11:53 PM (IST) Sep 04

Karnataka News Live 4th September 2025 ಬೆಳಗಾವಿ - ಭೀಕರ ರಸ್ತೆ ಅಪಘಾತ, ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
Read Full Story
11:29 PM (IST) Sep 04

Karnataka News Live 4th September 2025 ಬೆಂಗಳೂರಿನ ಬೌರಿಂಗ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ? ಎದೆಯೆತ್ತರಕ್ಕೆ ಬೆಳೆದ ಮಗ ಸಾವು, ಇಬ್ಬರ ಮಕ್ಕಳನ್ನು ಕಳ್ಕೊಂಡ ಹೆತ್ತ ತಾಯಿಗೆ ಇದೆಂಥ ಸ್ಥಿತಿ!

ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ 30 ವರ್ಷದ ಶಿವಕುಮಾರ್ ಮೃತಪಟ್ಟಿದ್ದಾರೆ. ತಾಯಿ ಶಾರದಾ ತಮ್ಮ ಇಬ್ಬರು ಗಂಡು ಮಕ್ಕಳನ್ನು ಕಳೆದುಕೊಂಡು ಆಘಾತಕ್ಕೊಳಗಾಗಿದ್ದಾರೆ. ಐಸಿಯುಗೆ ದಾಖಲಿಸದೆ ನಿರ್ಲಕ್ಷ್ಯ ವಹಿಸಿದ್ದೇ ಮಗನ ಸಾವಿಗೆ ಕಾರಣ ಎಂದು ಆರೋಪ.
Read Full Story
10:29 PM (IST) Sep 04

Karnataka News Live 4th September 2025 GST ಸರಳೀಕರಣ ಬಡವರಿಗೆ, ಮಧ್ಯಮ ವರ್ಗದವರಿಗೆ ಪ್ರಯೋಜನ - ಸಂಸದ ಕಾಗೇರಿ

ಜಿಎಸ್ಟಿ ದರ ಪರಿಷ್ಕರಣೆಯಿಂದ ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಹೆಚ್ಚಿನ ಲಾಭವಾಗಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. 

Read Full Story
10:25 PM (IST) Sep 04

Karnataka News Live 4th September 2025 ಸೌಜನ್ಯ ಕೇಸ್​ನಲ್ಲಿ ನನ್ನನ್ನೇ ರೇ*ಪ್​ ಮಾಡೋ ಕಮೆಂಟ್​ ಹಾಕಿದ್ರು! ಆಮೇಲೆ ಗೊತ್ತಾಯ್ತು ಅವ್ರು... ಶಾಕಿಂಗ್​ ವಿಷ್ಯ ಹೇಳಿದ ಮಹಿಳಾ ಆಯೋಗದ ಅಧ್ಯಕ್ಷೆ

ಸೌಜನ್ಯ ಕೇಸ್​ಗೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ತಮ್ಮ ವಿಡಿಯೋ ಮಿಸ್​ಯೂಸ್​ ಮಾಡಿ ರೇ*ಪ್​ ಬೆದರಿಕೆ ಹಾಕಿದ್ದರ ವಿಚಿತ್ರ ಘಟನೆ ಸುವರ್ಣ ಪಾಡ್​ಕಾಸ್ಟ್​ನಲ್ಲಿ ವಿವರಿಸಿದ್ದಾರೆ.

 

Read Full Story
10:15 PM (IST) Sep 04

Karnataka News Live 4th September 2025 ಗುರುಗ್ರಾಮದಲ್ಲಿ 1BHK ಮನೆ ಬಾಡಿಗೆ 1 ಲಕ್ಷ, ಭಾರತದಲ್ಲಿ ದುಬಾರಿ ಜೀವನ, ರಷ್ಯನ್ ಮಹಿಳೆ ವಿಡಿಯೋ ವೈರಲ್!

