09:27 AM (IST) Jul 04

Karnataka News Live 4 July 2026ಬೆಂಗಳೂರು - KR Circle ಬಳಿ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ, ಪ್ರಯಾಣಿಕರ ರಕ್ಷಣೆಗೆ ಹರಸಾಹಸ!

ಬೆಂಗಳೂರಿನ ಕೆ.ಆರ್. ಸರ್ಕಲ್ ಬಳಿ ಬೆಳ್ಳಂಬೆಳಗ್ಗೆ ಎರಡು ಬಿಎಂಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಸಿಗ್ನಲ್‌ನಲ್ಲಿ ನಿಂತಿದ್ದ ವೋಲ್ವೋ ಬಸ್‌ಗೆ ಹಿಂಬದಿಯಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯಿಂದಾಗಿ ಆ ಪ್ರದೇಶದಲ್ಲಿ ತೀವ್ರ ಸಂಚಾರ ದಟ್ಟಣೆ ಉಂಟಾಗಿತ್ತು.
Read Full Story
09:03 AM (IST) Jul 04

Karnataka News Live 4 July 2026ಕರ್ನಾಟಕ ಹೈಕೋರ್ಟ್ ನೇಮಕಾತಿ - ಡೇಟಾ ಎಂಟ್ರಿ ಹುದ್ದೆಗಳು, 80 ಸಾವಿರದವರೆಗೆ ವೇತನ

ಕರ್ನಾಟಕ ಉಚ್ಚ ನ್ಯಾಯಾಲಯವು ಬೆಂಗಳೂರಿನಲ್ಲಿ ಖಾಲಿ ಇರುವ 21 ಡೇಟಾ ಎಂಟ್ರಿ ಸಹಾಯಕ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. ಪದವಿ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಯ್ಕೆಯಾದವರಿಗೆ ಮಾಸಿಕ ₹25,500 ರಿಂದ ₹81,100 ವರೆಗೆ ವೇತನ ನೀಡಲಾಗುತ್ತದೆ.
Read Full Story
08:22 AM (IST) Jul 04

Karnataka News Live 4 July 2026ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್‌ಗೆ ಜೀವಭಯ? ಗುಪ್ತಚರ ವರದಿಯಲ್ಲಿ ಶಾಕಿಂಗ್ ಮಾಹಿತಿ

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ನಡೆದ ಗದ್ದಲದ ನಂತರ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಜೀವಭಯದ ಆತಂಕ ಎದುರಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ, ರಾಜ್ಯ ಗುಪ್ತಚರ ಇಲಾಖೆಯು ಅವರಿಗೆ ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವಂತೆ ಗೃಹ ಇಲಾಖೆಗೆ ವರದಿ ಸಲ್ಲಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
Read Full Story
08:19 AM (IST) Jul 04

Karnataka News Live 4 July 2026Karnataka SIR - ಮುರಾ ಗ್ರಾಮ ಮರ, ಟ್ರೀ ಬರೆದು ಎಡವಟ್ಟು, ಎಸ್‌ಐಆರ್ ಕನ್ನಡಲ್ಲೇ ನಡೆಸಲು ಕರವೇ ಆಗ್ರಹ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ಅಕ್ಷರ ದೋಷದಿಂದ ನಾಗರಿಕರು ತಮ್ಮ ಮತದಾನದ ಹಕ್ಕನ್ನೇ ಕಳೆದುಕೊಳ್ಳಲಿದ್ದಾರೆ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಸಂಪೂರ್ಣ ಕನ್ನಡದಲ್ಲೇ ನಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕರವೇ) ಆಗ್ರಹಿಸಿದೆ.

Read Full Story
08:07 AM (IST) Jul 04

Karnataka News Live 4 July 2026ಮುದ್ದೇಬಿಹಾಳದಿಂದ ಮಂತ್ರಾಲಯಕ್ಕೆ ಬಸ್ ಆರಂಭ; ಈ ರೂಟ್‌ನಲ್ಲಿ ಸಂಚರಿಸಲಿದೆ ನೂತನ ಬಸ್

ಕಕ್ಕೇರಾ ಗ್ರಾಮೀಣ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮುದ್ದೇಬಿಹಾಳ–ರಾಯಚೂರು-ಮಂತ್ರಾಲಯ ನೂತನ ಬಸ್ ಸಂಚಾರ ಸೇವೆಗೆ ಚಾಲನೆ ದೊರೆತಿದೆ. ವಿದ್ಯಾರ್ಥಿಗಳು, ಕಾರ್ಮಿಕರು, ಮತ್ತು ವ್ಯಾಪಾರಿಗಳಿಗೆ ಅನುಕೂಲವಾಗಲಿದೆ.

