- Home
- News
- State
- Karnataka News Live: ಬೆಂಗಳೂರು - KR Circle ಬಳಿ ಎರಡು ಬಿಎಂಟಿಸಿ ಬಸ್ಗಳ ನಡುವೆ ಭೀಕರ ಅಪಘಾತ, ಪ್ರಯಾಣಿಕರ ರಕ್ಷಣೆಗೆ ಹರಸಾಹಸ!
Karnataka News Live: ಬೆಂಗಳೂರು - KR Circle ಬಳಿ ಎರಡು ಬಿಎಂಟಿಸಿ ಬಸ್ಗಳ ನಡುವೆ ಭೀಕರ ಅಪಘಾತ, ಪ್ರಯಾಣಿಕರ ರಕ್ಷಣೆಗೆ ಹರಸಾಹಸ!

ದಾವಣಗೆರೆ: ಜಾತಿಗಣತಿ ಸಮೀಕ್ಷೆ ಮಾಡಿ, ವರದಿ ಜಾರಿಗೊಳಿಸಲು ಬಯಸಿದ್ದ ಸಿದ್ದರಾಮಯ್ಯ ಅವರು ಇನ್ನೂ 2 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ ಎಂದುಕೊಂಡಿದ್ದೆವು, ಆದರೆ ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯಬೇಕಾಯಿತು ಎಂದು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ಸಮೀಕ್ಷೆ ಮಾಡಿ, ಅದನ್ನು ಜಾರಿಗೊಳಿಸಲು ಸಿದ್ದರಾಮಯ್ಯ ಬಯಸಿದ್ದರು. ಆದರೆ, ಅನಿರೀಕ್ಷಿತವಾಗಿ ಮುಖ್ಯಮಂತ್ರಿ ಸ್ಥಾನದಿಂದ ಅವರು ಕೆಳಗಿಳಿಯಬೇಕಾಯಿತು. ಸಿಎಂ ಸ್ಥಾನದಿಂದ ಕೆಳಗಿಳಿದರೂ, ಅದಕ್ಕೆ ಮುಂಚೆ ಕೊನೆಯ ದಿನ ಜಾತಿ ಜನಗಣತಿ ವರದಿಯನ್ನು ಸಿದ್ದರಾಮಯ್ಯ ಪಡೆದಿದ್ದರು. ಜಾತಿ ಜನಗಣತಿ ವರದಿಯನ್ನು ಜಾರಿಗೊಳಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲೂ ಪ್ರಸ್ತಾಪ ಮಾಡಿದ್ದೆವು. ಅದನ್ನು ಈಡೇರಿಸಬೇಕಾಗಿರುವುದು ನಮ್ಮ ಪಕ್ಷದ ಜವಾಬ್ದಾರಿಯಾಗಿದೆ ಎಂದು ಹೇಳಿದರು.
Karnataka News Live 4 July 2026ಬೆಂಗಳೂರು - KR Circle ಬಳಿ ಎರಡು ಬಿಎಂಟಿಸಿ ಬಸ್ಗಳ ನಡುವೆ ಭೀಕರ ಅಪಘಾತ, ಪ್ರಯಾಣಿಕರ ರಕ್ಷಣೆಗೆ ಹರಸಾಹಸ!
Karnataka News Live 4 July 2026ಕರ್ನಾಟಕ ಹೈಕೋರ್ಟ್ ನೇಮಕಾತಿ - ಡೇಟಾ ಎಂಟ್ರಿ ಹುದ್ದೆಗಳು, 80 ಸಾವಿರದವರೆಗೆ ವೇತನ
Karnataka News Live 4 July 2026ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ಗೆ ಜೀವಭಯ? ಗುಪ್ತಚರ ವರದಿಯಲ್ಲಿ ಶಾಕಿಂಗ್ ಮಾಹಿತಿ
Karnataka News Live 4 July 2026Karnataka SIR - ಮುರಾ ಗ್ರಾಮ ಮರ, ಟ್ರೀ ಬರೆದು ಎಡವಟ್ಟು, ಎಸ್ಐಆರ್ ಕನ್ನಡಲ್ಲೇ ನಡೆಸಲು ಕರವೇ ಆಗ್ರಹ
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್ಐಆರ್) ಅಕ್ಷರ ದೋಷದಿಂದ ನಾಗರಿಕರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಆಗ್ರಹಿಸಿದೆ.
Karnataka News Live 4 July 2026ಮುದ್ದೇಬಿಹಾಳದಿಂದ ಮಂತ್ರಾಲಯಕ್ಕೆ ಬಸ್ ಆರಂಭ; ಈ ರೂಟ್ನಲ್ಲಿ ಸಂಚರಿಸಲಿದೆ ನೂತನ ಬಸ್
ಕಕ್ಕೇರಾ ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮುದ್ದೇಬಿಹಾಳ–ರಾಯಚೂರು-ಮಂತ್ರಾಲಯ ನೂತನ ಬಸ್ ಸಂಚಾರ ಸೇವೆಗೆ ಚಾಲನೆ ದೊರೆತಿದೆ. ವಿದ್ಯಾರ್ಥಿಗಳು, ಕಾರ್ಮಿಕರು, ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗಲಿದೆ.