ಭಾರತದಲ್ಲಿ ಜೀವನ ಅಗ್ಗವಾಗಿದೆ ಎಂದು ಕೆಲವರು ಹೇಳುತ್ತಾರೆ, ಆದರೆ ಗುರುಗ್ರಾಮದಲ್ಲಿ  ಒಂದು ತಿಂಗಳಲ್ಲಿ ಒಂದು ಲಕ್ಷ ಖರ್ಚು ಮಾಡುವ ಹಣ ಇಷ್ಟೇ ಎಂದು ರಷ್ಯನ್ ಮೂಲದ ಮಹಿಳೆಯ ವಿಡಿಯೋ ವೈರಲ್ ಆಗಿದೆ.

Read Full Story
09:23 PM (IST) Sep 04

Karnataka News Live 4th September 2025 ಮಹಿಳಾ ನಾಯಕತ್ವಕ್ಕೆ ಎಚ್ಎಎಲ್ ಉತ್ತೇಜನ - 'ತೇಜಸ್ವಿ' ರಾಷ್ಟ್ರೀಯ ಮಹಿಳಾ ಸಮಾವೇಶ

ಬೆಂಗಳೂರಿನಲ್ಲಿ 'ತೇಜಸ್ವಿ' ಎಂಬ ಮೊದಲ ರಾಷ್ಟ್ರೀಯ ಮಹಿಳಾ ಸಮಾವೇಶವನ್ನು ಎಚ್ಎಎಲ್ ಮತ್ತು ಫೋರಮ್ ಆಫ್ ವಿಮೆನ್ ಇನ್ ಪಬ್ಲಿಕ್ ಸೆಕ್ಟರ್ ಆಯೋಜಿಸಿದ್ದವು. ಮನೆ ಮತ್ತು ಕೆಲಸದಲ್ಲಿ ಮಹಿಳೆಯರ ಸಾಧನೆಗಳನ್ನು ಗುರುತಿಸಲಾಯಿತು. ಕಾರ್ಯಕ್ರಮದ ಪೂರ್ಣ ವರದಿ ಇಲ್ಲಿದೆ

Read Full Story
09:00 PM (IST) Sep 04

Karnataka News Live 4th September 2025 ಕೋಟ್ಯಂತರ ಜೀವ ವಿಮಾ ಪಾಲಿಸಿದಾರರಿಗೆ ಸಿಹಿ ಸುದ್ದಿ! GST ಕಡಿತದ ನಂತರ LIC ಕಂತು ಅಗ್ಗ? ಪ್ರೀಮಿಯಂ ಮೇಲೆ ಎಷ್ಟು ಉಳಿತಾಯ? ತಿಳಿಯಿರಿ

ಸೆಪ್ಟೆಂಬರ್ 22, 2025 ರಿಂದ ಜೀವ ವಿಮಾ ಪ್ರೀಮಿಯಂ ಮೇಲಿನ 18% ಜಿಎಸ್‌ಟಿಯನ್ನು ಸಂಪೂರ್ಣವಾಗಿ ತೆಗೆದುಹಾಕಲಾಗುವುದು. ಇದರಿಂದ ಎಲ್‌ಐಸಿ ಸೇರಿದಂತೆ ಎಲ್ಲಾ ಜೀವ ವಿಮಾ ಕಂತುಗಳು ಅಗ್ಗವಾಗಲಿವೆ, ಗ್ರಾಹಕರಿಗೆ ಗಣನೀಯ ಉಳಿತಾಯ.
Read Full Story
08:44 PM (IST) Sep 04

Karnataka News Live 4th September 2025 ಧರ್ಮಸ್ಥಳ ಕೇಸ್ ಯೂಟ್ಯೂಬರ್ ಸಮೀರ್ ಮನೆ ಮಹಜರು; ಇದೆಲ್ಲಾ ಸುಳ್ಳು ಕೇಸ್ ಎಂದ ಮಟ್ಟಣ್ಣನವರ್

