ಮಾವಿನ ಹಣ್ಣುಗಳಲ್ಲಿ ಅಲ್ಫಾನ್ಸೊ ಪ್ರಮುಖವಾದುದು. ಆದರೆ ಇದು ಭಾರತೀಯ ತಳಿಯಲ್ಲ. ಹಾಗಿದ್ರೆ ಇದ್ರ ಮೂಲ ಯಾವುದು?
ಪೂರ್ತಿ ಓದಿKarnataka News Live: ಯಾರು ಏನೇ ಅಂದ್ರು ಸಿಎಂ ಡೋಂಟ್ ಕೇರ್, ಇತ್ತ ಯತ್ನಾಳ ಬಣಕ್ಕೆ ಸೆಡ್ಡು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ನಾಯಕರು ಮೊಯ್ಲಿ ಅವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿಲ್ಲ. ಇದು ಆ ಕ್ಷಣಕ್ಕೆ ಡಿ.ಕೆ. ಶಿವಕುಮಾರ್ ಅವರಿಗೆ ಖುಷಿ ನೀಡಲು ನೀಡಿದ ಹೇಳಿಕೆಯಷ್ಟೇ ಎಂದು ತಳ್ಳಿ ಹಾಕುತ್ತಾರೆ. ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಈವರೆಗೆ ಕಿರಿಯ ಶಾಸಕರು ಮಾತ್ರ ಹೇಳಿಕೆ ನೀಡುತ್ತಿದ್ದರು. ಇದೀಗ ವೀರಪ್ಪ ಮೊಯ್ಲಿ ಅವರು ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ಹೊರತಾಗಿಯೂ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ಡಿ.ಕೆ. ಶಿವಕುಮಾರ್ ಬಣದ ನಾಯಕರಲ್ಲಿ ಹೊಸ ಹುರುಪು ಹುಟ್ಟುಹಾಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯನ್ನು ಧಿಕ್ಕರಿಸಿ ಎಂ.ಪಿ.ರೇಣುಕಾಚಾರ್ಯ ಅವರು ವೀರಶೈವ ಲಿಂಗಾಯತ ಮಹಾಸಂಗಮದ ಪೂರ್ವಸಿದ್ಧತಾ ಸಭೆ ಮುಂದುವರೆಸಿದ್ದಾರೆ. ಬೆಂಗಳೂರಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಲಿದ್ದು, ಸುಮಾರು ಹತ್ತು ಜಿಲ್ಲೆಗಳ ಮುಖಂಡರು ಭಾಗವಹಿಸಲಿದ್ದಾರೆ.
ಅಲ್ಫಾನ್ಸೋ: ದೇಶದಲ್ಲಿ ಸಾಕಷ್ಟು ಜನಪ್ರಿಯವಾಗಿರುವ ಈ ಮಾವಿನ ಹಣ್ಣಿನ ಮೂಲ ಭಾರತವಲ್ಲ..!
ಎರಡು ತಿಂಗಳ ಗೃಹಲಕ್ಷ್ಮಿ ಬಾಕಿ ಹಣ ಸದ್ಯದಲ್ಲೇ ಬಿಡುಗಡೆ: ಲಕ್ಷ್ಮಿ ಹೆಬ್ಬಾಳ್ಕರ್ !
ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಫಲಾನುಭವಿಗಳನ್ನು ಕಡಿಮೆ ಮಾಡುವ ಪ್ರಸ್ತಾಪವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಪೂರ್ತಿ ಓದಿಯುರೋಪಿಯನ್ ಪಾಲಿಗೆ ಭಾರತ ‘ಆಪ್ತಮಿತ್ರ - ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸನ್ನದ್ಧ : ಪ್ರಲ್ಹಾದ ಜೋಶಿ
ಯುರೋಪಿಯನ್ ಒಕ್ಕೂಟದ ಆಯೋಗದ ಅಧ್ಯಕ್ಷರ ಭಾರತ ಭೇಟಿ ಭಾರತ-ಇಯು ಸಂಬಂಧದಲ್ಲಿ ಹೊಸ ಅಧ್ಯಾಯವನ್ನು ತೆರೆದಿದೆ. ಮುಕ್ತ ವ್ಯಾಪಾರ ಒಪ್ಪಂದ, ನವೀಕರಿಸಬಹುದಾದ ಇಂಧನ ಮತ್ತು ತಂತ್ರಜ್ಞಾನದ ಸಹಕಾರದ ಕುರಿತು ಸಕಾರಾತ್ಮಕ ಚರ್ಚೆಗಳು ನಡೆದಿವೆ.
