07:50 AM (IST) May 31

Karnataka Latest News Live:ಶಿಕ್ಷಕರಿಗೆ ಫೇಸ್, ಲೊಕೇಶನ್ ಹಾಜರಾತಿ ಕಡ್ಡಾಯ! ಶಾಲೆಗೆ ತಡವಾಗಿ ಬರುವ ಶಿಕ್ಷಕರಿಗೆ ಶಾಕ್

ಕರ್ನಾಟಕ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲಾ ಶಿಕ್ಷಕರಿಗೆ ಲೊಕೇಶನ್ ಮತ್ತು ಫೇಸ್ ಆಧರಿತ ಹಾಜರಾತಿ ವ್ಯವಸ್ಥೆ (KAAMS ಆ್ಯಪ್) ಜಾರಿಗೆ ತಂದಿದೆ. ಈ ಹೊಸ ನಿಯಮದ ಪ್ರಕಾರ, ನಿಗದಿತ ಸಮಯಕ್ಕೆ ಹಾಜರಾಗದಿದ್ದರೆ ಅಥವಾ ಅವಧಿಗೆ ಮುನ್ನ ನಿರ್ಗಮಿಸಿದರೆ ಅದನ್ನು ರಜೆ ಎಂದು ಪರಿಗಣಿಸಲಾಗುತ್ತದೆ ಮತ್ತು ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ.
Read Full Story
07:39 AM (IST) May 31

Karnataka Latest News Live:Vice Admiral Krishna Swaminathan - ಕನ್ನಡಿಗನಿಗೆ ಸಿಕ್ತು ದೇಶದ ಪ್ರತಿಷ್ಠಿತ ಹುದ್ದೆ! ಭಾರತೀಯ ನೌಕಪಡೆಯ ನೂತನ ಸಾರಥಿಯಾದ ಬಸವನಗುಡಿಯ ಈ ಹುಡುಗ ಯಾರು?

ಬೆಂಗಳೂರಿನ ಬಸವನಗುಡಿಯಲ್ಲಿ ಬೆಳೆದ ವೈಸ್‌ ಅಡ್ಮಿರಲ್‌ ಕೃಷ್ಣ ಸ್ವಾಮಿನಾಥನ್‌ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ವಿಜಯಪುರದ ಸೈನಿಕ ಶಾಲೆಯಲ್ಲಿ ಶಿಕ್ಷಣ ಪಡೆದ ಇವರು, ಈ ಹಿಂದೆ ಐಎನ್‌ಎಸ್ ವಿಕ್ರಮಾದಿತ್ಯ ಕಮಾಂಡರ್ ಸೇರಿ ಹಲವು ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದಾರೆ.

Read Full Story