಬದಲಾಗಿದ್ದೆ ಸಾಧನೆ!

2025ರಲ್ಲಿ ರಾಮನಗರ ಜಿಲ್ಲೆಯು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಬದಲಾಯಿತು. ಬಿಡದಿ ಟೌನ್ ಶಿಪ್ ಯೋಜನೆ, ರಾಜಕೀಯ ಮೇಲಾಟ, ಮಾನವ-ವನ್ಯಜೀವಿ ಸಂಘರ್ಷ, ಅಪಘಾತಗಳು ಮತ್ತು ಸಾವು-ನೋವುಗಳು ವರ್ಷವಿಡೀ ಸುದ್ದಿಯಲ್ಲಿದ್ದವು. ಇದೇ ವರ್ಷ ನಟಿ ಬಿ. ಸರೋಜಾದೇವಿ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಮ್ಮನ್ನಗಲಿದರು.

Read Full Story
07:23 PM (IST) Dec 31

Karnataka News Live 31 December 2025ಹೊಸ ವರ್ಷದ ಕಿಕ್‌ನಲ್ಲಿ ಡ್ರಿಂಕ್ ಆಂಡ್ ಡ್ರೈವ್ ಮಾಡಿದ್ರೆ ಅಷ್ಟೇ.. ಬೆಂಗಳೂರಿನ 50 ಫ್ಲೈ ಓವರ್‌ಗಳು ಬಂದ್; ರಸ್ತೆಗಿಳಿಯುವ ಮುನ್ನ ತಿಳಿಯಿರಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಂತಹ ಪ್ರಮುಖ ಸ್ಥಳಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸಂಚಾರ ದಟ್ಟಣೆ ನಿಯಂತ್ರಿಸಲು ನಗರದ ಫ್ಲೈ ಓವರ್‌ಗಳನ್ನು ಮುಚ್ಚಲಾಗಿದ್ದು, ಡ್ರಿಂಕ್ ಆಂಡ್ ಡ್ರೈವ್ ವಿರುದ್ಧ ಕಠಿಣ ತಪಾಸಣೆ ನಡೆಸಲಾಗುತ್ತಿದೆ.

Read Full Story
06:50 PM (IST) Dec 31

Karnataka News Live 31 December 2025ಸರ್ಕಾರಕ್ಕೆ 'ಮನೆಗೆದ್ದು ಮಾರು ಗೆಲ್ಲು' ಎಂದ ಶ್ರೀಶೈಲ ಶ್ರೀಗಳು; ಹೊಸ ವರ್ಷದ ಅಬ್ಬರಕ್ಕೆ ಶ್ರೀಗಳ ಸಂದೇಶವೇನು?

ಶ್ರೀಶೈಲ ಪೀಠದ ಶ್ರೀಗಳು, ರಾಜ್ಯದ ಸಂತ್ರಸ್ತರನ್ನು ಕಡೆಗಣಿಸಿ ಬೇರೆ ರಾಜ್ಯಗಳಿಗೆ ಸಹಾಯ ಮಾಡುವ ಸರ್ಕಾರದ ನೀತಿಯನ್ನು ಟೀಕಿಸಿದ್ದಾರೆ. ಹೊಸ ವರ್ಷಾಚರಣೆಯ ದುರಾಚರಣೆಗಳ ಬದಲು ಸದಾಚರಣೆಗೆ ಕರೆ ನೀಡಿದ್ದು, ಲಿಂಗಾಯತ ಮಠಾಧೀಶರು ಬೀದಿ ರಂಪಾಟ ನಿಲ್ಲಿಸಿ ಒಗ್ಗಟ್ಟಿನಿಂದ ಇರಬೇಕೆಂದು ಮನವಿ ಮಾಡಿದ್ದಾರೆ.
Read Full Story
06:46 PM (IST) Dec 31