ಯೂಟ್ಯೂಬರ್ ಸಮೀರ್ ಮೇಲಿನ ಆರೋಪ ಸುಳ್ಳು ಎಂದು ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಹೇಳಿದ್ದಾರೆ. 'ಧಣಿಗಳ ಚಾಟುಗಳು' ಎಂಬ ಪದ ಬಳಕೆಗೆ ಸಂಬಂಧಿಸಿದಂತೆ ಪೊಲೀಸರು ಸಮೀರ್ ಮನೆಯಲ್ಲಿ ಮಹಜರು ನಡೆಸಿದ್ದಾರೆ. ಆರು ಗಂಟೆಗಳ ಕಾಲ ನಡೆದ ಪರಿಶೀಲನೆಯಲ್ಲಿ ಪ್ರಮುಖ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
Read Full Story
08:05 PM (IST) Sep 04

Karnataka News Live 4th September 2025 ಬಳ್ಳಾರಿಯಲ್ಲಿ ರಾಜ್ಯದ 2ನೇ ಬಯೋ ಇನೋವೇಶನ್‌ ಕೇಂದ್ರ ನಿರ್ಮಿಸಲು ಸರ್ಕಾರ ಸಿದ್ದತೆ!

ಗಣಿಗಾರಿಕೆ ಪಟ್ಟಣ ಬಳ್ಳಾರಿಯಲ್ಲಿ ಜೈವಿಕ ನಾವೀನ್ಯತೆ ಕೇಂದ್ರ ಸ್ಥಾಪನೆಗೆ ಕರ್ನಾಟಕ ಸರ್ಕಾರ ಚಿಂತನೆ ನಡೆಸಿದೆ. ಪರಿಸರ ಪುನರುಜ್ಜೀವನ, ಕೃಷಿ, ಆರೋಗ್ಯ ಮತ್ತು ಹವಾಮಾನ ಸುಸ್ಥಿರತೆಯ ಕ್ಷೇತ್ರಗಳಲ್ಲಿ ನವೋದ್ಯಮಗಳನ್ನು ಉತ್ತೇಜಿಸುವುದು ಈ ಕೇಂದ್ರದ ಉದ್ದೇಶ.
Read Full Story
07:51 PM (IST) Sep 04

Karnataka News Live 4th September 2025 ಶಿಕ್ಷಕರ ದಿನಾಚರಣೆಗೆ ನಿಮ್ಮ ಗುರುಗಳಿಗೆ ನೀಡಬಹುದಾದ ಟಾಪ್ 10 ಉಡುಗೊರೆಗಳಿವು

ಶಿಕ್ಷಕರ ದಿನಕ್ಕೆ ಉಡುಗೊರೆ ಆಯ್ಕೆ ಮಾಡುವುದು ಕಷ್ಟವೇ? ವೈಯಕ್ತಿಕ ಉಡುಗೊರೆಗಳಿಂದ ಹಿಡಿದು ಡಿಜಿಟಲ್ ಸಾಧನಗಳವರೆಗೆ, ನಿಮ್ಮ ಗುರುಗಳಿಗೆ ಸೂಕ್ತವಾದ ೧೦ ಉಡುಗೊರೆ ಆಲೋಚನೆಗಳನ್ನು ಇಲ್ಲಿ ನೀಡಲಾಗಿದೆ. ಹೃದಯಸ್ಪರ್ಶಿ ಉಡುಗೊರೆಯ ಮೂಲಕ ನಿಮ್ಮ ಗುರುಗಳಿಗೆ ಕೃತಜ್ಞತೆ ಸಲ್ಲಿಸಿ.
Read Full Story
07:40 PM (IST) Sep 04

Karnataka News Live 4th September 2025 ರಾಷ್ಟ್ರಮಟ್ಟದ ಶಿಕ್ಷಕ ಪ್ರಶಸ್ತಿಗೆ ಮೈಸೂರು ಮಧುಸೂಧನ್ ಭಾಜನ; ಈ ಕಾರ್ಯಕ್ಕೆ ಮೆಚ್ಚಲೇಬೇಕು!

