08:26 AM (IST) Mar 31

Karnataka News Live 31 March 2026 SSLC ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಗ್ರೇಡಿಂಗ್, ಕೈ ಸರ್ಕಾರಕ್ಕೆ ಜ್ಞಾನದ ಕೊರತೆ - ಹೊರಟ್ಟಿ ಕಿಡಿ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹಿಂದಿ ವಿಷಯಕ್ಕೆ ಅಂಕಗಳ ಬದಲು ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಖಂಡಿಸಿದ್ದಾರೆ. ಈ ನೀತಿಯು ತಜ್ಞರೊಂದಿಗೆ ಚರ್ಚಿಸದೆ ಜಾರಿಗೆ ತಂದಿದ್ದು, ಇದು ಹಿಂದಿ ಸೇರಿದಂತೆ ಇತರೆ ತೃತೀಯ ಭಾಷೆಗಳಿಗೂ ಹೊಡೆತ ಬೀಳಲಿದೆ ಎಂದು ಆಕ್ರೋಶ.

Read Full Story
08:16 AM (IST) Mar 31

Karnataka News Live 31 March 2026 IPL 2026 - ನಿನ್ನೆಯ ರಾಜಸ್ಥಾನ ರಾಯಲ್ಸ್ - ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಮ್ಯಾಚ್ ಗೆದ್ದಿದ್ದು ಯಾರು?

ಚೊಚ್ಚಲ ಆವೃತ್ತಿಯ ಚಾಂಪಿಯನ್‌ ರಾಜಸ್ಥಾನ ರಾಯಲ್ಸ್‌, ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ನಡೆದ ಪಂದ್ಯದಲ್ಲಿ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ರಾಜಸ್ಥಾನವು 12.1 ಓವರ್‌ಗಳಲ್ಲೇ 128 ರನ್‌ಗಳ ಗುರಿಯನ್ನು ಸುಲಭವಾಗಿ ತಲುಪಿತು.
Read Full Story
08:13 AM (IST) Mar 31

Karnataka News Live 31 March 2026 ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ರಥೋತ್ಸವದಲ್ಲಿ ಗರುಡ ದರ್ಶನ; ಪುಳಕಿತರಾದ ಭಕ್ತರು

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ಗೌತಮ ಪಂಚ ಮಹಾರಥೋತ್ಸವವು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವದ ಸಮಯಕ್ಕೆ ಸರಿಯಾಗಿ ಬಂದ ಗರುಡ ಪಕ್ಷಿಯನ್ನು ಭಕ್ತರು ಕಣ್ತುಂಬಿಕೊಂಡರು.

Read Full Story
08:13 AM (IST) Mar 31

Karnataka News Live 31 March 2026 Karnataka Bypolls - ಇಂದಿನಿಂದ ಉಪಚುನಾವಣೆ ಅಖಾಡಕ್ಕೆ ಡಿಕೆಶಿ, ದಾವಣಗೆರೆ, ಬಾಗಲಕೋಟೆ ಪ್ರಚಾರದ ಜೊತೆಗೆ ಅಸ್ಸಾಂ ಗೆಲುವಿನ ಬಗ್ಗೆ ಹೇಳಿದ್ದೇನು?

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದಾವಣಗೆರೆ ಮತ್ತು ಬಾಗಲಕೋಟೆ ಉಪಚುನಾವಣೆ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಕೇರಳ ಪ್ರಚಾರಕ್ಕೂ ತೆರಳಲಿರುವ ಅವರು, ಅಸ್ಸಾಂನಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಮೂಲಕ ಮೂರನೇ ಎರಡರಷ್ಟು ಬಹುಮತದಿಂದ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Read Full Story
07:51 AM (IST) Mar 31

Karnataka News Live 31 March 2026 ಲೆಕ್ಕಕ್ಕಿಲ್ಲದ ಹಿಂದಿ ಪರೀಕ್ಷೆ ಇಂದು - ಫಲಿತಾಂಶದಲ್ಲಿ ಇಳಿಕೆ ಆತಂಕ, ವಿದ್ಯಾರ್ಥಿಗಳು ಹೇಳೋದೇನು?

