07:05 AM (IST) Apr 04

Karnataka News Live 4 April 2026Siddaramaiah - ಕಾಂಗ್ರೆಸ್ ಪರ ಮಾತ ಯಾಚನೆ ಮಾಡಲು ನಾಳೆ ಸಿಎಂ ಕೇರಳಕ್ಕೆ

ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ನಡೆಸಲು ಕೇರಳಕ್ಕೆ ತೆರಳಲಿದ್ದಾರೆ. ಅವರು ಮಂಜೇಶ್ವರ ವಿಧಾನಸಭೆ ಕ್ಷೇತ್ರದ ವೊರ್ಕಾಡಿ ಮತ್ತು ಮುಲ್ಲೇರಿಯದಲ್ಲಿ ನಡೆಯುವ ಬಹಿರಂಗ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.
Read Full Story
06:46 AM (IST) Apr 04

Karnataka News Live 4 April 2026Davanagere Bypoll 2026 - ನಾವೊಬ್ಬರೇ ಅಲ್ಲ ಮೋದಿನೂ ಸಾಲಗಾರ ಎಂದ ಡಿಸಿಎಂ; ₹15 ಲಕ್ಷದ ಭರವಸೆ ಏನಾಯ್ತು? ಡಿಕೆಶಿ ಪ್ರಶ್ನೆ

ಪ್ರಧಾನಿ ಮೋದಿ ಸರ್ಕಾರ ಸಾಲ ಮಾಡಿಲ್ಲವೇ ಎಂದು ಪ್ರಶ್ನಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯ ಸರ್ಕಾರದ ಸಾಲವನ್ನು ಸಮರ್ಥಿಸಿಕೊಂಡಿದ್ದಾರೆ. ಬಿಜೆಪಿ ಸರ್ಕಾರದ ವೈಫಲ್ಯಗಳು, ಈಡೇರದ ಭರವಸೆಗಳನ್ನು ಟೀಕಿಸಿದ ಅವರು, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದರು.

Read Full Story
06:40 AM (IST) Apr 04

Karnataka News Live 4 April 2026ಮಧುಗಿರಿ ಬೆಟ್ಟದಲ್ಲಿ ನೀಳ ದೇಹ, ಮೊನಚಾದ ತಲೆಯುಳ್ಳ 'ನಾಗಾರ್ಜುನ ಸಾಗರ ರೇಸರ್' ಹಾವು ಪತ್ತೆ

ಅಪರೂಪದ ನಾಗಾರ್ಜುನ ಸಾಗರ ರೇಸರ್ ಹಾವು ಪತ್ತೆಯಾಗಿದೆ. ದಕ್ಷಿಣ ಭಾರತದಲ್ಲಿ ಮಾತ್ರ ಕಂಡುಬರುವ ಈ ಹಾವು, ತನ್ನ ವೇಗದ ಚಲನೆಯಿಂದ 'ರೇಸರ್' ಎಂದು ಹೆಸರುವಾಸಿಯಾಗಿದೆ. ಇದು ರಸೆಲ್ಸ್ ಕುಕ್ರಿ ಹಾವನ್ನು ಹೋಲುತ್ತದೆಯಾದರೂ, ವಿಶಿಷ್ಟ ದೈಹಿಕ ಲಕ್ಷಣಗಳಿಂದ ಭಿನ್ನವಾಗಿದೆ.

Read Full Story