ಮೈಸೂರಿನ ಹಿನಕಲ್ ಸರ್ಕಾರಿ ಶಾಲೆಯ ವಿಜ್ಞಾನ ಶಿಕ್ಷಕ ಕೆ.ಎಸ್.ಮಧುಸೂದನ್‌ ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನವೀನ ಬೋಧನಾ ವಿಧಾನ ಮತ್ತು ತಂತ್ರಜ್ಞಾನದ ಸದ್ಬಳಕೆಗಾಗಿ ಅವರಿಗೆ ಈ ಪ್ರಶಸ್ತಿ ಲಭಿಸಿದೆ. ಕರ್ನಾಟಕದಿಂದ ಆಯ್ಕೆಯಾದ ಏಕೈಕ ಶಿಕ್ಷಕರೆಂಬ ಹೆಗ್ಗಳಿಕೆ ಅವರದು.

Read Full Story
07:27 PM (IST) Sep 04

Karnataka News Live 4th September 2025 ಆನ್‌ಲೈನ್‌ನಲ್ಲಿ ಮಾರಾಟಕ್ಕೆ ಬಂದ ಕನ್ನಡ ಅಂಕಿಯ ಎಚ್‌ಎಂಟಿ ಗಂಡಭೇರುಂಡ ವಾಚ್‌, ಸೋಲ್ಡ್‌ಔಟ್‌ ಆಗೋ ಮುನ್ನ ಖರೀದಿಸಿ!

ಎಚ್‌ಎಂಟಿ ತನ್ನ ಗಂಡಭೇರುಂಡ ಶೈಲಿಯ ಕನ್ನಡ ಅಂಕಿಗಳ ವಾಚನ್ನು ಮತ್ತೆ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಕೈಗೆಟುಕುವ ಬೆಲೆಯಲ್ಲಿ ಲಭ್ಯವಿರುವ ಈ ವಾಚ್, ಕ್ಯಾಶುಯಲ್ ಮತ್ತು ಔಪಚಾರಿಕ ಸಂದರ್ಭಗಳಿಗೆ ಸೂಕ್ತವಾಗಿದೆ. ಒಂದು ವರ್ಷದ ವಾರಂಟಿಯೊಂದಿಗೆ ಬರುತ್ತದೆ.
Read Full Story
07:23 PM (IST) Sep 04

Karnataka News Live 4th September 2025 ಬಂಗಾರದ ಬೆಲೆ ಕುಸಿತದ ಬೆನ್ನಲ್ಲಿಯೇ GST ಹೊರೆಯಾಗದೇ ಚಿನ್ನಾಭರಣ ಖರೀದಿ ಮಾಡಿ; ಇಲ್ಲಿವೆ 5 ಸೂಪರ್ ಟಿಪ್ಸ್!

ಚಿನ್ನಾಭರಣ ಖರೀದಿ ಸಲಹೆಗಳು: GST ಕೌನ್ಸಿಲ್ ಹಲವು ವಸ್ತುಗಳ ಮೇಲಿನ GST ಕಡಿಮೆ ಮಾಡಿದೆ, ಆದರೆ ಚಿನ್ನ ಮತ್ತು ಬೆಳ್ಳಿ GSTಯಲ್ಲಿ ಯಾವುದೇ ಬದಲಾವಣೆ ಇಲ್ಲ. ಚಿನ್ನದ ಮೇಲೆ 3% ಮತ್ತು ಆಭರಣ ತಯಾರಿಕಾ ಶುಲ್ಕದ ಮೇಲೆ 5% GST ಈಗಲೂ ಅನ್ವಯವಾಗುತ್ತದೆ. ಹಣ ಉಳಿಸಲು ಈ 5 ಸಲಹೆಗಳನ್ನು ತಿಳಿದುಕೊಳ್ಳಿ.

 

Read Full Story
07:01 PM (IST) Sep 04

Karnataka News Live 4th September 2025 ಧರ್ಮಸ್ಥಳ ಅಸಹಜ ಸಾವು ಕೇಸ್‌, ಸೋನಿಯಾ ಗಾಂಧಿಗೆ ಪತ್ರ ಬರೆದ ಮಹಿಳಾ ಸಂಘಟನೆಗಳು!

