Karnataka News Live: Siddaramaiah - ಕಾಂಗ್ರೆಸ್ ಪರ ಮಾತ ಯಾಚನೆ ಮಾಡಲು ನಾಳೆ ಸಿಎಂ ಕೇರಳಕ್ಕೆ

ಉಪ್ಪಿನಂಗಡಿ: ಹಾಸನದಿಂದ ಕೇರಳಕ್ಕೆ ಕಂಟೈನರ್ ವಾಹನದಲ್ಲಿ ಅತ್ಯಂತ ಅಮಾನವೀಯವಾಗಿ ತುಂಬಿ ಸಾಗಿಸುತ್ತಿದ್ದ 20 ಜಾನುವಾರುಗಳನ್ನು ಕಡಬ ಪೊಲೀಸರು ರಕ್ಷಿಸಿ, ಒಬ್ಬನನ್ನು ವಶಕ್ಕೆ ಪಡೆಡುಕೊಂಡಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊಸೂರು ಗ್ರಾಮದ ಇರ್ಪಾನ್ ವಶಕ್ಕೆ ಪಡೆಯಲಾಗಿದೆ. ವಾಹನ ಚಾಲಕ ನಯಾಝ್ ಪರಾರಿ ಆಗಿದ್ದಾನೆ. ಲಾರಿ ಮಾಲೀಕ ಅಬ್ದುಲ್ ರಹಿಮಾನ್ ವಿರುದ್ದ ಪ್ರಕರಣ ದಾಖಲಾಗಿದೆ.
ಶುಕ್ರವಾರ ಬೆಳಗ್ಗೆ ಜಾನುವಾರು ಸಾಗಿಸುತ್ತಿರುವ ಮಾಹಿತಿ ತಿಳಿದು ಪೊಲೀಸರು ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕನ್ವಾರೆ ಎಂಬಲ್ಲಿ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಕಂಟೈನರ್ ಒಳಗಡೆ ಅಮಾನವೀಯ ರೀತಿಯಲ್ಲಿ ತುಂಬಿಸಲಾಗಿದ್ದ 20 ಜಾನುವಾರುಗಳು ಪತ್ತೆಯಾಗಿವೆ.
Karnataka News Live 4 April 2026Siddaramaiah - ಕಾಂಗ್ರೆಸ್ ಪರ ಮಾತ ಯಾಚನೆ ಮಾಡಲು ನಾಳೆ ಸಿಎಂ ಕೇರಳಕ್ಕೆ
Karnataka News Live 4 April 2026Davanagere Bypoll 2026 - ನಾವೊಬ್ಬರೇ ಅಲ್ಲ ಮೋದಿನೂ ಸಾಲಗಾರ ಎಂದ ಡಿಸಿಎಂ; ₹15 ಲಕ್ಷದ ಭರವಸೆ ಏನಾಯ್ತು? ಡಿಕೆಶಿ ಪ್ರಶ್ನೆ
ಪ್ರಧಾನಿ ಮೋದಿ ಸರ್ಕಾರ ಸಾಲ ಮಾಡಿಲ್ಲವೇ ಎಂದು ಪ್ರಶ್ನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರದ ಸಾಲವನ್ನು ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಸರ್ಕಾರದ ವೈಫಲ್ಯಗಳು, ಈಡೇರದ ಭರವಸೆಗಳನ್ನು ಟೀಕಿಸಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದರು.
Karnataka News Live 4 April 2026ಮಧುಗಿರಿ ಬೆಟ್ಟದಲ್ಲಿ ನೀಳ ದೇಹ, ಮೊನಚಾದ ತಲೆಯುಳ್ಳ 'ನಾಗಾರ್ಜುನ ಸಾಗರ ರೇಸರ್' ಹಾವು ಪತ್ತೆ
ಅಪರೂಪದ ನಾಗಾರ್ಜುನ ಸಾಗರ ರೇಸರ್ ಹಾವು ಪತ್ತೆಯಾಗಿದೆ. ದಕ್ಷಿಣ ಭಾರತದಲ್ಲಿ ಮಾತ್ರ ಕಂಡುಬರುವ ಈ ಹಾವು, ತನ್ನ ವೇಗದ ಚಲನೆಯಿಂದ 'ರೇಸರ್' ಎಂದು ಹೆಸರುವಾಸಿಯಾಗಿದೆ. ಇದು ರಸೆಲ್ಸ್ ಕುಕ್ರಿ ಹಾವನ್ನು ಹೋಲುತ್ತದೆಯಾದರೂ, ವಿಶಿಷ್ಟ ದೈಹಿಕ ಲಕ್ಷಣಗಳಿಂದ ಭಿನ್ನವಾಗಿದೆ.