Read Full Story
07:56 AM (IST) Jul 04

Karnataka News Live 4 July 2026ಕಾರು ಚಲಾಯಿಸುವಾಗ ದಿಢೀರ್ ಉಸಿರಾಟ ಸಮಸ್ಯೆ, ಮಹಿಳೆಯ ಜೀವ ಉಳಿಸಿದ ಮಡಿವಾಳ ಸಂಚಾರಿ ಪೊಲೀಸ್ ಪೇದೆ

ಕಾರು ಚಲಾಯಿಸುವಾಗ ದಿಢೀರನೇ ಉಸಿರಾಟ ಸಮಸ್ಯೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಾಫ್ಟ್‌ವೇರ್ ಕಂಪನಿ ಮಹಿಳಾ ಉದ್ಯೋಗಿಯನ್ನು ಮಡಿವಾಳ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೇಬಲ್‌ವೊಬ್ಬರು ರಕ್ಷಿಸಿದ್ದಾರೆ. ಪೇದೆಯ ಸಮಯಪ್ರ

Read Full Story
07:55 AM (IST) Jul 04

Karnataka News Live 4 July 202650 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹೊಸ ಬಡಾವಣೆ - ಜನರಿಗೆ ಕೈಗೆಟುಕುವ ಬೆಲೆಗೆ ನಿವೇಶನ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ 50 ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಿಸಿ, ಜನರಿಗೆ ಕೈಗೆಟುಕುವ ದರದಲ್ಲಿ ನಿವೇಶನ ನೀಡಲು ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಪ್ರಗತಿ ಪರಿಶೀಲನಾ ಸಭೆಯಲ್ಲಿ, ಪೌರಕಾರ್ಮಿಕರ ನೇಮಕಾತಿ, ಪಾರ್ಕ್ ಅಭಿವೃದ್ಧಿ ಮತ್ತು ಇ-ಖಾತಾ ಪ್ರಕ್ರಿಯೆ ಸರಳೀಕರಣಗೊಳಿಸುವಂತೆಯೂ ಅವರು ಸೂಚನೆ ನೀಡಿದರು.
Read Full Story
07:38 AM (IST) Jul 04

Karnataka News Live 4 July 2026ಶಿವರಾಮ ಕಾರಂತ ಬಡಾವಣೆ ಫಲಾನುಭವಿಗಳಿಗೆ ಗುಡ್‌ನ್ಯೂಸ್! ನಿವೇಶನ ಹಂಚಿಕೆಗೆ ಹೈಕೋರ್ಟ್‌ ಗ್ರೀನ್ ಸಿಗ್ನಲ್

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಅಭಿವೃದ್ಧಿಪಡಿಸುತ್ತಿರುವ ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಸಂಬಂಧ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲು ಸರ್ಕಾರಕ್ಕೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಮಾಡಿದೆ.

Read Full Story
07:20 AM (IST) Jul 04

Karnataka News Live 4 July 2026ಅಮೆರಿಕದ ವಿಶೇಷ ವಿಮಾನದಿಂದ ಹಾವೇರಿ ಜಿಲ್ಲೆಯಲ್ಲಿ 3 ದಿನ ಮೋಡ ಬಿತ್ತನೆ - ಶಾಸಕರಿಂದಲೇ ವೆಚ್ಚ

ಹಾವೇರಿ ಜಿಲ್ಲೆಯಲ್ಲಿನ ಮಳೆ ಕೊರತೆ ನೀಗಿಸಲು ಶಾಸಕ ಪ್ರಕಾಶ ಕೋಳಿವಾಡ ನೇತೃತ್ವದಲ್ಲಿ ಮೋಡ ಬಿತ್ತನೆ ಮಾಡಲು ನಿರ್ಧರಿಸಲಾಗಿದೆ. ಜುಲೈ 7 ರಿಂದ ಮೂರು ದಿನಗಳ ಕಾಲ ನಡೆಯಲಿರುವ ಈ ಕಾರ್ಯಾಚರಣೆಗೆ ಅಮೆರಿಕದಿಂದ ವಿಶೇಷ ವಿಮಾನ ತರಿಸಲಾಗುತ್ತಿದ್ದು, ಇದರ ಸಂಪೂರ್ಣ ವೆಚ್ಚವನ್ನು ಜಿಲ್ಲೆಯ ಶಾಸಕರೇ ಭರಿಸಲಿದ್ದಾರೆ.
Read Full Story
07:19 AM (IST) Jul 04

Karnataka News Live 4 July 2026ನೆಂಟರಿಗೆ, ಆಪ್ತರಿಗೆ 30 ಬಾರ್‌ ಲೈಸೆನ್ಸ್ ಕೊಟ್ಟಿದ್ದ ಜಾರಕಿಹೊಳಿ ಭಾವ! - ಇ.ಡಿ. ದಾಳಿ ಬೆನ್ನಲ್ಲೇ ಲೋಕಾಯುಕ್ತರಿಂದ ಶಾಕ್

ಅಧಿಕಾರ ದುರ್ಬಳಕೆ ಮಾಡಿಕೊಂಡು ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ಸುಮಾರು 30 ಮದ್ಯದಂಗಡಿಗಳ ಪರವಾನಗಿಗಳನ್ನು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರ ಭಾವ ಹಾಗೂ ಅಬಕಾರಿ ಹೆಚ್ಚುವರಿ ಆಯುಕ್ತ ವೈ.ಮಂಜುನಾಥ್‌ ವಿತರಿಸಿದ್ದರು ಎಂಬ ಸಂಗತಿಯನ್ನು ಲೋಕಾಯುಕ್ತ ಪೊಲೀಸರು ಪತ್ತೆ ಹಚ್ಚಿದ್ದಾರೆ.