ಧರ್ಮಸ್ಥಳದಲ್ಲಿ ನಡೆದಿರುವ ಅಸಹಜ ಸಾವುಗಳ ಬಗ್ಗೆ ಮಹಿಳಾ ಸಂಘಟನೆಗಳು ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದು, SIT ತನಿಖೆಗೆ ಆಗ್ರಹಿಸಿವೆ. ಸೌಜನ್ಯ ಪ್ರಕರಣದಿಂದ ಹಿಡಿದು ಇತ್ತೀಚಿನ ಘಟನೆಗಳವರೆಗೆ ನ್ಯಾಯ ದೊರಕಿಸಿಕೊಡುವಂತೆ ಒತ್ತಾಯಿಸಿವೆ. ಕಾಂಗ್ರೆಸ್ ನಾಯಕರ ಹೇಳಿಕೆಗಳ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿವೆ.
Read Full Story
06:55 PM (IST) Sep 04

Karnataka News Live 4th September 2025 'ನೀವು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ..' ಭೂಮಿ ನೀಡಲ್ಲ ಎಂದ ರೈತರ ಮೇಲೆ ಡಿಕೆಶಿ ಗರಂ!

ರಾಮನಗರದಲ್ಲಿ 9600 ಎಕರೆ ಭೂಸ್ವಾಧೀನ ವಿಚಾರದಲ್ಲಿ ರೈತರ ಪ್ರತಿಭಟನೆ ವೇಳೆ ಡಿಕೆ ಶಿವಕುಮಾರ್ ರೈತರ ಮೇಲೆ ಗರಂ ಆದ ಘಟನೆ ನಡೆದಿದೆ. 70% ಜನ ಯೋಜನೆಗೆ ಒಪ್ಪಿಗೆ ನೀಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.
Read Full Story
06:27 PM (IST) Sep 04

Karnataka News Live 4th September 2025 ಒಂದೇ ವೇದಿಕೆಗೆ ಬಂದ ಡಿಕೆಶಿ-ಸದ್ಗುರು ಆದ್ರೆ ಪರಸ್ಪರ ಭೇಟಿ ಆಗದೇ ತೆರಳಿದ ಡಿಸಿಎಂ!

ನ್ಯಾಷನಲ್ ಹಿಲ್ ವೀವ್ ಪಬ್ಲಿಕ್ ಸ್ಕೂಲ್‌ನ 25ನೇ ವಾರ್ಷಿಕೋತ್ಸವದಲ್ಲಿ ಡಿಕೆ ಶಿವಕುಮಾರ್ ಮತ್ತು ಸದ್ಗುರು ಉಪಸ್ಥಿತರಿದ್ದರೂ ಭೇಟಿಯಾಗಲಿಲ್ಲ. ಡಿಕೆಶಿ ಕಾರ್ಯಕ್ರಮದಿಂದ ನಿರ್ಗಮಿಸಿದ ನಂತರ ಸದ್ಗುರು ಆಗಮಿಸಿದರು. ಇದು ರಾಜಕೀಯ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
Read Full Story
06:12 PM (IST) Sep 04

Karnataka News Live 4th September 2025 ಮಳೆಗಾಲದಲ್ಲಿ ಹಣ್ಣು-ತರಕಾರಿಗಳ ಮೇಲೆ ಸುಳಿದಾಡುವ ಕಪ್ಪು ಕೀಟಗಳನ್ನು ತೊಡೆದುಹಾಕಲು ಹೀಗೆ ಮಾಡಿ

ಮಳೆಗಾಲದಲ್ಲಿ ಹಣ್ಣು ತರಕಾರಿಗಳ ಮೇಲೆ ಕೀಟಗಳು ಮುತ್ತುವುದು ಸಾಮಾನ್ಯ. ಇದರಿಂದ ಮನೆಯಲ್ಲಿಯೂ ಕೊಳಕಾಗುತ್ತದೆ. ಹಣ್ಣು ತರಕಾರಿಗಳನ್ನು ಹೇಗೆ ಕೀಟ ಮುಕ್ತವಾಗಿಡುವುದು ಎಂಬುದನ್ನು ತಿಳಿಯಿರಿ.