Karnataka News Live 31 December 2025ಮಗನ ಅಂತರ್ಜಾತಿ ವಿವಾಹವೇ ಪ್ರಾಣಕ್ಕೆ ಮುಳುವಾಯ್ತು - ಉಮೇಶನ ಕೊಲೆಗೈದ ದಂಪತಿ ಪೊಲೀಸರಿಗೆ ಶರಣು!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಹಳೇ ವೈಷಮ್ಯ ಹಾಗೂ ಅಂತರ್ಜಾತಿ ವಿವಾಹದ ವಿಚಾರವಾಗಿ ಉಮೇಶ್ ಎಂಬುವವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ದಂಪತಿಗಳು ಇದೀಗ ಪೊಲೀಸರಿಗೆ ಶರಣಾಗಿದ್ದಾರೆ.
Read Full Story
06:18 PM (IST) Dec 31

Karnataka News Live 31 December 2025ಕೋಲಾರದಲ್ಲಿ ಒಂದೇ ದಿನ ಬರೋಬ್ಬರಿ 21 ಮಂದಿಗೆ ಕಚ್ಚಿದ ಬೀದಿನಾಯಿ, ನಾಯಿಯನ್ನು ಹೊಡೆದು ಕೊಂದ ಗ್ರಾಮಸ್ಥರು!

ಕೋಲಾರ ನಗರದ ಆರ್‌ಟಿಒ ಕಚೇರಿ ಬಳಿ ಬೀದಿನಾಯಿಯೊಂದು ಏಕಾಏಕಿ ದಾಳಿ ನಡೆಸಿ, ಒಂದೇ ದಿನದಲ್ಲಿ 21 ಜನರನ್ನು ಕಚ್ಚಿ ಗಾಯಗೊಳಿಸಿದೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೊನೆಗೆ ಸ್ಥಳೀಯರೇ ನಾಯಿಯನ್ನು ಹೊಡೆದು ಸಾಯಿಸಿದ್ದಾರೆ.

Read Full Story
05:59 PM (IST) Dec 31

Karnataka News Live 31 December 2025ದರ್ಶನ್ ಹೇಗಿದ್ದಾರೆ? ಜೈಲಿಂದ ಹೊರಬಂದು ಅಭಿಮಾನಿಗಳ ಆತಂಕ ದೂರಮಾಡಿದ ಶಾಸಕ ವೀರೇಂದ್ರ ಪಪ್ಪಿ!

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ 4 ತಿಂಗಳ ಜೈಲುವಾಸದ ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ, ಜೈಲಿನಲ್ಲಿದ್ದಾಗ ನಟ ದರ್ಶನ್ ಅವರನ್ನು ಭೇಟಿಯಾಗಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಡಿಸಿಎಂ ಡಿ.ಕೆ. ಶಿವಕುಮಾರ್ ಆತ್ಮಸ್ಥೈರ್ಯ ತುಂಬಿದ್ದ ಬಗ್ಗೆ ತಿಳಿಸಿದರು.

Read Full Story
05:33 PM (IST) Dec 31

Karnataka News Live 31 December 2025ಹೊಸ ವರ್ಷ ಗಲಾಟೆ, ಗದ್ದಲ ಇಲ್ಲದೆ ಶಾಂತಿಯಿಂದ ಆಚರಿಸಿ - ಗೃಹ ಸಚಿವ ಜಿ. ಪರಮೇಶ್ವರ್

ಹುಬ್ಬಳ್ಳಿಗೆ ಭೇಟಿ ನೀಡಿದ ಗೃಹ ಸಚಿವ ಜಿ. ಪರಮೇಶ್ವರ್, ಹೊಸ ವರ್ಷಾಚರಣೆಗೆ ಬಿಗಿ ಭದ್ರತೆ, ಮರ್ಯಾದೆ ಹತ್ಯೆ ಖಂಡನೆ ಹಾಗೂ ನೊಂದ ಕುಟುಂಬಕ್ಕೆ ಸಹಾಯದ ಭರವಸೆ ನೀಡಿದರು. 'ಸಂಕ್ರಾಂತಿ ಕ್ರಾಂತಿ' ಬಗ್ಗೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದ ಅವರು, ದಲಿತ ಸಿಎಂ ವಿಚಾರದಲ್ಲಿ ಮೌನ ವಹಿಸಿದರು.
Read Full Story
05:29 PM (IST) Dec 31