Read Full Story
07:07 AM (IST) Jul 04

Karnataka News Live 4 July 2026ಸಿಎಂ ಗೂಟ ಹೊಡೆದುಕೊಂಡು ಇರಲ್ಲ - ಅಧಿಕಾರಿಗಳಿಗೆ ನಿಖಿಲ್ ಕುಮಾರಸ್ವಾಮಿ ಖಡಕ್ ಎಚ್ಚರಿಕೆ

ರಾಮನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜೆಡಿಎಸ್-ಬಿಜೆಪಿ ನೇತೃತ್ವದಲ್ಲಿ ನಿಖಿಲ್ ಕುಮಾರಸ್ವಾಮಿ ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿಗಳು ಶಾಶ್ವತರಲ್ಲ, ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡಬೇಕು ಎಂದು ಎಚ್ಚರಿಸಿದ ಅವರು, ಈ ಅಕ್ರಮದ ಬಗ್ಗೆ ದೆಹಲಿಯಲ್ಲಿಯೂ ದೂರು ನೀಡುವುದಾಗಿ ತಿಳಿಸಿದರು.
Read Full Story
06:52 AM (IST) Jul 04

Karnataka News Live 4 July 2026ಕುಶಾಲನಗರ - ಕಾವೇರಿ ನದಿ ಹರಿವು ಪ್ರಮಾಣ ಏರಿಕೆ; 205.69 ಮಿಲಿ ಮೀಟರ್ ಪ್ರಮಾಣದ ಮಳೆ

ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಕುಶಾಲನಗರದಲ್ಲಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಉಂಟಾಗಿದ್ದ ಆತಂಕದ ಪರಿಸ್ಥಿತಿಯನ್ನು ಸ್ಮರಿಸಲಾಗಿದ್ದು, ಹಾರಂಗಿ ಜಲಾಶಯದ ಒಳಹರಿವು ಮತ್ತು ನೀರಿನ ಸಂಗ್ರಹದ ಬಗ್ಗೆಯೂ ವರದಿಯಾಗಿದೆ.
Read Full Story
06:42 AM (IST) Jul 04

Karnataka News Live 4 July 2026ಅಂತಾರಾಷ್ಟ್ರೀಯ ಗುಣಮಟ್ಟದ ಸರ್ಕಾರಿ ಶಾಲೆಯ ಕಟ್ಟಡ ಉದ್ಘಾಟನೆ; ₹3.25 ಕೋಟಿ ವೆಚ್ಚದಲ್ಲಿ ನಿರ್ಮಾಣ

ವಿಜಯಪುರದ ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಸಿ.ಎಸ್.ಆರ್ ಅನುದಾನದಡಿ ₹3.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಸರ್ಕಾರಿ ಪ್ರೌಢಶಾಲಾ ಕಟ್ಟಡವನ್ನು ಸಚಿವ ಎಂ.ಬಿ. ಪಾಟೀಲರು ಲೋಕಾರ್ಪಣೆಗೊಳಿಸಿದರು. ಈ ಸುಸಜ್ಜಿತ ಶಾಲೆಯು ಗ್ರಾಮೀಣ ಪ್ರತಿಭೆಗಳಿಗೆ, ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ವರದಾನವಾಗಲಿದೆ ಎಂದು ಅವರು ಹೇಳಿದರು.
Read Full Story
06:42 AM (IST) Jul 04

Karnataka News Live 4 July 2026GBA Clear footpath encroachments - ತೆರವು ಮಾಡಿದ ಫುಟ್‌ಪಾತಲ್ಲಿ ಮತ್ತೆ ವ್ಯಾಪಾರ ಶುರು!

ಬೆಂಗಳೂರಿನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರೆದಿದೆ. ನಗರದ ಹಲವು ವಲಯಗಳಲ್ಲಿ ಜೆಸಿಬಿ ಬಳಸಿ ಪೆಟ್ಟಿ ಅಂಗಡಿ, ತಳ್ಳುವ ಗಾಡಿ, ಕಟ್ಟಡ ತ್ಯಾಜ್ಯ ತೆರವುಗೊಳಿಸಲಾಗುತ್ತಿದೆ. ಈ ಕಾರ್ಯಾಚರಣೆಗೆ ಕೆಲವೆಡೆ ವಿರೋಧ ವ್ಯಕ್ತವಾಗಿದ್ದು, ಕೆಲವರು ಮತ್ತೆ ವ್ಯಾಪಾರ ಶುರು ಮಾಡಿದ್ದಾರೆ.

Read Full Story