ದಾವಣಗೆರೆಯಲ್ಲಿ ಮಹಿಳಾ ಸಿಪಿಐ ಮತ್ತು ಪೇದೆಗಳ ಮೇಲೆ ನಡೆದ ಹಲ್ಲೆ ಪ್ರಕರಣವು ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಹರಿಹರ ಶಾಸಕ ಬಿ.ಪಿ. ಹರೀಶ್ ಅವರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ.
- Home
- News
- State
- Karnataka News Live: ಲೇಡಿ ಸಿಪಿಐಯನ್ನೇ ಎಳೆದಾಡಿದ ರೌಡಿಶೀಟರ್ ಹುಸೇನ್, ಕೈ ಮುಖಂಡನ ಪುತ್ರನ ಅಟ್ಠಹಾಸಕ್ಕೆ ಪೇದೆಗಳು ಅಸ್ವಸ್ಥ!
Karnataka News Live: ಲೇಡಿ ಸಿಪಿಐಯನ್ನೇ ಎಳೆದಾಡಿದ ರೌಡಿಶೀಟರ್ ಹುಸೇನ್, ಕೈ ಮುಖಂಡನ ಪುತ್ರನ ಅಟ್ಠಹಾಸಕ್ಕೆ ಪೇದೆಗಳು ಅಸ್ವಸ್ಥ!

ಬೆಂಗಳೂರು: ಐಟಿ ಇಲಾಖೆ ಅಧಿಕಾರಿಗಳು ಪರಿಶೀಲನೆ ವೇಳೆ ಅನೇಕ ಪ್ರಶ್ನೆಗಳನ್ನ ಕೇಳುವಾಗ 5 ನಿಮಿಷ ಸಮಯಕೊಡಿ ಅಂತ ಕೇಳಿ ಒಳಗಡೆ ಹೋದ ಉದ್ಯಮಿ ಸಿ.ಜೆ.ರಾಯ್ ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ನಮ್ಮ ಸರ್ಕಾರ ಉನ್ನತ ಮಟ್ಟದ ತನಿಖೆ ನಡೆಸಿ ಜನರಿಗೆ ಸತ್ಯಾಂಶ ತಿಳಿಸುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಉದ್ಯಮಿ ಸಿ.ಜೆ.ರಾಯ್ ಒಬ್ಬ ಒಳ್ಳೆಯ ಉದ್ಯಮಿ. ಹೀಗೆ ಆಗಬಾರದಿತ್ತು. ಐಟಿ ತಂಡ ಕೇರಳದಿಂದ ಬಂದಿತ್ತು ಎಂಬ ಮಾಹಿತಿ ಇದೆ. ಈ ಘಟನೆ ಕುರಿತು ನಮಗೆ ದೆಹಲಿಯಿಂದ ಕೂಡ ವರದಿ ಕೇಳಲಾಗಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಿ, ಜನರಿಗೆ ಸತ್ಯಾಂಶ ತಿಳಿಸುವ ಕೆಲಸವನ್ನ ನಮ್ಮ ಸರ್ಕಾರ ಮಾಡುತ್ತದೆ. ಐಟಿ ಬಗ್ಗೆ ನಾನು ಮಾತನಾಡಿದರೆ ರಾಜಕೀಯ ಆಗುತ್ತದೆ. ಈ ಕಿರುಕುಳವನ್ನ ನಾನು ಖಂಡಿಸುತ್ತೇನೆ. ಇದು ಸರಿಯಲ್ಲ ಎಂದಿದ್ದಾ
Karnataka News Live 31 January 2026ಲೇಡಿ ಸಿಪಿಐಯನ್ನೇ ಎಳೆದಾಡಿದ ರೌಡಿಶೀಟರ್ ಹುಸೇನ್, ಕೈ ಮುಖಂಡನ ಪುತ್ರನ ಅಟ್ಠಹಾಸಕ್ಕೆ ಪೇದೆಗಳು ಅಸ್ವಸ್ಥ!
Karnataka News Live 31 January 2026ದಾವಣಗೆರೆ - ಖಾಕಿ ಮೇಲೆಯೇ ಕೈ ಮುಖಂಡನ ಪುತ್ರನಿಂದ ಹಲ್ಲೆ; ಲೇಡಿ ಸಿಪಿಐ ಮೊಬೈಲ್ ಕಿತ್ತುಕೊಂಡ ಹುಸೇನ್ ಗ್ಯಾಂಗ್ ಅಸಭ್ಯ ವರ್ತನೆ!