Karnataka News Live 31 December 2025ಬನ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ನ್ಯೂಸ್‌ ಆಂಕರ್‌ ಜಯಪ್ರಕಾಶ್‌ ಶೆಟ್ಟಿ!

ಪ್ರಖ್ಯಾತ ಕನ್ನಡ ಸುದ್ದಿ ನಿರೂಪಕ ಜಯಪ್ರಕಾಶ್ ಶೆಟ್ಟಿ ಅವರು ತುಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾರೆ. ನಿತಿನ್‌ ರೈ ಕುಕ್ಕುವಳ್ಳಿ ನಿರ್ದೇಶನದ 'ಬನ' ಎಂಬ ಚಿತ್ರದಲ್ಲಿ ಅವರು ವಿಶೇಷ ಪಾತ್ರವೊಂದರಲ್ಲಿ ನಟಿಸಿದ್ದು, ನಾಗಬನದ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ. 

Read Full Story
05:05 PM (IST) Dec 31

Karnataka News Live 31 December 2025Hungund voter list scam - 'ಕೋತಿಗೆ ಹೆಂಡ ಕುಡಿಸಿದಂತಾಗಿದೆ..' ಕಾಶಪ್ಪನವರ್ ವಿರುದ್ಧ ಮಾಜಿ ಶಾಸಕ ವಾಗ್ದಾಳಿ!

ಬಾಗಲಕೋಟೆಯ ಹುನಗುಂದ ಮತಕ್ಷೇತ್ರದಲ್ಲಿ ಮತದಾರರ ಪಟ್ಟಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದೆ. ಶಾಸಕ ವಿಜಯಾನಂದ ಕಾಶಪ್ಪನವರ್ ಕುಮ್ಮಕ್ಕಿನಿಂದ ಅಪ್ರಾಪ್ತರ ಹೆಸರನ್ನೂ ಸೇರಿಸಲಾಗಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ್ ಗಂಭೀರ ಆರೋಪ ಮಾಡಿದ್ದಾರೆ.
Read Full Story
04:54 PM (IST) Dec 31

Karnataka News Live 31 December 2025'45' ಚಿತ್ರದಲ್ಲಿ ಶಿವರಾಜ್​ ಕುಮಾರ್​ ಮನಸೆಳೆಯುವ ಹೆಣ್ಣಿನ ವೇಷಕ್ಕೆ ಡ್ಯೂಪ್​ ಮಾಡಿದವರು ಇವರೇ ನೋಡಿ!

ಅರ್ಜುನ್ ಜನ್ಯ ನಿರ್ದೇಶನದ, ಬಹುತಾರಾಗಣದ '45' ಚಿತ್ರವು ಉತ್ತಮ ಗಳಿಕೆ ಕಾಣುತ್ತಿದೆ. ಈ ಚಿತ್ರದಲ್ಲಿನ ಶಿವರಾಜ್‌ಕುಮಾರ್ ಅವರ ಸ್ತ್ರೀ ಪಾತ್ರದ ಸಾಹಸ ದೃಶ್ಯಗಳನ್ನು ಅವರು ಮಾಡಿಲ್ಲ, ಬದಲಿಗೆ ಇಬ್ರಾಹಿಂ ಎಂಬ ಡ್ಯೂಪ್ ಮಾಡಿದ್ದಾರೆ ಎಂಬ ವಿಷಯ ಇದೀಗ ಬಹಿರಂಗವಾಗಿದೆ.
Read Full Story