ರಾಜ್ಯ ಶಿಕ್ಷಣ ಇಲಾಖೆಯು ಎಸ್ಸೆಸ್ಸೆಲ್ಸಿ ಹಿಂದಿ ವಿಷಯದ ಅಂಕಗಳನ್ನು ಒಟ್ಟು ಮೊತ್ತದಿಂದ ಕೈಬಿಟ್ಟು ಗ್ರೇಡ್ ನೀಡುವ ಹಠಾತ್ ನಿರ್ಧಾರ ಕೈಗೊಂಡಿದೆ. ಈ ಕ್ರಮದಿಂದ ವರ್ಷವಿಡೀ ಶ್ರಮಪಟ್ಟು ಓದಿದ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದು, ತಮ್ಮ ಭವಿಷ್ಯದ ಬಗ್ಗೆ ಚಿಂತಿತರಾಗಿ ಶಿಕ್ಷಣ ಸಚಿವರಿಗೆ ಪತ್ರ ಚಳವಳಿ ಶುರು

Read Full Story
07:51 AM (IST) Mar 31

Karnataka News Live 31 March 2026 ಗ್ಯಾಸ್‌ ‘ಕೃತಕ’ ಕೊರತೆ - ರಿಕ್ಷಾ ಚಾಲಕರಿಗೆ ಸಂಕಷ್ಟ

ಮಧ್ಯಪ್ರಾಚ್ಯದಲ್ಲಿನ ಸಂಘರ್ಷದಿಂದಾಗಿ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜ್ಯದ ಹಲವೆಡೆ ಕೃತಕ ಗ್ಯಾಸ್ ಅಭಾವ ಸೃಷ್ಟಿಯಾಗಿದೆ. ಇದರಿಂದಾಗಿ ಆಟೋ ಚಾಲಕರು ಇಂಧನಕ್ಕಾಗಿ ಗಂಟೆಗಟ್ಟಲೆ ಸರದಿಯಲ್ಲಿ ನಿಲ್ಲುವಂತಾಗಿದೆ.

Read Full Story
07:42 AM (IST) Mar 31

Karnataka News Live 31 March 2026 Bengaluru - ಬ್ಯಾಂಕ್‌ ಮ್ಯಾನೇಜರ್‌ ಪತ್ನಿ ಮರ್ಡರ್‌ ಕೇಸ್‌ - ಚಾರ್ಜ್‌ಶೀಟ್‌ನಲ್ಲಿ ಟೆಕ್ಕಿ ಪತಿಯ ಕ್ರೌರ್ಯ ಬಯಲು

ಬೆಂಗಳೂರಿನಲ್ಲಿ ನಡೆದ ಬ್ಯಾಂಕ್ ಉದ್ಯೋಗಿ ಭುವನೇಶ್ವರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪತಿ ಸೆಲ್ವ ಬಾಲಮುರುಗನ್ ಸೇರಿದಂತೆ ಏಳು ಮಂದಿ ವಿರುದ್ಧ ಪೊಲೀಸರು 495 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. 

Read Full Story
07:19 AM (IST) Mar 31

Karnataka News Live 31 March 2026 ಪೂಜೆ ಮಾಡಿ ಹೊಸ್ತಿಲು ಮೇಲೆ ಇಟ್ಟಿದ್ದ ಹೂ 6 ತಿಂಗಳ ಕಂದಮ್ಮನ ಉಸಿರಾಟ ನಿಲ್ಲಿಸ್ತು! ತಾಯಂದಿರೇ ಈ ತಪ್ಪು ಮಾಡ್ಬೇಡಿ!

ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ, ಆಟವಾಡುತ್ತಿದ್ದ ಆರುವರೆ ತಿಂಗಳ ಮಗು ಮನೆಯ ಹೊಸಿಲಿಗೆ ಇಟ್ಟಿದ್ದ ಒಣ ದಾಸವಾಳ ಹೂವನ್ನು ನುಂಗಿ ಉಸಿರುಗಟ್ಟಿ ಮೃತಪಟ್ಟಿದೆ. ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ.
Read Full Story