ದಾವಣಗೆರೆಯಲ್ಲಿ, ಕಾಂಗ್ರೆಸ್ ಮುಖಂಡನ ಪುತ್ರನಾದ ರೌಡಿಶೀಟರ್ ಹುಸೇನ್, ತನ್ನನ್ನು ಬಂಧಿಸಲು ಬಂದ ಮಹಿಳಾ ಸಿಪಿಐ ಗಾಯತ್ರಿ ಮತ್ತು ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾನೆ. ಈ ಘಟನೆಯು ಪೊಲೀಸರ ಮೇಲಿನ ಹಲ್ಲೆ ಮತ್ತು ರಾಜಕೀಯ ಪ್ರಭಾವದ ಬಗ್ಗೆ ಗಂಭೀರ ಚರ್ಚೆಯನ್ನು ಹುಟ್ಟುಹಾಕಿದೆ,
Karnataka News Live 31 January 2026ಫಿಲ್ಮ್ ಚೇಂಬರ್ ಗದ್ದುಗೆ ಏರಿದ ಜಯಮಾಲಾ - ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಯಲ್ಲಿ ಭರ್ಜರಿ ಜಯ!
Karnataka News Live 31 January 2026ತುಮಕೂರಿನಲ್ಲಿ ಯುವತಿ ವಿಚಾರಕ್ಕೆ ಮಾರಮಾರಿ - ತಂಗಿಯ ಪ್ರೇಮಿಗೆ ಸಹೋದರನಿಂದ ಮಚ್ಚಿನೇಟು!
ತುಮಕೂರು ಜಿಲ್ಲೆಯ ಕುಣಿಗಲ್ನಲ್ಲಿ ಯುವತಿಯೊಬ್ಬಳ ಪ್ರೇಮ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ನಡುರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹೊಡೆದಾಟ ನಡೆದಿದೆ. ನ್ಯಾಯ ಪಂಚಾಯ್ತಿ ವಿಫಲವಾದ ನಂತರ ನಡೆದ ಈ ದಾಳಿಯಲ್ಲಿ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲು.
Karnataka News Live 31 January 2026ಅಮ್ಮ ಆಗ್ತಿದ್ದಾರ ಐಶ್ವರ್ಯ ಡಿಕೆಎಸ್ ಹೆಗ್ಡೆ? ಸೋಶಿಯಲ್ ಮೀಡಿಯಾದಲ್ಲಿ ಜೋರಾಯ್ತು ಪ್ರಶ್ನೆ
ಅಮ್ಮ ಆಗ್ತಿದ್ದಾರ ಐಶ್ವರ್ಯ ಡಿಕೆಎಸ್ ಹೆಗ್ಡೆ? ಸೋಶಿಯಲ್ ಮೀಡಿಯಾದಲ್ಲಿ ಜೋರಾಯ್ತು ಪ್ರಶ್ನೆ. ಐಶ್ವರ್ಯ ಡಿಕೆಎಸ್ ಹೆಗ್ಡೆ ಇತ್ತೀಚಿನ ಫೋಟೋ ಹಾಗೂ ವಿಡಿಯೋ ನೋಡಿದ ಜನ ಗುಡ್ ನ್ಯೂಸ್ ಪ್ರಶ್ನೆ ಆರಂಭಿಸಿದ್ದಾರೆ.
Karnataka News Live 31 January 2026ಪ್ಯಾಕರ್ಸ್ & ಮೂವರ್ಸ್ ಕಾರ್ಮಿಕರಿಗೆ ಲಿಫ್ಟ್ ಬಳಕೆಗೆ ನಿರಾಕರಿಸಿದ ರೆಸಿಡೆನ್ಸಿಯಲ್ ಸೊಸೈಟಿ ಸದಸ್ಯರು
ವಸತಿ ಸಮುಚ್ಚಯವೊಂದರಲ್ಲಿ ಪ್ಯಾಕರ್ಸ್ & ಮೂವರ್ಸ್ ಕಾರ್ಮಿಕರಿಗೆ ಲಿಫ್ಟ್ ಬಳಸಲು ನಿರಾಕರಿಸಿದ ಘಟನೆ ನಡೆದಿದೆ. ಇದರಿಂದಾಗಿ, ಅವರು ಆರನೇ ಮಹಡಿಗೆ ಭಾರವಾದ ವಸ್ತುಗಳನ್ನು ಮೆಟ್ಟಿಲುಗಳ ಮೂಲಕವೇ ಸಾಗಿಸಬೇಕಾಯಿತು.ಈ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
Karnataka News Live 31 January 2026ಜಿಯೋ, ಏರ್ಟೆಲ್ಗಿಂತ ಅಗ್ಗ; BSNLನ ಬೆಸ್ಟ್ ಪ್ಲಾನ್ಗಳು ಇವೇ ನೋಡಿ!