Karnataka News Live 4 July 2026ಕಾರು ಚಲಾಯಿಸುವಾಗ ದಿಢೀರ್ ಉಸಿರಾಟ ಸಮಸ್ಯೆ, ಮಹಿಳೆಯ ಜೀವ ಉಳಿಸಿದ ಮಡಿವಾಳ ಸಂಚಾರಿ ಪೊಲೀಸ್ ಪೇದೆ
ಕಾರು ಚಲಾಯಿಸುವಾಗ ದಿಢೀರನೇ ಉಸಿರಾಟ ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಾಫ್ಟ್ವೇರ್ ಕಂಪನಿ ಮಹಿಳಾ ಉದ್ಯೋಗಿಯನ್ನು ಮಡಿವಾಳ ಸಂಚಾರ ಠಾಣೆ ಹೆಡ್ ಕಾನ್ಸ್ಟೇಬಲ್ವೊಬ್ಬರು ರಕ್ಷಿಸಿದ್ದಾರೆ. ಪೇದೆಯ ಸಮಯಪ್ರ
Karnataka News Live 4 July 202650 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹೊಸ ಬಡಾವಣೆ - ಜನರಿಗೆ ಕೈಗೆಟುಕುವ ಬೆಲೆಗೆ ನಿವೇಶನ
Karnataka News Live 4 July 2026ಶಿವರಾಮ ಕಾರಂತ ಬಡಾವಣೆ ಫಲಾನುಭವಿಗಳಿಗೆ ಗುಡ್ನ್ಯೂಸ್! ನಿವೇಶನ ಹಂಚಿಕೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಸಂಬಂಧ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲು ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.
Karnataka News Live 4 July 2026ಅಮೆರಿಕದ ವಿಶೇಷ ವಿಮಾನದಿಂದ ಹಾವೇರಿ ಜಿಲ್ಲೆಯಲ್ಲಿ 3 ದಿನ ಮೋಡ ಬಿತ್ತನೆ - ಶಾಸಕರಿಂದಲೇ ವೆಚ್ಚ
Karnataka News Live 4 July 2026ನೆಂಟರಿಗೆ, ಆಪ್ತರಿಗೆ 30 ಬಾರ್ ಲೈಸೆನ್ಸ್ ಕೊಟ್ಟಿದ್ದ ಜಾರಕಿಹೊಳಿ ಭಾವ! - ಇ.ಡಿ. ದಾಳಿ ಬೆನ್ನಲ್ಲೇ ಲೋಕಾಯುಕ್ತರಿಂದ ಶಾಕ್
ಅಧಿಕಾರ ದುರ್ಬಳಕೆ ಮಾಡಿಕೊಂಡು ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಸುಮಾರು 30 ಮದ್ಯದಂಗಡಿಗಳ ಪರವಾನಗಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ಹಾಗೂ ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್ ವಿತರಿಸಿದ್ದರು ಎಂಬ ಸಂಗತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ.
Karnataka News Live 4 July 2026ಸಿಎಂ ಗೂಟ ಹೊಡೆದುಕೊಂಡು ಇರಲ್ಲ - ಅಧಿಕಾರಿಗಳಿಗೆ ನಿಖಿಲ್ ಕುಮಾರಸ್ವಾಮಿ ಖಡಕ್ ಎಚ್ಚರಿಕೆ
Karnataka News Live 4 July 2026ಕುಶಾಲನಗರ - ಕಾವೇರಿ ನದಿ ಹರಿವು ಪ್ರಮಾಣ ಏರಿಕೆ; 205.69 ಮಿಲಿ ಮೀಟರ್ ಪ್ರಮಾಣದ ಮಳೆ
Karnataka News Live 4 July 2026ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆಯ ಕಟ್ಟಡ ಉದ್ಘಾಟನೆ; ₹3.25 ಕೋಟಿ ವೆಚ್ಚದಲ್ಲಿ ನಿರ್ಮಾಣ
Karnataka News Live 4 July 2026GBA Clear footpath encroachments - ತೆರವು ಮಾಡಿದ ಫುಟ್ಪಾತಲ್ಲಿ ಮತ್ತೆ ವ್ಯಾಪಾರ ಶುರು!
ಬೆಂಗಳೂರಿನಲ್ಲಿ ಫುಟ್ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರೆದಿದೆ. ನಗರದ ಹಲವು ವಲಯಗಳಲ್ಲಿ ಜೆಸಿಬಿ ಬಳಸಿ ಪೆಟ್ಟಿ ಅಂಗಡಿ, ತಳ್ಳುವ ಗಾಡಿ, ಕಟ್ಟಡ ತ್ಯಾಜ್ಯ ತೆರವುಗೊಳಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಕೆಲವೆಡೆ ವಿರೋಧ ವ್ಯಕ್ತವಾಗಿದ್ದು, ಕೆಲವರು ಮತ್ತೆ ವ್ಯಾಪಾರ ಶುರು ಮಾಡಿದ್ದಾರೆ.