- Home
- News
- State
- Karnataka News Live: ರೈತರೇ ಹೊಡೀರಿ ಹಲಗಿ - ತುಂಗಭದ್ರಾ ಜಲಾಶಯಕ್ಕೆ ಪ್ರಥಮ ಬಾರಿ ಒಂದು ಲಕ್ಷ ಕ್ಯೂಸೆಕ್ ನೀರು!
Karnataka News Live: ರೈತರೇ ಹೊಡೀರಿ ಹಲಗಿ - ತುಂಗಭದ್ರಾ ಜಲಾಶಯಕ್ಕೆ ಪ್ರಥಮ ಬಾರಿ ಒಂದು ಲಕ್ಷ ಕ್ಯೂಸೆಕ್ ನೀರು!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆ ವೇಳೆ ಸಚಿವ ಸ್ಥಾನಗಳನ್ನು ಹರಾಜಿಗೆ ಇರಿಸಲಾಗಿತ್ತು. ಕೊನೇ ಕ್ಷಣದಲ್ಲಿ ಹೆಸರುಗಳು ಬದಲಾಗಿ ಗೊಂದಲದ ಗೂಡಾಗಿದ್ದೇ ಇದಕ್ಕೆ ಸಾಕ್ಷಿ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯವಾಡಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಪ್ರಮಾಣ ವಚನ ಸಮಾರಂಭಕ್ಕೆ ಬರಲಿಲ್ಲ. ಇದರಲ್ಲೇ ಸಂಪುಟ ವಿಸ್ತರಣೆ ಹೇಗಿದೆ ಆಗಿದೆ ಎಂಬುದು ಜನರಿಗೆ ತಿಳಿದಿದೆ. ಸಚಿವ ಸ್ಥಾನ ಸಿಗದವರು ರಾಜೀನಾಮೆಗೆ ಮುಂದಾಗಿದ್ದಾರೆ. ಕಾಂಗ್ರೆಸ್ನ ಭ್ರಷ್ಟಾಚಾರ, ಅಭಿವೃದ್ಧಿ ಶೂನ್ಯ ಆಡಳಿತ ರಾಜ್ಯವನ್ನು ಅಪಮಾನಕ್ಕೀಡು ಮಾಡುತ್ತಿದೆ. ರಾಜ್ಯದಲ್ಲಿ ತೀವ್ರ ಬರ ಇದ್ದರೂ ಸರ್ಕಾರ ಜನರ ಸಂಕಷ್ಟ ಅರಿತಿಲ್ಲ ಎಂದು ವಾಗ್ದಾಳಿ ನಡೆಸಿದರು.
Karnataka News Live 5 August 2026ರೈತರೇ ಹೊಡೀರಿ ಹಲಗಿ - ತುಂಗಭದ್ರಾ ಜಲಾಶಯಕ್ಕೆ ಪ್ರಥಮ ಬಾರಿ ಒಂದು ಲಕ್ಷ ಕ್ಯೂಸೆಕ್ ನೀರು!
Karnataka News Live 5 August 2026ಬಹುನಿರೀಕ್ಷಿತ ಬಿಕರ್ನಕಟ್ಟೆ-ಸಾಣೂರು ಹೆದ್ದಾರಿ-169 ಅಭಿವೃದ್ಧಿ - ಹಲವೆಡೆ ಭೂಕುಸಿತ!