ಖಾಸಗಿ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ ಮತ್ತು ಏರ್ಟೆಲ್ಗೆ ಸರ್ಕಾರಿ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಕಠಿಣ ಸ್ಪರ್ಧೆ ನೀಡುತ್ತಿದೆ. ತನ್ನ ಬಳಕೆದಾರರಿಗೆ ಕೈಗೆಟುಕುವ ದರದಲ್ಲಿ ಅತ್ಯುತ್ತಮ ರೀಚಾರ್ಜ್ ಯೋಜನೆಗಳನ್ನು ನೀಡುತ್ತಿದೆ.
Karnataka News Live 31 January 2026ಉದ್ಯಮಿ ಸಿಜೆ ರಾಯ್ ಅಂತ್ಯಸಂಸ್ಕಾರಕ್ಕೂ ಮೊದಲು ಪುತ್ರ ರೋಹಿತ್ ಮಹತ್ವದ ಸಂದೇಶ
ಉದ್ಯಮಿ ಸಿಜೆ ರಾಯ್ ಅಂತ್ಯಸಂಸ್ಕಾರಕ್ಕೂ ಮೊದಲು ಪುತ್ರ ರೋಹಿತ್ ಮಹತ್ವದ ಸಂದೇಶ ನೀಡಿದ್ದಾರೆ. ತಂದೆ ಅಗಲಿಕೆ ನೋವಿನಲ್ಲಿ ರೋಹಿತ್ ರಾಯ್ ರವಾನಿಸಿದ ಸಂದೇಶವೇನು? ಅಂತ್ಯಸಂಸ್ಕಾರ ಯಾವಾಗ?
Karnataka News Live 31 January 2026ಸಿನಿಮಾರಂಗದ ಕರಾಳ ಮುಖ ಬಿಚ್ಚಿಟ್ಟ ನಟಿ ಐಶ್ವರ್ಯಾ ರಾಜೇಶ್ ಆಘಾತಕಾರಿ ಹೇಳಿಕೆಗೆ ಭಾರೀ ಕಾಮೆಂಟ್ಸ್!
ಒಮ್ಮೆ ತಡವಾಗಿ ಸೆಟ್ಗೆ ಬಂದಿದ್ದಕ್ಕೆ ನಿರ್ದೇಶಕರೊಬ್ಬರು ಎಲ್ಲರ ಮುಂದೆ ಕಿರುಚಾಡಿ ಅವಮಾನ ಮಾಡಿದ್ದರಂತೆ. "ತಪ್ಪು ಮಾಡಿದರೂ ಎಲ್ಲರ ಮುಂದೆ ಅವಮಾನ ಮಾಡುವುದು ಸರಿಯಲ್ಲ. ಅವರು ಸದಾ ನನ್ನನ್ನು ಬೇರೆ ನಟಿಯರ ಜೊತೆ ಹೋಲಿಕೆ ಮಾಡುತ್ತಿದ್ದರು.
Karnataka News Live 31 January 2026ಅಕ್ರಮ ನಡೆಸಿತ್ತಾ ಕಾನ್ಫಿಡೆಂಟ್ ಗ್ರೂಪ್? ಸಿಜೆ ರಾಯ್ ಸಾವಿನಿಂದ ಮೃತ ಅಧಿಕಾರಿ ಡಿಕೆ ರವಿ ಹೇಳಿಕೆ ವೈರಲ್
ಅಕ್ರಮ ನಡೆಸಿತ್ತಾ ಕಾನ್ಫಿಡೆಂಟ್ ಗ್ರೂಪ್? ಸಿಜೆ ರಾಯ್ ಸಾವಿನಿಂದ ಮೃತ ಅಧಿಕಾರಿ ಡಿಕೆ ರವಿ ಹೇಳಿಕೆ ವೈರಲ್ ಆಗುತ್ತಿದೆ. ಕಾನ್ಫಿಡೆಂಟ್ ಗ್ರೂಪ್ ಅಕ್ರಮ ಪತ್ತೆ ಹಚ್ಚಿದ ಕಾರಣಕ್ಕೆ ದಕ್ಷ ಅಧಿಕಾರಿ ವರ್ಗಾವಣೆ ಶಿಕ್ಷೆಗೆ ಒಳಗಾಗಿದ್ರಾ?
Karnataka News Live 31 January 2026ಜನ ಕಸ ಹಾಕುವುದನ್ನು ತಪ್ಪಿಸಲು ರಂಗೋಲಿ ಮೊರೆ ಹೋದ ಪಾಲಿಕೆಯ ಸಿಬ್ಬಂದಿ!
ಬಳ್ಳಾರಿ ಮಹಾನಗರ ಪಾಲಿಕೆಯು ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವುದನ್ನು ತಡೆಯಲು ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಕಸ ತುಂಬಿದ ಜಾಗಗಳನ್ನು ಸ್ವಚ್ಛಗೊಳಿಸಿ, ಅಲ್ಲಿ ಬಣ್ಣಬಣ್ಣದ ರಂಗೋಲಿ ಬಿಡಿಸಿ "ಇಲ್ಲಿ ಕಸ ಹಾಕಬಾರದು" ಎಂದು ಬರೆಯುವ ಮೂಲಕ ಜನರಲ್ಲಿ ಅರಿವು ಮೂಡಿಸುತ್ತಿದೆ.
Karnataka News Live 31 January 2026ಮೊಳಕೇರಾ ನಿಗೂಢ ಸ್ಫೋಟದ ಹಿಂದೆ ಸಂಚು? ಶಾಸಕ ಸಿದ್ದು ಪಾಟೀಲ್ ಸ್ಥಳಕ್ಕೆ ಭೇಟಿ, ಹೇಳಿದ್ದೇನು?
Karnataka News Live 31 January 2026ರಾಯಚೂರು - ಕರೆಂಟ್ ಶಾಕ್ಗೆ ವಿದ್ಯಾರ್ಥಿನಿ ಸಾವು ಪ್ರಕರಣ; ಡಿಸಿ ನಿತೀಶ್ ಕೆ. ಗರಂ, ಸಂಜೆಯೊಳಗೆ ವರದಿ ನೀಡಲು ಡೆಡ್ಲೈನ್!
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕುರಕುಂದ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯುತ್ ಪ್ರವಹಿಸಿ 11 ವರ್ಷದ ತನುಶ್ರೀ ಎಂಬ ವಿದ್ಯಾರ್ಥಿನಿ ದಾರುಣವಾಗಿ ಮೃತಪಟ್ಟಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ತನಿಖೆಗೆ ಆದೇಶ.
Karnataka News Live 31 January 2026ಕರ್ಮ ಅನುಭವಿಸಲೇಬೇಕು - CJ Roy ನಿಧನಕ್ಕೆ Bigg Boss ಭುವನ್ ಪೊನ್ನಣ್ಣ ಹೀಗೊಂದು ಪೋಸ್ಟ್!
ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಬಿಗ್ ಬಾಸ್ ಪ್ರಾಯೋಜಕರಾಗಿದ್ದ ಸಿ.ಜಿ.ರಾಯ್ ಅವರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಐಟಿ ದಾಳಿಯಿಂದ ಬೇಸತ್ತು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದ್ದು, ಅವರ ಸಾವಿಗೆ ನಟ ಭುವನ್ ಪೊನ್ನಣ್ಣ ಕರ್ಮದ ಬಗ್ಗೆ ಮಾತನಾಡುತ್ತಾ ಕಂಬನಿ ಮಿಡಿದಿದ್ದಾರೆ.
Karnataka News Live 31 January 2026ಕೊಟ್ಟ ಮಾತಿಗೆ ತಪ್ಪಿದ Bigg Boss ಗಿಲ್ಲಿ ನಟ? ಟ್ಯಾಟೂ ಹಾಕಿಸಿಕೊಂಡ ಫ್ಯಾನ್ ಕೆಂಡಾಮಂಡಲ
Karnataka News Live 31 January 2026'ಮೈಸೂರಿನ ಕೋತಿ ಈಗ ಯಾಕೆ ಬಾಯಿ ಬಿಡ್ತಿಲ್ಲ?' - ಸಿಜೆ ರಾಯ್ ಸಾವು ಪ್ರಕರಣದಲ್ಲಿ ಪ್ರದೀಪ್ ಈಶ್ವರ್ ಕಿಡಿ!
Pradeep Eshwar Questions BJP over CJ Roy's Death & IT Harassment ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಶಾಸಕ ಪ್ರದೀಪ್ ಈಶ್ವರ್, ಬಿಜೆಪಿ ಹಣಕ್ಕಾಗಿ ಕಿರುಕುಳ ನೀಡಿದೆ ಎಂದು ಆರೋಪಿಸಿ ಎಸ್ಐಟಿ ತನಿಖೆಗೆ ಆಗ್ರಹಿಸಿದ್ದಾರೆ.
Karnataka News Live 31 January 2026ಅಡಕೆ ಕ್ಯಾನ್ಸರ್ಕಾರಕ ಪಟ್ಟಿಗೆ ಸೇರಿಸಲು ವಿಶ್ವ ಆರೋಗ್ಯ ಸಂಸ್ಥೆ ಚಿಂತನೆ!
ವಿಶ್ವ ಆರೋಗ್ಯ ಸಂಸ್ಥೆಯ ವೆಬಿನಾರ್ನಲ್ಲಿ ಅಡಕೆಯನ್ನು ಕ್ಯಾನ್ಸರ್ಕಾರಕ ಎಂದು ಪರಿಗಣಿಸಿ ನಿಷೇಧಿಸುವ ಬಗ್ಗೆ ಚರ್ಚಿಸಲಾಗಿದೆ. ಆದರೆ,ಭಾರತೀಯ ತಜ್ಞರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು,ಅಡಕೆಯ ಆಯುರ್ವೇದ ಬಳಕೆ, ಆರ್ಥಿಕ ಅವಲಂಬನೆ ಮತ್ತು ಹೆಚ್ಚಿನ ವೈಜ್ಞಾನಿಕ ಅಧ್ಯಯನದ ಅಗತ್ಯವನ್ನು ಪ್ರತಿಪಾದಿಸಿದ್ದಾರೆ.
Karnataka News Live 31 January 2026ಸಿಜೆ ರಾಯ್ ದುರಂತ ಸಾವು ಪ್ರಕರಣ, ಉನ್ನತ ಮಟ್ಟದ ತನಿಖೆಗೆ ಎಸ್ಐಟಿ ರಚಿಸಿದ ಗೃಹ ಸಚಿವ
ಸಿಜೆ ರಾಯ್ ದುರಂತ ಸಾವು ಪ್ರಕರಣ, ಉನ್ನತ ಮಟ್ಟದ ತನಿಖೆಗೆ ಎಸ್ಐಟಿ ರಚಿಸಿದ ಗೃಹ ಸಚಿವ , ಒಂದಡೆ ಅನುಮಾನಗಳು ಹೆಚ್ಚಾಗುತ್ತಿದ್ದರೆ, ಮತ್ತೊಂದೆಡ ಪ್ರಕರಣದ ಸೂಕ್ತ ತನಿಖೆಗೆ ಆಗ್ರಹ ಹೆಚ್ಚಾಗುತ್ತಿದೆ. ಇದರ ಬೆನ್ನಲ್ಲೇ ಎಸ್ಐಟಿ ರಚಿಸಲಾಗಿದೆ.
Karnataka News Live 31 January 2026ಬಿಗ್ಬಾಸ್ ಮನೆಗೆ ಹೋಗಲು ಗಿಲ್ಲಿ ನಟ ಖರ್ಚು ಮಾಡಿದ್ದೆಷ್ಟು? ಕೊನೆಗೂ ಬಯಲಾಯ್ತು ಆ ಸೀಕ್ರೇಟ್!
ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟ, ಕೇವಲ 10 ಸಾವಿರ ರೂಪಾಯಿ ಖರ್ಚು ಮಾಡಿ ಮನೆಗೆ ಪ್ರವೇಶಿಸಿದ್ದರು. ಇತರ ಸ್ಪರ್ಧಿಗಳು ಲಕ್ಷಾಂತರ ರೂಪಾಯಿ ಶಾಪಿಂಗ್ ಮಾಡಿದ್ದರೂ, ಗಿಲ್ಲಿ ತನ್ನ ಸರಳತೆಯಿಂದಲೇ ಆಟವಾಡಿ 60 ಲಕ್ಷ ನಗದು ಹಾಗೂ ಕಾರನ್ನು ಗೆದ್ದು ಕೋಟ್ಯಾಧಿಪತಿಯಾಗಿದ್ದಾರೆ.