Read Full Story
06:09 PM (IST) Sep 04

Karnataka News Live 4th September 2025 ಇಂದು ಅನಂತ್‌ನಾಗ್‌ ಜನ್ಮದಿನ, ಎಂದಿಗೂ ಬೋರ್‌ ಆಗದ ಅವರ 10 ಸಿನಿಮಾಗಳು!

ಹಿರಿಯ ನಟ ಅನಂತ್‌ನಾಗ್‌ ಅವರು ಇಂದು ತಮ್ಮ 77ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದಾರೆ.  250ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅನಂತ್‌ ನಾಗ್‌ಗೆ ಇತ್ತೀಚಿಗಷ್ಟೇ ಕೇಂದ್ರ ಸರ್ಕಾರ ಪದ್ಮಭೂಷಣ ನೀಡಿ ಗೌರವ ಸಲ್ಲಿಸಿತ್ತು.

Read Full Story
05:53 PM (IST) Sep 04

Karnataka News Live 4th September 2025 ನಂಗೆ ಕನ್ನಡ ಬರುತ್ತೆ ಎಂದ ಮುಂಬೈಕರ್‌ಗೆ ಬಾರ್‌ನಲ್ಲಿ ರಾಜಾತಿಥ್ಯ ನೀಡಿದ ಕನ್ನಡಿಗರು

ಬೆಂಗಳೂರಿನಲ್ಲಿ ಮುಂಬೈ ಮೂಲದ ವ್ಯಕ್ತಿ ತನಗೆ ಕನ್ನಡ ಬರುತ್ತೆ ನಾನು ಕನ್ನಡ ಕಲಿತಿದ್ದೀನಿ ಎಂದಾಗ ಅಲ್ಲಿ ಸೇರಿದ ಕನ್ನಡಿಗರು ಏನು ಮಾಡಿದರು ಎಂಬುದನ್ನು ಆ ವ್ಯಕ್ತಿಯ ಕನ್ನಡ ಸ್ನೇಹಿತನೋರ್ವ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು ಭಾರಿ ವೈರಲ್ ಆಗಿದೆ

Read Full Story
05:50 PM (IST) Sep 04

Karnataka News Live 4th September 2025 Trump Deepfake Video - ಆಪರೇಷನ್ ಸಿಂದೂರ್ ವೇಳೆ ಭಾರತದ 7 ವಿಮಾನಗಳು ಪತನ? ಟ್ರಂಪ್ ಸುಳ್ಳು ಹೇಳಿಕೆ ಬಯಲು!

ಆಪರೇಷನ್ ಸಿಂದೂರ್ ಸಮಯದಲ್ಲಿ ಪಾಕಿಸ್ತಾನಕ್ಕೆ ಭಾರೀ ನಷ್ಟವಾಯಿತು. ಆದರೆ, ಸಾಮಾಜಿಕ ಮಾಧ್ಯಮದಲ್ಲಿ ಡೊನಾಲ್ಡ್ ಟ್ರಂಪ್ ಅವರ ವೀಡಿಯೊವನ್ನು ಹಂಚಿಕೊಳ್ಳಲಾಗಿದ್ದು, ಭಾರತದ 7 ವಿಮಾನಗಳು ಪತನಗೊಂಡಿವೆ ಎಂದು ಹೇಳಲಾಗಿದೆ. ಈ ವೀಡಿಯೊ ನಕಲಿ ಎಂದು ತಿಳಿದುಬಂದಿದೆ. ಇದನ್ನು AI ತಂತ್ರಜ್ಞಾನದಿಂದ ರಚಿಸಲಾಗಿದೆ.
Read Full Story