ಪೂರ್ತಿ ಓದಿ'ನನ್ನ ಮಗ್ನೆ ಜೆಡಿಎಸ್ನವರಿಗೆ ಕೆಲಸ ಕೊಡ್ತೀಯ?..' ಅಧಿಕಾರಿಗೆ ಸಚಿವ ವೆಂಕಟೇಶ್ ಧಮ್ಕಿ, ಆಡಿಯೋ ವೈರಲ್!
ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಅವರು ತಾಲೂಕು ಪಂಚಾಯಿತಿ ಇಂಜಿನಿಯರ್ಗೆ ನಿಂದಿಸಿದ ಆಡಿಯೋ ವೈರಲ್ ಆಗಿದೆ. ಆಡಿಯೋದಲ್ಲಿ ಸಚಿವರು ಆಕ್ಷೇಪಾರ್ಹ ಪದಗಳನ್ನು ಬಳಸಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಪೂರ್ತಿ ಓದಿKarnataka Budget Session: ಬಜೆಟ್ ಅಧಿವೇಶನ: ಗ್ಯಾರಂಟಿ ಯೋಜನೆಗಳ ಬಗ್ಗೆ ರಾಜ್ಯಪಾಲರು ಮೆಚ್ಚುಗೆ!
ರಾಜ್ಯಪಾಲರ ಭಾಷಣದಲ್ಲಿ ಗ್ಯಾರಂಟಿ ಯೋಜನೆಗಳ ಸಾಧನೆ ಮತ್ತು ರಾಜ್ಯ ಸರ್ಕಾರದ ಸಮರ್ಥನೆಯನ್ನು ಎತ್ತಿ ತೋರಿಸಲಾಗಿದೆ. ಆರ್ಥಿಕತೆ, ಕಾನೂನು ಸುವ್ಯವಸ್ಥೆ, ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ.
ಪೂರ್ತಿ ಓದಿವೈದಿಕ ಸಂಸ್ಕೃತಿ ವಿರುದ್ಧ ಹೋರಾಡಿದ್ದು ಬಸವ ಧರ್ಮ ಮಾತ್ರ: ವಿಮರ್ಶಕ ರಂಜಾನ್ ದರ್ಗಾ
ವಿಮರ್ಶಕ ರಂಜಾನ್ ದರ್ಗಾ ಅವರು ಬಸವ ಧರ್ಮವು ವೈದಿಕ ಸಂಸ್ಕೃತಿಯ ವಿರುದ್ಧ ಹೋರಾಡಿದೆ ಎಂದು ಹೇಳಿದರು. ಲೋಕಾಯತ, ಬೌದ್ಧ ಧರ್ಮವನ್ನು ಮನು ಸಂಸ್ಕೃತಿ ಇಲ್ಲವಾಗಿಸಿತು. ಬಸವ ಧರ್ಮಕ್ಕೆ ಗಡಿರೇಖೆಗಳಿಲ್ಲ ಎಂದರು.
ಪೂರ್ತಿ ಓದಿಕನ್ನಡಿಗರ ಮೇಲೆ ಮಾರಾಠಿಗರ ಪುಂಡಾಟ ಖಂಡಿಸಿ ರಾಜಭವನಕ್ಕೆ ವಾಟಾಳ್ ನಾಗರಾಜ್ ಮುತ್ತಿಗೆ ಯತ್ನ!
ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿರ್ವಾಹಕನ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಮುತ್ತಿಗೆಗೆ ಯತ್ನಿಸಲಾಯಿತು. ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು. ಮಾರ್ಚ್ 22 ರಂದು ಅಖಿಲ ಕರ್ನಾಟಕ ಬಂದ್ ಮಾಡಲಾಗುವುದು ಎಂದು ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಪೂರ್ತಿ ಓದಿ