Karnataka News Live 5 August 2026ಸಚಿವರಾಗ್ತಿದ್ದಂತೆ ಅಖಾಡಕ್ಕಿಳಿದ ವಿಜಯಾನಂದ ಕಾಶಪ್ಪನವರ್ - ಇಂದು ಬಾಗಲಕೋಟೆಯಲ್ಲಿ ಬರ ವೀಕ್ಷಣೆ
ಮುಖ್ಯಮಂತ್ರಿಗಳ ಆದೇಶದಂತೆ, ನೂತನ ಸಚಿವ ವಿಜಯಾನಂದ ಕಾಶೆಪ್ಪನವರ್ ಬಾಗಲಕೋಟೆ ಜಿಲ್ಲೆಯ ಬರ ಪರಿಸ್ಥಿತಿ ಅಧ್ಯಯನಕ್ಕೆ ಮುಂದಾಗಿದ್ದಾರೆ. ಅವರು ಜಿಲ್ಲೆಯ ಇಳಕಲ್, ಹುನುಗುಂದ, ಗುಳೇದಗುಡ್ಡ ಹಾಗೂ ಬಾಗಲಕೋಟೆ ತಾಲೂಕುಗಳ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ರೈತರ ಜಮೀನುಗಳಲ್ಲಿನ ಬೆಳೆ ಹಾನಿಯನ್ನು ವೀಕ್ಷಣೆ
Karnataka News Live 5 August 2026ನಿರೀಕ್ಷಣಾ ಜಾಮೀನು ಪಡೆದಿದ್ರೂ ಬಂಧನ; ಬೆಂಗಳೂರು ಪೊಲೀಸರಿಗೆ ಹೈಕೋರ್ಟ್ 9 ಲಕ್ಷ ದಂಡ
Karnataka News Live 5 August 2026ಬರ-ಅತಿವೃಷ್ಟಿ ಅಧ್ಯಯನ - 31 ಜಿಲ್ಲೆಗಳಿಗೆ ಸಚಿವರ ನೇಮಕಗೊಳಿಸಿ ಸಿಎಂ ಆದೇಶ; ನಿಮ್ಮ ಜಿಲ್ಲೆಗೆ ಯಾವ ಸಚಿವರು?
ರಾಜ್ಯದಲ್ಲಿನ ಅನಾವೃಷ್ಟಿ ಮತ್ತು ಅತಿವೃಷ್ಟಿ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 31 ಜಿಲ್ಲೆಗಳಿಗೂ ಸಚಿವರನ್ನು ನೇಮಿಸಿದ್ದಾರೆ. ಈ ಸಚಿವರು ತಮ್ಮ ಜಿಲ್ಲೆಗಳಿಗೆ ಭೇಟಿ ನೀಡಿ, ವಾಸ್ತವ ಸ್ಥಿತಿಗತಿ ಅರಿತು ಡಿಸಿಎಂಗೆ ವರದಿ ಸಲ್ಲಿಸಲಿದ್ದಾರೆ.
Karnataka News Live 5 August 2026ಪೊಲೀಸರೇ ಗಂಡನನ್ನು ಕೊಂದ್ರು, ಮಕ್ಕಳನ್ನ ಎದೆಗವಚಿಕೊಂಡು ವಾಹನದ ಹಿಂದೆ ಓಡಿದೆ - ಶೈನಾಜ್ ಬೇಗಂ
Karnataka News Live 5 August 2026Hubballi - ಆ್ಯಪ್ ಆಧಾರಿತ ಆಟೋ ಸೇವೆ ಸ್ಥಗಿತಗೊಳಿಸುವಂತೆ ಹುಬ್ಬಳ್ಳಿಯಲ್ಲಿ ಪ್ರತಿಭಟನೆ
Karnataka News Live 5 August 2026CM ಡಿಕೆ ಶಿವಕುಮಾರ್ಗೆ MB ಪಾಟೀಲರನ್ನು ಸಚಿವರಾಗಿಸೋ ಮನಸ್ಸಿರಲಿಲ್ಲ - ಶಾಸಕ ಯತ್ನಾಳ
Karnataka News Live 5 August 2026ರಾಯಚೂರು - ಬುಲೆಟ್ ಮೇಲೆ ಹೊರಟಿದ್ದವನ ಮೇಲೆ ದುಷ್ಕರ್ಮಿಗಳಿಂದ ಭೀಕರ ಅಟ್ಯಾಕ್! ನಡುರಸ್ತೆಯಲ್ಲೇ ಉಸಿರು ಚೆಲ್ಲಿದ ಯುವಕ!
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದ ಬಳಿ, ಬುಲೆಟ್ ಬೈಕ್ನಲ್ಲಿ ಹೊರಟಿದ್ದ ಭೂಮಾನಂದ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ, ಗಬ್ಬೂರು ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ.